ಪ್ರಕೃತಿ ವಿಕೋಪ ಕೊನೆಯಾಗಲಿ: ಕಾಣಿಯೂರು ಶ್ರೀ


Team Udayavani, Aug 23, 2018, 11:27 AM IST

23-agust-8.jpg

ಪುತ್ತೂರು: ಪ್ರಕೃತಿ ವಿಕೋಪಕ್ಕೆ ಕೇರಳ, ಕೊಡಗು ಭಾಗದ ಜನರು ತತ್ತರಿಸಿದ್ದಾರೆ. ಅವರು ಮತ್ತೊಮ್ಮೆ ಸಮೃದ್ಧವಾಗಿ ಜೀವನ ನಡೆಸುವಂತಾಗಬೇಕು. ಪ್ರಕೃತಿ ವಿಕೋಪ ಕೊನೆಯಾಗಬೇಕು ಎಂದು ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು ಹೇಳಿದರು. ಸಂಪ್ಯ ಶ್ರೀ ಅನ್ನಪೂರ್ಣೇಶ್ವರಿ ದೇಗುಲದಲ್ಲಿ ಚಾತುರ್ಮಾಸ್ಯ ವ್ರತ ನಡೆಸುತ್ತಿರುವ ಸ್ವಾಮೀಜಿ, ಮಂಗಳವಾರ ಪ್ರಕೃತಿ ವಿಕೋಪ ಶಮನಕ್ಕೆ ನಡೆಸಿದ ಗಾಯತ್ರಿ ಯಜ್ಞದ ಬಳಿಕ ಆಶೀರ್ವಚನ ಇತ್ತರು.

ಪ್ರಕೃತಿ ವಿಕೋಪ ಎಲ್ಲವೂ ನಿಂತು ಹೋಗಬೇಕು ಎಂಬ ದೃಷ್ಟಿಯಿಂದ ಗಾಯತ್ರಿ ಯಜ್ಞ ಮಾಡಿದ್ದೇವೆ. ಇಲ್ಲಿ ಸೂರ್ಯನನ್ನು ಉಪಾಸನೆ ಮಾಡುವುದು ಮುಖ್ಯ. ಸೂರ್ಯ ಕಾಣಿಸಲಿ, ಮೋಡ ಸರಿಯಲಿ ಎನ್ನುವ ಗಾಯತ್ರಿ ಯಜ್ಞವನ್ನು ಅನೇಕ ವೈದಿಕರು ಶ್ರದ್ಧೆಯಿಂದ ಮಾಡಿದ್ದಾರೆ ಎಂದರು.

60 ವೈದಿಕರ ತಂಡ
ಚಾತುರ್ಮಾಸ್ಯ ಸಮಿತಿ ಸಂಚಾಲಕ ಕುಕ್ಕಾಡಿ ತಂತ್ರಿ ಪ್ರೀತಂ ಪುತ್ತೂರಾಯ ಮತ್ತು ವೇ|ಮೂ| ಶ್ರೀಕೃಷ್ಣ ಉಪಾಧ್ಯಾಯ ಅವರ ನೇತೃತ್ವದಲ್ಲಿ ಉದಯ ನಾರಾಯಣ ಕಲ್ಲೂರಾಯ ಸಹಿತ ಸುಮಾರು 60 ಮಂದಿ ವೈದಿಕರ ತಂಡದಿಂದ ಗಾಯತ್ರಿ ಸಹಿತ ವಿವಿಧ ಯಜ್ಞ ನಡೆಸಲಾಯಿತು.

ಬೆಳಗ್ಗೆಯಿಂದ ಶ್ರೀ ಅನ್ನಪೂರ್ಣೇಶ್ವರಿ ದೇಗುಲದ ಗೋಪುರದಲ್ಲಿ ಗಣಪತಿ ಹವನ ನಡೆಯಿತು. ಕಾಣಿಯೂರು ಶ್ರೀಗಳಿಂದ ನರಸಿಂಹ ದೇವರಿಗೆ ವಿಶೇಷ ತುಳಸಿ ಅರ್ಚನೆ, ಗಾಯತ್ರಿ ಯಜ್ಞ, ರುದ್ರ ಪಾರಾಯಣ, ವಿಷ್ಣು ಸಹಸ್ರನಾಮಗಳು ಶ್ರೀ ಅನ್ನಪೂರ್ಣೇಶ್ವರಿ ಸಭಾಭವನದಲ್ಲಿ ನಡೆಯಿತು. ಮಧ್ಯಾಹ್ನದ ವೇಳೆ ಪೂರ್ಣಾಹುತಿಯ ಬಳಿಕ ಶ್ರೀ ಅನ್ನಪೂರ್ಣೇಶ್ವರಿ ದೇವರ ಗರ್ಭಗುಡಿಯ ಮುಂದೆ ಕಾಣಿಯೂರು ಶ್ರೀಗಳು ಮತ್ತು ವೇ|ಮೂ| ಶ್ರೀಕೃಷ್ಣ ಉಪಾಧ್ಯಾಯರು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಚಾತುರ್ಮಾಸ್ಯ ಸಮಿತಿ ಗೌರವಾಧ್ಯಕ್ಷ ನನ್ಯ ಅಚ್ಯುತ ಮೂಡಿತ್ತಾಯ, ಸಮಿತಿ ಕಾರ್ಯಾಧ್ಯಕ್ಷ ಅರುಣ್‌ ಕುಮಾರ್‌ ಪುತ್ತಿಲ, ಕೃಷ್ಣಪ್ಪ, ಪ್ರಸನ್ನ ಮಾರ್ತ ಉಪಸ್ಥಿತರಿದ್ದರು.

ನಾವೇ ಕಾರಣಕರ್ತರು
ಕೇರಳ, ಕೊಡಗಿನ ಪ್ರಾಂತ ಸಹಿತ ಪ್ರಕೃತಿ ವಿಕೋಪವಾದ ಎಲ್ಲ ಪ್ರದೇಶಗಳು ಸಹಜ ಸ್ಥಿತಿಗೆ ಬರಬೇಕೆನ್ನುವುದೇ ನಮ್ಮ ಉದ್ದೇಶ. ಸೊಬಗಿನ ಪ್ರಕೃತಿ ಪೂರ್ತಿ ನಾಶ ಆಗಿದೆ. ಇದಕ್ಕೆ ನಾವೇ ಕಾರಣಕರ್ತರಾಗಿದ್ದೇವೆ. ಈ ನಿಟ್ಟಿನಲ್ಲಿ ನಾವೆಲ್ಲ ಪ್ರಕೃತಿ ತತ್ವವನ್ನೂ ಆರಾಧಿಸಬೇಕು ಎಂದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.