ಭಾರತ ಅಫ್ಘಾನ್ ಪಂದ್ಯ ರೋಚಕ ‘ಟೈ’ಯಲ್ಲಿ ಅಂತ್ಯ


Team Udayavani, Sep 26, 2018, 1:23 AM IST

afghan-600.jpg

ದುಬೈ: ಏಷ್ಯಾ ಕಪ್ ಟೂರ್ನಿಯುದ್ದಕ್ಕೂ ಪಾಕಿಸ್ಥಾನ, ಶ್ರೀಲಂಕಾ ಮತ್ತು ಬಾಂಗ್ಲಾದೇಶ ತಂಡಗಳಿಗೆ ಚಳಿ ಹುಟ್ಟಿಸಿದ್ದ ‘ಕ್ರಿಕೆಟ್ ಶಿಶು’ ಅಫ್ಘಾನ್ ತಂಡವು ಇಂದು ನಡೆದ ‘ಸೂಪರ್ 4’ ಹಣಾಹಣಿಯ ಪಂದ್ಯದಲ್ಲಿ ಈ ಕೂಟದ ಅಜೇಯ ತಂಡವಾಗಿದ್ದ ಭಾರತಕ್ಕೆ ಸೋಲಿನ ರುಚಿ ತೋರಿಸುವ ಹಂತದಲ್ಲಿ ಸ್ವಲ್ಪದರಲ್ಲೇ ಮುಗ್ಗರಿಸಿ ತನ್ನ ಏಷ್ಯಾ ಕಪ್ ಅಭಿಯಾನವನ್ನು ಸ್ಮರಣೀಯವಾಗಿ ಮುಗಿಸಿದೆ.

ಅಫ್ಘಾನ್ ನೀಡಿದ 252 ರನ್ನುಗಳ ಸಾಧಾರಣ ಮೊತ್ತವನ್ನು ಬೆನ್ನಟ್ಟುವಲ್ಲಿ ಎಡವಿದ ಭಾರತವು ಇನ್ನೂ 1 ಎಸೆತ ಬಾಕಿಯಿದ್ದಂತೆ 252 ರನ್ನುಗಳಿಗೆ ಆಲೌಟ್ ಆಗುವ ಮೂಲಕ ಜಯದ ಹೊಸ್ತಿಲಲ್ಲಿ ಎಡವಿತು. ರವೀಂದ್ರ ಜಡೇಜಾ (25) ಅವರು ಅಂತಿಮ ವಿಕೆಟ್ ರೂಪದಲ್ಲಿ ಔಟಾಗುತ್ತಿದ್ದಂತೆಯೇ ಅಫ್ಘಾನ್ ಆಟಗಾರರು ಮೈದಾನದಲ್ಲಿ ಸಂಭ್ರಮಾಚರಣೆಯಲ್ಲಿ ತೊಡಗಿದರು. ಈಗಾಗಲೇ ಫೈನಲ್ ಪ್ರವೇಶಿಸಿರುವ ಭಾರತಕ್ಕೆ ಹಾಗೂ ಕೂಟದಿಂದ ಹೊರಬಿದ್ದಿದ್ದ ಅಫ್ಘಾನಿಸ್ಥಾನಕ್ಕೆ ಈ ಪಂದ್ಯ ಯಾವುದೇ ರೀತಿಯಲ್ಲಿ ಮಹತ್ವದಲ್ಲವಾಗಿದ್ದರೂ ಕ್ರಿಕೆಟ್ ಶಿಶು ಅಫ್ಘಾನಿಸ್ಥಾನಕ್ಕೆ ಈ ಚೇತೋಹಾರಿ ಪ್ರದರ್ಶನ ಅದ್ಭುತವಾದ ನೈತಿಕ ಬಲವನ್ನು ತುಂಬಿರುವುದರಲ್ಲಿ ಯಾವುದೇ ಅನುಮಾನಗಳಿಲ್ಲ.
 


ಅಫ್ಘಾನ್ ವಿಕೆಟ್ ಕೀಪರ್ ಮುಹಮ್ಮದ್ ಶಹಝಾದ್ (124) ಅವರ ಭರ್ಜರಿ ಶತಕದ ನೆರವಿನಿಂದ ನಿಗದಿತ 50 ಓವರುಗಳಲ್ಲಿ 8 ವಿಕೆಟ್ ನಷ್ಟದಲ್ಲಿ 252 ರನ್ನುಗಳನ್ನು ಕಲೆಹಾಕಿದ ಅಫ್ಘಾನ್ ಎದುರಾಳಿಯ ಗೆಲುವಿಗೆ 253 ರನ್ನುಗಳ ಗುರಿಯನ್ನು ನಿಗದಿಪಡಿಸಿತು.

