‘ತುಳು ಅಭಿವೃದ್ಧಿ ಪ್ರಾಧಿಕಾರ, ವಿ.ವಿ. ಸ್ಥಾಪಿಸಿ’


Team Udayavani, Oct 17, 2018, 12:34 PM IST

17-october-7.gif

ಸುಳ್ಯ : ತುಳುವನ್ನು ರಾಜ್ಯದ ಅಧಿಕೃತ ಭಾಷೆಯಾಗಿ ಪರಿಗಣಿಸಬೇಕು ಹಾಗೂ ತುಳು ಅಭಿವೃದ್ಧಿ ಪ್ರಾಧಿಕಾರ ಮತ್ತು ತುಳು ವಿ.ವಿ. ಸ್ಥಾಪನೆಗೆ ಸರಕಾರಗಳು ಪ್ರಥಮ ಆದ್ಯತೆ ನೀಡಬೇಕು ಎಂದು ತಾಲೂಕು ತುಳು ಸಾಹಿತ್ಯ ಸಮ್ಮೇಳನ ಅಧ್ಯಕ್ಷ ವಸಂತ ಶೆಟ್ಟಿ ಬೆಳ್ಳಾರೆ ಆಗ್ರಹಿಸಿದ್ದಾರೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ತುಳು ಸಾಹಿತ್ಯ ಸಮ್ಮೇಳನ, ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ, ತುಡರ್‌ ತುಳುಕೂಟ ಆಶ್ರಯದಲ್ಲಿ ಮಂಗಳವಾರ ಚೆನ್ನಕೇಶವ ದೇವಾಲಯದ ಮುಂಭಾಗದ ಶಿಂಟೂರು ನಾರಾಯಣ ರೈ ವೇದಿಕೆಯಲ್ಲಿ ನಡೆದ ತಾಲೂಕು ಪ್ರಥಮ ತುಳು ಸಾಹಿತ್ಯ ಸಮ್ಮೇಳನಾಧ್ಯಕ್ಷತೆ ವಹಿಸಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ತರಹ ತುಳು ಅಭಿವೃದ್ಧಿ ಪ್ರಾಧಿಕಾರ ರಚಿಸಿ ವಾರ್ಷಿಕ 5 ಕೋಟಿ ರೂ. ಅನುದಾನ ಮೀಸಲಿಡಬೇಕು. ಪ್ರಾಧಿಕಾರದ ಅಧ್ಯಕ್ಷರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಬೇಕು. ತುಳು ವಿ.ವಿ. ಸ್ಥಾಪಿಸಿ, ತುಳು ಬೆಳವಣಿಗೆ ಪೂರಕವಾಗುವ ಅಧ್ಯಯನ ವಿಭಾಗಗಳನ್ನು ತೆರೆಯಬೇಕು ಎಂದು ಹೇಳಿದರು.

ಪ್ರತ್ಯೇಕ ರಾಜ್ಯ ಬೇಡ
ತುಳುವರಿಗೆ ಕರ್ನಾಟಕದ ಮುಖ್ಯಮಂತ್ರಿ, ಸಚಿವರು ಆಗ ಬೇಕು ಎಂಬ ಬಯಕೆ ಇರ ಬೇಕು ಹೊರತು ಪ್ರತ್ಯೇಕ ರಾಜ್ಯದ ಮಂತ್ರಿಗಳಾಗುವ ಕನಸು ಬೇಡ. ತುಳುನಾಡಿನ ಆಚೆಗೂ ನಮ್ಮವರು ಗುರುತಿಸಿಕೊಳ್ಳಬೇಕು. ಅಂತಹ ಅವಕಾಶ ನಮಗೆ ಸಿಗುತ್ತಿದೆ. ಪ್ರತ್ಯೇಕ ತುಳು ರಾಜ್ಯ ಬೇಕು ಎಂಬ ಹೋರಾಟಕ್ಕೆ ಇಳಿಯುವುದು ಅಪ್ರಸ್ತುತ. ನಮ್ಮ ಸ್ಥಾನಮಾನದ ಬೇಡಿಕೆ ಸ್ಪಂದನೆ ಸಿಗದೆ ಇದ್ದಾಗ ಮುಂದಿನ ಹೋರಾಟದ ಬಗ್ಗೆ ಚಿಂತಿಸೋಣ ಎಂದು ವಸಂತ ಶೆಟ್ಟಿ ಅಭಿಪ್ರಾಯಿಸಿದರು.

