ಉಪಮೇಯರ್‌ ಸ್ಥಾನಕ್ಕೆ ಜೆಡಿಎಸ್‌ನಲ್ಲಿ ಪೈಪೋಟಿ


Team Udayavani, Oct 9, 2018, 12:19 PM IST

bbmp2.jpg

ಬೆಂಗಳೂರು: ರಮೀಳಾ ಉಮಾಂಶಕರ್‌ ಅವರ ನಿಧನದಿಂದ ತೆರವಾಗಿರುವ ಉಪಮೇಯರ್‌ ಸ್ಥಾನಕ್ಕೇರಲು ಜೆಡಿಎಸ್‌ನಲ್ಲಿ ಪೈಪೋಟಿ ಶುರುವಾಗಿದೆ.

ಸೆ.28ರ ಚುನಾವಣೆ ವೇಳೆ ಉಪಮೇಯರ್‌ ಸ್ಥಾನ ತಪ್ಪಿದ್ದಕ್ಕೆ ಅಸಮಧಾನಗೊಂಡು ನೇರವಾಗಿ ಬಿಜೆಪಿಗೆ ಬೆಂಬಲ ಘೋಷಿಸಿದ್ದ ಹಾಗೂ ಚುನಾವಣೆಗೆ ಗೈರಾಗುವ ಮೂಲಕ ಬಿಜೆಪಿಗೆ ಪರೋಕ್ಷವಾಗಿ ಬೆಂಬಲಿಸಿದ್ದ ಮೂವರು ಸದಸ್ಯರು ಇದೀಗ ನಿರಾಸೆಗೊಂಡಿದ್ದು, ಪಕ್ಷ ವಿರೋಧಿ ಚಟುವಟಿಕೆ ಆರೋಪ ಇರುವುದರಿಂದ ಅವರು ಉಪ ಮೇಯರ್‌ ರೇಸ್‌ನಿಂದ ಹೊರಗುಳಿಯುವಂತಾಗಿದೆ.

ಉಪಮೇಯರ್‌ ಆಯ್ಕೆ ಸಂಬಂಧ ಪಕ್ಷದ ನಿರ್ಧಾರವನ್ನು ಬಹಿರಂಗವಾಗಿಯೇ ವಿರೋಧಿಸಿದ್ದ ಮಂಜುಳಾ ನಾರಾಯಣಸ್ವಾಮಿ ಹಾಗೂ ದೇವದಾಸ್‌, ಬಿಜೆಪಿ ಪಾಳಯದಲ್ಲಿ ಗುರುತಿಸಿಕೊಂಡಿದ್ದರು. ಅದೇ ರೀತಿ ನಾಜಿಮಾ ಖಾನ್‌, ಚುನಾವಣೆ ಪ್ರಕ್ರಿಯೆಯಿಂದ ದೂರ ಉಳಿಯುವ ಮೂಲಕ ಬಂಡಾಯ ಸಾರಿದ್ದರು. ಮತದಾನದ ವೇಳೆ ದೇವದಾಸ್‌, ಪಕ್ಷದ ಅಭ್ಯರ್ಥಿ ಪರ ಕೈ ಎತ್ತಿದರೂ ಮಂಜುಳಾ ನಾರಾಯಣಸ್ವಾಮಿ ಸಭಾಂಗಣದಿಂದ ನಿರ್ಗಮಿಸಿದ್ದರು. ಹೀಗಾಗಿ, ಮಂಜುಳಾ ಹಾಗೂ ನಾಜಿಮಾ ಖಾನ್‌ ಅವರಿಗೆ ನೋಟಿಸ್‌ ಸಹ ನೀಡಲಾಗಿತ್ತು.

