ಕಲೆ, ಸಾಹಿತ್ಯದಿಂದ ನೆಮ್ಮದಿ
Team Udayavani, Oct 14, 2018, 12:36 PM IST
ಬೆಂಗಳೂರು: ಭಾರತೀಯ ಸಾಹಿತ್ಯ, ಕಲೆ, ಸಂಸ್ಕೃತಿಯಿಂದ ನಿರಂತರ ಶಾಂತಿ, ನೆಮ್ಮದಿ, ಸೌಹಾರ್ದತೆ ಕಾಯ್ದುಕೊಳ್ಳಲು ಸಾಧ್ಯ ಎಂದು ಸುತ್ತೂರು ಕ್ಷೇತ್ರದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದ್ದಾರೆ.
ಡಾ.ಸಿ.ಸೋಮಶೇಖರ್-ಎನ್.ಸರ್ವಮಂಗಳಾ ಸಾಹಿತ್ಯ ಸೇವಾ ಪ್ರತಿಷ್ಠಾನದಿಂದ ಶನಿವಾರ ಭಾರತೀಯ ವಿದ್ಯಾಭವನದಲ್ಲಿ ಹಮ್ಮಿಕೊಂಡಿದ್ದ ಸಂಸ್ಕೃತಿ ಸಂಗಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಆಶೀರ್ವಚನ ನೀಡಿದ ಅವರು, ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಉಳಿಸಿ, ಬೆಳೆಸುವ ಮಹತ್ತರ ಜವಾಬ್ದಾರಿ ನಮ್ಮೆಲರ ಮೇಲಿದೆ. ಭಾರತೀಯ ಸಂಗೀತ ಪ್ರಕಾರ ಸೇರಿದಂತೆ ಶಾಸ್ತ್ರೀಯ ಸಾಹಿತ್ಯ ಚೌಕಟ್ಟಿನಲ್ಲಿ ಶಾಂತಿ, ನೆಮ್ಮದಿ ಗಳಿಸಬಹುದು ಎಂದು ತಿಳಿಸಿದರು.
ಪಾಶ್ಚಿಮಾತ್ಯ ಸಂಗೀತ ವಿಜೃಂಭಿಸುತ್ತದೆ. ಆ ಸಂಗೀತ ಕಾರ್ಯಕ್ರಮ ಮುಗಿದ ನಂತರ ಅದರ ಛಾಯೆ ಉಳಿಯುವುದಿಲ್ಲ. ಆದರೆ, ಭಾರತೀಯ ಸಂಗೀತ ಹಾಗಲ್ಲ. ಭಾವ, ರಾಗಗಳ ಸಮ್ಮಿಲನವಾಗಿದೆ. ಅನೇಕ ಸಂದರ್ಭಗಳಲ್ಲಿ ಸಂಗೀತದಲ್ಲಿ ಸಾಹಿತ್ಯ ಗೌಣವಾಗುತ್ತದೆ. ಗಾಯಕ ವಿದ್ಯಾಭೂಷಣರು ತಮ್ಮ ಗಾಯನದಲ್ಲಿ ಸಾಹಿತ್ಯ ಮತ್ತು ಸಂಗೀತದ ಸಮತೋಲಿತನ ಕಾಯ್ದುಕೊಳ್ಳುತ್ತಾರೆ ಎಂದರು.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿ, ಕರ್ತವ್ಯಗಳನ್ನು ಪ್ರಾಮಾಣಿಕವಾಗಿ ನಿಭಾಯಿಸಿದರೆ ಯಾವುದೇ ಅಹಿತಕರ ಘಟನೆ ನಡೆಯುವುದಿಲ್ಲ. ಹುಟ್ಟಿದ ಊರು, ಜನ್ಮ ನೀಡಿ ತಂದೆ, ತಾಯಿ, ಓದಿದ ವಿದ್ಯಾಸಂಸ್ಥೆಯನ್ನು ಎಂದೂ ಮರೆಯಬಾರದು. ಇಂದು ಪಾಲಕ-ಪೋಷಕರು ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ನೀಡುತ್ತಾರೆ. ಹಣ, ಅಧಿಕಾರ ಗಳಿಸಬೇಕು ಎಂದು ಬಯಸುತ್ತಾರೆ. ಆದರೆ, ಮಾನವೀಯ ಮೌಲ್ಯಗಳನ್ನು ಕಲಿಸುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು.
