ತೆಂಗಿಗೆ ಬೆಣ್ಣೆ-ಅಡಕೆಗೆ ಸುಣ್ಣ!


Team Udayavani, Oct 8, 2018, 4:28 PM IST

cta-1.jpg

ಚಿತ್ರದುರ್ಗ: ಸತತ ಬರ, ಅಂತರ್ಜಲ ಮಟ್ಟ ಕುಸಿತದಿಂದ ಅಡಕೆ, ತೆಂಗಿನ ತೋಟ ಕಳೆದುಕೊಂಡು ಜಿಲ್ಲೆಯ ರೈತರು ಕಂಗಾಲಾಗಿದ್ದಾರೆ. ರಾಜ್ಯ ಸರ್ಕಾರ ಒಣಗಿ ಹೋಗಿರುವ ತೆಂಗಿನ ಮರಕ್ಕೆ ಪರಿಹಾರ ಘೋಷಣೆ ಮಾಡಿ, ಅಡಕೆ ಬೆಳೆಗಾರರನ್ನು ನಿರ್ಲಕ್ಷಿಸುವ ಮೂಲಕ ಒಂದು ಕಣ್ಣಿಗೆ ಬೆಣ್ಣೆ, ಮತ್ತೂಂದು ಕಣ್ಣಿಗೆ ಸುಣ್ಣ ಹಾಕಿ ತಾರತಮ್ಯ ಮಾಡಿದೆ.

ಕಳೆದ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಬರದಿಂದ ಒಣಗಿ ಹೋಗಿರುವ ತೆಂಗಿನ ಮರವೊಂದಕ್ಕೆ 400 ರೂ. ಅಥವಾ ಪ್ರತಿ ಹೆಕ್ಟೇರ್‌ಗೆ 18 ಸಾವಿರ ರೂ.ಗಳ ಪರಿಹಾರ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಆದರೆ ಒಣಗಿದ ಅಡಕೆ ಮರಗಳಿಗೆ ಯಾವುದೇ ಪರಿಹಾರ ಘೋಷಣೆ ಮಾಡದೆ ತೆಂಗು ಮತ್ತು ಅಡಕೆ ಬೆಳೆಗಾರರಿಗೆ ತಾರತಮ್ಯವನ್ನುಂಟು ಮಾಡಿದೆ. ತುಮಕೂರು, ಹಾಸನ, ಮಂಡ್ಯ, ಮೈಸೂರು ಭಾಗದಲ್ಲಿ ಅಡಕೆ ಬೆಳೆಯದಿರುವುದು
ಇದಕ್ಕೆ ಕಾರಣ ಎನ್ನುವ ಆರೋಪ ಕೇಳಿ ಬಂದಿದೆ.

ಚಿತ್ರದುರ್ಗ ಜಿಲ್ಲೆಯಲ್ಲಿ 10042.20 ಹೆಕ್ಟೇರ್‌ ಪ್ರದೇಶದಲ್ಲಿನ 3,074,975 ಅಡಕೆ ಮರಗಳು ಒಣಗಿ ಹೋಗಿ 626.98 ಕೋಟಿ ರೂ.ಗಳ ಬೆಳೆ ಹಾನಿಯಾಗಿದೆ. ತೋಟಗಾರಿಕೆ ಇಲಾಖೆ ಮೂಲಕ ಜಿಲ್ಲಾಧಿಕಾರಿಯವರು 2017ರಲ್ಲೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಪ್ರಸ್ತಾವನೆ ಸಲ್ಲಿಸಿದ್ದರು.

ಕೇಂದ್ರ ಸರ್ಕಾರ ಬರ ವಿಪತ್ತು ನಿಧಿಯಿಂದ ಯಾವುದೇ ಪರಿಹಾರ ನೀಡದೆ ರೈತರನ್ನು ಕಡೆಗಣಿಸಿದೆ. ಮತ್ತೂಂದು ಕಡೆ ರಾಜ್ಯ ಸಮ್ಮಿಶ್ರ ಸರ್ಕಾರ ತೆಂಗಿಗೆ ಪರಿಹಾರ ನೀಡಲು ತೀರ್ಮಾನ ಮಾಡಿರುವುದು ಉತ್ತಮ ಬೆಳವಣಿಗೆ. ಆದರೆ
ಅಡಕೆ ಮರಗಳಿಗೆ ಪರಿಹಾರ ನೀಡುವ ವಿಷಯದಲ್ಲಿ ಚಕಾರ ಎತ್ತದಿರುವುದು ಅಡಕೆ ಬೆಳೆಗಾರರಲ್ಲಿ ಬೇಸರ ಮೂಡಿಸಿದೆ. ಕಳೆದ ಹತ್ತು ವರ್ಷಗಳಿಂದ ಕಾಡುತ್ತಿರುವ ಬರ ಜಿಲ್ಲೆಯ ರೈತರ ಎದೆ ನಡುಗಿಸಿದೆ. 2016-17ರಲ್ಲಿ ಬರ ಮತ್ತು ಬಿಸಿಲಿನ ತಾಪದಿಂದಾಗಿ ಭೂಮಿಯಲ್ಲಿ ತೇವಾಂಶ ಕಡಿಮೆಯಾಗಿ ಎಲ್ಲ ಕೊಳವೆಬಾವಿಗಳು ಬರಿದಾಗಿ ಬತ್ತಿ ಹೋದವು. 