ಧವನ್ ರೋಹಿತ್ ಅನುಪಸ್ಥಿತಿಯಲ್ಲಿ ಭಾರತದ ಇನ್ನಿಂಗ್ಸ್ಆರಂಭಿಸಿದ ಕೆ.ಎಲ್. ರಾಹುಲ್ (60) ಮತ್ತು ಅಂಬಟಿ ರಾಯುಡು (57) ಉತ್ತಮ ಆರಂಭವನ್ನೇ ಒದಗಿಸಿದರು. ಈ ಜೋಡಿ ಮೊದಲ ವಿಕೆಟಿಗೆ 110 ರನ್ನುಗಳನ್ನು ಕಲೆ ಹಾಕಿತು. ಇಲ್ಲಿಯವರೆಗೆ ಭಾರತದ ಗೆಲುವಿನ ಹಾದಿ ಸುಲಭವಾಗಿಯೇ ಇತ್ತು. ಆದರೆ ಇವರ ಜೊತೆಯಾಟ ಮುರಿಯುತ್ತಲೇ ಭಾರತ ಸಂಕಷ್ಟಕ್ಕೆ ಸಿಲುಕಿತು. ಒಂದು ಬದಿಯಲ್ಲಿ ದಿನೇಶ್ ಕಾರ್ತಿಕ್ (44) ತಾಳ್ಮೆಯ ಆಟದ ಮೊರೆ ಹೋದರೆ ಇನ್ನೊಂದು ಕಡೆಯಿಂದ ವಿಕೆಟ್ ಗಳು ಉದುರುತ್ತಾ ಸಾಗಿತು. ನಾಯಕ ಧೋನಿ (8), ಮನೀಶ್ ಪಾಂಡೆ (8), ಜಾಧವ್ (19) ಹೋರಾಟ ನೀಡುವಲ್ಲಿ ವಿಫಲರಾದರು. ಅಂತಿಮವಾಗಿ ಅನುಭವಿ ಆಟಗಾರ ರವೀಂದ್ರ ಜಡೇಜಾ (25) ತಂಡವನ್ನು ಗೆಲುವಿನ ಹೊಸ್ತಿಲಿಗೆ ತಂದರಾದರೂ ಅಂತಿಮವಾಗಿ ಕ್ಯಾಚ್ ನೀಡಿ ಔಟಾಗುವ ಮೂಲಕ ಭಾರತ ತಂಡ ಆಲೌಟ್ ಆಗುವುದರೊಂದಿಗೆ ಪಂದ್ಯ ‘ಟೈ’ಗೊಂಡಿತು. ಈ ಹಂತದಲ್ಲಿ ಭಾರತದ ಗೆಲುವಿಗೆ 2 ಎಸೆತದಲ್ಲಿ 1 ರನ್ ಬೇಕಿತ್ತು ಕೈಯಲ್ಲಿದ್ದಿದ್ದು 1 ವಿಕೆಟ್ ಮಾತ್ರ.

ಕಳೆದ ಪಂದ್ಯದ ಹೀರೋಗಳಾಗಿದ್ದ ರೋಹಿತ್ ಶರ್ಮಾ ಮತ್ತು ಶಿಖರ್ ಧವನ್ ಸೇರಿದಂತೆ ಬುಮ್ರಾ, ಭುವನೇಶ್ವರ್ ಮತ್ತು ಚಾಹಲ್ ಅವರಿಲ್ಲದಿದ್ದ ಟೀಂ ಇಂಡಿಯಾವನ್ನು ಮಹೇಂದ್ರ ಸಿಂಗ್ ಧೋನಿ ಮುನ್ನಡೆಸಿದರು. ಇದು ಕೂಲ್ ಕ್ಯಾಪ್ಟನ್ ಧೋನಿ ಅವರ ನಾಯಕತ್ವದ 200ನೇ ಏಕದಿನ ಪಂದ್ಯವಾಗಿತ್ತು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.