ಕರಾವಳಿ ಮೂಲದ ಘಾತಕ ಉಗ್ರರಿವರು


Team Udayavani, Oct 22, 2018, 11:24 AM IST

untitled-1.jpg

ಸನಾತನ ಸಂಸ್ಥೆಯಲ್ಲಿ  ಗುರುತಿಸಿಕೊಂಡಿದ್ದ ನೂಜಿಬಾಳ್ತಿಲದ ಜಯಪ್ರಕಾಶ್‌
ಕಡಬ: ನೂಜಿಬಾಳ್ತಿಲ ಗ್ರಾಮದ ಕಟ್ಟತ್ತಡ್ಕ ನಿವಾಸಿ ಕೃಷಿಕ ಸೋಮರಾಜನ್‌ ಅವರ ಪುತ್ರ ಜಯಪ್ರಕಾಶ್‌ ಯಾನೆ ಅಣ್ಣಾ ವಿವಿಧ ಪ್ರಕರಣಗಳಲ್ಲಿ ಆರೋಪಿಯಾಗಿದ್ದು, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಯು ಮೋಸ್ಟ್‌ ವಾಂಟೆಡ್‌ ಕ್ರಿಮಿನಲ್‌ಗ‌ಳ ಪಟ್ಟಿಯಲ್ಲಿ ಆತನ ಹೆಸರನ್ನು ಸೇರ್ಪಡೆಗೊಳಿಸಿ ಆತನ ಬಂಧನಕ್ಕಾಗಿ ಸಹಕರಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದೆ.

ಹದಿನಾಲ್ಕು ವರ್ಷಗಳಿಂದ ಮನೆಯವರ ಸಂಪರ್ಕ ಕಡಿದುಕೊಂಡಿರುವ ಜಯಪ್ರಕಾಶ್‌ ಸನಾತನ ಸಂಸ್ಥೆಯ ಕಾರ್ಯಕರ್ತನಾಗಿ ಗುರುತಿಸಿಕೊಂಡಿದ್ದ. ಮಾಲೆಂಗಾವ್‌ ಸ್ಫೋಟದ ತನಿಖೆಯ ವೇಳೆ ಕೆಲವು ವರ್ಷಗಳ ಹಿಂದೆ ಎನ್‌ಐಎ ಅಧಿಕಾರಿಗಳು ಕಡಬಕ್ಕೆ ಆಗಮಿಸಿ ಆತನ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದರು. ಬಳಿಕ ಆತನ ಫೋಟೋ ಇರುವ ಪೋಸ್ಟರ್‌ಗಳನ್ನು ಗ್ರಾಮ ಪಂಚಾಯತ್‌ ಹಾಗೂ ಕಂದಾಯ ಕಚೇರಿಗಳ ಬಳಿ ಹಚ್ಚಿ ಆತನ ಬಗ್ಗೆ ಸುಳಿವು ನೀಡಿದವರಿಗೆ ನಗದು ಬಹುಮಾನ ನೀಡಲಾಗುವುದು ಎಂದು ಎನ್‌ಐಎ ಪ್ರಕಟಿಸಿತ್ತು. ಜಯಪ್ರಕಾಶ್‌ ವಿರುದ್ಧ ಅಜೆ¾àರ್‌ ದರ್ಗಾ ಸ್ಫೋಟ, ಸಂಝೋತಾ ಎಕ್ಸ್‌ಪ್ರೆಸ್‌ ಬಾಂಬ್‌ ಸ್ಫೋಟ, ಗೋವಾ ಮತ್ತು ಹೈದರಾಬಾದ್‌ ಮೆಕ್ಕಾ ಮಸೀದಿ ಸ್ಫೋಟ ಪ್ರಕರಣಗಳಲ್ಲಿ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿವೆ. ಲೇಖಕಿ ಗೌರಿ ಲಂಕೇಶ್‌ ಹತ್ಯೆಯ ತನಿಖೆಯ ವೇಳೆಯಲ್ಲಿಯೂ ತನಿಖಾಧಿಕಾರಿಗಳು ಜಯಪ್ರಕಾಶ್‌ನ  ಕೈವಾಡದ ಸಾಧ್ಯತೆಯ ಕುರಿತು ಮಾಹಿತಿ ಕಲೆಹಾಕಿದ್ದರು. 

