ಮೇಯರ್‌ ಚುನಾವಣೆ ಸಿದ್ಧತೆಗಳ ಪರಿಶೀಲನೆ


Team Udayavani, Sep 25, 2018, 12:04 PM IST

chunavane.jpg

ಬೆಂಗಳೂರು: ಬಿಬಿಎಂಪಿ ಮೇಯರ್‌, ಉಪಮೇಯರ್‌ ಆಯ್ಕೆಗೆ ಸೆ.28ರಂದು ನಡೆಯಲಿರುವ ಚುನಾವಣೆ ಸಿದ್ಧತೆಗಳನ್ನು ಚುನಾವಣಾಧಿಕಾರಿ ಹಾಗೂ ಪ್ರಾದೇಶಿಕ ಆಯುಕ್ತ ಶಿವಯೋಗಿ ಸಿ. ಕಳಸದ ಅವರು ಸೋಮವಾರ ಪರಿಶೀಲನೆ ನಡೆಸಿದರು.

ಬೆಂಗಳೂರು ನಗರ ಜಿಲ್ಲಾಧಿಕಾರಿ ವಿಜಯ್‌ಶಂಕರ್‌ ಹಾಗೂ ಇತರ ಅಧಿಕಾರಿಗಳೊಂದಿಗೆ ಪಾಲಿಕೆಯ ಕೆಂಪೇಗೌಡ ಪೌರ ಸಭಾಂಗಣಕ್ಕೆ ಭೇಟಿ ನೀಡಿದ ಅವರು, ಸಿದ್ಧತೆಗಳ ಕುರಿತು ಕೌನ್ಸಿಲ್‌ ಕಾರ್ಯದರ್ಶಿ ಕೆ.ಆರ್‌.ಪಲ್ಲವಿ ಅವರಿಂದ ಮಾಹಿತಿ ಪಡೆದರು.

ಚುನಾವಣೆ ವೇಳೆ ಯಾವುದೇ ಗೊಂದಲಗಳಿಗೆ ಅವಕಾಶ ನೀಡದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಜತೆಗೆ ಮತದಾರರು ಹಾಗೂ ಅಧಿಕಾರಿಗಳು ಸೇರಿ ಪ್ರತಿಯೊಬ್ಬರಿಗೂ ಗುರುತಿನ ಚೀಟಿ ನೀಡಬೇಕು ಹಾಗೂ ಗುರುತಿನ ಚೀಟಿ ಇಲ್ಲದ ಯಾರನ್ನೂ ಚುನಾವಣೆ ನಡೆಯುವ ಸ್ಥಳ ಪ್ರವೇಶಿಸಲು ಬಿಡಬಾರದು. ಸಂಪೂರ್ಣ ಚುನಾವಣೆ ಪ್ರಕ್ರಿಯೆಯನ್ನು ಚಿತ್ರೀಕರಣ ಮಾಡುವ ಮೂಲಕ ಪಾರದರ್ಶಕತೆ ಕಾಯ್ದುಕೊಳ್ಳುವಂತೆ ಸೂಚಿಸಿದ್ದಾರೆ.

ನಾಲ್ವರ ವಿರುದ್ಧ ಬಿಜೆಪಿ ದೂರು: ಈ ಮಧ್ಯೆ, ಮೇಯರ್‌ ಮತ್ತು ಉಪಮೇಯರ್‌ ಚುನಾವಣೆಯ ಮತದಾರರಾದ ರಾಜ್ಯಸಭಾ ಸದಸ್ಯ ಜೈರಾಮ್‌ ರಮೇಶ್‌, ವಿಧಾನ ಪರಿಷತ್‌ ಸದಸ್ಯರಾದ ಸಿ.ಆರ್‌.ಮನೋಹರ್‌, ರಘು ಆಚಾರ್‌ ಮತ್ತು ಉಗ್ರಪ್ಪ ಅವರಿಗೆ ಮತದಾನ ಮಾಡಲು ಅವಕಾಶ ನೀಡದಂತೆ ಪ್ರಾದೇಶಿಕ ಆಯುಕ್ತರಿಗೆ ಬಿಬಿಎಂಪಿ ವಿರೋಧ ಪಕ್ಷದ ನಾಯಕ ಪದ್ಮನಾಭರೆಡ್ಡಿ ದೂರು ನೀಡಿದ್ದಾರೆ.

