ಶೃತಿ ವಿರುದ್ಧ ಮಾನನಷ್ಟ ಮೊಕದ್ದಮೆ: 29ಕ್ಕೆ ವಿಚಾರಣೆ ಮುಂದೂಡಿಕೆ


Team Udayavani, Oct 27, 2018, 6:00 AM IST

18.jpg

ಬೆಂಗಳೂರು: “ಮೀ ಟೂ’ ವೇದಿಕೆ ಮೂಲಕ ಕಿರುಕುಳ ಆರೋಪ ಮಾಡಿದ್ದ ನಟಿ ಶೃತಿ ಹರಿಹರನ್‌ ವಿರುದ್ಧ ನಟ ಅರ್ಜುನ್‌ ಸರ್ಜಾ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಹಾಗೂ ಹೇಳಿಕೆ ನೀಡದಂತೆ ನಿರ್ಬಂಧ ವಿಧಿಸುವ ಕುರಿತ ಮಧ್ಯಂತರ ಅರ್ಜಿ ವಿಚಾರಣೆ ನಡೆಸಿದ ಮೆಯೋಹಾಲ್‌ನ ಎಸಿಸಿಎಂಎಂ ನ್ಯಾಯಾ ಲಯ ಶೃತಿಗೆ ನೋಟಿಸ್‌ ಜಾರಿ ಮಾಡಿ ಅ.29ಕ್ಕೆ ವಿಚಾರಣೆ ಮುಂದೂಡಿದೆ.

ಅರ್ಜಿ ವಿಚಾರಣೆ ನಡೆಸಿದ 22ನೇ ಸಿಸಿಎಚ್‌ ನ್ಯಾಯಾಲಯದ ನ್ಯಾಯಾಧೀಶರರಾದ ಜೆ.ಆರ್‌. ಮೆಂಡೋನ್ಸಾ ಈ ಆದೇಶ ನೀಡಿದ್ದಾರೆ. ಇದಕ್ಕೂ ಮೊದಲು ವಕೀಲೆ ಜೈನಾ ಕೊಥಾರಿ ಅವರು ನಟಿ ಶೃತಿ ಹರಿಹರನ್‌ ಪರ ವಾದ ಮಂಡಿಸಲು ಅವಕಾಶ ನೀಡಬೇಕೆಂದು ಕೋರ್ಟ್‌ಗೆ ಮನವಿ ಮಾಡಿದರು. ಈ ಮನವಿ ಪುರಸ್ಕರಿಸಿದ ನ್ಯಾಯಾಧೀಶರು ಪ್ರಕರಣದಲ್ಲಿ ಏಕಮುಖವಾಗಿ ತೀರ್ಪು ನೀಡಲು ಸಾಧ್ಯವಿಲ್ಲ. ನಟಿ ಶೃತಿ ಹರಿಹರನ್‌ ಪರ ವಕೀಲರು ಕೋರ್ಟ್‌ಗೆ ಕೇವಿಯಟ್‌ ಸಲ್ಲಿಸಿದ್ದಾರೆ. ಈ ಸಂಬಂಧ ಎರಡೂ ಕಡೆಯ ವಾದ-ಪ್ರತಿ ವಾದ ಆಲಿಸಿದ ಬಳಿಕ ತೀರ್ಪು ಪ್ರಕಟಿಸಲಾಗುವುದು ಎಂದು ಸೂಚಿಸಿದರು. ಇದೇ ವೇಳೆ ಅ.29ರಂದು ಲಿಖೀತ ರೂಪದಲ್ಲಿ ಆಕ್ಷೇಪಣೆ ಸಲ್ಲಿಸಲು ಪ್ರತಿವಾದಿ ಶೃತಿ ಹರಿಹರನ್‌ಗೆ ನೋಟಿಸ್‌ ಜಾರಿ ಮಾಡಿ ವಿಚಾರಣೆ ಮುಂದೂಡಿದರು.

ಜತೆಗೆ ಈ ಮಧ್ಯಂತರ ಆದೇಶ ಪ್ರತಿಯನ್ನು ಪ್ರತಿವಾದಿ ವಕೀಲರಿಗೂ ನೀಡುವಂತೆ ಅರ್ಜುನ್‌ ಸರ್ಜಾ ಪರ ವಕೀಲರಿಗೆ
ಸೂಚಿಸಿದರು. ತಮ್ಮ ಕಕ್ಷಿದಾರರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿ ಅವಮಾನ ಮಾಡಿದ್ದಾರೆಂದು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದ ಅರ್ಜುನ್‌ ಸರ್ಜಾ ಪರ ವಕೀಲ ಶ್ಯಾಮ್‌ಸುಂದರ್‌, ಯಾವುದೇ ಮಾನಹಾನಿ ಹೇಳಿಕೆ ನೀಡದಂತೆ ಶೃತಿ ಅವರಿಗೆ ನಿರ್ಬಂಧ ವಿಧಿಸಬೇಕೆಂದು ಮಧ್ಯಂತರ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಶುಕ್ರವಾರ ಬೆಳಗ್ಗೆ ಅರ್ಜಿ ವಿಚಾರಣೆಗೂ ಮೊದಲು
ಶೃತಿ ಹರಿಹರನ್‌ ಪರ ವಾದ ಮಂಡಿಸಲು ಜೈನಾ ಕೊಥಾರಿ ಮನವಿ ಸಲ್ಲಿಸಿದ್ದರು.

