ಗಜಪಡೆ ತಾಲೀಮಿಗೆ ವಿಂಟೇಜ್‌ ಕಾರುಗಳ ಸಾಥ್‌


Team Udayavani, Oct 2, 2018, 11:09 AM IST

m2-gajapade.jpg

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಆಕರ್ಷಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮೊದಲ ದಿನವೇ ದಸರೆಯ ಸಂಭ್ರಮವನ್ನು ಇಮ್ಮಡಿಗೊಳಿಸಿದ್ದ ವಿಂಟೇಜ್‌ ಕಾರುಗಳು ಸೋಮವಾರ ದಸರಾ ಗಜಪಡೆಯೊಂದಿಗೆ ಕಾಣಿಸಿಕೊಂಡು ಗಮನ ಸೆಳೆದವು.

ದಸರಾ ಮಹೋತ್ಸವಕ್ಕೆ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸಲು ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಹಾಗೂ ಫೆಡರೇಷನ್‌ ಆಫ್ ಹಿಸ್ಟಾರಿಕ್‌ ವೆಹಿಕಲ್‌ ಆಫ್ ಇಂಡಿಯಾ ವತಿಯಿಂದ ದಸರೆ ಉತ್ಸವಕ್ಕೆ ವಿಂಟೇಜ್‌ ಕಾರುಗಳ ಬಂಧವನ್ನು ಬೆಸೆಯಲಾಗಿದೆ.

ಈ ಹಿನ್ನೆಲೆಯಲ್ಲಿ ಸೆ.30ರಂದು ನಗರದೆಲ್ಲೆಡೆ ಸಂಚರಿಸುವ ಮೂಲಕ ಎಲ್ಲರ ಆಕರ್ಷಣೆಗೆ ಕಾರಣವಾಗಿದ್ದ ವಿಂಟೇಜ್‌ ಕಾರುಗಳು, ದಸರಾ ಗಜಪಡೆ ತಾಲೀಮಿಗೆ ಸಾಥ್‌ ನೀಡಿದವು. ಗಜಪಡೆಯ 12 ಆನೆಗಳ ತಾಲೀಮಿನಲ್ಲಿ ಸಾಗಿದ ವಿಂಟೇಜ್‌ ಕಾರುಗಳ ಆಕರ್ಷಣೆಗೆ ನಗರದ ಜನತೆ ಮನಸೋತರು. 

ತಾಲೀಮಿನಲ್ಲಿ 10 ಕಾರು: ವಿಂಟೇಜ್‌ ಕಾರುಗಳ ರ್ಯಾಲಿ ಹಿನ್ನೆಲೆಯಲ್ಲಿ ಹಲವು ದಶಕಗಳ ಹಿಂದೆ ರಾಜಮಹಾರಾಜರು, ಸಿರಿವಂತರು ಸೇರಿದಂತೆ ಹಲವು ಗಣ್ಯರು ಬಳಸುತ್ತಿದ್ದ ಅಂದಾಜು 50 ಕಾರುಗಳು ಪಾಲ್ಗೊಂಡಿದ್ದವು. ರ್ಯಾಲಿಯಲ್ಲಿ ಕೇವಲ ಭಾರತ ಮಾತ್ರವಲ್ಲದೆ ವಿದೇಶದ ವಿಂಟೇಜ್‌ ಕಾರುಗಳು ಎಲ್ಲರ ಆಕರ್ಷಣೆಯ ಕೇಂದ್ರಬಿಂದುವಾಗಿತ್ತು. 

