![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Sep 28, 2018, 7:00 AM IST
ಬೆಂಗಳೂರು: ಸಂಸದ, ಶಾಸಕರ ಜತೆ ಶಿಷ್ಟಾಚಾರದ ಅನ್ವಯ ಸೌಜನ್ಯವಾಗಿ ನಡೆದುಕೊಳ್ಳುವಂತೆ ಸೂಚಿಸಿ ಎಲ್ಲ ಪೊಲೀಸ್ ಸಿಬ್ಬಂದಿಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕಿ ಡಾ.ನೀಲಮಣಿ ರಾಜು ಸುತ್ತೋಲೆ ಹೊರಡಿಸಿದ್ದಾರೆ.
ಚುನಾಯಿತ ಜನಪ್ರತಿನಿಧಿಗಳಾದ ಸಂಸದರು ಹಾಗೂ ಶಾಸಕರ ದೂರವಾಣಿ ಕರೆಗಳನ್ನು ಆದ್ಯತೆ ಮೇರೆಗೆ ಸ್ವೀಕರಿಸಿ, ಅವರಿಂದ ಸಲಹೆ, ಸೂಚನೆಗಳನ್ನು ಪಡೆದು ನಿಯಮಾನುಸಾರ ಕ್ರಮ ವಹಿಸಬೇಕು.
ಒಂದು ವೇಳೆ ಅವರ ಸಲಹೆ, ಸೂಚನೆಗಳನ್ನು ಪಾಲಿಸಲು ಸಾಧ್ಯವಾಗದಿದ್ದರೆ ಕಾರಣಗಳ ಸಹಿತ ಅವರ ಗಮನಕ್ಕೆ ತರಬೇಕು. ಜತೆಗೆ, ಹಿರಿಯ ಪೊಲೀಸ್ ಅಧಿಕಾರಿಗಳು ಜನಪ್ರತಿನಿಧಿಗಳನ್ನು ಭೇಟಿ ಮಾಡಿ, ಕ್ಷೇತ್ರಕ್ಕೆ ಸಂಬಂಧಿಸಿದಂತೆ ಇಲಾಖೆ ಪರಿಹರಿಸಬಹುದಾದ ಸಮಸ್ಯೆಗಳನ್ನು ಆಲಿಸಿ, ಆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬಹುದು ಎಂದು ಆದೇಶದಲ್ಲಿ ತಿಳಿಸಿದ್ದಾರೆ. ಜನರಿಂದ ಚುನಾಯಿತರಾದ ಸಂಸದರು ಹಾಗೂ ಶಾಸಕರ ಜತೆ ಪೊಲೀಸ್ ಅಧಿಕಾರಿಗಳು ನಡೆದುಕೊಳ್ಳಬೇಕಾದ ಬಗ್ಗೆ ರಾಜ್ಯ ಪೊಲೀಸ್ ಮಾರ್ಗಸೂಚಿ ಅಂಶಗಳನ್ನು ಆಧರಿಸಿ ಆದೇಶ ಹೊರಡಿಸಿರುವುದಾಗಿ ಡಿಜಿಪಿ ತಿಳಿಸಿದ್ದಾರೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.