ಮೈನವಿರೇಳಿಸಿದ ಗ್ರಾವೆಲ್‌ ಫೆಸ್ಟ್‌ ಕಾರ್‌ ರೇಸ್‌


Team Udayavani, Oct 8, 2018, 11:28 AM IST

m3-maina.jpg

ಮೈಸೂರು: ಚಾಮುಂಡಿಬೆಟ್ಟದ ಸುಂದರ ಪ್ರಕೃತಿಯ ಮಡಿಲಲ್ಲಿರುವ ಲಲಿತ ಮಹಲ್‌ ಹೆಲಿಪ್ಯಾಡ್‌ ಅಂಗಳ ಆಕರ್ಷಕ ರೇಸ್‌ ಕಾರುಗಳ ಬೋರ್ಗರೆತಕ್ಕೆ ಸಾಕ್ಷಿಯಾಯಿತು. ವಿವಿಧ ಬಗೆಯ ಕಾರುಗಳಲ್ಲಿ ಅಬ್ಬರಿಸಿ, ಧೂಳೆಬ್ಬಿಸಿದ ಕಾರು ಚಾಲಕರು, ದಸರಾ ಅಂಗವಾಗಿ ನಡೆದ ಕಾರ್‌ ರೇಸ್‌ನಲ್ಲಿ ತಮ್ಮ ಶರವೇಗದ ಚಾಲನಾ ಕೌಶಲ ಪ್ರದರ್ಶಿಸಿ ವೀಕ್ಷಕರನ್ನು ರೋಮಾಂಚನಗೊಳಿಸಿದರು. 

ವಿಶ್ವವಿಖ್ಯಾತ ದಸರಾ ಮಹೋತ್ಸವದ ಆಕರ್ಷಣೆ ಹೆಚ್ಚಿಸಿ, ಪ್ರವಾಸಿಗರನ್ನು ಸೆಳೆಯುವ ಸಲುವಾಗಿ ಜಿಲ್ಲಾಡಳಿತ ಪ್ರವಾಸೋದ್ಯಮ ಇಲಾಖೆಯ ಸಹಯೋಗದಲ್ಲಿ ನಗರದ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಲಲಿತಮಹಲ್‌ ಹೆಲಿಪ್ಯಾಡ್‌ನ‌ಲ್ಲಿ ಭಾನುವಾರ ಆಯೋಜಿಸಿದ್ದ ಗ್ರಾವೆಲ್‌ ಫೆಸ್ಟ್‌ ಕಾರ್‌ ರೇಸ್‌ ನೋಡುಗರಿಗೆ ಭರ್ಜರಿ ರಸದೌತಣ ನೀಡಿತು. ಒಬ್ಬರನ್ನು ಹಿಂದಿಕ್ಕಿ ಮತ್ತೂಬ್ಬರು ಗೆಲ್ಲಲು ನಡೆಸಿದ ಪೈಪೋಟಿ ಕ್ರೀಡಾಸಕ್ತರಿಗೆ ಹೊಸದೊಂದು ಥ್ರಿಲ್‌ ನೀಡಿತು.

ರೇಸ್‌ಗಾಗಿ ನಿರ್ಮಿಸಿದ್ದ ಟ್ರ್ಯಾಕ್‌ನಲ್ಲಿ ಶರವೇಗದಲ್ಲಿ ಕಾರು ಚಾಲನೆ ಮಾಡುತ್ತ ಧೂಳೆಬ್ಬಿಸಿ ಮುನ್ನುಗ್ಗುತ್ತಿದ್ದರೆ ದೃಶ್ಯಗಳು ನೋಡುಗರನ್ನು ತುದಿಗಾಲಿನಲ್ಲಿ ನಿಲ್ಲುವಂತೆ ಮಾಡಿತು. ಇನ್ನು ರೋಮಾಂಚನಕಾರಿ ಕಾರ್‌ ರೇಸ್‌ ವೀಕ್ಷಿಸಲು ಆಗಮಿಸಿ ಗ್ಯಾಲರಿಯಲ್ಲಿ ಕುಳಿತಿದ್ದ ಪ್ರೇಕ್ಷಕರು ಶಿಳ್ಳೆ, ಚಪ್ಪಾಳೆ. ಹರ್ಷೋದ್ಘಾರದ ಮೂಲಕ ಸ್ಪರ್ಧಿಗಳನ್ನು ಹುರಿದುಂಬಿಸುತ್ತಿದ್ದರು. 

