ಶತಮಾನದ ಸಂಭ್ರಮಕ್ಕೆ ದಾಪುಗಾಲು


Team Udayavani, Sep 17, 2018, 5:26 PM IST

17-sepctember-23.jpg

ಶಿರಸಿ: ಗ್ರಾಮೀಣ ಪತ್ತಿನ ಸೇವಾ ಸಹಕಾರಿ ಸಂಘಗಳಲ್ಲಿ ಮುಂಚೂಣಿಯಲ್ಲಿರುವ ತಾಲೂಕಿನ ಹೆಗಡೆಕಟ್ಟಾದ ಗ್ರೂಪ್‌ ಗ್ರಾಮಗಳ ಸೇವಾ ಸಹಕಾರಿ ಸಂಘವು ಸಾಲ ವಸೂಲಿಯಲ್ಲೂ ಶೇ. 99ಕ್ಕಿಂತ ಅಧಿಕ ಸಾಧನೆ ಮಾಡಿದ್ದು, ಸೇವೆಯ ಜೊತೆ ಲಾಭದದಲ್ಲೂ ಹಿಂದೆ ಬೀಳದೇ 32 ಲಕ್ಷ ರೂ. ನಿವ್ವಳವಾಗಿ ಉಳಿಸಿಕೊಂಡಿದೆ.

ಸೊಸೈಟಿ ಅಧ್ಯಕ್ಷ ಎಂ.ಪಿ. ಹೆಗಡೆ ಹೊನ್ನೆಕಟ್ಟ ಸಂಘದ ಸಾಧನೆಯ ವಿಷಯ ತಿಳಿಸಿ, ಕಳೆದ ಆರ್ಥಿಕ ವರ್ಷಾಂತ್ಯಕ್ಕೆ 33,82,086.79 ರೂ. ನಿವ್ವಳ ಲಾಭ ಗಳಿಸಿದ್ದು, ಇದು ಕಳೆದ ಸಾಲಿಗಿಂತ 2,55,053.71 ರೂ. ರಷ್ಟು ಹೆಚ್ಚಾಗಿದೆ. ಸದಸ್ಯರ ಪಾಲುಧನದ ಮೇಲೆ ಶೇ. 12 ಲಾಭಾಂಶ ನೀಡಲು ಆಡಳಿತ ಸಮಿತಿ ತೀರ್ಮಾನಿಸಿದೆ ಎಂದು ವಿವರಿಸಿದ್ದಾರೆ.

