ಪರಿಸರ ದಸರಾ: ಪ್ಲಾಸ್ಟಿಕ್‌ ಕ್ಯಾರಿಬ್ಯಾಗ್‌ ಬಳಸಿದರೆ ದಂಡ


Team Udayavani, Oct 14, 2018, 12:37 PM IST

parisara.jpg

ಬೆಂಗಳೂರು: ನಿಷೇಧಿತ ಪ್ಲಾಸ್ಟಿಕ್‌ ಉತ್ಪನ್ನಮುಕ್ತ ದಸರಾ ಹಬ್ಬ ಆಚರಣೆಗೆ ಪ್ರೋತ್ಸಾಹಿಸಲು ಮುಂದಾಗಿರುವ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪ್ಲಾಸ್ಟಿಕ್‌ ಕ್ಯಾರಿಬ್ಯಾಗ್‌ ಬಳಸುವವರಿಗೆ ಭಾರಿ ದಂಡ ವಿಧಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲು ಮುಂದಾಗಿದೆ. 

ನವರಾತ್ರಿಯ ಭಾಗವಾಗಿ ಆಯುಧ ಪೂಜೆಯನ್ನು ರಾಜ್ಯದೆಲ್ಲೆಡೆ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತದೆ. ಅಂದು ವಾಹನಗಳು, ಕಾರ್ಖಾನೆಗಳು, ಕಂಪೆನಿಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ, ಅಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ಸಿಹಿ ಹಂಚಿಕೆ ವೇಳೆ ಭಾರಿ ಪ್ರಮಾಣದಲ್ಲಿ ನಿಷೇಧಿತ ಪ್ಲಾಸ್ಟಿಕ್‌ ಕ್ಯಾರಿ ಬ್ಯಾಗ್‌ಗಳನ್ನು ಬಳಕೆ ಮಾಡಲಾಗುತ್ತದೆ. 

ಹೀಗಾಗಿ, ಪರಿಸರ ಸ್ನೇಹಿ ಹಬ್ಬ ಆಚರಣೆಗೆ ಒತ್ತು ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲು ಮಂಡಳಿ ತೀರ್ಮಾನಿಸಿದೆ. ಅದರಂತೆ ಹಬ್ಬದ ಸಂದರ್ಭದಲ್ಲಿ ಪ್ಲಾಸ್ಟಿಕ್‌ ಕ್ಯಾರಿಬ್ಯಾಗ್‌ಗಳ ವಿರುದ್ಧ ಕಾರ್ಯಾಚರಣೆ ನಡೆಸುವಂತೆ, ಆನಂತರವೂ ನಿಯಮ ಉಲ್ಲಂ ಸಿದವರಿಗೆ ಭಾರಿ ಪ್ರಮಾಣದ ದಂಡ ವಿಧಿಸುವಂತೆ ಸೂಚನೆ ನೀಡಲು ನಿರ್ಧರಿಸಿದೆ. 

ರಾಜ್ಯದಾದ್ಯಂತ 2016ರ ಮಾರ್ಚ್‌ 11 ರಂದು ಪ್ಲಾಸ್ಟಿಕ್‌ ಉತ್ಪನ್ನಗಳನ್ನು ಬಳಕೆಯನ್ನು ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ. ಆದರೂ, ಪ್ಲಾಸ್ಟಿಕ್‌ ಉತ್ಪನ್ನಗಳ ಬಳಕೆ ಮುಂದುವರಿಸಿದ್ದು, ದಸರಾ ಹಾಗೂ ದೀಪಾವಳಿಯ ಹಬ್ಬಗಳಲ್ಲಿ ಭಾರಿ ಪ್ರಮಾಣದಲ್ಲಿ ಪ್ಲಾಸ್ಟಿಕ್‌ ಉತ್ಪನ್ನಗಳನ್ನು ಬಳಕೆ ಮಾಡಲಾಗುತ್ತದೆ.

