ಪೊಲೀಸ್‌ ಬಲೆಗೆ ಬಿದ್ದ ಗಾಂಜಾ ವ್ಯಾಪಾರಿ


Team Udayavani, Aug 23, 2018, 10:56 AM IST

blore-2.jpg

ಬೆಂಗಳೂರು: ರಾಜಧಾನಿ “ಉಡ್ತಾ ಬೆಂಗಳೂರು’ ಆಗುತ್ತಿದೆ ಎಂಬ ಆರೋಪದ ಬೆನ್ನಲ್ಲೇ ನಗರ ಪೊಲೀಸರು ಮಾದಕ ವಸ್ತು ಮಾರಾಟಗಾರು ಹಾಗೂ ಗ್ರಾಹಕರ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ. ಪೊಲೀಸ್‌ ಆಯುಕ್ತ ಟಿ.ಸುನಿಲ್‌ ಕುಮಾರ್‌ ಸೂಚನೆ ಮೇರೆಗೆ ಮಫಿಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸುತ್ತಿರುವ ಆಗ್ನೇಯ ವಿಭಾಗದ ಪೊಲೀಸರು ತಮಿಳುನಾಡು ಮೂಲದ ಮಾದಕ ವಸ್ತು ಗಾಂಜಾ ಸರಬರಾಜುದಾರರನ್ನು ಬಂಧಿಸಿದ್ದಾರೆ.

ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಶ್ರೀನಿವಾಸ್‌ (42) ಬಂಧಿತ. ಆರೋಪಿ ಆಂಧ್ರಪ್ರದೇಶ ಮತ್ತು ಚಿಕ್ಕಬಳ್ಳಾಪುರದಿಂದ ಕೆಜಿಗಟ್ಟಲೆ ಗಾಂಜಾ ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ. ಇತ್ತೀಚೆಗೆ ಪರಪ್ಪನ ಅಗ್ರಹಾರದ ಗೋವಿಂದಶೆಟ್ಟಿಹಳ್ಳಿ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೊಸೂರಿನಲ್ಲಿ ಶ್ರೀನಿವಾಸ್‌ ವಾಸವಾಗಿದ್ದು, ಆಂಧ್ರಪ್ರದೇಶದ ಮಹಿಳೆ ಹಾಗೂ ಚಿಕ್ಕಬಳ್ಳಾಪುರ ಮೂಲದ ಒಬ್ಬ ವ್ಯಕ್ತಿ ಮೂಲಕ ಕಡಿಮೆ ಬೆಲೆಗೆ ಗಾಂಜಾ ಖರೀದಿಸುತ್ತಿದ್ದ. ಬಳಿಕ ಅದನ್ನು ಗೋಣಿಚೀಲದಲ್ಲಿ ತುಂಬಿಕೊಂಡು ಬಸ್‌ನಲ್ಲಿ ನಗರಕ್ಕೆ ಬರುತ್ತಿದ್ದ. ಗಾಂಜಾ ವಾಸನೆ ಬಾರದಂತೆ ಎಚ್ಚರಿಕೆ ವಹಿಸಿದ್ದ ಆರೋಪಿ ಈ ಚೀಲಗಳಲ್ಲಿ ಹೊಗೆಸೊಪ್ಪು ತುಂಬಿಕೊಂಡು ಯಾಮಾರಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಶ್ರೀನಿವಾಸ್‌ ವಿರುದ್ಧ ಕೊಲೆ ಆರೋಪ: 6 ವರ್ಷಗಳ ಹಿಂದೆ ಹೊಸೂರಿನ ಸಿಪ್‌ ಕಾಟ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮಹಿಳೆ ಕೊಲೆ ಪ್ರಕರಣದಲ್ಲಿ ಶ್ರೀನಿವಾಸ್‌ ಜೈಲು ಸೇರಿದ್ದ. ಜೈಲಿನಿಂದ ಬಿಡುಗಡೆಯಾಗಿ ಬಂದ ನಂತರ ಚಿಲ್ಲರೆ ಅಂಗಡಿ ನಡೆಸುತ್ತಿದ್ದ ಈತ, ದುಶ್ಚಟಗಳ ದಾಸನಾಗಿ, ಸಂಸಾರ ನಿರ್ವಹಣೆ ಮಾಡಲು ಹಣವಿಲ್ಲದೇ, ಗಾಂಜಾ ಮಾರಾಟ ದಂಧೆಯಲ್ಲಿ ತೊಡಗಿದ್ದಾನೆ. ನಗರದಲ್ಲಿ ಈತನಿಂದ ಗಾಂಜಾ ಖರೀದಿಸುತ್ತಿದ್ದ ಇತರೆ ಮಂದಿಯ ಬಗ್ಗೆಯೂ ಮಾಹಿತಿ ನೀಡಿದ್ದು, ಕಾರ್ಯಾಚರಣೆ ಮುಂದುವರಿದಿದೆ ಎಂದು
ಪೊಲೀಸರು ತಿಳಿಸಿದ್ದಾರೆ. 

