ಬೀದಿನಾಯಿ ದಾಳಿಗೀಡಾದ ಬಾಲಕ ಸಾವು
Team Udayavani, Sep 2, 2018, 11:58 AM IST
ಬೆಂಗಳೂರು: ಬೀದಿ ನಾಯಿಗಳ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಪ್ರವೀಣ್ ಶನಿವಾರ ಕೊನೆಯುಸಿರೆಳೆದಿದ್ದಾನೆ. ಕಳೆದೆರಡು ದಿನಗಳಿಂದ ಸಾವು-ಬದುಕಿನ ನಡುವೆ ಹೋರಾಡಿದ ಪ್ರವೀಣ್, ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ರಾತ್ರಿ ಸಾವನ್ನಪ್ಪಿದ್ದಾನೆ ಎಂದು ಆಸ್ಪತ್ರೆ ವೈದ್ಯರು ದೃಢಪಡಿಸಿದ್ದಾರೆ. ಈ ಮೂಲಕ ಬೀದಿ ನಾಯಿಗಳ ಹಾವಳಿಗೆ ಇದು 62ನೇ ಬಲಿ ಇದಾಗಿದೆ.
ವಿಭೂತಿಪುರದಲ್ಲಿ ಬುಧವಾರ ಸಂಜೆ ಆಟವಾಡುವಾಗ ಬಾಲಕ ಪ್ರವೀಣ್ನ ಮೇಲೆ ಸುಮಾರು ಹತ್ತು ನಾಯಿಗಳು ಒಮ್ಮೆಲೆ ದಾಳಿ ನಡಸಿದ್ದವು. ಬಾಲಕನ ಗಂಟಲಿಗೆ ಬಾಯಿ ಹಾಕಿದ್ದರಿಂದ ತೀವ್ರ ಗಾಯಗೊಂಡಿದ್ದನು. ಎರಡು ದಿನಗಳಿಂದ ಮಣಿಪಾಲ್ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ರಾತ್ರಿ ಸಾವನ್ನಪ್ಪಿರುವುದನ್ನು ಎಚ್ಎಎಲ್ ಠಾಣೆ ಪೊಲೀಸರು ದೃಢಪಡಿಸಿದರು.
ಪ್ರವೀಣ್ ಸಾವಿನ ಬೆನ್ನಲ್ಲೇ ಪೋಷಕರ ಆಕ್ರಂದನ ಮುಗಿಲುಮುಟ್ಟಿತು. ಮಗನ ಶವದ ಮೇಲೆ ತಾಯಿ ಮುರುಗಮ್ಮ ಬಿದ್ದು ಹೊರಳಾಡುತ್ತಿರುವ ದೃಶ್ಯ ಮನಕಲಕುಂತಿತ್ತು. ಸ್ಥಳದಲ್ಲಿದ್ದವರ ಕಣ್ಣಲ್ಲೂ ನೀರು ಜಿನುಗಿತು. ಮೇಯರ್ ಸಂಪತ್ರಾಜ್ ಸ್ಥಳಕ್ಕೆ ಭೇಟಿ ನೀಡಿ, ಪ್ರವೀಣ್ ಸಾವಿಗೆ ಕಂಬನಿ ಮಿಡಿದರು. ಬಾಲಕನ ಪೋಷಕರು ಅದೇ ಆಸ್ಪತ್ರೆಯಲ್ಲಿ ಹೌಸ್ಕೀಪಿಂಗ್ ಕಾರ್ಯ ನಿರ್ವಹಿಸುತ್ತಿದ್ದಾರೆ.
2000ದಿಂದ ಈಚೆಗೆ ನಗರದಲ್ಲಿ 1.92 ಲಕ್ಷ ಜನರ ಮೇಲೆ ಬೀದಿ ನಾಯಿಗಳು ಹಲ್ಲೆ ನಡೆಸಿದ್ದು, ಅದರಲ್ಲಿ ಶೇ. 95ರಷ್ಟು ಮಂದಿಗೆ ನಾಯಿ ಕಚ್ಚಿದ ಬಗ್ಗೆ ವರದಿಯಾಗಿದೆ. ಈ ಪೈಕಿ 61 ಜನ ಸಾವನ್ನಪ್ಪಿದ್ದಾರೆ. ಈಗ ಪ್ರವೀಣ್ ಸಾವಿನ ಮೂಲಕ ಈ ಸಂಖ್ಯೆ 62ಕ್ಕೆ ಏರಿಕೆಯಾಗಿದೆ. ಕಳೆದ ಐದಾರು ವರ್ಷಗಳಿಂದ ಬೀದಿನಾಯಿಗಳ ದಾಳಿಗೆ ಯಾವುದೇ ಬಲಿಯಾಗಿಲ್ಲ.