ಈ ಕುರಿತು ಹಲವಾರು ಸೂಚನೆ ನೀಡಿದರೂ ನಿಯಂತ್ರಣಕ್ಕೆ ಮುಂದಾಗದ ಹಿನ್ನೆಲೆಯಲ್ಲಿ ಭಾರಿ ಪ್ರಮಾಣದ ದಂಡವನ್ನು ವಿಧಿಸಿ, ಪ್ಲಾಸ್ಟಿಕ್‌ ಉತ್ಪನ್ನಗಳನ್ನು ವಶಕ್ಕೆ ಪಡೆಯುವಂತೆ ಸೂಚನೆ ನೀಡಲಾಗುವುದು ಎಂದು ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಲಕ್ಷ್ಮಣ್‌ “ಉದಯವಾಣಿ’ಗೆ ತಿಳಿಸಿದ್ದಾರೆ.
 
ಪ್ಲಾಸ್ಟಿಕ್‌ ಯಾವುದು?: ಪಾಲಿ ಪ್ರೊಪೈಲಿನ್‌, ನಾನ್‌ ಓವನ್‌ ಪಾಲಿ ಪ್ರೊಪೈಲಿನ್‌, ಮಲ್ಟಿಲೇಯರ್‌ ಕೊ ಎಕ್ಸ್‌ಟ್ರೂಡರ್‌ ಪಾಲಿ ಪ್ರೊಪೈಲಿನ್‌, ಪಾಲಿ ಇಥಲೀನ್‌, ಪಾಲಿ ವಿನೈಲ್ಡ್‌ ಕ್ಲೋರೈಡ್‌, ಹೈ ಮತ್ತು ಲೋ ಡೆನ್ಸಿಟಿ ಪಾಲಿ ಇಥಲೀನ್‌, ಥರ್ಮೊಕೋಲ್‌ ಪಾಲಿ ಸ್ಪಿರಿನ್‌, ಪಾಲಿ ಅಮೈಡ್ಸ್‌, ಪಾಲಿ ಟೆರೆಪೈಲೇಟ್‌, ಪಾಲಿ ಮಿಥೈಲ್‌ ಮೆಥಕ್ರಿಲೇಟ್‌, ಪ್ಲಾಸ್ಟಿಕ್‌ ಮೈಕ್ರೋಬಿಡ್‌ಗಳಿಂದ ತಯಾರದ ವಸ್ತುಗಳು. 

ನಿಷೇಧಿಕ ಪ್ಲಾಸ್ಟಿಕ್‌ ವಸ್ತುಗಳಿವು: ಪ್ಲಾಸ್ಟಿಕ್‌ನಿಂದ ತಯಾರಾದ ಕೈಚೀಲ, ಭಿತ್ತಿಪತ್ರ, ತೋರಣ, ಫ್ಲೆಕ್ಸ್‌, ಬಾವುಟ, ತಟ್ಟೆ, ಲೋಟ, ಚಮಚ, ಕ್ಲಿಂಗ್ಸ್‌ ಫಿಲ್ಮ್ಸ್, ಊಟದ ಟೇಬಲ್‌ಗ‌ಳ ಮೇಲೆ ಹಾಸಲು ಬಳಸುವ ಹಾಳೆ, ಥರ್ಮಾಕೋಲ್‌ ಹಾಗೂ ಮೈಕ್ರೋಬಿಡ್‌ಗಳಿಂದ ತಯಾರಿಸಿದ ವಸ್ತುಗಳು. 

ನಿಷೇಧಿತ ಪ್ಲಾಸ್ಟಿಕ್‌ ಬಳಸುವವರಿಗೆ ಶಿಕ್ಷೆಯೇನು?: ಪ್ಲಾಸ್ಟಿಕ್‌ ನಿಷೇಧ ಆದೇಶವನ್ನು ಉಲ್ಲಂ ಸಿದವರಿಗೆ ಪರಿಸರ ಸಂರಕ್ಷಣಾ ಕಾಯ್ದೆಯಡಿಯಲ್ಲಿ 5 ವರ್ಷದವರೆಗೆ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂ.ವರೆಗೆ ದಂಡ ಅಥವಾ ಎರಡನ್ನೂ ವಿಧಿಸಬಹುದಾಗಿದೆ. ಒಂದೊಮ್ಮೆ ದಂಡ ಪಾವತಿಸಲು ತಪ್ಪಿದ್ದಲ್ಲಿ ಹೆಚ್ಚುವರಿಯಾಗಿ ದಿನಕ್ಕೆ 5 ಸಾವಿರಷ್ಟು ದಂಡ ಕಟ್ಟಬೇಕಾಗುತ್ತದೆ. ಇನ್ನು ತಪ್ಪೆಸಗಿ ಶಿಕ್ಷೆಗೆ ಒಳಗಾದವರು ಮತ್ತೆ ತಪ್ಪು ಮಾಡಿದರೆ ಇಷ್ಟೇ ಪ್ರಮಾಣದ ದಂಎ ವಿಧಿಸಬಹುದಾಗಿದ್ದು, ಶಿಕ್ಷೆಯ ಪ್ರಮಾಣವನ್ನು 7 ವರ್ಷದವರೆಗೆ ವಿಸ್ತರಿಸಬಹುದಾಗಿದೆ. 