ಖೋಟಾ ನೋಟು ಚಲಾವಣೆ ಕುಖ್ಯಾತಿಯ ಮೊದಿನ್‌ ಉಮ್ಮರ್‌
ಉಡುಪಿ/ಪಡುಬಿದ್ರಿ:
 ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಬಿಡುಗಡೆಗೊಳಿಸಿರುವ ಘಾತಕ ಉಗ್ರರ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಉಡುಪಿ ಜಿಲ್ಲೆ ಮೂಳೂರಿನ ಮೊದಿನ್‌ ಉಮ್ಮರ್‌ ಬ್ಯಾರಿಯು ಖೋಟಾ ನೋಟು ಚಲಾ ವಣೆಯಲ್ಲಿ ಕುಖ್ಯಾತಿ ಪಡೆದವನಾಗಿದ್ದಾನೆ. ಕೇರಳ ಪೊಲೀಸರು ಈತನನ್ನು ಅರಸಿ ಬಂದಾಗಲೂ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದ ಈತ ಖೋಟಾ ನೋಟಿನಿಂದಲೇ ತನ್ನ ಸಾಮ್ರಾಜ್ಯ ಕಟ್ಟಿಕೊಂಡಿದ್ದ.
ಮೂಳೂರಿನಲ್ಲಿ ಹೆದ್ದಾರಿ ಸಮೀಪವೇ ಬೃಹತ್‌ ಬಂಗಲೆಯೊಂದನ್ನು ನಿರ್ಮಿಸಿಕೊಂಡಿದ್ದ ಈತ ಕೇರಳ ಪೊಲೀಸರ ಹುಡುಕಾಟದ ಬಳಿಕ ಈ ಮನೆಯನ್ನು ಮಾರಿದ್ದ. ಮೂಳೂರು ಸುನ್ನಿ ಸೆಂಟರ್‌ ಬಳಿಯಲ್ಲಿನ ಜಾಗ ವೊಂದನ್ನೂ ಮಾರಾಟ ಮಾಡಿ ಬಳಿಕ ದುಬಾೖಗೆ ತೆರಳಿದ್ದ. ಸುನ್ನಿ ಸೆಂಟರ್‌ ಬಳಿಯಲ್ಲಿನ ಜಾಗದಲ್ಲಿ ಫ್ಲಾಟ್‌ಗಳನ್ನು ನಿರ್ಮಿಸುವುದಾಗಿ ಜನರನ್ನು ನಂಬಿಸಿ ಅನೇಕರಿಂದ ಹಣವನ್ನೂ ಪಡೆದುಕೊಂಡಿದ್ದ ಈತನ ವಿರುದ್ಧ ಹಲವಾರು ಚೆಕ್‌ ಬೌನ್ಸ್‌ ಕೇಸುಗಳೂ ಇದ್ದವು. ದುಬಾೖನಲ್ಲಿ ಜೈಲುವಾಸಿಯಾಗಿದ್ದ ಈತ ಮುಂದೆ ಬಿಡುಗಡೆಗೊಂಡಿದ್ದು, ಈತನ ಪಾಸ್‌ಪೋರ್ಟನ್ನು ಅಲ್ಲಿನ ಸರಕಾರವು ಹಿಡಿದಿಟ್ಟುಕೊಂಡಿದೆ ಎಂದು ಉಡುಪಿಯ ಪೊಲೀಸ್‌ ಮೂಲಗಳು ತಿಳಿಸಿವೆ. ಖೋಟಾ ನೋಟು ವ್ಯವಹಾರದಿಂದಲೇ ಈತ ಉಡುಪಿ ಜಿಲ್ಲೆ, ಬೆಂಗಳೂರು, ಹೈದರಾಬಾದ್‌ಗಳಲ್ಲಿ ಅಕ್ರಮ ಆಸ್ತಿಗಳನ್ನು ಖರೀದಿಸಿದ್ದನೆಂಬ ಮಾಹಿತಿ ಲಭ್ಯವಾಗಿದೆ.

ಟಾಪ್ ನ್ಯೂಸ್

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Kulai: ಬೃಹತ್‌ ಟ್ರಕ್‌ ಓಡಾಟದಿಂದ ರಸ್ತೆಗೆ ಹಾನಿ

10

Lalbagh: ಪಾಲಿಕೆ ಚುನಾವಣೆ ಸನ್ನಿಹಿತ; ಮೀಸಲಾತಿಯದೇ ಆತಂಕ!

7–ullala

Ullala: ಇನ್ಸ್‌ಪೆಕ್ಟರ್ ಕೊಠಡಿಯೊಳಗೆಯೇ ಹಿಂದೂ ಸಂಘಟನೆ ಮುಖಂಡನಿಗೆ ಮುಸ್ಲಿಂ ಯುವಕ ಹಲ್ಲೆ

7

Mangaluru: ನಿತ್ಯ ಟ್ರಾಫಿಕ್‌ ಜಾಮ್‌ ಗೋಳು; ವಾಹನ ಸವಾರರ ಪರದಾಟ

Crime

Mangaluru: ಬಸ್‌ ನಿರ್ವಾಹಕನ ಕೊಲೆ; ಆರೋಪಿಗಳ ಸುಳಿವು ಲಭ್ಯ?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.