ನಗರದ ಹಲವಡೆ ಮಾಹಿತಿ ಪೆಟಿಗೆ
ಮಾದಕ ವಸ್ತು ದಂಧೆಕೋರರ ಬಗ್ಗೆ ಮಾಹಿತಿ ಸಂಗ್ರಹಿಸಲು ವೈಟ್‌ಫೀಲ್ಡ್‌ ವಲಯದ ಎಲ್ಲ ಠಾಣೆಗಳ ವ್ಯಾಪ್ತಿಗಳಲ್ಲಿ ಸುಮಾರು 35 ಮಾಹಿತಿ ಪೆಟ್ಟಿಗೆಗಳನ್ನು ಅಳವಡಿಸಲಾಗಿದೆ. ಶಾಲಾ-ಕಾಲೇಜುಗಳು, ಪ್ರತಿಷ್ಠಿತ ಕಂಪನಿಗಳ ಕಚೇರಿ ಬಳಿ ಮಾಹಿತಿ ಪೆಟ್ಟಿಗೆಗಳನ್ನು ಇರಿಸಿದ್ದು, ಮಾಹಿತಿ ನೀಡುವವರು ತಮ್ಮ ವೈಯಕ್ತಿಕ ವಿಳಾಸ ಅಥವಾ ಸಂಪರ್ಕ ಸಂಖ್ಯೆ ನಮೂದಿಸುವ ಅಗತ್ಯವಿಲ್ಲ. ಮಾರಾಟಗಾರ ಹಾಗೂ ಸ್ಥಳದ ಬಗ್ಗೆ ಮಾಹಿತಿ ನೀಡಿದರೆ ಸಾಕು. ಇದನ್ನೇ ಆಧಾರವಾಗಿಟ್ಟುಕೊಂಡು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಉಳಿದವರ ಪತ್ತೆಗಾಗಿ ವಿಶೇಷ ತಂಬಂಧಿತ ಆರೋಪಿಗಳಾದ ಸಾದಿಕ್‌, ಸಯ್ಯದ್‌ ಹಾಗೂ ಇತರೆ 12 ಮಂದಿ ಆರೋಪಿಗಳು ನಗರದಲ್ಲಿ ಇತರೆಡೆ ಅವ್ಯಾಹತವಾಗಿ ಮಾದಕ ವಸ್ತು ಮಾರಾಟ ಮಾಡುವ ಸುಮಾರು 35 ಮಂದಿಯ ಬಗ್ಗೆ ಮಾಹಿತಿ ನೀಡಿದ್ದರು. ಆದರೆ, ಆ ಆರೋಪಿಗಳು ಪೊಲೀಸರು ನಮ್ಮ ಮೇಲೂ ಗುಂಡು ಹಾರಿಸುತ್ತಾರೆ ಎಂಬ ಭಯದಲ್ಲಿ ನೆರೆ ರಾಜ್ಯಗಳಲ್ಲಿ ತಲೆಮರೆಸಿಕೊಂಡಿದ್ದಾರೆ. ಇವರ ಪತ್ತೆಗಾಗಿ ವಿಶೇಷ ತಂಡ ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Kidnapping Case: ವ್ಯಕ್ತಿಯ ಅಪಹರಿಸಿ ಸುಲಿಗೆಗೈದ 8 ಮಂದಿ ಬಂಧನ

Kidnapping Case: ವ್ಯಕ್ತಿಯ ಅಪಹರಿಸಿ ಸುಲಿಗೆಗೈದ 8 ಮಂದಿ ಬಂಧನ

Younis Zaroora: ಎಂಜಿ ರಸ್ತೇಲಿ ಇನ್‌ಸ್ಟಾಗ್ರಾಮ್‌ ಸ್ಟಾರ್‌ ಯೂನಿಸ್‌ ನೋಡಲು ಕಿಕ್ಕಿರಿದ ಜನ

Younis Zaroora: ಎಂಜಿ ರಸ್ತೇಲಿ ಇನ್‌ಸ್ಟಾಗ್ರಾಮ್‌ ಸ್ಟಾರ್‌ ಯೂನಿಸ್‌ ನೋಡಲು ಕಿಕ್ಕಿರಿದ ಜನ

Private bus: ಖಾಸಗಿ ಬಸ್‌ಗಳಿಂದ ಬೇಕಾಬಿಟ್ಟಿ ದರ ವಸೂಲಿ

Private bus: ಖಾಸಗಿ ಬಸ್‌ಗಳಿಂದ ಬೇಕಾಬಿಟ್ಟಿ ದರ ವಸೂಲಿ

2-bng

Bengaluru: ನಗರದೆಲ್ಲೆಡೆ ಟ್ರಾಫಿಕ್ ಜಾಮ್‌, ಮೆಜೆಸ್ಟಿಕ್‌ ರಷ್‌! ‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.