ಪ್ರಶಸ್ತಿಗಳ ಆಯ್ಕೆ ವಿಚಾರದಲ್ಲಿ ಸಾಕಷ್ಟು ಪಾರದರ್ಶಕವಾಗಿರುವ ಪ್ರತಿಷ್ಠಾನ, ಅರ್ಹರನ್ನೇ ಆಯ್ಕೆ ಮಾಡಿದೆ. ಸರ್ಕಾರದಿಂದ ರಾಜ್ಯೋತ್ಸವ ಪ್ರಶಸ್ತಿ ನೀಡುತ್ತಾರೆ. ಆ ಪ್ರಶಸ್ತಿಗೆ ಶಿಫಾರಸ್ಸು ಮಾಡುವಂತೆ ಈಗಾಗಲೇ 20ರಿಂದ 25 ಅರ್ಜಿಗಳು ಬಂದಿವೆ. ಪ್ರಶಸ್ತಿ ಪ್ರದಾನದ ನಂತರ ಪಡೆದವರಿಗೆ ಮತ್ತು ಕೊಟ್ಟವರಿಗೆ ಸಂಬಂಧವೇ ಇಲ್ಲದಾಗುತ್ತದೆ ಎಂದು ಟೀಕಿಸಿದರು. ಕೇಂದ್ರದ ಮಾಜಿ ಸಚಿವ ಎಂ.ವಿ.ರಾಜಶೇಖರನ್, ಜ್ಞಾನಪೀಠ ಪುರಸ್ಕೃತ ಸಾಹಿತಿ ಡಾ.ಚಂದ್ರಶೇಖರ ಕಂಬಾರ ಉಪಸ್ಥಿತರಿದ್ದರು.
ನಾಲ್ವರಿಗೆ ಜೀವಮಾನ ಸಾಧನೆ ಪ್ರಶಸ್ತಿ: ವಚನ ಸಾಹಿತ್ಯ ಕ್ಷೇತ್ರದಿಂದ ಡಾ.ವೀರಣ್ಣ ರಾಜೂರ, ಜನಪದ ಕ್ಷೇತ್ರದಿಂದ ಡಾ.ಪಿ.ಕೆ.ರಾಜಶೇಖರ್, ದಾಸ ಸಾಹಿತ್ಯ ಕ್ಷೇತ್ರದಿಂದ ಡಾ. ವಿದ್ಯಾಭೂಷಣ, ಸಂಗೀತ ಕ್ಷೇತ್ರದಿಂದ ಡಾ. ಎಂ.ವೆಂಕಟೇಶ್ ಕುಮಾರ್ ಅವರಿಗೆ ಜೀವನ ಸಾಧನೆಗಾಗಿ ಪ್ರತಿಷ್ಠಾನದ ವತಿಯಿಂದ ಸಂಸ್ಕೃತಿ ಸಂಗಮ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಬಾಲಕ ಸಾವು; ನಾಲ್ವರು ಎಂಜಿನಿಯರ್ ಅಮಾನತು
Arrested: ಪ್ರೇಯಸಿಗಾಗಿ ಬಾಲ್ಯ ಗೆಳೆಯನ ಕೊಂದಿದ್ದ ಉಡುಪಿ ಮೂಲದ ಆರೋಪಿ ಸೆರೆ
Mahalakshmi Case: ಮಹಿಳೆಯ ತಲೆ ಬೇರ್ಪಡಿಸಿ ಬಳಿಕ ಇತರೆ ಭಾಗಗಳು ತುಂಡು ತುಂಡು!
Crime: ಬುಲೆಟ್ ಖರೀದಿಸಲು ಸಾಧ್ಯವಾಗದ್ದಕ್ಕೆ ಹತಾಶೆ; 3 ಬೈಕ್ಗಳಿಗೆ ಬೆಂಕಿ ಹಚ್ಚಿದವ ಸೆರೆ
Lokayukta: 62 ಅಬಕಾರಿ ಕಚೇರಿಗಳ ಮೇಲೆ ಲೋಕಾ ದಾಳಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Kodailbail: ಕೆ.ಎಸ್.ರಾವ್ ರಸ್ತೆ; ಪಾದಚಾರಿಗಳಿಗಿಲ್ಲ ಸುರಕ್ಷತೆ !
Pushpa 2: ಅಲ್ಲು ಅರ್ಜುನ್ ʼಪುಷ್ಪ-2ʼನಿಂದ ಖ್ಯಾತ ನಟಿ ಔಟ್
Netravati Trek: ದಿ ನೆಕ್ಸ್ಟ್ ಸ್ಟಾಪ್ ಈಸ್ ನೇತ್ರಾವತಿ ಪೀಕ್!
Mangaluru: ಟ್ರಾಫಿಕ್ ಸಮಸ್ಯೆ: ಶಾಲಾ ಸಮಯ ವ್ಯತ್ಯಾಸ ಸೂತ್ರ ಮತ್ತೆ ಚರ್ಚೆಗೆ
ವಿದ್ಯುತ್ ಪರಿವರ್ತಕದ ಬಳಿ ಮೇಯುತ್ತಿದ್ದ 2 ಎಮ್ಮೆಗಳಿಗೆ ವಿದ್ಯುತ್ ಪ್ರವಹಿಸಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.