ಥಾಣೆಯ 4 ಅಂತಸ್ತಿನ ಕಟ್ಟಡದಲ್ಲಿ ಬಿರುಕು: 300 ಮಂದಿ ತೆರವು
Team Udayavani, Oct 9, 2018, 11:45 AM IST
ಥಾಣೆ, ಮಹಾರಾಷ್ಟ್ರ : ಇಲ್ಲಿನ ನಾಲ್ಕಂತಸ್ತಿನ ಕಟ್ಟಡದಲ್ಲಿ ಆಳವಾದ ಬಿರುಕು ಕಂಡು ಬಂದಿರುವನ್ನು ಅನುಸರಿಸಿ ಕಟ್ಟಡದೊಳಗೆ ವಾಸವಾಗಿದ್ದ ಸುಮಾರು 300 ಮಂದಿಯನ್ನು ತೆರವುಗೊಳಿಸಲಾಯಿತು ಎಂದು ಪೌರಾಡಳಿತೆಯ ಅಧಿಕಾರಿಗಳು ಇಂದು ಮಂಗಳವಾರ ತಿಳಿಸಿದ್ದಾರೆ.
ಉಠಾಲ್ಸಾರ್ ಪ್ರದೇಶದಲ್ಲಿನ ವಸತಿ ಕಟ್ಟಡದ ಎರಡನೇ ಮಹಡಿಯಲ್ಲಿನ ಪಿಲ್ಲರ್ನಲ್ಲಿ ಬಿರುಕು ಕಂಡುಬಂದಿರುವ ಬಗ್ಗೆ ಸೋಮವಾರ ತಡ ರಾತ್ರಿ ಮುನಿಸಿಪಲ್ ಕಾರ್ಪೊರೇಶನ್ ನ ತುರ್ತು ನಿಯಂತ್ರಣ ಕೊಠಡಿಗೆ ಫೋನ್ ಕರೆ ಬಂದಿತ್ತು ಎಂದು ನಗರಾಡಳಿತೆಯ ಪ್ರಾದೇಶಿಕ ವಿಪತ್ತು ನಿರ್ವಹಣ ಕೊಠಡಿಯ ಮುಖ್ಯಸ್ಥರಾಗಿರುವ ಸಂತೋಷ್ ಕದಂ ಹೇಳಿದರು.
ಒಡನೆಯೇ ಪೌರಾಡಳಿತೆ ಮತ್ತು ಅಗ್ನಿ ಶಾಮಕ ದಳದ ಸಿಬಂದಿಗಳು ಸ್ಥಳಕ್ಕೆ ಧಾವಿಸಿ ಕಟ್ಟಡದೊಳಗೆ ವಾಸವಿದ್ದ ಸುಮಾರು 57 ಕುಟುಂಬಗಳಿಗೆ ಸೇರಿದ 300 ಮಂದಿಯನ್ನು ತೆರವುಗೊಳಿಸಲಾಯಿತು. ಈ ಕಟ್ಟಡವು 35 ವರ್ಷಗಳಷ್ಟು ಹಳೆಯದೆಂದು ಗೊತ್ತಾಗಿದೆ.
ಕಟ್ಟಡವನ್ನು ಈಗ ಸೀಲ್ ಮಾಡಲಾಗಿದ್ದು ಅದರಿಂದ ತೆರವುಗೊಳಿಸಲ್ಪಟ್ಟಿರುವ ಜನರನ್ನು ತಾತ್ಕಾಲಿಕವಾಗಿ ನಗರದ ಭಯಾಂದರ್ ಪಾಡ ಪ್ರದೇಶದಲ್ಲಿನ ಖಾಲಿ ವಸದಿ ಸಂಕೀರ್ಣಕ್ಕೆ ಸ್ಥಳಾಂತರಿಸಲಾಗಿದೆ ಎಂದು ಕದಂ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್
Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ
Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ
J-K Election: ಚುನಾವಣೆ ಫಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್ ಆಕ್ಷೇಪ
Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.