8 ವಿಭಾಗಗಳಲ್ಲಿ ಸ್ಪರ್ಧೆ: ದಸರೆಯ ಅಂಗವಾಗಿ ನಡೆದ ಆಕರ್ಷಕ ಗ್ರಾವೆಲ್‌ ಫೆಸ್ಟ್‌ ಕಾರ್‌ ರೇಸ್‌ನಲ್ಲಿ ಕಾರುಗಳ ಸಿಸಿ ಸಾಮರ್ಥ್ಯಕ್ಕೆ ತಕ್ಕಂತೆ 8 ವಿಭಾಗಗಳಲ್ಲಿ ಸ್ಪರ್ಧೆ ನಡೆಯಿತು. 1100 ಸಿಸಿ, 1400 ಸಿಸಿ, ಇಂಡಿಯನ್‌ ಓಪನ್‌ ಕ್ಲಾಸ್‌, ಮೈಸೂರ್‌ ಲೋಕಲ್‌ ನಾವೀಸ್‌ ಓಪನ್‌, ಎಸ್‌ಯುವಿ ಕ್ಲಾಸ್‌, ಅನ್‌ ರಿಸ್ಟ್ರಿಕ್ಟೆಡ್‌ ಕ್ಲಾಸ್‌, ಲೇಡಿಸ್‌ ಕ್ಲಾಸ್‌ ಸೇರಿದಂತೆ ಒಟ್ಟು 8 ವಿಭಿನ್ನ ವಿಭಾಗಗಳಲ್ಲಿ ಸ್ಪರ್ಧೆ ನಡೆಯಿತು. 

168 ಸ್ಪರ್ಧಿಗಳು ಭಾಗಿ: ರೇಸ್‌ನಲ್ಲಿ ಡೆನ್‌ ತಿಮ್ಮಯ್ಯ, ಚೇತನ್‌ ಶಿವರಾಮ್‌, ಬೋಪಯ್ಯ, ಡೀನ್‌ ಧ್ರುವ ಚಂದ್ರಶೇಖರ್‌, ಸಹೇಮ್‌ ಕರೀಂ ಸೇರಿದಂತೆ ತಮಿಳುನಾಡು, ಕೇರಳ, ಗೋವಾ, ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳ ಹಾಗೂ ಮೈಸೂರು, ಮಡಿಕೇರಿ, ಮಂಗಳೂರು, ಹಾಸನ, ಚಿಕ್ಕಮಂಗಳೂರು, ಮೂಡಿಗೇರೆ ಸೇರಿದಂತೆ ಒಟ್ಟು 168 ಸ್ಪರ್ಧಿಗಳು ಭಾಗವಹಿಸಿ ತಮ್ಮ ಚಾಲನಾ ಕಲೆ ಪ್ರದರ್ಶಿಸಿದರು. 

13 ಮಹಿಳಾ ರೇಸರ್‌ಗಳು: ಹೆಲಿಪ್ಯಾಡ್‌ ಅಂಗಳದಲ್ಲಿ ನಡೆದ ರೋಮಾಂಚಕ ಕಾರ್‌ ರೇಸ್‌ನಲ್ಲಿ ಪುರುಷ ಸ್ಪರ್ಧಿಗಳ ಜತೆಗೆ 13 ಮಹಿಳಾ ರೇಸರ್‌ಗಳು ಎಲ್ಲರ ಗಮನ ಸೆಳೆದರು. ಪುರುಷರಿಗಿಂತ ನಾವೇನು ಕಮ್ಮಿಯಿಲ್ಲ ಎಂಬಂತೆ ರೇಸ್‌ ಸೂಟ್‌ ಧರಿಸಿ ತಮ್ಮ ನೆಚ್ಚಿನ ಕಾರಿನಲ್ಲಿ ಶರವೇಗದಲ್ಲಿ ಮುನ್ನುಗ್ಗುತ್ತಾ ಧೂಳೆಬ್ಬಿಸಿದರು. ಚಿತ್ರ ನಟಿ ರೇಖಾ ಸೇರಿದಂತೆ ಬೆಂಗಳೂರು, ಹಾಸನ ಹಾಗೂ ಮೈಸೂರಿನ 13 ಮಹಿಳಾ ರೇಸರ್‌ಗಳು ಸ್ಪರ್ಧೆಯಲ್ಲಿ ಭಾಗವಹಿಸಿ ನೋಡುಗರ ಹುಬ್ಬೇರುವಂತೆ ಮಾಡಿದರು. 

