ಐಕಿಯಾದಿಂದ ಸಹಸ್ರ ಕೋಟಿ ಹೂಡಿಕೆ


Team Udayavani, Oct 9, 2018, 11:38 AM IST

ikea.jpg

ಹೈದರಾಬಾದ್‌: ಪೀಠೊಪಕರಣ, ಒಳಾಂಗಣ ವಿನ್ಯಾಸ ಕ್ಷೇತ್ರವನ್ನು ಕೇಂದ್ರವನ್ನಾಗಿಸಿಕೊಂಡು ಭಾರತೀಯ ಮಾರುಕಟ್ಟೆ ಪ್ರವೇಶ ಮಾಡಿರುವ ಸ್ವೀಡನ್‌ ಮೂಲದ ಐಕಿಯಾ ಕಂಪನಿ, ಮುಂದಿನ ವರ್ಷದಿಂದ ಬೆಂಗಳೂರಿನಲ್ಲಿ ಕಾರ್ಯರಂಭ ಮಾಡಲಿದೆ. ಈಗಾಗಲೇ ಹೈದರಾಬಾದ್‌ನ ಗಚ್ಚಿಬೌಲಿಯಲ್ಲಿ ಮಳಿಗೆ ಸ್ಥಾಪಿಸಿ ಯಶಸ್ಸು ಕಂಡಿರುವ ಸಂಸ್ಥೆ, ಇದೀಗ ಬೆಂಗಳೂರಿನಲ್ಲಿ 1 ಸಾವಿರ ಕೋಟಿ ರೂ.ಬಂಡವಾಳ ಹೂಡಲು ಮುಂದಾಗಿದೆ.

ಈ ಉದ್ದೇಶಕ್ಕಾಗಿಯೇ ಐಕಿಯಾ ಈಗಾಗಲೇ, ಬೆಂಗಳೂರು ಮೆಟ್ರೋ ರೈಲು ನಿಗಮದಿಂದ ತುಮಕೂರು ರಸ್ತೆಯ ನಾಗಸಂದ್ರದ ಬಳಿ 14 ಎಕೆರೆ ಜಾಗವನ್ನು ಖರೀದಿಸಿದ್ದು, ಇದರಲ್ಲಿ 4 ಎಕರೆ ಪ್ರದೇಶದಲ್ಲಿ ಬೃಹತ್‌ ಮಳಿಗೆ ತೆರೆಯಲಿದೆ. ಸುಮಾರು 700 ಮಂದಿಗೆ ನೇರವಾಗಿ ಮತ್ತು 800 ಮಂದಿಗೆ ಪರೋಕ್ಷವಾಗಿ ಉದ್ಯೋಗ ನೀಡುವುದು ಕಂಪನಿಯ ಮುಖ್ಯ ಗುರಿಯಾಗಿದೆ.

ಪ್ರಧಾನಿ ಕಲ್ಪನೆಗೆ ಆದ್ಯತೆ: ಪ್ರಧಾನಿ ನರೇಂದ್ರ ಮೋದಿ ಅವರ ಮೇಕ್‌ ಇನ್‌ ಇಂಡಿಯಾ ಪರಿಕಲ್ಪನೆಯಂತೆ ಹಲವು ಉತ್ಪನ್ನಗಳು ಕರ್ನಾಟಕದಲ್ಲಿ ಸಿದ್ಧಗೊಳ್ಳಲಿದ್ದು, ಕೌಶಲ್ಯವುಳ್ಳ ಮರ ಕೆಲಸದವರಿಗೂ ಉದ್ಯೋಗ ದೊರೆಯಲಿದೆ. ಗ್ರಾಮೀಣ ಮಹಿಳೆಯರು ಉತ್ಪಾಧಿಸಿದ ಹತ್ತಿ ಉತ್ಪನ್ನಗಳು ಸೇರಿದಂತೆ ಇನ್ನಿತರ ಉತ್ಪನ್ನಗಳು ಐಕಿಯಾ ಮಳಿಗೆಯಲ್ಲಿ ಮಾರಾಟವಾಗಲಿವೆ.

ಪುಟ್ಟ ಮಕ್ಕಳ ಆಟಿಕೆ ಉತ್ಪನ್ನಗಳಿಂದ ಹಿಡಿದು, ಗೃಹ ಬಳಕೆ ವಸ್ತುಗಳವರೆಗೂ ಸುಮಾರು 7,500 ಬಗೆಯ ಉತ್ಪನ್ನಗಳು ಐಕಿಯಾ ಮಳಿಗೆಯಲ್ಲಿ ಕೈಗೆಟುಕುವ ದರದಲ್ಲಿ ದೊರೆಯಲಿವೆ. ಇದರಲ್ಲಿ 1 ಸಾವಿರಕ್ಕೂ ಹೆಚ್ಚು ಸ್ವದೇಶಿ ಉತ್ಪನ್ನಗಳಿರಲಿವೆ. ಗ್ರಾಹಕರಿಗೆ ರುಚಿಕರ ಆಹಾರ ಉಣಬಡಿಸಲು ರೆಸ್ಟೋರೆಂಟ್‌ ಕೂಡ ಇರಲಿದ್ದು, ಭಾರತ, ಸ್ವೀಡನ್‌ ಸೇರಿದಂತೆ ಹಲವು ದೇಶದ ಭೋಜನಗಳು ಅಲ್ಲಿ ದೊರೆಯಲಿವೆ.

