ಬಾರ್ಕ್ ವಿಜ್ಞಾನಿಯ ಪುತ್ರನ ಶವ ಪತ್ತೆ
Team Udayavani, Oct 6, 2018, 8:25 AM IST
ಮುಂಬಯಿ: ಬಾರ್ಕ್ (ಭಾಭಾ ಪರಮಾಣು ಸಂಶೋಧನಾ ಕೇಂದ್ರ) ವಿಜ್ಞಾನಿ ಭಾಸ್ಕರ್ ದತ್ ಹಾಗೂ ಮನಶಾಸ್ತ್ರಜ್ಞೆ ಚಂದ್ರಾ ರಾಮಮೂರ್ತಿ ಅವರ ಪುತ್ರ, ಸೆ.23ರಿಂದ ನಾಪತ್ತೆಯಾಗಿದ್ದ 17 ವರ್ಷದ ನಮನ್ ದತ್ ಮೃತದೇಹ ಗುರುವಾರ ಪತ್ತೆಯಾಗಿದೆ. ಮೋರಾ ಸಗರಾಯಿ ಬೀಚ್ನ ಎಲಿಫೆಂಟಾ ಗುಹೆಯ ಸಮೀಪ ನಮನ್ ಮೃತದೇಹ ಸಿಕ್ಕಿದ್ದು, ಆತ ನೀರಲ್ಲಿ ಮುಳುಗಿ ಸಾವಿಗೀಡಾಗಿರಬಹುದು ಹಾಗೂ ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಎಂದು ಕಾಣುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. 12ನೇ ತರಗತಿ ವಿದ್ಯಾರ್ಥಿಯಾಗಿದ್ದ ನಮನ್ ನವಿ ಮುಂಬಯಿನಲ್ಲಿ ತನ್ನ ಹೆತ್ತವರೊಂದಿಗೆ ವಾಸಿಸುತ್ತಿದ್ದ. ಸೆ.23ರಂದು ರಾತ್ರಿ ಯಾರಿಗೂ ಹೇಳದೆ ಮನೆಯಿಂದ ಹೊರಟಿದ್ದ ನಮನ್ ಬಗ್ಗೆ ಸುಳಿವು ಸಿಕ್ಕಿರಲಿಲ್ಲ. ಐಐಟಿ ಪರೀಕ್ಷೆಗೆ ತಯಾರಾ ಗುತ್ತಿದ್ದ ನಮನ್ ಖನ್ನತೆಗೆ ಚಿಕಿತ್ಸೆ ಪಡೆಯುತ್ತಿದ್ದ ಎಂದು ದೂರಿನಲ್ಲಿ ಹೆತ್ತವರು ತಿಳಿಸಿದ್ದರು. ಆತ ಖನ್ನತೆಗೆ ಒಳಗಾಗಿ ಆತ್ಮಹತ್ಯೆಗೆ ಶರಣಾಗಿರ ಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.