ಕಿಕ್ಕೇರಿಸಿದ ಡಿಜೆ ಸದ್ದು: ಕಾರ್‌ ರೇಸ್‌ ವೀಕ್ಷಿಸಲು ನೆರೆದಿದ್ದ ಪ್ರೇಕ್ಷಕರಿಗೆ ಕಾರುಗಳು ಸದ್ದಿನೊಂದಿಗೆ ಡಿಜೆ ಸದ್ದು ಕಿಕ್ಕೇರಿಸಿತು. ಹೊಗೆ ಉಗುಳುತ್ತ ಮಣ್ಣಿನ ರಸ್ತೆಯಲ್ಲಿ ಧೂಳೆಬ್ಬಿಸಿ ಸಾಗುತ್ತಿದ್ದರೆ ಇತ್ತ ಹಿನ್ನೆಲೆಯಿಂದ ಬರುತ್ತಿದ್ದ ಡಿಜೆ ಹಾಡಿನ ಸದ್ದು ನೋಡುಗರಲ್ಲಿ ಮತ್ತಷ್ಟು ಆಸಕ್ತಿ ಕೆರಳಿಸಿತು.

ಪ್ರೇಕ್ಷಕರ ವೀಕ್ಷಣೆಗೆ ಅನುಕೂಲವಾಗಲೆಂದೆ ದೊಡ್ಡ ಎಲ್‌ಇಡಿ ಪರದೆ ವ್ಯವಸ್ಥೆ ಮಾಡಲಾಗಿತ್ತು. ನೇರವಾಗಿ ವೀಕ್ಷಣೆ ಮಾಡಲಾಗದವರು ಎಲ್‌ಇಡಿ ಪರದೆಯಲ್ಲಿ ರೇಸ್‌ ವೀಕ್ಷಿಸಿ ಖುಷಿ ಪಟ್ಟರು. ಇದಕ್ಕೂ ಮುನ್ನ ಕಾರ್‌ ರೇಸ್‌ಗೆ ಪ್ರವಾಸೋದ್ಯಮ ಇಲಾಖೆ ನಿರ್ದೇಶಕ ರಾಮು, ಜಿಲ್ಲಾಧಿಕಾರಿ ಅಭಿರಾಮ್‌ ಜಿ.ಶಂಕರ್‌ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. 

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

Road Mishap ಸ್ಲೀಪರ್ ಕೋಚ್ ಬಸ್ ಪಲ್ಟಿ: ಓರ್ವ ಮೃತ್ಯು; 11 ಮಂದಿಗೆ ಗಾಯ

Road Mishap ಸ್ಲೀಪರ್ ಕೋಚ್ ಬಸ್ ಪಲ್ಟಿ: ಓರ್ವ ಮೃತ್ಯು; 11 ಮಂದಿಗೆ ಗಾಯ

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

1-wewewqeqwewqe

Edible oil; ದಾಸ್ತಾನಿದ್ದರೂ ಖಾದ್ಯ ತೈಲ ಬೆಲೆ ಏರಿಸಿದ್ದೇಕೆ: ಸರಕಾರ ಪ್ರಶ್ನೆ

Madikeri ಭಾಗದ ಅಪರಾಧ ಸುದ್ದಿಗಳು

Madikeri ಭಾಗದ ಅಪರಾಧ ಸುದ್ದಿಗಳು

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.