ನವರಾತ್ರಿ: ಎಲ್ಲೆಡೆ ಹಬ್ಬದ ಚೈತನ್ಯ


Team Udayavani, Oct 10, 2018, 10:52 AM IST

10-october-4.gif

ಪುತ್ತೂರು: ನವರಾತ್ರಿ ಹಿಂದೂ ಬಾಂಧವರಿಗೆ ಹಬ್ಬಗಳ ಸಂಭ್ರಮ. ಮನೆಗಳಲ್ಲಿ, ಶ್ರದ್ಧಾ ಕೇಂದ್ರಗಳಲ್ಲಿ, ವ್ಯಾಪಾರ ಮಳಿಗೆಗಳಲ್ಲೂ ಸಂಭ್ರಮ ಕಂಡುಬರುತ್ತಿದೆ. ನವರಾತ್ರಿ ದಿನಗಳಲ್ಲಿ ಲಲಿತಾಪಂಚಮಿ, ಶಾರದಾ ಪೂಜೆ, ದುರ್ಗಾಷ್ಟಮಿ, ಆಯುಧ ಪೂಜೆ, ವಿಜಯದಶಮಿ, ದೀಪಾವಳಿ, ನರಕ ಚತುರ್ದಶಿ, ಧನಲಕ್ಷ್ಮೀ ಪೂಜೆ, ಬಲಿಪಾಡ್ಯಮಿ – ಹಬ್ಬಗಳ ಸಾಲೇ ಇದೆ. ಆಸ್ತಿಕ ವರ್ಗಕ್ಕಿದು ಆರಾಧನೆಯ ಕಾಲ.

ನವರಾತ್ರಿಯಲ್ಲಿ ಗಣಪತಿ, ಶಾರದೆಯ ಸಹಿತ ನವದುರ್ಗೆಯರಾದ ಚಂದ್ರಘಂಟಾ, ಶೈಲಪುತ್ರಿ, ಬ್ರಹ್ಮಚಾರಿಣಿ, ಕೂಷ್ಮಾಂಡಿನಿ, ಸ್ಕಂದಮಾತಾ, ಕಾತ್ಯಾಯಿನಿ, ಕಾಳರಾತ್ರಿ, ಮಹಾಗೌರಿ, ದೇವದೂತಿಯರ ಆರಾಧನೆಯಲ್ಲಿ ಭಕ್ತಸಮೂಹ ತೊಡಗಿಸಿಕೊಂಡಿದೆ. ರಕ್ಷಣೆಗೆ ದುರ್ಗೆ, ಸಮೃದ್ಧಿಗೆ ಲಕ್ಷ್ಮೀ, ಜ್ಞಾನಕ್ಕೆ ಸರಸ್ವತಿ ಸೇರಿ ಉತ್ಕಟಗೊಳ್ಳುವ ಆದಿಶಕ್ತಿಯ ಆರಾಧನೆಯೊಂದಿಗೆ 10ನೆಯ ದಿನ ದುಷ್ಟಶಕ್ತಿ ನಿರ್ಮೂಲನೆ ಮಾಡುವ ವಿಜಯದಶಮಿಯನ್ನು ದಸರಾ ಹಬ್ಬವಾಗಿ ಆಚರಿಸಲು ಸಿದ್ಧತೆ ನಡೆಯುತ್ತಿದೆ.

ಉತ್ತಮ ವ್ಯಾಪಾರದ ನಿರೀಕ್ಷೆ
ಆರಾಧನೆ ಹಾಗೂ ಸಂಭ್ರಮದ ಹಿನ್ನೆಲೆಯಲ್ಲಿ ಅಂಗಡಿ ಮುಂಗಟ್ಟುಗಳಲ್ಲಿ ವ್ಯಾಪಾರ, ಖರೀದಿ ಚುರುಕುಗೊಂಡಿದೆ. ಚಿನ್ನ, ಎಲೆಕ್ಟ್ರಾನಿಕ್ಸ್‌ ವಸ್ತುಗಳ ಮಳಿಗೆ, ವಸ್ತ್ರ ಮಳಿಗೆ, ಹೂವು -ಹಣ್ಣುಗಳ ಮಾರುಕಟ್ಟೆ ಮುಂತಾದವುಗಳಲ್ಲಿ ವ್ಯಾಪಾರ, ವ್ಯವಹಾರ ಪ್ರಕ್ರಿಯೆಗಳಲ್ಲಿ ಚುರುಕು ಕಾಣಿಸಿಕೊಂಡಿದೆ. ಹಬ್ಬಕ್ಕಾಗಿ ವಿಶೇಷ ಮಾರಾಟ, ಕೊಡುಗೆ ಘೋಷಿಸಲಾಗಿದ್ದು, ಗ್ರಾಹಕರು ಇದರ ಸದುಪಯೋಗ ಪಡೆಯುತ್ತಿದ್ದಾರೆ.