ನಾಲ್ಕು ಮತದಾರರು ತಾವು ಆಯ್ಕೆಯಾಗಿರುವ ಕ್ಷೇತ್ರ ಮತ್ತು ತಮ್ಮ ನೋಡೆಲ್‌ ಕ್ಷೇತ್ರದ ಬದಲಿಗೆ ಬೆಂಗಳೂರಿನಲ್ಲಿ ಮತದಾನ ಮಾಡುತ್ತಿದ್ದಾರೆ. ಅವರಿಗೆ ದೊರೆಯುವ ಅನುದಾನವನ್ನು ತಮ್ಮ ನೋಡಲ್‌ ಕ್ಷೇತ್ರಗಳಲ್ಲಿನ ಅಭಿವೃದ್ಧಿ ಕಾಮಗಾರಿಗಳಿಗೆ ಬಳಸುತ್ತಿದ್ದು, ಅಲ್ಲಿನ ಸ್ಥಳೀಯ ಸಂಸ್ಥೆಗಳಲ್ಲಿ ಮತಚಲಾಯಿಸಿ, ಅಲ್ಲಿನ ಸಮಸ್ಯೆಗಳ ಬಗ್ಗೆ ಅರಿತು, ಬಗೆಹರಿಸಲು ಮುಂದಾಗಬೇಕು.

ಅಧಿಕಾರಕ್ಕಾಗಿ ಬಿಬಿಎಂಪಿಗೆ ಬಂದು ಮತಚಲಾಯಿಸುವುದು ಸರಿಯಲ್ಲ. ಹೀಗಾಗಿ ಅವರುಗಳಿಗೆ ಮೇಯರ್‌ ಮತ್ತು ಉಪಮೇಯರ್‌ ಚುನಾವಣೆಯಲ್ಲಿ ಮತದಾನ ಮಾಡಲು ಅವಕಾಶ ನೀಡದಂತೆ ಪತ್ರದ ಮೂಲಕ ಕೋರಿದ್ದಾರೆ. 

ಟಾಪ್ ನ್ಯೂಸ್

1-ree

Karnataka;ಕನ್ನಡಕ್ಕೆ ಪ್ರಥಮ ಆದ್ಯತೆ, ಕನ್ನಡವೇ ಆಡಳಿತ ಭಾಷೆ ಆಗಬೇಕು: ಸಿದ್ದರಾಮಯ್ಯ

DK SHI NEW

CM ಬದಲಾವಣೆ ಚರ್ಚೆಯೇ ಇಲ್ಲ,ದಿಲ್ಲಿಗೆ ಭೇಟಿ ನೀಡುವ ಪ್ರಸಂಗವೂ ಉದ್ಭವಿಸಿಲ್ಲ:ಡಿಕೆಶಿ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-ksrtc-dasara

Bengaluru: ಕೆಎಸ್‌ಆರ್‌ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್‌ ಸಂಚಾರ

19-bbmp

Bengaluru: ಆನ್‌ಲೈನ್‌ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ

18-wonderla

Bengaluru: ವಂಡರ್‌ಲಾದಲ್ಲಿ 2 ಟಿಕೆಟ್‌ ಖರೀದಿಸಿದರೆ 1 ಟಿಕೆಟ್‌ ಫ್ರೀ

16-bng

Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ

14-bng

Bengaluru: 5ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕಿ ಆತ್ಮಹತ್ಯೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-ree

Karnataka;ಕನ್ನಡಕ್ಕೆ ಪ್ರಥಮ ಆದ್ಯತೆ, ಕನ್ನಡವೇ ಆಡಳಿತ ಭಾಷೆ ಆಗಬೇಕು: ಸಿದ್ದರಾಮಯ್ಯ

DK SHI NEW

CM ಬದಲಾವಣೆ ಚರ್ಚೆಯೇ ಇಲ್ಲ,ದಿಲ್ಲಿಗೆ ಭೇಟಿ ನೀಡುವ ಪ್ರಸಂಗವೂ ಉದ್ಭವಿಸಿಲ್ಲ:ಡಿಕೆಶಿ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.