ಇದಕ್ಕೆ ಆಕ್ಷೇಪಿಸಿದ ಅರ್ಜುನ್‌ ಸರ್ಜಾ ಪರ ವಕೀಲರು, ನಟಿ ಶೃತಿ ಕೋರ್ಟ್‌ನಲ್ಲಿ ಕೇವಿಯಟ್‌ ಸಲ್ಲಿಸಿಲ್ಲ. ಅಲ್ಲದೆ, ನಾವು
ಸಲ್ಲಿಸಿರುವ ಮಧ್ಯಂತರ ಅರ್ಜಿ ಕುರಿತು ನ್ಯಾಯಾಲಯದಿಂದ ನೋಟಿಸ್‌ ಕೂಡ ಜಾರಿ ಮಾಡಿಲ್ಲ. ಹೀಗಾಗಿ ಯಾವ
ಆಧಾರದ ಮೇಲೆ ವಾದ ಮಂಡಿಸಲು ಸಾಧ್ಯ? ನ್ಯಾಯಾಲಯ ಅವಕಾಶ ನೀಡಬಾರದೆಂದು ಮನವಿ ಮಾಡಿದರು. ಇದಕ್ಕೆ ಉತ್ತರಿಸಿದ ವಕೀಲೆ ಜೈನಾ ಕೊಥಾರಿ, ಶೃತಿ ಒಪ್ಪಿಗೆ ನೀಡಿರು ವುದರಿಂದಲೇ ಕೋರ್ಟ್‌ಗೆ ಹಾಜರಾಗಿದ್ದೇನೆ. ಸ್ವಯಂ ಪ್ರೇರಿತವಾಗಿ ಬಂದಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಬಳಿಕ ಕೋರ್ಟ್‌ ಮಧ್ಯಾಹ್ನ 3 ಗಂಟೆಗೆ ವಿಚಾರಣೆ ಮುಂದೂಡಿತು. ಅ.29ಕ್ಕೆ ವಿಚಾರಣೆ ಮುಂದೂಡಲಾಯಿತು.

ಕೋರ್ಟ್‌ ಸೂಚನೆ ಹೊರತಾಗಿಯೂ ನಮ್ಮಕಕ್ಷಿದಾರ ಅರ್ಜುನ್‌ ಸರ್ಜಾ ವಿರುದ್ಧ ಮಾಧ್ಯಮಗಳ ಮೂಲಕವಾಗಲಿ, ಸಾಮಾಜಿಕ ಜಾಲತಾಣಗಳ ಮೂಲಕವಾಗಲಿ ನಟಿ ಶೃತಿ ಹರಿಹರನ್‌ ಅವಹೇಳನಕಾರಿ ಹೇಳಿಕೆ ನೀಡಿದರೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಬೇಕಾಗುತ್ತದೆ.
ಶ್ಯಾಮ್ ಸುಂದರ್ ಅರ್ಜುನ್‌ ಸರ್ಜಾ ಪರ ವಕೀಲರು.

ಟಾಪ್ ನ್ಯೂಸ್

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

6-ucchila

Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ

Hindalga Jail: Inmate assaulted by four undertrials

Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hindalga Jail: Inmate assaulted by four undertrials

Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ

1-kb

Land; ಬಗರ್‌ ಹುಕುಂ ಅರ್ಜಿ: ಎರಡು ತಿಂಗಳು ಗಡುವು

Kharge (2)

Karnataka Politics; ದಲಿತ ಸಿಎಂ ಚರ್ಚೆಗೆ ಮತ್ತೆ ರೆಕ್ಕೆಪುಕ್ಕ

1-vara

Dowry; ವರದಕ್ಷಿಣೆ ಕಿರುಕುಳ: ಕುಂದಾಪುರ ಮೂಲದ ಮಹಿಳಾ ಟೆಕಿ ಆತ್ಮಹ *ತ್ಯೆ

bjp jds

BJP, JDS ಮೈತ್ರಿ ಕಾಂಗ್ರೆಸ್‌ ಲೋಕಸಭಾ ಸೋಲಿಗೆ ಕಾರಣ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

2(1)

Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!

8-shirva

ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್‌

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.