ಸ್ವಯಂ ಉದ್ಯೋಗ ಹೊಂದಲು ಕರೆ
Team Udayavani, Aug 23, 2018, 5:17 PM IST
ಶಿರೂರ: ವಲಯ ವ್ಯಾಪ್ತಿಯ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಮಹಿಳಾ ಸಂಘಗಳ ಪದಾಧಿಕಾರಿಗಳಿಗೆ ಬಲವರ್ಧನೆ ತರಬೇತಿ ಕಾರ್ಯಾಗಾರ ಮತ್ತು ಸದಸ್ಯರೆಯರಿಗೆ ಗ್ರೀನ್ ವೇ ಜಂಬೂ ಒಲೆಗಳ ವಿತರಣಾ ಕಾರ್ಯಕ್ರಮ ನಡೆಯಿತು. ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಮಹೇಶ ಎಂ.ಡಿ. ಒಲೆ ವಿತರಿಸಿ ಮಾತನಾಡಿದ ಅವರು, ಇಂದಿಗೂ ಹಳ್ಳಿಗಳಲ್ಲಿ 70ಕ್ಕೂ ಹೆಚ್ಚು ಕುಟುಂಬಗಳು ಒಲೆಗೆ ಸೌಧೆ ಬಳಸುವುದರಿಂದ ಅರಣ್ಯ ಹಾಗೂ ಪರಿಸರ ಹಾಳಾಗುತ್ತದೆ. ಇವುಗಳನ್ನು ತಪ್ಪಿಸಲು ಗ್ರೀನ್ವೇ ಜಂಬೂ ಒಲೆ ಸಹಕಾರಿಯಾಗುತ್ತದೆ ಎಂದರು.
ಪರಿಸರ ರಕ್ಷಣೆ ಮಾಡುವುದರ ಜತೆಯಲ್ಲಿ ಅರಣ್ಯ ಹಾಗೂ ಪರಿಸರ ಹಾಳಾಗದಂತೆ ಎಚ್ಚರ ವಹಿಸುವಂತೆ ಕೋರಿದರು. ಭವಿಷ್ಯದಲ್ಲಿ ಎದುರಾಗುವ ಅನಾಹುತ ತಡೆಗೆ ಮುಂದಾಗಬೇಕು ಎಂದು ಕರೆ ನೀಡಿದರು. ವಲಯ ಮೇಲ್ವಿಚಾರಕ ಹನಮಂತ ಪಿ.ಎಸ್. ಮಾತನಾಡಿ, ಈಗಾಗಲೇ 20ಕ್ಕೂ ಹೆಚ್ಚು ಮಹಿಳೆಯರಿಗೆ ವಿತರಿಸಲಾಗಿದೆ. ವಲಯದಲ್ಲಿ 200ಕ್ಕೂ ಹೆಚ್ಚು ಒಲೆ ವಿತರಿಸುವ ಗುರಿಯಿದೆ ಎಂದರು. ತಾಲೂಕು ಯೋಜನಾ ಅಧಿಕಾರಿ ಜ್ಯೋತಿ ಜೋಳದ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿರೂರ ಮಹಿಳಾ ಒಕ್ಕೂಟದ ಅಧ್ಯಕ್ಷೆ ಯಮನಕ್ಕಾ ರಾಮಣ್ಣವರ, ಸೇವಾ ಪ್ರತಿನಿಧಿ ಗಳಾದ ಬಸಮ್ಮ ಖಾನಾಪುರ, ಚೆನ್ನಮ್ಮ ವಡ್ಡರ, ಐನಾವತಿ ವಾಲಿಕಾರ, ಸಿದ್ದಪ್ಪ ಹಳ್ಳೂರ, ಅನಸೂಯಾ ಮುತ್ತನ್ನವರ, ಪ್ರೇಮಾ ದೊಡಮನಿ, ಸದಸ್ಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ
B.C.Road ಏನು ಅಫ್ಘಾನಿಸ್ಥಾನ,ಪಾಕಿಸ್ಥಾನದಲ್ಲಿ ಇದೆಯಾ?: ಮುತಾಲಿಕ್ ಕಿಡಿ
Hubli: ರಾಡ್ ಬಿದ್ದು ಎಎಸ್ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ
Meet Friends: ಧಾರವಾಡದ ಹಳೆಯ ಗೆಳೆಯರ ಭೇಟಿಯಾದ ತೆಲುಗು ನಟ ಶ್ರೀಕಾಂತ್
Hubli: ಬೈಕಲ್ಲಿ ಹೋಗುತ್ತಿದ್ದಾಗ ತಲೆಗೆ ರಾಡ್ ಬಿದ್ದು ಗಾಯಗೊಂಡಿದ್ದ ಎಎಸ್ಐ ಸಾವು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.