ಮೀಟರ್‌ ಬಡ್ಡಿ ತಡೆಗೆ “ಬಡವರ ಬಂಧು’ ಯೋಜನೆ


Team Udayavani, Oct 11, 2018, 9:48 AM IST

bandeppa.jpg

 *ಮಂಗಳೂರಿನ 3 ಸಾವಿರ ಫ‌ಲಾನುಭವಿಗಳಿಗೆ ಪ್ರಯೋಜನ
 *ಪಿಗ್ಮಿ ಮೂಲಕ ಸಾಲ ಮರುಪಾವತಿ
  *ಸಾಲ ಮನ್ನಾಕ್ಕೆ ಆಧಾರ್‌, *ರೇಶನ್‌ ಕಾರ್ಡ್‌ ಮಾತ್ರ 

ಮಂಗಳೂರು: ಮೀಟರ್‌ ಬಡ್ಡಿ ಮುಕ್ತ ಕರ್ನಾಟಕಕ್ಕಾಗಿ ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ಸೌಲಭ್ಯ ನೀಡುವ “ಬಡವರ ಬಂಧು’ ಯೋಜನೆಗೆ ದೀಪಾವಳಿ ಹಬ್ಬದ ಮೊದಲು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಚಾಲನೆ ನೀಡಲಿದ್ದಾರೆ ಎಂದು ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರ್‌ ತಿಳಿಸಿದ್ದಾರೆ. 

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಲ್ಲಿ ಬುಧವಾರ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಈ ಯೋಜನೆಯಡಿ 2 ಸಾವಿರ ರೂ.ಗಳಿಂದ 10 ಸಾವಿರ ರೂ. ವರೆಗೆ ಬಡ್ಡಿ ರಹಿತ ಸಾಲ ಸೌಲಭ್ಯ ಸಿಗಲಿದೆ. ಮಹಾನಗರ ಪಾಲಿಕೆಗಳಲ್ಲಿ 3 ಸಾವಿರ ಮಂದಿಗೆ ಹಾಗೂ ಜಿಲ್ಲಾ ಕೇಂದ್ರಗಳಲ್ಲಿ 1 ಸಾವಿರ ಸೇರಿದಂತೆ ಒಟ್ಟು 53 ಸಾವಿರ ಮಂದಿಗೆ ಸೌಲಭ್ಯ ಸಿಗಲಿದೆ. ಪಿಗ್ಮಿ ಯೋಜನೆ ಮೂಲಕ ಸಾಲ ಮರು ಪಾವತಿಗೆ ಇರಲಿದೆ ಎಂದರು. 

ಉದ್ಯಮ ಆರಂಭಿಸುವ ಸ್ವಸಹಾಯ ಗುಂಪು ಗಳಿಗೆ ಸಹಕಾರ ಇಲಾಖೆಯು “ಕಾಯಕ ಯೋಜನೆ’ಯಡಿ 10 ಲಕ್ಷ ರೂ. ಸಾಲ ಒದಗಿಸಲಿದೆ. ಇದರಲ್ಲಿ 5 ಲಕ್ಷ ರೂ.ಗಳಿಗೆ ಮಾತ್ರ ಶೇ. 4ರ ಬಡ್ಡಿ ದರ ಇರಲಿದೆ ಎಂದು ತಿಳಿಸಿದರು. ಸಮ್ಮಿಶ್ರ ಸರಕಾರ ಜಾರಿ ಮಾಡಿರುವ ರೈತರ 1 ಲಕ್ಷ ರೂ. ಸಾಲ ಮನ್ನಾ ಯೋಜನೆಯಡಿ ದ. ಕನ್ನಡ ಜಿಲ್ಲೆಯಲ್ಲಿ ರೈತರ 713 ಕೋಟಿ ರೂ. ಸಾಲ ಮನ್ನಾ ಆಗಲಿದೆ ಎಂದರು. 

ಪ್ಯಾಕ್ಸ್‌ಗಳಲ್ಲಿ  ಏಕರೂಪದ ಸಾಫ್ಟ್ವೇರ್‌
ದ.ಕ. ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ (ಪ್ಯಾಕ್ಸ್‌)ಗಳಲ್ಲಿ ಈಗಾಗಲೇ ಕಾಮನ್‌ ಸಾಫ್ಟ್ ವೇರ್‌ ಅಳವಡಿಸಲಾಗಿದೆ. ರಾಜ್ಯದ ಎಲ್ಲೆಡೆ ಇದರ ಅಳವಡಿಕೆಗೆ ಚಿಂತನೆ ನಡೆದಿದೆ. ಈ ಬಗ್ಗೆ ಇಲಾಖೆ 15 ದಿನದಲ್ಲಿ ವರದಿ ನೀಡಲಿದ್ದು ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು. 

