ಬಲಭಾಗದಲ್ಲಿದ್ದ ಹಸುಳೆಯ ಹೃದಯಕ್ಕೆ ಯಶಸ್ವಿ ಶಸ್ತ್ರ ಚಿಕಿತ್ಸೆ


Team Udayavani, Sep 30, 2018, 6:20 AM IST

heart.jpg

ಬೆಳಗಾವಿ: ಬಲಭಾಗದಲ್ಲಿ ಹೃದಯ ಹೊಂದಿದ್ದ 20 ದಿನದ ಹಸುಳೆಗೆ ಕೆಎಲ್‌ಇ ಸಂಸ್ಥೆಯ ಡಾ| ಪ್ರಭಾಕರ ಕೋರೆ ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ.

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನಲ್ಲಿ ಜನಿಸಿದ್ದ ಶಿಶು ಗಂಭೀರ ಸ್ಥಿತಿಯಲ್ಲಿತ್ತು. ಮಗುವಿನ ದೇಹದಲ್ಲಿ ಎಡಭಾಗದಲ್ಲಿರಬೇಕಾದ ಎಲ್ಲ ಅಂಗಾಂಗಗಳು ಬಲಭಾಗದಲ್ಲಿದ್ದವು. ಇದರಿಂದ ಮಗು ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿತ್ತು. ಉಸಿರಾಟದ ತೊಂದರೆ ತೀವ್ರವಾಗಿತ್ತು. ಬಾಗಲಕೋಟೆಯ ಖಾಸಗಿ ಆಸ್ಪತ್ರೆಯಲ್ಲಿ ಜನಿಸಿದ್ದ ಮಗುವನ್ನು ಕೃತಕ ಉಸಿರಾಟದ ಸಹಾಯದಿಂದ ಡಾ| ಪ್ರಭಾಕರ ಕೋರೆ ಆಸ್ಪತ್ರೆಗೆ ತರಲಾಯಿತು.

ಚಿಕ್ಕಮಕ್ಕಳ ಹೃದಯ ಚಿಕಿತ್ಸಕ ಡಾ| ವೀರೇಶ ಮಾನ್ವಿ ಹಾಗೂ ಹೃದಯ ಶಸ್ತ್ರಚಿಕಿತ್ಸಕ ಡಾ| ಪ್ರವೀಣ ತಂಬ್ರಳ್ಳಿಮಠ ಮಗುವನ್ನು ಸಮಗ್ರವಾಗಿ ಪರೀಕ್ಷಿಸಿ ಪ್ರಮುಖ ಅಂಗಾಂಗಗಳು ಅದಲು-ಬದಲಾಗಿರುವುದನ್ನು ಖಚಿತಪಡಿಸಿಕೊಂಡರು. ಮಗು ಸೈಟಸ್‌ ಇನ್‌ವರ್ಸಸ್‌ ಟೊಟಾಲೀಸ್‌ ವಿಥ್‌ ಡೆಕ್ಸಟ್ರೊಕಾರ್ಡಿಯಾ ಹಾಗೂ ಟಿ ಟ್ರಾನ್ಸಪೋಸಿಶನ್‌ ಆಫ್‌ ಗ್ರೇಟ್‌ ಆರ್ಟರೀಸ್‌ ಎಂಬ ಹೃದಯ ಕಾಯಿಲೆಯಿಂದ ಬಳಲುತ್ತಿರುವುದು ದೃಢಪಟ್ಟಿತು.

ದೇಹದ ಎಡಭಾಗದಲ್ಲಿರುವ ಹೃದಯ ಬಲಭಾಗಕ್ಕೆ, ಬಲಭಾಗದಲ್ಲಿ ಇರಬೇಕಾದ ಲಿವರ್‌ ಎಡಭಾಗಕ್ಕೆ, ಶ್ವಾಸಕೋಶವೂ ಅದಲು-ಬದಲಾಗಿದ್ದು, ಮಗುವಿನ ದೇಹದ ಅಂಗಾಂಗ ರಚನೆ ಕನ್ನಡಿಯಲ್ಲಿ ಕಾಣುವಂತಿತ್ತು. ಜೀವನ್ಮರಣದ ಮಧ್ಯೆ ಸೆಣಸುತ್ತಿದ್ದ ಮಗುವಿಗೆ ಶಸ್ತ್ರಚಿಕಿತ್ಸೆಯೊಂದೇ ಪರಿಹಾರ ಎಂಬುದನ್ನು ವೈದ್ಯರು ಮನಗಂಡು ಅತ್ಯಂತ ಕ್ಲಿಷ್ಟ ಶಸ್ತ್ರಚಿಕಿತ್ಸೆಗೆ ಅಣಿಯಾದರು.