ಮಾನ್ಯತೆ ಅಭಿಮಾನದ ಪ್ರಶ್ನೆ
ತುಳುವಿಗೆ ರಾಜ್ಯದ ಮಾನ್ಯತೆ ಸಿಗಬೇಕು ಎಂಬ ಬೇಡಿಕೆ ಇಟ್ಟಿರುವುದು ಯಾವುದೇ ಸೌಲಭ್ಯ, ಸೌಕರ್ಯಕ್ಕೆ ಅಲ್ಲ. ತುಳುವಿನ ಅಭಿಮಾನಕೋಸ್ಕರ ಪ್ರಾಧ್ಯಾನ ನೀಡಬೇಕು ಎನ್ನುವುದು ನಮ್ಮ ಆಗ್ರಹ. ಸೌಕರ್ಯ, ಸೌಲಭ್ಯವನ್ನು ತುಳುವರೇ ಸೇರಿ ಭರಿಸುವಷ್ಟು ಸಾಮ ರ್ಥ್ಯವಿದೆ ಎಂದರು.

ತುಳು ಸಾಹಿತ್ಯ, ಚಟುವಟಿಕೆಗೆ ಸಂಬಂಧಿಸಿ ಸುಳ್ಯ ತಾಲೂಕು ನಿರೀಕ್ಷಿತ ಮಟ್ಟದಲ್ಲಿ ಬೆಳೆದಿಲ್ಲ. ಇಲ್ಲಿನ ತುಳು ಕೃತಿಗಳು ತುಳುವರಿಂದಲೇ ಪ್ರಕಟಿತಗೊಂಡಿದ್ದು ವಿರಳ. ಅದಕ್ಕೆ ಒತ್ತು ನೀಡಬೇಕು. ತುಳು ಭಾಷೆಯ ಕೃತಿಗಳು ಇಂಗ್ಲಿಷ್‌, ಹಿಂದಿ ಮೊದಲಾದ ಭಾಷೆಗಳಿಗೆ ಅನುವಾದಗೊಂಡಾಗ ಇಲ್ಲಿನ ಮಹತ್ವ ಎಲ್ಲೆಡೆ ಪಸರಿಸಲು ಸಾಧ್ಯ ಎಂದರು.

ಸಮ್ಮೇಳನ ಉದ್ಘಾಟಿಸಿದ ಕರ್ನಾಟಕ ರಾಜ್ಯ ತುಳು ಅಕಾಡೆಮಿ ಅಧ್ಯಕ್ಷ ಎ.ಸಿ. ಭಂಡಾರಿ, ಜಾತಿ, ಮತ, ಧರ್ಮ ಮೀರಿದ ಭಾಷೆ ಆಗಿರುವ ತುಳು ಜಗತ್ತಿನೆಲ್ಲೆಡೆ ಪಸರಿಸುತ್ತಿದೆ. ನಗರಕ್ಕೆ ಸೀಮಿತ ಆಗಿದ್ದ ಸಮ್ಮೇಳನಗಳು ಹಳ್ಳಿಗೆ ವಿಸ್ತರಿತವಾಗಬೇಕು ಎಂಬ ಆಕಾಡೆಮಿ ಆಶಯ ಈಗ ಸಾಕಾರಗೊಳ್ಳುತ್ತಿದೆ ಎಂದು ನುಡಿದರು.

ಸ್ಮರಣ ಸಂಚಿಕೆ ಸಿರಿ ಕುರಲ್‌ ಬಿಡುಗಡೆಗೊಳಿಸಿದ ನ.ಪಂ. ಅಧ್ಯಕ್ಷೆ ಶೀಲಾವತಿ ಮಾಧವ, ನ.ಪಂ. ವತಿಯಿಂದ 25 ಸಾವಿರ ರೂ. ನೀಡುವಂತೆ ಬೇಡಿಕೆ ಬಂದಿದ್ದು, ಜಿಲ್ಲಾಧಿಕಾರಿ ಒಪ್ಪಿಗೆ ದೊರೆತ ತತ್‌ಕ್ಷಣ ಸಹಾಯಧನ ಒದಗಿಸಲಾಗುವುದು ಎಂದರು.