ರಾಜ್ಯದಾದ್ಯಂತ ಪಾಸ್ಟಿಕ್‌ ಮುಕ್ತ ದಸರಾ ಹಬ್ಬ ಆಚರಣೆಯ ಉದ್ದೇಶದಿಂದ ನಿಷೇಧಿತ ಪ್ಲಾಸ್ಟಿಕ್‌ ಕ್ಯಾರಿ ಬ್ಯಾಗ್‌ಗಳ ವಿರುದ್ಧ ಕಾರ್ಯಾಚರಣೆ ನಡೆಸುವಂತೆ ಹಾಗೂ ನಿಯಮ ಉಲ್ಲಂ ಸಿದವರಿಗೆ ಭಾರಿ ಪ್ರಮಾಣದ ದಂಡ ವಿಧಿಸುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗುವುದು. 
-ಲಕ್ಷ್ಮಣ್‌, ಅಧ್ಯಕ್ಷರು, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ

* ವೆಂ. ಸುನೀಲ್‌ಕುಮಾರ್‌

ಟಾಪ್ ನ್ಯೂಸ್

ICC T20I Rankings: ವಿಶ್ವಕಪ್‌ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ

ICC T20I Rankings: ವಿಶ್ವಕಪ್‌ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ

Chamarajanagar ನೂತನ ಎಸ್ಪಿ ಯಾಗಿ ಡಾ.ಬಿ.ಟಿ.ಕವಿತಾ ಅಧಿಕಾರ ಸ್ವೀಕಾರ

Chamarajanagar ನೂತನ ಎಸ್ಪಿ ಯಾಗಿ ಡಾ.ಬಿ.ಟಿ.ಕವಿತಾ ಅಧಿಕಾರ ಸ್ವೀಕಾರ

1-sadsdadsads

Bihar DCM ಶಪಥ ಪೂರ್ಣ; ಅಯೋಧ್ಯೆ ರಾಮನಿಗೆ ಪೇಟ ಅರ್ಪಣೆ

ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ʼಜವಾನ್‌ʼ: 4 ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಶುರು

ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ʼಜವಾನ್‌ʼ: 4 ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಶುರು

Shivamogga: ಕಾರಿನ ಮೇಲೆ ಮಗುಚಿ ಬಿದ್ದ ಬಸ್… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Shivamogga: ಕಾರಿನ ಮೇಲೆ ಮಗುಚಿ ಬಿದ್ದ ಬಸ್… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

1-sadsad

Italy; ಕೈ ತುಂಡಾದ ಭಾರತೀಯ ಕಾರ್ಮಿಕನನ್ನು ರಸ್ತೆಗೆ ಎಸೆದ ಮಾಲಕ ಅರೆಸ್ಟ್

koo

Koo: ದಿನಂಪ್ರತಿ ‘ಕೂ’ ಹೇಳುತ್ತಿದ್ದ ಹಕ್ಕಿ ಮೌನವಾಯಿತು, ಸಾಮಾಜಿಕ ಮಾಧ್ಯಮ ಕೂ ಆ್ಯಪ್ ಸ್ಥಗಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಅತ್ತೆ, ಮಾವ ನೇಣಿಗೆ ಶರಣು

Tragic: ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಅತ್ತೆ, ಮಾವ ನೇಣಿಗೆ ಶರಣು