ನವರಾತ್ರಿಯ ದೇವಿಯರ ಆರಾಧನೆಯಿಂದ ಹಿಡಿದು ಆಯುಧ ಪೂಜೆಯವರೆಗೆ ಹೂವು, ಹಣ್ಣುಗಳು, ಸಿಹಿ ತಿಂಡಿಗಳಿಗೆ, ತರಕಾರಿಗೆ ಹೆಚ್ಚಿನ ಬೇಡಿಕೆ ಇರುವುದರಿಂದ ವ್ಯಾಪಾರಿಗಳು ಹೆಚ್ಚಿನ ವ್ಯಾಪಾರದ ನಿರೀಕ್ಷೆಯಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ತಮ್ಮ ಮಳಿಗೆಗಳಲ್ಲಿ ಗ್ರಾಹಕರಿಗೆ ಬೇಕಾದ ವಸ್ತುಗಳನ್ನು ಶೇಖರಣೆ ಮಾಡಿಕೊಂಡಿದ್ದಾರೆ. ತಾತ್ಕಾಲಿಕ ಹೂವಿನ ವ್ಯಾಪಾರ ತಲೆ ಎತ್ತಿದೆ.

ವಾಹನ, ಕೃಷಿ ಸಲಕರಣೆ ಸಹಿತ ಮನುಷ್ಯ ಜೀವನದಲ್ಲಿ ಯಂತ್ರ, ಆಯುಧಗಳ ಬಳಕೆ ಅನಿವಾರ್ಯವಾಗಿರುವುದರಿಂದ ಆಯುಧ ಪೂಜೆಯನ್ನಂತೂ ಎಲ್ಲಾ ಕಡೆ ಆಚರಿಸುತ್ತಾರೆ. ಆಯುಧ ಪೂಜೆಗಾಗಿ ವಾಹನಗಳನ್ನು ಸುಸ್ಥಿತಿಗೆ ತರಲು ಎಲ್ಲರೂ ಬಯಸುವುದರಿಂದ ಸಂಬಂಧಿಸಿದ ಶೋ ರೂಂನವರಿಗೂ ಇದು ಸುಗ್ಗಿಯ ಕಾಲ.

ತಾತ್ಕಾಲಿಕ ಹೊರ ಮಾರುಕಟ್ಟೆಯಲ್ಲಿ ಚೆಂಡು ಹೂವು ಮಾರು ಒಂದರ 80 ರೂ., ಸೇವಂತಿಗೆ 100 ರೂ., ಮುಗುಡಿ 100 ರೂ., ಬಟನ್ಸ್‌ 60 ರೂ., ಗೊಂಡೆ ಹೂವು ಮಾಲೆಗೆ 80 ರೂ., ಸೇಬು ಕೆ.ಜಿ.ಗೆ 120 ರೂ., ಲಿಂಬೆ 120, ಕದಳಿ ಬಾಳೆ ಹಣ್ಣು 60 ರೂ. ದರವಿದೆ. ಮಹಾನವಮಿ, ವಿಜಯದಶಮಿಗಳಂದು ಈ ದರಗಳು ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ.

ಉತ್ಸವ  
ಶ್ರೀ ಮಹಾಮಾಯ ದೇವಸ್ಥಾನ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಭಾಭವನ, ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನ, ಲಕ್ಷ್ಮೀ ದೇವಿ ಬೆಟ್ಟದ ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಶಾರದಾ ಮಂದಿರ, ಬೊಳುವಾರು ಶ್ರೀ ಆಂಜನೇಯ ದೇವಸ್ಥಾನ, ಕೆಯ್ಯೂರು ಮಹಿಮರ್ದಿನಿ ದೇವಸ್ಥಾನ, ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಸಹಿತ ದೇವಿ ದೇವಸ್ಥಾನಗಳಲ್ಲಿ ನವರಾತ್ರಿ ಉತ್ಸವದ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

ವಿಶೇಷ ವರದಿ

ಟಾಪ್ ನ್ಯೂಸ್

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.