ಸಂಘದಲ್ಲಿ 683 ಸದಸ್ಯರಿದ್ದು, ಶೇರು ಬಂಡವಾಳ 51,68,900 ರೂ. ಹೊಂದಿದ್ದು ಠೇವು 13,02,05,479.30 ರೂ. ಇದ್ದು ವರದಿ ವರ್ಷದಲ್ಲಿ 104887934 ರೂ. ಸಾಲ ವಿತರಿಸಿದೆ. ವರದಿ ವರ್ಷಾಂತ್ಯಕ್ಕೆ ಶೇ.99.66 ಸಾಲ ವಸೂಲಾತಿ ಆಗಿದ್ದು ಇರುತ್ತದೆ. ಸಂಘದ ಕಾಯ್ದಿಟ್ಟ ನಿಧಿಗಳು ರೂ. 19003913.42 ಇದೆ. ಸಂಘದ ದುಡಿಯುವ ಬಂಡವಾಳವು ಕಳೆದ ಸಾಲಿಗಿಂತ 36,06,141 ರೂ. ರಷ್ಟು ಹೆಚ್ಚಳವಾಗಿ ವರ್ಷಾಂತ್ಯಕ್ಕೆ 15,84,78,334 ರೂ. ಆಗಿದೆ. ಸದಸ್ಯರ ಮಹಸೂಲುಗಳನ್ನು ಮಾರ್ಕೆಟಿಂಗ್‌ ಸೊಸೈಟಿಗಳ ಮೂಲಕ 3,991 ಕ್ವಿಂ. ವಿಕ್ರಯಿಸಿದ್ದು ಅದರ ಮೌಲ್ಯ 10,37,47,027 ರೂ. ಆಗಿದೆ. ಇದರಿಂದ 4,87,074 ರೂ. ರಿಬೇಟನ್ನು ಕೂಡ ಸಂಘ ಪಡೆದಿದೆ. ಸಂಘದ ಕಿರಾಣಿ ವಿಭಾಗದಲ್ಲಿ 2.22 ಕೋ.ರೂ. ವಸ್ತುಗಳು ವಿಕ್ರಯಿಸಿ 1,17,916 ರೂ. ನಿಕ್ಕೀ ಲಾಭಗಳಿಸಿದೆ. ಸಂಘವು ಕಳೆದ ಹನ್ನೊಂದು ವರ್ಷಗಳಿಂದ ಸತತವಾಗಿ ಆಡಿಟ್‌ ವರ್ಗೀಕರಣದಲ್ಲಿ ‘ಅ’ ಶ್ರೇಣಿಯಲ್ಲಿ ಮುಂದುವರೆದಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ಸಂಘವು ತನ್ನ ಸದಸ್ಯರಿಗೆ ತ್ವರಿತವಾಗಿ ವಿವಿಧ ರೀತಿಯ ಕೃಷಿ ಮತ್ತು ಕೃಷಿಯೇತರ ಸಾಲಗಳನ್ನು ನೀಡುತ್ತಿದೆ. ಸಂಘವು ಯಚಡಿ ಭಾಗದ ಗ್ರಾಮದ ಸದಸ್ಯರ ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ ಯಚಡಿಯಲ್ಲಿ ತನ್ನ ಶಾಖೆಯನ್ನು ತೆರೆದಿದ್ದು, ಅತ್ಯಂತ ಸ್ಪರ್ಧಾತ್ಮಕ ದರದಲ್ಲಿ ವಸ್ತುಗಳನ್ನು ವಿಕ್ರಯಿಸುತ್ತಿದೆ. ಶಿಕ್ಷಣ ಹಾಗೂ ಸಾರ್ವಜನಿಕ ಸೇವಾ ಕಾರ್ಯದಲ್ಲಿಯೂ ಗುರುತಿಸಿಕೊಂಡಿರುವ ಹೆಗಡೆಕಟ್ಟಾ ಸೇವಾ ಸಹಕಾರಿ ಸಂಘವು, ತನ್ನ ಸದಸ್ಯರ ಅನುಕೂಲಕ್ಕಾಗಿ ಹಲವು ಯೋಜನೆಗಳನ್ನು ಕಾರ್ಯ ರೂಪಕ್ಕೆ ತರುವಲ್ಲಿ ಶ್ರಮಿಸುತ್ತಿದೆ. ಕಾಲಕಾಲಕ್ಕೆ ಸಂಘದ ಸದಸ್ಯರಿಗೆ ದೊರೆಯಬೇಕಾದ ಸವಲತ್ತುಗಳನ್ನು ನೀಡಿ, ಸದಸ್ಯರ ಹಿತ ಕಾಪಾಡುವ ನಿಟ್ಟಿನಲ್ಲಿ ಮುಂಚೂಣಿಯಲ್ಲಿದೆ ಎಂಬುದು ಹೆಮ್ಮೆ ಎಂದಿರುವ ಅವರು, ಸಹಕಾರಿ ಕ್ಷೇತ್ರದ ಸೇವೆಯಲ್ಲಿ ಹೆಗಡೆಕಟ್ಟಾ ಸೊಸೈಟಿ ನಿರಂತರ 99ನೇ ವರ್ಷದಲ್ಲಿದ್ದು ಶತಮಾನದತ್ತ ದಾಪುಗಾಲು ಹಾಕುತ್ತಿದೆ.

ರೈತರು ಕೃಷಿಯತ್ತ ಒಲವುಗಳಿಸಲು ಸಲಹೆ ಹಾಗೂ ಸದಸ್ಯರ ಅನುಕೂಲಕ್ಕಾಗಿ ಹಲವು ಯೋಜನೆಗಳನ್ನು ರೂಪಿಸುತ್ತ ಬಂದಿದೆ. ಸಂಘದ ಸರ್ವ ಸಾಧಾರಣ ಸಭೆ ಸೆ.19 ರಂದು ಮಧ್ಯಾಹ್ನ 3:30ಕ್ಕೆ ಸಂಘದ ಪ್ರಧಾನ ಕಚೇರಿಯಲ್ಲಿ ನಡೆಯಲಿದೆ ಎಂದೂ ವಿವರಿಸಿದ್ದಾರೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

12

Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.