9 ಗಂಟೆ ನಿರಂತರ ಶಸ್ತ್ರಚಿಕಿತ್ಸೆ:
20 ದಿನ ಹಾಗೂ ಕೇವಲ 2.5 ಕೆ.ಜಿ. ತೂಕದ ಮಗುವಿನ ಹೃದಯ ಶಸ್ತ್ರಚಿಕಿತ್ಸೆಯನ್ನು ಪರಿಣಿತ ವೈದ್ಯ ಡಾ| ಪ್ರವೀಣ ತಂಬ್ರಳ್ಳಿಮಠ ಅವರ ನೇತೃತ್ವದಲ್ಲಿ ಡಾ| ನಿಕುಂಜ ವ್ಯಾಸ ಹಾಗೂ ತಂಡ, ಸುಮಾರು 9 ಗಂಟೆಗಳ ಕಾಲ ನಡೆಸಿತು. ಇದರಿಂದ ಉಸಿರಾಟದ ಪ್ರಕ್ರಿಯೆ ಸರಾಗವಾಗಿ, ಉಳಿದ ಅಂಗಾಂಗಗಳ ಕಾರ್ಯ ನಿರ್ವಹಣೆ ಸಹ ಸಮರ್ಪಕವಾಗಿ ನಡೆಯುವಂತಾಯಿತು. ಶಸ್ತ್ರಚಿಕಿತ್ಸೆ ನಂತರ ತುರ್ತು ನಿಗಾ ಘಟಕದಲ್ಲಿ ಚಿಕ್ಕಮಕ್ಕಳ ತಜ್ಞೆ ಡಾ| ನಿಧಿ ಗೋಯಲ್‌ ಮಾನ್ವಿ ನಿರಂತರ 15 ದಿನ ಮಗುವಿನ ಆರೈಕೆ ನಡೆಸಿದ್ದಾರೆ. ಪ್ರಪಂಚದಲ್ಲಿ ಇಂತಹ ಕೇವಲ ಐದು ಯಶಸ್ವಿ ಹೃದಯ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಕೆಎಲ್‌ಇ ಆಸ್ಪತ್ರೆಯಲ್ಲಿ ಈ 6ನೇ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನೆರವೇರಿದೆ ಎಂದು ಆಸ್ಪತ್ರೆ ವೈದ್ಯಕೀಯ ನಿರ್ದೇಶಕ ಡಾ| ಎಂ.ವಿ. ಜಾಲಿ ತಿಳಿಸಿದ್ದಾರೆ. ಮಗು ಸಂಪೂರ್ಣ ಗುಣಮುಖವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದೆ.

ಟಾಪ್ ನ್ಯೂಸ್

Pejavara-Sri

Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

12-health

Alzheimer’s disease: ಅಲ್ಜೀಮರ್ – ಮರೆಗುಳಿ ಕಾಯಿಲೆಯ ಬಗ್ಗೆ ತಿಳಿಯಿರಿ

Punjab; Aam Aadmi leader shot by Akali Dal leader

Punjab; ಆಮ್‌ ಆದ್ಮಿ ನಾಯಕನಿಗೆ ಗುಂಡೇಟು ಹೊಡೆದ ಅಕಾಲಿ ದಳ ಮುಖಂಡ

10-ckm

Chikkamagaluru: ಪ್ರವಾಸಿಗರನ್ನು ಕರೆತಂದಿದ್ದ ಬೆಂಗಳೂರಿನ ಚಾಲಕ ಹೃದಯಾಘಾತದಿಂದ ಮೃತ್ಯು

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hindalga Jail: Inmate assaulted by four undertrials

Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ

1-kb

Land; ಬಗರ್‌ ಹುಕುಂ ಅರ್ಜಿ: ಎರಡು ತಿಂಗಳು ಗಡುವು

Kharge (2)

Karnataka Politics; ದಲಿತ ಸಿಎಂ ಚರ್ಚೆಗೆ ಮತ್ತೆ ರೆಕ್ಕೆಪುಕ್ಕ

1-vara

Dowry; ವರದಕ್ಷಿಣೆ ಕಿರುಕುಳ: ಕುಂದಾಪುರ ಮೂಲದ ಮಹಿಳಾ ಟೆಕಿ ಆತ್ಮಹ *ತ್ಯೆ

bjp jds

BJP, JDS ಮೈತ್ರಿ ಕಾಂಗ್ರೆಸ್‌ ಲೋಕಸಭಾ ಸೋಲಿಗೆ ಕಾರಣ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Pejavara-Sri

Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

Varun tej starrer matka movie releasing on Nov 14

Varun Tej; ನ.14ಕ್ಕೆ ‘ಮಟ್ಕಾ’ ತೆರೆಗೆ

nidradevi next door Kannada Movie

Sandalwood: ಎಚ್ಚರಗೊಂಡ ನಿದ್ರಾದೇವಿ; ಶೂಟಿಂಗ್‌ ಮುಗಿಸಿ, ಪೋಸ್ಟ್‌ ಪ್ರೊಡಕ್ಷನ್‌ ನತ್ತ..

9

Malpe: 8 ಜಿಲ್ಲಾಡಳಿತದಿಂದ ತಡೆಬೇಲಿ ತೆರವು 8ವಾಟರ್‌ ಸ್ಪೋರ್ಟ್ಸ್ ಮತ್ತೆ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.