ದಸರಾ ಗಜಪಡೆಗೆ ಯಾವುದೇ ತೊಂದರೆ ಆಗಬಾರದೆಂಬ ಉದ್ದೇಶದಿಂದ ಆನೆಗಳ ತಾಲೀಮಿನಲ್ಲಿ 10 ವಿಂಟೆಜ್‌ ಕಾರುಗಳು ಭಾಗಿಯಾಗಿವೆ. ಅರಮನೆ ಅಂಗಳದಿಂದ ಜಂಬೂಸವಾರಿ ಮೆರವಣಿಗೆ ಸಾಗುವ ಮಾರ್ಗದಲ್ಲಿ ಸಾಗಿದ ವಿಂಟೇಜ್‌ ಕಾರುಗಳ ಜತೆಗೆ ಅರ್ಜುನ ನೇತೃತ್ವದ ಗಜಪಡೆ ಗಾಂಭೀರ್ಯದಿಂದ ಹೆಜ್ಜೆಹಾಕಿ ನೋಡುಗರ ಮನತಣಿಸಿದವು.

ತಾಲೀಮು ಆರಂಭಕ್ಕೂ ಮುನ್ನ ಅಂಬಾರಿ ಹೊರುವ ಕ್ಯಾಪ್ಟನ್‌ ಅರ್ಜುನ ನೇತೃತ್ವದ ಗಜಪಡೆ, ಅರಮನೆ ಮುಂಭಾಗ ನಿಲ್ಲಿಸಿದ್ದ ವಿಂಟೇಜ್‌ ಕಾರುಗಳ ಎದುರು ನಿಲ್ಲಿಸಿದ್ದ ವಿಂಟೇಜ್‌ ಕಾರುಗಳೊಂದಿಗೆ ಫೋಟೋ ಫೋಸ್‌ ನೀಡಿ ಗಮನ ಸೆಳೆದವು.

ಬೆಟ್ಟದಲ್ಲಿ ವಿಂಟೇಜ್‌ ಹವಾ: ದಸರಾ ಹಿನ್ನೆಲೆಯಲ್ಲಿ ನಗರಕ್ಕಾಗಮಿಸಿ ರ್ಯಾಲಿ ನಡೆಸಿದ ವಿಂಟೇಜ್‌ ಕಾರುಗಳ ಆಕರ್ಷಣೆಯ ಹವಾ ಚಾಮುಂಡಿಬೆಟ್ಟದಲ್ಲೂ ಕಂಡು ಬಂದಿತು. ಸೋಮವಾರ ಬೆಳಗ್ಗೆ ಗಜಪಡೆಯೊಂದಿಗೆ ನಡೆದ ರ್ಯಾಲಿಯಲ್ಲಿ ಪಾಲ್ಗೊಂಡ ಬಳಿಕ ಚಾಮುಂಡಿಬೆಟ್ಟಕ್ಕೆ ತೆರಳಿ, ನಾಡದೇವತೆಯ ಸನ್ನಿಧಿಯಲ್ಲಿದ್ದ ಪ್ರವಾಸಿಗರನ್ನು ಗಮನ ಸೆಳೆದವು.

ಜಂಬೂಸವಾರಿ ಮೆರವಣಿಗೆ ಮಾರ್ಗದಲ್ಲಿ ಗಜಪಡೆಯೊಂದಿಗೆ ಪ್ರಮುಖ ರಸ್ತೆಗಳಲ್ಲಿ ಸಾಗಿ, ಎಲ್ಲರ ಆಕರ್ಷಣೆ ಹೆಚ್ಚಿಸಿದ ವಿಂಟೇಜ್‌ ಕಾರುಗಳು ಚಾಮುಂಡಿ ಬೆಟ್ಟಕ್ಕೂ ತೆರಳಿದವು. ಅಧಿದೇವತೆ ಚಾಮುಂಡೇಶ್ವರಿ ದೇಗುಲವನ್ನು ಒಂದು ಸುತ್ತು ಪ್ರದಕ್ಷಿಣೆ ಹಾಕಿದ ವಿಂಟೇಜ್‌ ಕಾರುಗಳ ಮಾಲಿಕರು ನೋಡುಗರ ಗಮನ ಸೆಳೆದರು. 

ಟಾಪ್ ನ್ಯೂಸ್

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ ಮಹೇಶ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

22-hunsur-1

Hunsur: ಕಾರು ಪಲ್ಟಿಯಾಗಿ ಎಳನೀರು ವ್ಯಾಪಾರಿ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.