![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Oct 20, 2018, 6:00 AM IST
ಅಮೃತಸರ: ಹಳಿ ಮೇಲೆ ನಿಂತು ರಾವಣ, ಮೇಘನಾದರ ಪ್ರತಿಕೃತಿ ದಹನ ಕಾರ್ಯಕ್ರಮ ನೋಡುತ್ತಿ ದ್ದವರ ಮೇಲೆ ರೈಲು ಸಂಚರಿಸಿ ಕನಿಷ್ಠ 62 ಮಂದಿ ಅಸುನೀ ಗಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಪಂಜಾಬ್ನ ಅಮೃತಸರದಲ್ಲಿ ಸಂಭವಿಸಿದೆ. ಶುಕ್ರವಾರ ರಾತ್ರಿ 8 ಗಂಟೆ ಸುಮಾರಿಗೆ ಜಲಂಧರ್ನಿಂದ ಅಮೃತಸರಕ್ಕೆ ಬರುತ್ತಿದ್ದ ಡೆಮು ರೈಲು ಹಳಿಯ ಮೇಲೆ ನಿಂತಿದ್ದ ಜನರ ಮೇಲೆಯೇ ಸಂಚರಿಸಿತು. ಸ್ಥಳದಲ್ಲಿ 700ಕ್ಕೂ ಅಧಿಕ ಮಂದಿ ಸೇರಿದ್ದರು ಎಂದು ಸ್ಥಳೀಯ ಆಡಳಿತಾಧಿಕಾರಿ ಹೇಳಿದ್ದಾರೆ.
ಸ್ಥಳೀಯರು ಆರೋಪಿಸಿರುವಂತೆ ರೈಲ್ವೇ ಇಲಾಖೆಯೇ ದುರಂತಕ್ಕೆ ಕಾರಣ. ರೈಲು ಬರುವ ಬಗ್ಗೆ ಮುನ್ನೆಚ್ಚರಿಕೆಯನ್ನೇ ನೀಡಿರಲಿಲ್ಲ. ಜತೆಗೆ ಸ್ಥಳೀಯ ದಸರಾ ಉತ್ಸವ ಆಯೋಜನಾ ಸಮಿತಿಯೂ ಈ ಬಗ್ಗೆ ನಿರ್ಲಕ್ಷ್ಯ ವಹಿಸಿತ್ತು ಎಂದಿದ್ದಾರೆ. ಪ್ರಧಾನಿ ಮೋದಿ ಘಟನೆಗೆ ಶೋಕ ವ್ಯಕ್ತಪಡಿಸಿದ್ದಾರೆ. ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ಬಗ್ಗೆ ಸೂಚಿಸಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮಾಡಿ ಆಘಾತ ವ್ಯಕ್ತಪಡಿಸಿದ್ದಾರೆ. ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಘಟನೆಗೆ ಆಘಾತ ವ್ಯಕ್ತಪಡಿಸಿದ್ದು, ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ಉಸ್ತುವಾರಿಗೆ ಆರೋಗ್ಯ, ಗೃಹ ಕಾರ್ಯದರ್ಶಿಗಳನ್ನು ºರು ಸಚಿವರನ್ನು ಕಳುಹಿಸಿ ಕೊಟ್ಟಿದ್ದಾರೆ. ಗಾಯಗೊಂಡ ಎಲ್ಲರಿಗೂ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ನೀಡಲಾಗುತ್ತದೆ. ಅಸುನೀಗಿದ ವ್ಯಕ್ತಿಗಳ ಪ್ರತಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.