ಹಣಕ್ಕೆ ತಕ್ಕಂತೆ ಖರೀದಿ: “ಪೈಸಾ ವಸೂಲ್‌’ ಪರಿಕಲ್ಪನೆಯಂತೆ ಐಕಿಯಾ ಮಳಿಗೆಯಲ್ಲಿ ಉತ್ಪನ್ನಗಳ ಮಾರಾಟ ಪ್ರಕ್ರಿಯೆ ನಡೆಯಲಿದ್ದು, ಹಣಕ್ಕೆ ತಕ್ಕಂತೆ ಖರೀದಿ ಇರಲಿದೆ. 15 ರೂ.ನಿಂದ ಲಕ್ಷಾಂತರ ರೂ.ವರೆಗಿನ ಉತ್ಪನ್ನಗಳು ಒಂದೇ ಸೂರಿನಡಿ ದೊರೆಯಲಿವೆ ಎಂದು ಐಕಿಯಾ ಸಂಸ್ಥೆಯ ಡೆಪ್ಯೂಟಿ ಸಿಇಒ ಪ್ಯಾಟ್ರಿಕ್‌ ಅಂತೋನಿ ಹೇಳಿದರು.

2030ರ ವೇಳೆ ಭಾರತದ 49 ನಗರಗಳನ್ನು ತಲುಪಬೇಕೆಂಬ ಉದ್ದೇಶವಿದ್ದು, ಈ ನಿಟ್ಟಿನಲ್ಲಿ ಕೆಲಸ ಸಾಗಿದೆ. 3 ಸಾವಿರ ಕೋಟಿ ರೂ. ಬಂಡವಾಳ ಹೂಡಿಕೆ ಮಾಡಲು ಯೋಜನೆ ರೂಪಿಸಲಾಗಿದ್ದು, ಚನ್ನೈ, ಸೂರತ್‌, ಪುಣೆ, ಅಹ್ಮದಾಬಾದ್‌, ಕೋಲ್ಕತ್ತಾಗಳಲ್ಲಿ ಮಳಿಗೆ ಸ್ಥಾಪಿಸಿ ಸಾವಿರು ಮಂದಿ ಭಾರತೀಯರಿಗೆ ಉದ್ಯೋಗ ನೀಡುವ ಗುರಿ ಹೊಂದಲಾಗಿದೆ ಎಂದರು.

ಚೀನಾದಲ್ಲಿ 25 ಮತ್ತು ಸ್ವೀಡನ್‌ನಲ್ಲಿ 16 ಮಳಿಗೆಯನ್ನು ಹೊಂದಿರುವ ಐಕಿಯಾ, 2025ರ ವೇಳೆಗೆ ಭಾರತದಲ್ಲಿ ಐದು ಮಳಿಗೆಗಳನ್ನು ತೆರೆಯುವ ಗುರಿ ಹೊಂದಿದೆ. ಗ್ರಾಹಕರನ್ನು ತಲುಪುವ ನಿಟ್ಟಿನಲ್ಲಿ ಆನ್‌ಲೈನ್‌ ಮಾರುಕಟ್ಟೆಗೂ ಆದ್ಯತೆ ನೀಡಲಾಗಿದೆ ಎಂದು ಸಂಸ್ಥೆಯ ತೆಲಂಗಾಣ ವಿಭಾಗದ ವ್ಯವಸ್ಥಾಪಕ ನಿರ್ದೇಶಕ ಜಾನ್‌ ಆಕಿಲಿಯಾ ತಿಳಿಸಿದ್ದಾರೆ.

ಅ.11ರಂದು ಶಂಕುಸ್ಥಾಪನೆ: ತುಮಕೂರು ರಸ್ತೆ ನಾಗಸಂದ್ರ ಮೆಟ್ರೋ ನಿಲ್ದಾಣದ ಹಿಂಭಾಗದ ಸ್ಥಳದಲ್ಲಿ ಅ.11ರಂದು ಶಂಕು ಸ್ಥಾಪನೆ ನಡೆಯಲಿದೆ. ಅಂದು ಬೆಳಗ್ಗೆ 11 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಸರ್ಕಾರದ ನಿವೃತ್ತ ಕಾರ್ಯದರ್ಶಿ ರತ್ನಪ್ರಭಾ ಹಾಗೂ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಪ್ಯಾಟ್ರಿಕ್‌ ಅಂತೋನಿ ಹೇಳಿದ್ದಾರೆ.

* ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

jameer

Waqf Boardನಿಂದ ಪ್ರತಿ ಜಿಲ್ಲೆಯಲ್ಲಿ ಪದವಿ ಪೂರ್ವ ಕಾಲೇಜು: ಸಚಿವ ಜಮೀರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.