ಸಭಾಧ್ಯಕ್ಷತೆ ವಹಿಸಿದ್ದ ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಭಾಷೆಯ ಮೇಲೆ ಅಭಿಮಾನವಿದ್ದಾಗ ಅದರ ಉನ್ನತ್ತಿ ಸಾಧ್ಯ ಎಂದರು. ಜಿ.ಪಂ. ಸದಸ್ಯರಾದ ಆಶಾ ತಿಮ್ಮಪ್ಪ, ಪುಷ್ಪಾವತಿ ಬಾಳಿಲ ಮಾತನಾಡಿದರು. ಸಿಸಿಆರ್‌ಟಿ ಇದರ ಸಮ್ಮಿಳನ-4 ಮತ್ತು ವಿಜಯ ಭಂಡಾರಿ ಹೆಬ್ಟಾರ್‌ಬೈಲು ಅವರ ಪೂವರಿ ಪತ್ರಿಕೆಯ ವಿಶೇಷ ಸಂಚಿಕೆಯನ್ನು ಬಿಡುಗಡೆಗೊಳಿಸಲಾಯಿತು. ವಿವಿಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ವೇದಿಕೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಜಿ.ಪಂ. ಸದಸ್ಯ ಎಸ್‌.ಎನ್‌. ಮನ್ಮಥ, ಚೆನ್ನಕೇಶವ ದೇವಾಲಯದ ಆಡಳಿತ ಮೊಕ್ತೇಸರ ಡಾ| ಹರಪ್ರಸಾದ್‌ ತುದಿಯಡ್ಕ, ತುಳು ಅಕಾಡೆಮಿ ರಿಜಿಸ್ಟ್ರಾರ್‌ ಚಂದ್ರಹಾಸ ರೈ, ಸದಸ್ಯರಾದ ಸುಧಾ ನಾಗೇಶ್‌ ಎ., ಗೋಪಾಲ ಅಂಚನ್‌, ವಿಜಯ ಶೆಟ್ಟಿ ಸಾಲೆತ್ತೂರು, ವಿದ್ಯಾಶ್ರೀ ಎನ್‌., ದುರ್ಗಾ ಮೆನನ್‌, ಸಮ್ಮೇಳನ ಸಂಚಾಲಕ ಸದಸ್ಯ ನಿರಂಜನ ರೈ ಮಠಂತಬೆಟ್ಟು, ತಾಲೂಕು ತುಳುನಾಡು ರಕ್ಷಣಾ ವೇದಿಕೆ ಅಧ್ಯಕ್ಷ ಪ್ರಶಾಂತ್‌ ರೈ ಮರುವಂಜ, ಸ್ವಾಗತ ಸಮಿತಿ ಅಧ್ಯಕ್ಷ ಗೋಕುಲ್‌ದಾಸ್‌ ಕೆ, ಕೋಶಾಧಿಕಾರಿ ಜೆ.ಕೆ. ರೈ ಉಪಸ್ಥಿತರಿದ್ದರು. 

ಮಮತಾ ಮೂಡಿತ್ತಾಯ ಅಧ್ಯಕ್ಷರ ಪರಿಚಯ ವಾಚಿಸಿದರು. ಪೂರ್ಣಿಮಾ, ಗಿರಿಜಾ ಮತ್ತು ತಂಡ ಪ್ರಾರ್ಥಿಸಿದರು. ಸಮ್ಮೇಳನ ಪೋಷಕಾಧ್ಯಕ್ಷ ಕೆ. ಸವಣೂರು ಸೀತಾರಾಮ ರೈ ಪ್ರಸ್ತಾವನೆಗೈದು ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಶಶಿಧರ ಎಂ.ಜೆ. ಕೊಯಿಕುಳಿ ವಂದಿಸಿದರು. ತುಳು ಅಕಾಡೆಮಿ ಮಾಜಿ ಸದಸ್ಯ ದುರ್ಗಾಕುಮಾರ್‌ ನಾಯರ್‌ಕೆರೆ ಮತ್ತು ಅಕ್ಷಿತಾ ರೈ ಬೆಳ್ಳಾರೆ ನಿರೂಪಿಸಿದರು.

ಟಾಪ್ ನ್ಯೂಸ್

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Langoti Man Movie Review

Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.