ಹನಗೋಡು ಗ್ರಾಮ ಪಂಚಾಯಿತಿಗೆ ಗ್ರಾಮ ಪುರಸ್ಕಾರ


Team Udayavani, Oct 2, 2018, 11:09 AM IST

m4-hangodu.jpg

ಹುಣಸೂರು: ತಾಲೂಕಿನ 41 ಗ್ರಾಪಂಗಳ ಪೈಕಿ ಹನಗೋಡು ಗ್ರಾಮ ಪಂಚಾಯ್ತಿ ಶುಚಿತ್ವ, ಶೌಚಾಲಯ ನಿರ್ಮಾಣ, ಸಮರ್ಪಕ ನೀರು ಪೂರೈಕೆ ಸೇರಿದಂತೆ ವಿಶಿಷ್ಟ ಸಾಧನೆಗಾಗಿ 2017-18ನೇ ಸಾಲಿನ ಗ್ರಾಮ ಪುರಸ್ಕಾರ ಪ್ರಶಸ್ತಿಗೆ ಭಾಜನವಾಗಿದೆ.

ಹನಗೋಡು ಗ್ರಾಪಂ ವ್ಯಾಪ್ತಿಯ ಹನಗೋಡು, ಗೌಡಿಕೆರೆ ಹಾಗೂ ಕಾಮಗೌಡನಹಳ್ಳಿಗಳ ಎಲ್ಲಾ ಮನೆಗಳಲ್ಲೂ ಶೌಚಾಲಯ ನಿರ್ಮಿಸಲಾಗಿದೆ. ಸಮಸ್ಯೆಗಳ ಪರಿಹಾರಕ್ಕೆ ಇದುವರೆಗೆ ಗ್ರಾಪಂಗೆ ಬಂದ ಎಲ್ಲಾ ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಶಾಲಾ-ಕಾಲೇಜುಗಳ ಅಭಿವೃದ್ಧಿಗೂ ನೆರವಾಗಿದೆ.

ಎಲ್ಲಾ ಗ್ರಾಮಗಳಲ್ಲೂ ಕುಡಿಯುವ ನೀರಿನ ವ್ಯವಸ್ಥೆ ಉತ್ತಮವಾಗಿದೆ. ಹನಗೋಡಿನಲ್ಲಿ ಎರಡು ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಿ ಉತ್ತಮ ಕಾರ್ಯ ನಿರ್ವಹಿಸುತ್ತಿದೆ. ತೆರಿಗೆ ವಸೂಲಿಯಲ್ಲೂ ಶೇ.80ರಷ್ಟು ವಸೂಲು ಮಾಡಿದೆ. 

ಉದ್ಯೋಗ ಖಾತ್ರಿ ಯೋಜನೆಯಡಿ ಒಟ್ಟಾರೆ 7847 ಮಾನವ ದಿನಗಳನ್ನು ಬಳಸಿ, 120 ಮನೆಗಳ ನಿರ್ಮಾಣ, ಕಾಂಕ್ರೀಟ್‌ ರಸ್ತೆ, ಚರಂಡಿ-ಡೆಕ್‌ ನಿರ್ಮಾಣ, ಚೆನ್ನಯ್ಯನ ಕೆರೆ ಅಭಿವೃದ್ಧಿ, ಪದವಿ ಕಾಲೇಜಿನ ಕಾಪೌಂಡ್‌ ನಿರ್ಮಾಣ, ಹೆಚ್ಚಾಗಿ ಶೌಚಾಲಯ ಹಾಗೂ ಮನೆಗಳ ನಿರ್ಮಾಣಕ್ಕೆ ಬಳಸಿಕೊಳ್ಳಲಾಗಿದೆ. 

ಐದು ಲಕ್ಷ ಬಹುಮಾನ: ಸ್ವತ್ಛತೆ, ಶೌಚಾಲಯ ನಿರ್ಮಾಣ, ಉದ್ಯೋಗ ಖಾತ್ರಿ ಯೋಜನೆ, ತೆರಿಗೆ ವಸೂಲಿ, ದಾಖಲೆ ನಿರ್ವಹಣೆ ಸೇರಿದಂತೆ ಎಲ್ಲಾ ವಿಭಾಗಗಳಲ್ಲೂ ಅತ್ಯತ್ತಮ ಸಾಧನೆ ಮಾಡಿದ್ದು, ಜಿಪಂ ಪಂಚತಂತ್ರ ತಂತ್ರಾಂಶದ ಮೂಲಕ ಆಹ್ವಾನಿಸಿದ ಅರ್ಜಿಯಲ್ಲಿ ವಿವರ ಹಾಗೂ ಸಾಧನೆಗಳಲ್ಲಿ 150ಕ್ಕೆ 148 ಅಂಕಗಳಿಸುವ ಮೂಲಕ ಪ್ರಶಸ್ತಿಯೊಂದಿಗೆ 5 ಲಕ್ಷ ರೂ. ಬಹುಮಾನ ಪಡೆದುಕೊಂಡಿದೆ. 

ಇಂದು ಪ್ರಶಸ್ತಿ ಪ್ರದಾನ: ಅ.2.ರಂದು ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ  ನಡೆಯುವ ಗಾಂಧಿ-ಜಯಂತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆಂದು ತಾಪಂ ಇಒ ಕೃಷ್ಣಕುಮಾರ್‌ ತಿಳಿಸಿದರು. 

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ ಮಹೇಶ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

22-hunsur-1

Hunsur: ಕಾರು ಪಲ್ಟಿಯಾಗಿ ಎಳನೀರು ವ್ಯಾಪಾರಿ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.