ಉಪ ಮೇಯರ್‌ ಸ್ಥಾನಕ್ಕೆ ಪ್ರಮುಖವಾಗಿ ಹಾಲಿ ಜೆಡಿಎಸ್‌ ನಾಯಕಿ ನೇತ್ರಾ ನಾರಾಯಣ್‌, ಭದ್ರೇಗೌಡ, ಮಹಾದೇವ್‌ ಹಾಗೂ ರಾಜಶೇಖರ್‌ ಆಕಾಂಕ್ಷಿಗಳಾಗಿದ್ದಾರೆ. ಆ ಪೈಕಿ ರಾಜಶೇಖರ್‌ ಅವರಿಗೆ ಕಳೆದ ಮೂರು ಅವಧಿಯಲ್ಲಿ ಯಾವುದೇ ಅಧ್ಯಕ್ಷ ಸ್ಥಾನಮಾನ ಸಿಕ್ಕಿಲ್ಲ. ಜತೆಗೆ ಕುರುಬ ಸಮುದಾಯಕ್ಕೆ ಸೇರಿದವರು. ರಮೀಳಾ ಸಹ ಅದೇ ಸಮುದಾಯದವರು. ಹೀಗಾಗಿ ರಾಜಶೇಖರ್‌ ಅವರಿ ಉಪಮೇಯರ್‌ ಆಗುವ ಅವಕಾಶ ಹೆಚ್ಚು ಎಂದು ಹೇಳಲಾಗಿದೆ.

ಸ್ಥಾಯಿ ಸಮಿತಿ ನಂತರ ಚುನಾವಣೆ?: ಬಿಬಿಎಂಪಿ ಆಯುಕ್ತರು ಈಗಾಗಲೇ 12 ಸ್ಥಾಯಿ ಸಮಿತಿಗಳ ಅಧ್ಯಕ್ಷ ಹಾಗೂ ಸದಸ್ಯರ ಸ್ಥಾನಗಳಿಗೆ ಚುನಾವಣೆ ನಡೆಸುವ ಕುರಿತಂತೆ ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆದಿದ್ದು, ನವೆಂಬರ್‌ ಎರಡನೇ ವಾರದಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ. ಆದರೆ, ತೆರವಾಗಿರುವ ಉಪಮೇಯರ್‌ ಸ್ಥಾನದ ಚುನಾವಣೆ ಕುರಿತಂತೆ ಈವರೆಗೆ ಪಾಲಿಕೆಯ ಆಯುಕ್ತರು ಯಾವುದೇ ಪತ್ರ ಬರೆದಿಲ್ಲ.

ಒಂದೊಮ್ಮೆ ಆಯುಕ್ತರು ಶೀಘ್ರ ಪತ್ರ ಬರೆದರೆ ಸ್ಥಾಯಿ ಸಮಿತಿ ಅಧ್ಯಕ್ಷ ಹಾಗೂ ಸದಸ್ಯರ ಚುನಾವಣೆ ದಿನವೇ ಉಪಮೇಯರ್‌ ಸ್ಥಾನಕ್ಕೂ ಚುನಾವಣೆ ನಡೆಯಬಹುದು. ಇಲ್ಲದಿದ್ದರೆ ಸ್ಥಾಯಿ ಸಮಿತಿ ಚುನಾವಣೆ ನಂತರ ಉಪಮೇಯರ್‌ ಚುನಾವಣೆ ನಡೆಸಬೇಕಾಗುತ್ತದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು. 

ಬಿಜೆಪಿಯಿಂದಲೂ ಸ್ಪರ್ಧೆ: ರಮೀಳಾ ಅವರ ನಿಧನದಿಂದ ತೆರವಾಗಿರುವ ಉಪಮೇಯರ್‌ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ನಿರ್ಧರಿಸಿದೆ. ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಆರ್‌.ಅಶೋಕ್‌ ಹಾಗೂ ನಗರದ ಶಾಸಕರು, ಸಂಸದರು ಚರ್ಚಿಸಿ ತೀರ್ಮಾನಿಸಲಿದ್ದಾರೆ ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Family drama ‘Langoti Man’ hits screens today

Langoti Man: ಫ್ಯಾಮಿಲಿ ಡ್ರಾಮಾ ʼಲಂಗೋಟಿ ಮ್ಯಾನ್‌ʼ ಇಂದು ತೆರೆಗೆ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.