
ಶಿರಾಡಿಘಾಟಿ ರಸ್ತೆ: ಕಳಪೆ ಕಾಮಗಾರಿ ಆರೋಪ
Team Udayavani, Sep 30, 2018, 6:10 AM IST

ಬೆಂಗಳೂರು: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿಘಾಟಿ ರಸ್ತೆ ಕಾಮಗಾರಿ ಕಳಪೆಯಿಂದ ಕೂಡಿದೆ ಎಂದು ನೀತಿ ಸಂಸ್ಥೆ ಆರೋಪಿಸಿದೆ.
ಸುದ್ದಿಗೋಷ್ಠಿಯಲ್ಲಿ ನೀತಿ ಸಂಸ್ಥೆ ಅಧ್ಯಕ್ಷ ಟಿ.ಜಯಂತ್ ಮಾತನಾಡಿ, ಘಾಟಿ ಪ್ರದೇಶದಲ್ಲಿ ಮಳೆಗಾಲದಲ್ಲಿ ಉಂಟಾಗುವ ರಸ್ತೆ ಗುಂಡಿಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ವರ್ಷದ ಹಿಂದೆ ಹಾಸನದ ಮಾರನಹಳ್ಳಿಯಿಂದ ಕೆಂಪು ಹೊಳೆಯವರೆಗೆ 15 ಕಿ.ಮೀ.ವರೆಗೆ ಸಿಮೆಂಟ್ ರಸ್ತೆ ನಿರ್ಮಿಸಿತ್ತು. ಇದರ ಉಳಿದ 13 ಕಿ.ಮೀ. ರಸ್ತೆಯನ್ನು 86 ಕೋಟಿ ರೂ.ಗಳಲ್ಲಿ ಓಷನ್ ಕನ್ಸ್ಟ್ರಕ್ಷನ್ ಕಂಪನಿ ನಿರ್ಮಿಸಿರುತ್ತದೆ. ಇದರ ಯೋಜನಾ ನಕ್ಷೆ ಮತ್ತು ಕಾಮಗಾರಿ ನಡೆಸಿದ ರಸ್ತೆಯನ್ನು ಪರಿಶೀಲಿಸಿದಾಗ ಕಳಪೆಯಾಗಿದೆ ಎಂದು ತಿಳಿದು ಬಂದಿದೆ ಎಂದು ದೂರಿದರು.
ಜು.15ರಂದು ಸರ್ಕಾರ ಈ 13 ಕಿ.ಮೀ. ರಸ್ತೆಯನ್ನು ಲೋಕಾರ್ಪಣೆಗೊಳಿಸಿದೆ. ಆದರೆ,ಇದಾಗಿ 15 ದಿನಗಳಲ್ಲೆ ರಸ್ತೆ ಬದಿಯಲ್ಲಿ ಸಿಮೆಂಟ್,ಕಬ್ಬಿಣದಿಂದ ನಿರ್ಮಿಸಲಾಗಿರುವ ತಡೆಗೋಡೆಗಳು 10 ಕಡೆಗಳಲ್ಲಿ ಮುರಿದು ಬಿದ್ದು ರಸ್ತೆ ಬಿರುಕುಗೊಂಡಿರುತ್ತದೆ.ಇದನ್ನು ಪ್ರಕೃತಿ ವಿಕೋಪವೆಂದು ಬಿಂಬಿಸಿ ಮುರಿದು ಬಿದ್ದಿರುವ ತಡೆಗೋಡೆ ಮತ್ತು ರಸ್ತೆ ನಿರ್ಮಾಣಕ್ಕಾಗಿ 60 ಕೋಟಿ ರೂ. ವೆಚ್ಚವಾಗಲಿದೆ ಎಂದು ಅಧಿಕಾರಿಗಳು ವರದಿ ತಯಾರಿಸಿ ಹಣ ಲೂಟಿ ಮಾಡಲು ಮುಂದಾಗಿದ್ದಾರೆಂದು ಆರೋಪಿಸಿದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ

BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
MUST WATCH
ಹೊಸ ಸೇರ್ಪಡೆ

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.