ಇದರ ಪರಿಣಾಮ ಜಿಲ್ಲೆಯಲ್ಲಿನ 10,103.30 ಹೆಕ್ಟೇರ್‌ ಪ್ರದೇಶದ 3,26,617 ತೆಂಗಿನ ಮರಗಳು, 10042.20 ಹೆಕ್ಟೇರ್‌ ಪ್ರದೇಶದಲ್ಲಿನ 3,074,975 ಸಂಖ್ಯೆಯ ಅಡಕೆ ಮರಗಳು ಸಂಪೂರ್ಣ ಒಣಗಿ ಹೋದವು. ಜಿಲ್ಲಾದ್ಯಂತ ಒಟ್ಟು 20145.50 ಹೆಕ್ಟೇರ್‌ ಪ್ರದೇಶದಲ್ಲಿನ 34,01,592 ಅಡಕೆ ಮತ್ತು ತೆಂಗಿನ ಮರಗಳ ಹಾನಿಯಿಂದಾಗಿ ಅಪಾರ ಪ್ರಮಾಣದ ಹಾನಿಯಾಗಿದೆ. ತೆಂಗಿನ ಮರಗಳ ಹಾನಿಯಿಂದ 288.89 ಕೋಟಿ ರೂ. ಹಾಗೂ ಅಡಕೆ ಮರಗಳ ಹಾನಿಯಿಂದ 626.98 ಕೋಟಿ ರೂ.ಗಳ ಬೆಳೆ ಹಾನಿ ಸೇರಿ ಒಟ್ಟು 915.88 ಕೋಟಿ ರೂ.ಗಳ ಬೆಳೆ ಹಾನಿಯಾಗಿದೆ. ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (ಎನ್‌ಡಿಆರ್‌ಎಫ್‌) ಮಾನದಂಡದ ಪ್ರಕಾರ ಬರ ಪರಿಹಾರ ಬಿಡುಗಡೆ ಮಾಡುವಂತೆ ಜಿಲ್ಲಾಡಳಿತ, ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ ಈ ಪ್ರಸ್ತಾವನೆಗೆ ಸರ್ಕಾರಗಳು ಗಮನ ನೀಡಿದಂತಿಲ್ಲ. ಹೀಗಾಗಿ ಜಿಲ್ಲೆಯ ರೈತರ ಸಂಕಷ್ಟ ಮತ್ತಷ್ಟು ಮುಂದುವರೆದಿದೆ. 

ಹರಿಯಬ್ಬೆ ಹೆಂಜಾರಪ್ಪ

ಟಾಪ್ ನ್ಯೂಸ್

Israel ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ

Israel ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ

Kazakhstan: ಕಜಕ್‌ ವಿಮಾನವನ್ನು ರಷ್ಯಾವೇ ಉರುಳಿಸಿದೆ: ಅಜರ್‌ಬೈಜಾನ್‌

Kazakhstan: ಕಜಕ್‌ ವಿಮಾನವನ್ನು ರಷ್ಯಾವೇ ಉರುಳಿಸಿದೆ: ಅಜರ್‌ಬೈಜಾನ್‌

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ

Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ

ಯಮುನಾ ನದಿಯಲ್ಲಿ ಡಾ| ಮನಮೋಹನ್‌ ಸಿಂಗ್‌ ಚಿತಾಭಸ್ಮ ವಿಸರ್ಜನೆ

Yamuna ನದಿಯಲ್ಲಿ ಡಾ| ಮನಮೋಹನ್‌ ಸಿಂಗ್‌ ಚಿತಾಭಸ್ಮ ವಿಸರ್ಜನೆ

1-astr

Shri Krishna Matha; ವಿಶ್ವಮಟ್ಟದಲ್ಲಿ ಭಗವದ್ಗೀತೆ ಜಾಗೃತಿ: ಪುತ್ತಿಗೆ ಶ್ರೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Israel ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ

Israel ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ

Kazakhstan: ಕಜಕ್‌ ವಿಮಾನವನ್ನು ರಷ್ಯಾವೇ ಉರುಳಿಸಿದೆ: ಅಜರ್‌ಬೈಜಾನ್‌

Kazakhstan: ಕಜಕ್‌ ವಿಮಾನವನ್ನು ರಷ್ಯಾವೇ ಉರುಳಿಸಿದೆ: ಅಜರ್‌ಬೈಜಾನ್‌

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ

Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.