2009-10ರಲ್ಲಿ ಮೂವರು ಮೃತಪಟ್ಟಿದ್ದಾರೆ ಎಂದು ಬಿಬಿಎಂಪಿಯ ಜಂಟಿ ಆಯುಕ್ತ (ಪಶುಪಾಲನೆ) ಜಿ.ಆನಂದ್ ಸ್ಪಷ್ಟಪಡಿಸಿದರು. ಈ ಮಧ್ಯೆ ಬೀದಿ ನಾಯಿಗಳನ್ನು ಹಿಡಿದು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದ ಪಾಲಿಕೆಯ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಸೇರಿ ಮೂವರನ್ನು ಎಚ್ಎಎಲ್ ಪೊಲಿಸರು ಶುಕ್ರವಾರವೇ ಬಂಧಿಸಿದ್ದಾರೆ.
ಹಲವು ಬಾರಿ ನಾಯಿ ಹಾವಳಿಯ ಕುರಿತು ದೂರು ನೀಡಿದರೂ ಪಾಲಿಕೆಯ ಅಧಿಕಾರಿಗಳು ಕ್ರಮಕ್ಕೆ ಮುಂದಾಗಿರಲಿಲ್ಲ. ಹಾಗೂ ಪ್ರವೀಣ್ ಪೋಷಕರು ನೀಡಿದ ದೂರಿನ ಮೇರೆಗೆ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಬಾಲಕನ ತಾಯಿ ಮುರುಗಮ್ಮ ಅವರು ಗುರುವಾರ ಪೊಲೀಸರಿಗೆ ದೂರು ನೀಡಿದ್ದರು.
ಪಾಲಿಕೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ನಿರ್ಲಕ್ಷ್ಯತನದಿಂದ ಘಟನೆ ನಡೆದಿದೆ ಎಂದು ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಮಹದೇವಪುರ ವಲಯದ ಪಶುಪಾಲನೆ ವಿಭಾಗದ ಸಹಾಯಕ ನಿರ್ದೇಶಕ ಡಾ.ಶ್ರೀರಾಮ್, ಹಿರಿಯ ಪಶು ವೈದ್ಯಕೀಯ ಪರೀಕ್ಷಕ ಅರುಣ್ ಮುತಾಲಿಕ್ ದೇಸಾಯಿ ಹಾಗೂ ಗುತ್ತಿಗೆದಾರ ರವಿಶಂಕರ್ ಎಂಬುವವರನ್ನು ಬಂಧಿಸಿದ್ದಾರೆ.
ಮಗು ಮೃತಪಟ್ಟ ಹಿನ್ನೆಲೆಯಲ್ಲಿ, ಈಗಾಗಲೇ ಬಂಧಿಸಲಾಗಿರುವ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಕೋರ್ಟ್ ಅನುಮತಿ ಪಡೆದು ಹೆಚ್ಚುವರಿ ಪ್ರಕರಣ ದಾಖಲಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್ಸರ್ವೀಸ್ ಸೆಂಟರ್ಗೆ 12 ಸಾವಿರ ದಂಡ!
Bengaluru: ʼರಾಹುಲ್ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್ ವಿರುದ್ಧ ಕೇಸ್
Bengaluru: ಉದ್ಯಮಿಗೆ ಹನಿಟ್ರ್ಯಾಪ್ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್
Bengaluru: ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ: ಸಿಬ್ಬಂದಿಗೆ ಗಾಯ
Bengaluru: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 23 ಲಕ್ಷ ರೂ. ವಂಚನೆ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ
Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ
ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ
Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್ ಬೇಕು
Mulki: ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.