“ಮಾದಕ ವ್ಯಸನದಿಂದ ಮಕ್ಕಳು,ಯುವಕರನ್ನು ರಕ್ಷಿಸಬೇಕಾಗಿದೆ’


Team Udayavani, Aug 23, 2018, 6:45 AM IST

220818astro08.jpg

ಉಡುಪಿ: ಪ್ರಸ್ತುತ ಮಕ್ಕಳು, ಯುವಕ, ಯುವತಿಯರು ಮಾದಕ ವ್ಯಸನಕ್ಕೆ ದಾಸರಾಗುತ್ತಿದ್ದಾರೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಹೋರಾಟ ನಡೆಸಬೇಕಾಗಿದೆ. ಬಹು ದೊಡ್ಡ ಪಿಡುಗಾದ ಮಾದಕ ವ್ಯಸನ ಹೋಗಲಾಡಿಸಲು ಸಮಾಜದ ಸರ್ವರೂ ಕೈಜೋಡಿಸಬೇಕಾಗಿದೆ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಟಿ. ವೆಂಕಟೇಶ್‌ ನಾಯ್ಕ ಕರೆ ನೀಡಿದರು.

ಜಿಲ್ಲಾ ಪೊಲೀಸ್‌ ಇಲಾಖೆ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಉಡುಪಿ ಪ್ರಸ್‌ ಕ್ಲಬ್‌ ಆಶ್ರಯದಲ್ಲಿ ನಡೆಯುತ್ತಿರುವ ಮಾದಕ ವ್ಯಸನ ವಿರೋಧಿ ಮಾಸಾಚಾರಣೆ ಪ್ರಯುಕ್ತ ಉಡುಪಿಯ ಬಿಗ್‌ ಬಜಾರ್‌ನಲ್ಲಿ ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ಬುಧವಾರ ನಡೆಸಲಾದ “ಸೆಲ್ಫಿ ವಿದ್‌ ಸಹಿ ಸಂಗ್ರಹ ಜಾಗೃತಿ ಅಭಿಯಾನ’ದಲ್ಲಿ ಸಹಿ ಹಾಕುವ ಮೂಲಕ ಉದ್ಘಾಟಿಸಿದ ಅವರು ಮಾತನಾಡಿ, 1940ರಲ್ಲಿ ಡ್ರಗ್ಸ್‌ ಆ್ಯಂಡ್‌ ಕಾಸೆ¾ಟಿಕ್‌ ಆ್ಯಕ್ಟ್ ಬಂದಿದ್ದರೂ ಮಾದಕ ದ್ರವ್ಯ ಕಳ್ಳ ಸಾಗಾಣಿಕೆ, ಉತ್ಪಾದನೆ, ಮಾರಾಟ ತಡೆಗಟ್ಟುವಲ್ಲಿ ಸಾಧ್ಯವಾಗಿಲ್ಲ. ಮಾದಕ ವ್ಯಸನಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದನ್ನು ತಡೆಗಟ್ಟಲು ಇಂತಹ ಕಾರ್ಯಕ್ರಮಗಳಿಂದ ಮಾತ್ರ ಯುವಜನರ ಮನವೊಲಿಸಲು ಸಾಧ್ಯವಾಗುತ್ತದೆ ಎಂದರು.

ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಮಾತನಾಡಿ, ಜನರ ಗಮನ ಸೆಳೆದು, ಮನ ಪರಿವರ್ತನೆಗೊಳಿಸಲು ಅಭಿಯಾನಗಳು ಸಹಕಾರಿಯಾಗಲಿವೆ. ಈ ಕಾರ್ಯಕ್ರಮದಿಂದ ಜನರ ಮನೆ ಮನೆಗಳಿಗೂ ಮಾದಕ ವ್ಯಸನ ವಿರೋಧದ ಬಗ್ಗೆ ಸ್ಪಷ್ಟ ಸಂದೇಶ ರವಾನೆಯಾಗಲಿದೆ ಎಂದರು.

ಹಸ್ತದ ಬಣ್ಣ ಹಚ್ಚುವ ಮೂಲಕ ಉದ್ಘಾಟನೆ ನೆರವೇರಿಸಿದ ನಟ, ರಂಗಕರ್ಮಿ ಸುಂದರ್‌ ರೈ ಮಂದಾರ ಮಾತನಾಡಿ, 15ರಿಂದ 25 ವರ್ಷದ ಯುವಕರು ಮಾದಕ ವ್ಯಸನಕ್ಕೆ ಬಲಿಯಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ. ಇದನ್ನು ಶಾಶ್ವತವಾಗಿ ನಿಲ್ಲಿಸುವ ಕಾರ್ಯದಲ್ಲಿ ನಾವೆಲ್ಲರೂ ಕೈಜೋಡಿಸೋಣ ಎಂದರು.ಎಸ್‌ಪಿ ಲಕ್ಷ್ಮಣ್‌ ಬ. ನಿಂಬರಗಿ, ಬಿಗ್‌ ಬಜಾರ್‌ನ ವ್ಯವಸ್ಥಾಪಕ ರಾಘವೇಂದ್ರ ಕೆ., ಮಂಗಳೂರು ಅಕ್ಯುಮೆನ್‌ ಟ್ರೆçನಿಂಗ್‌ ಇನ್ಸಿಟ್ಯೂಟ್‌ನ ಮ್ಯಾನೆಜಿಂಗ್‌ ಟ್ರಸ್ಟಿ ಜೊಯೆಲ್‌ ಸೋನ್ಸ್‌, ಅಡಿಷನಲ್‌ ಎಸ್‌ಪಿ ಕುಮಾರ ಚಂದ್ರ, ಪತ್ರಕರ್ತರ ಸಂಘದ ಅಧ್ಯಕ್ಷರು ಉಪಸ್ಥಿತರಿದ್ದರು.
 
ಜಾಗೃತಿ ಅಭಿಯಾನದಲ್ಲಿ ಭಾಗವಹಿಸಿದ 5 ಮಂದಿ ಅದೃಷ್ಟಶಾಲಿಗಳಿಗೆ ಗಿಫ್ಟ್ ವೋಚರ್‌ ಪಡೆಯುವ ಅವಕಾಶ ಕಲ್ಪಿಸಲಾಗಿತ್ತು. ಸೆಲ್ಫಿ ವಿದ್‌ ಸಹಿ ಸಂಗ್ರಹದಲ್ಲಿ ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಿದ್ದರು. ಪಲ್ಲವಿ ಸಂತೋಷ್‌ ಸ್ವಾಗತಿಸಿ, ಪ್ರಸ್‌ ಕ್ಲಬ್‌ ಸಂಚಾಲಕ ನಾಗರಾಜ ವರ್ಕಾಡಿ ನಿರೂಪಿಸಿದರು.ಅಶೋಕ್‌ ಪೂಜಾರಿ ವಂದಿಸಿದರು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-kota-pammu

Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

4

Malpe: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

1

Udupi: ಅಡ್ಡಗಟ್ಟಿ ಹಲ್ಲೆ, ಜೀವಬೆದರಿಕೆ; ದೂರು

13(1)

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ ಚುರುಕು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.