![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Oct 19, 2018, 9:29 AM IST
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಸಂಭ್ರಮ ಕಳೆಗಟ್ಟಿರುವ ವೇಳೆಯಲ್ಲಿ ಮೈಸೂರು ಅರಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ. ರಾಜಮಾತೆ ಪ್ರಮೋದಾ ದೇವಿ ಒಡೆಯರ್ ಅವರ ತಾಯಿ ಶುಕ್ರವಾರ ವಿಧಿವಶರಾಗಿದ್ದಾರೆ.
ಕಳೆದ ಕೆಲ ದಿನಗಳಿಂದ ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಪುಟ್ಟ ಚಿನ್ನಮಣಿ (98) ಅವರು ಮೈಸೂರಿ ಖಾಸಗಿ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ.
ಅರಮನೆಯಲ್ಲಿ ಸೂತಕ ಕಾಣಿಸಿಕೊಂಡ ಹಿನ್ನಲೆಯಲ್ಲಿ ಒಡೆಯರ್ ರಾಜವಂಶಸ್ಥ ಮನೆಯಲ್ಲಿ ಸಂಭ್ರಮ ಇಲ್ಲವಾಗಿದೆ.
ಅರಮನೆಯಲ್ಲಿ ನಡೆಯಬೇಕಾದ ಕೆಲ ಧಾರ್ಮಿಕ ವಿಧಿಗಳನ್ನು ಮೊಟಕುಗೊಳಿಸಲಾಗಿದೆ. ವಜ್ರಮುಷ್ಠಿ ಕಾಳಗವನ್ನು ರದ್ದು ಮಾಡಲಾಗಿದೆ. ಮೂರು ದಿನಗಳ ಕಾಲ ಸೂತಕ ಇರುವ ಹಿನ್ನಲೆಯಲ್ಲಿ ಪೂಜಾ ವಿಧಿ ವಿಧಾನಗಳನ್ನು ನಡೆಸಲಾಗುತ್ತಿಲ್ಲ.
ಭುವನೇಶ್ವರಿ ದೇವಾಲಯದ ಆವರಣದಲ್ಲಿರುವ ಬನ್ನಿ ಮಂಟಪಕ್ಕೆ ಯದುವೀರ್ ಒಡೆಯರ್ ಅವರು ಪೂಜೆ ಸಲ್ಲಿಸಬೇಕಿತ್ತು. ಉತ್ತರ ಪೂಜೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ವರದಿಯಾಗಿದೆ.
ಪುಟ್ಟ ಚಿನ್ನಮಣಿ ಅವರ ನಿಧನಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಂತಾಪ ಸೂಚಿಸಿದ್ದಾರೆ.
ಅರಮನೆಯ ಸಮ್ಮರ್ ಪ್ಯಾಲೇಸ್ನಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಲಾಗಿದೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.