ಆಧಾರ್‌, ರೇಶನ್‌ ಕಾರ್ಡ್‌ ಮಾತ್ರ 
ಸಾಲ ಮನ್ನಾಕ್ಕಾಗಿ ರೈತರಿಂದ ದಾಖಲೆಯಾಗಿ ಆಧಾರ್‌ ಕಾರ್ಡ್‌ ಮತ್ತು ರೇಶನ್‌ ಕಾರ್ಡ್‌ ಮಾತ್ರವೇ ಕೇಳಲಾಗುತ್ತಿದೆ. ಒಟ್ಟು 22 ಲಕ್ಷ ರೈತರಿಗೆ ಋಣ ಮುಕ್ತ ಪ್ರಮಾಣ ಪತ್ರ ನೀಡಲು ಸಿದ್ಧತೆ ನಡೆಯುತ್ತಿದೆ. ಹಿಂದಿನ ಸಾಲ ಮನ್ನಾ ಯೋಜನೆಯಡಿ ದ.ಕ. ಜಿಲ್ಲೆಯ 380 ಕೋಟಿ ರೂ.ಗಳಲ್ಲಿ 2 ಕೋಟಿ ರೂ. ಸಹಕಾರಿ ಸಂಘಗಳಿಗೆ ಪಾವತಿಯಾಗಲು ಬಾಕಿ ಇದೆ. ಈ ಬಾರಿ ಸಾಲ ಮನ್ನಾ ಯೋಜನೆಯಡಿ ಬಿಲ್‌ ಬಂದ ಹಾಗೆ ಪ್ಯಾಕ್ಸ್‌ಗಳಿಗೆ ಹಣ ಬಿಡುಗಡೆ ಮಾಡಲಾಗುವುದು ಎಂದರು.  

ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌, ರಾಜ್ಯ ಸಹಕಾರಿ ಸಂಘಗಳ ರಿಜಿಸ್ಟ್ರಾರ್‌ ಎಂ.ಕೆ. ಅಯ್ಯಪ್ಪ, ಜಿಲ್ಲಾ ಸಹಕಾರಿ ಸಂಘಗಳ ಉಪ ನಿಬಂಧಕ ಬಿ.ಕೆ. ಸಲೀಂ, ಎಸ್‌ಸಿಡಿಸಿಸಿ ಬ್ಯಾಂಕ್‌ನ ನಿರ್ದೇಶಕರು ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

Newdelhi: 2028ರ ಅಂತ್ಯದವರೆಗೂ ಉಚಿತ ಅಕ್ಕಿ ಪೂರೈಕೆ: ಕೇಂದ್ರ

Newdelhi: 2028ರ ಅಂತ್ಯದವರೆಗೂ ಉಚಿತ ಅಕ್ಕಿ ಪೂರೈಕೆ: ಕೇಂದ್ರ

UPI: ವಹಿವಾಟು ಮಿತಿ ಏರಿಕೆಗೆ ಆರ್‌ಬಿಐ ನಿರ್ಧಾರ.. ಮಿತಿ 2,000ರೂ.ನಿಂದ 5,000ರೂ.ಗೆ ಏರಿಕೆ

UPI: ವಹಿವಾಟು ಮಿತಿ ಏರಿಕೆಗೆ ಆರ್‌ಬಿಐ ನಿರ್ಧಾರ.. ಮಿತಿ 2,000ರೂ.ನಿಂದ 5,000ರೂ.ಗೆ ಏರಿಕೆ

ja

BBK11: ಪ್ರತಿದಿನ ಎಂಜಾಯ್ ಮಾಡುತ್ತಿದ್ದೇನೆ.. ಬಿಗ್ ಬಾಸ್ ಬಿಟ್ಟು ಹೋಗಲ್ಲ ಎಂದ ಜಗದೀಶ್

gan-police

Gangavathi: ಬೈಕ್ ವೀಲ್ಹಿಂಗ್ ಮಾಡಬೇಡಿ ಎಂದಿದ್ದಕ್ಕೆ ಪೊಲೀಸರಿಗೇ ಥಳಿಸಿದ ಪುಂಡರ ಗುಂಪು!