Assault Case: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ

Assault Case: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ

Arrested: ಕಂಪನಿಗಳ ಹೆಸರಿನಲ್ಲಿ ಬಟ್ಟೆ ಮಾರಾಟ; ಆರೋಪಿ ಬಂಧನ

Arrested: ಕಂಪನಿಗಳ ಹೆಸರಿನಲ್ಲಿ ಬಟ್ಟೆ ಮಾರಾಟ; ಆರೋಪಿ ಬಂಧನ

3

Supplier: ಬೇಗ ಊಟ ತನ್ನಿ ಎಂದಿದ್ದಕ್ಕೆ ಆಶ್ಲೀಲ ಸನ್ನೆ ತೋರಿದ ಸಪ್ಲ್ಯೈಯರ್; ವೈರಲ್‌

ನಾಪತ್ತೆಯಾಗಿದ್ದ ಕಾನ್‌ಸ್ಟೇಬಲ್‌ ಪತ್ತೆಗಾಗಿ 250 ಸಿಸಿ ಕ್ಯಾಮೆರಾ ಶೋಧಿಸಿದ್ದ ಪೊಲೀಸರು

ನಾಪತ್ತೆಯಾಗಿದ್ದ ಕಾನ್‌ಸ್ಟೇಬಲ್‌ ಪತ್ತೆಗಾಗಿ 250 ಸಿಸಿ ಕ್ಯಾಮೆರಾ ಶೋಧಿಸಿದ್ದ ಪೊಲೀಸರು

MUST WATCH

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

ಹೊಸ ಸೇರ್ಪಡೆ

ಕಾರ್ಕಳ: ಪಿಎಂ ಆವಾಸ್‌ ಮನೆಗಳಿಗೆ ಬೇಡಿಕೆಯೇ ಇಲ್ಲ-250ರಲ್ಲಿ 90 ಮನೆಗಳಿಗಷ್ಟೇ ಅರ್ಜಿ!

ಕಾರ್ಕಳ: ಪಿಎಂ ಆವಾಸ್‌ ಮನೆಗಳಿಗೆ ಬೇಡಿಕೆಯೇ ಇಲ್ಲ-250ರಲ್ಲಿ 90 ಮನೆಗಳಿಗಷ್ಟೇ ಅರ್ಜಿ!

ICC T20I Rankings: ವಿಶ್ವಕಪ್‌ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ

ICC T20I Rankings: ವಿಶ್ವಕಪ್‌ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ

ಸರಕಾರಿ ಶಾಲೆಯಲ್ಲಿ ಕಲಿತವರು ಉನ್ನತ ಸಾನಕ್ಕೆ ಏರಿದ್ದಾರೆ: ವಿಶ್ವನಾಥ ಶೆಟ್ಟಿ

ಸರಕಾರಿ ಶಾಲೆಯಲ್ಲಿ ಕಲಿತವರು ಉನ್ನತ ಸಾನಕ್ಕೆ ಏರಿದ್ದಾರೆ: ವಿಶ್ವನಾಥ ಶೆಟ್ಟಿ

Chamarajanagar ನೂತನ ಎಸ್ಪಿ ಯಾಗಿ ಡಾ.ಬಿ.ಟಿ.ಕವಿತಾ ಅಧಿಕಾರ ಸ್ವೀಕಾರ

Chamarajanagar ನೂತನ ಎಸ್ಪಿ ಯಾಗಿ ಡಾ.ಬಿ.ಟಿ.ಕವಿತಾ ಅಧಿಕಾರ ಸ್ವೀಕಾರ

ರಾಜ್ಯದ 2ನೇ ಅತೀದೊಡ್ಡ ಸರಕಾರಿ ಪಾಲಿಟೆಕ್ನಿಕ್‌…ಕೆಪಿಟಿಗೆ ಈಗ ಅಮೃತ ಘಳಿಗೆ

ರಾಜ್ಯದ 2ನೇ ಅತೀದೊಡ್ಡ ಸರಕಾರಿ ಪಾಲಿಟೆಕ್ನಿಕ್‌…ಕೆಪಿಟಿಗೆ ಈಗ ಅಮೃತ ಘಳಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.