Rishab

National Award: ದೈವ, ದೈವ ನರ್ತಕರು, ಜನರಿಗೆ ರಾಷ್ಟ್ರಪ್ರಶಸ್ತಿ ಅರ್ಪಣೆ: ರಿಷಬ್‌ ಶೆಟ್ಟಿ

ಅಡಕೆ ವ್ಯಾಪಾರಿಯನ್ನ ಬೆದರಿಸಿ 17 ಲಕ್ಷ ದರೋಡೆ… ಘಟನೆ ನಡೆದ ಎರಡೇ ದಿನಕ್ಕೆ ಆರೋಪಿಗಳ ಬಂಧನ

ಅಡಕೆ ವ್ಯಾಪಾರಿಯನ್ನ ಬೆದರಿಸಿ 17 ಲಕ್ಷ ದರೋಡೆ… ಘಟನೆ ನಡೆದ ಎರಡೇ ದಿನಕ್ಕೆ ಆರೋಪಿಗಳ ಬಂಧನ

ಬಿಡುಗಡೆಯಾಗದ ಗೌರವ ಧನ… ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಅಂಗನವಾಡಿ ಸಹಾಯಕಿ

ಬಿಡುಗಡೆಯಾಗದ ಗೌರವ ಧನ… ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಅಂಗನವಾಡಿ ಸಹಾಯಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ACT

Mangaluru: ಆಲ್ವಿನ್‌ ಡಿ’ಸೋಜ ಮೇಲೆ ಹಲ್ಲೆ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

accident

Bajpe: ಪೊರ್ಕೋಡಿ ದ್ವಾರದ ಬಳಿ ಹೈಮಾಸ್ಟ್‌ ದೀಪದ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

5

Mangaluru: ಈ ಮೇಸ್ಟ್ರು ಹುಲಿ ತಂಡಗಳ ತಾಯಿ ಹುಲಿ!

3(1)

Bajpe: ಎಕ್ಕಾರ್‌ ಪಿಲಿ; ಅಮ್ಮನ ಸೇವೆಯೇ ಗುರಿ; ಹುಲಿ, ಸಿಂಹ ಇತರ ವೇಷಗಳ ಅಬ್ಬರ

Mangaluru University: 9ಕ್ಕೂ ಅಧಿಕ ಪಿ.ಜಿ. ಕೋರ್ಸ್‌ಗೆ ವಿದ್ಯಾರ್ಥಿಗಳಿಲ್ಲ !

Mangaluru University: 9ಕ್ಕೂ ಅಧಿಕ ಪಿ.ಜಿ. ಕೋರ್ಸ್‌ಗೆ ವಿದ್ಯಾರ್ಥಿಗಳಿಲ್ಲ !

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Newdelhi: 2028ರ ಅಂತ್ಯದವರೆಗೂ ಉಚಿತ ಅಕ್ಕಿ ಪೂರೈಕೆ: ಕೇಂದ್ರ

Newdelhi: 2028ರ ಅಂತ್ಯದವರೆಗೂ ಉಚಿತ ಅಕ್ಕಿ ಪೂರೈಕೆ: ಕೇಂದ್ರ

UPI: ವಹಿವಾಟು ಮಿತಿ ಏರಿಕೆಗೆ ಆರ್‌ಬಿಐ ನಿರ್ಧಾರ.. ಮಿತಿ 2,000ರೂ.ನಿಂದ 5,000ರೂ.ಗೆ ಏರಿಕೆ

UPI: ವಹಿವಾಟು ಮಿತಿ ಏರಿಕೆಗೆ ಆರ್‌ಬಿಐ ನಿರ್ಧಾರ.. ಮಿತಿ 2,000ರೂ.ನಿಂದ 5,000ರೂ.ಗೆ ಏರಿಕೆ

ja

BBK11: ಪ್ರತಿದಿನ ಎಂಜಾಯ್ ಮಾಡುತ್ತಿದ್ದೇನೆ.. ಬಿಗ್ ಬಾಸ್ ಬಿಟ್ಟು ಹೋಗಲ್ಲ ಎಂದ ಜಗದೀಶ್

ACT

Mangaluru: ಆಲ್ವಿನ್‌ ಡಿ’ಸೋಜ ಮೇಲೆ ಹಲ್ಲೆ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

gan-police

Gangavathi: ಬೈಕ್ ವೀಲ್ಹಿಂಗ್ ಮಾಡಬೇಡಿ ಎಂದಿದ್ದಕ್ಕೆ ಪೊಲೀಸರಿಗೇ ಥಳಿಸಿದ ಪುಂಡರ ಗುಂಪು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.