ಉದ್ಯಮಿಗಳಿಗೇ ಪ್ರತ್ಯೇಕ ನೋಡಲ್‌ ಅಧಿಕಾರಿ


Team Udayavani, Oct 27, 2018, 11:14 AM IST

udyamigale.jpg

ಬೆಂಗಳೂರು: ಉದ್ಯಮಿಗಳ ಸಮಸ್ಯೆಗಳನ್ನು ಆದ್ಯತೆ ಮೇರೆಗೆ ಸ್ವೀಕರಿಸಿ ಪರಿಹಾರ ಕಲ್ಪಿಸಲು ಪ್ರತ್ಯೇಕ ನೋಡಲ್‌ ಅಧಿಕಾರಿಯನ್ನು ನೇಮಿಸಲಾಗುವುದು ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಕೆ.ಜೆ.ಜಾರ್ಜ್‌ ತಿಳಿಸಿದರು. ನಗರದ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್ಕೆಸಿಸಿಐ)ಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಉದ್ಯಮಿಗಳೊಂದಿಗಿನ ಸಂವಾದದಲ್ಲಿ ಅವರು ಮಾತನಾಡಿದರು.

ಉದ್ಯಮಿಗಳು ಇಂದು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಆದರೆ, ಎಲ್ಲದಕ್ಕೂ ಒಂದೇ ದಿನ ಪರಿಹಾರ ಕಂಡುಕೊಳ್ಳುವುದು ಅಸಾಧ್ಯ. ಆದ್ದರಿಂದ ಆದ್ಯತೆ ಮೇರೆಗೆ ಈಡೇರಬೇಕಿರುವ ಬೇಡಿಕೆಗಳ ಪಟ್ಟಿ ಮಾಡಿ, ಸರ್ಕಾರಕ್ಕೆ ಸಲ್ಲಿಸಬೇಕು. ಈ ಸಂಬಂಧ ಎಫ್ಕೆಸಿಸಿಐನಲ್ಲೇ ಒಂದು ಸಮಿತಿ ರಚಿಸಬೇಕು. ಆ ಸಮಿತಿ ಸೂಚಿಸುವ ಅಂಶಗಳನ್ನು ಅನುಷ್ಠಾನಗೊಳಿಸಲು ನೋಡಲ್‌ ಅಧಿಕಾರಿಯನ್ನು ನೇಮಿಸಲಾಗುವುದು ಎಂದು ಹೇಳಿದರು.

ಅಲ್ಲದೆ, ಪ್ರದೇಶ ಅಥವಾ ಜಿಲ್ಲಾ ಮಟ್ಟದಲ್ಲಿ ಅಹವಾಲುಗಳನ್ನು ಸ್ವೀಕರಿಸಲು ಕೈಗಾರಿಕಾ ಅದಾಲತ್‌ ಕೂಡ ನಡೆಸಲಾಗುವುದು. ಇದರಿಂದ ಉದ್ಯಮಿಗಳಿಗೆ ಅನುಕೂಲ ಆಗಲಿದೆ ಎಂದ ಅವರು, ಸರ್ಕಾರ ನಿಮ್ಮೊಂದಿಗೆ (ಉದ್ಯಮಿಗಳೊಂದಿಗೆ) ಇದೆ. ನೀವೂ ಇದಕ್ಕೆ ಕೈಜೋಡಿಸಬೇಕು ಎಂದು ತಿಳಿಸಿದರು. 

ಎಚ್‌ಟಿ ವಿದ್ಯುತ್‌ ಸಂಪರ್ಕಕ್ಕೆ ಓಸಿ ಕಡ್ಡಾಯ!: ಇದಕ್ಕೂ ಮುನ್ನ ಸಂವಾದದಲ್ಲಿ ಎಫ್ಕೆಸಿಸಿಐ ಸದಸ್ಯ ಪ್ರಭಾಕರ್‌ ಮಾತನಾಡಿ, “ಯಾವುದೇ ಕೈಗಾರಿಕೆಗಳು ವಿದ್ಯುತ್‌ ಸಂಪರ್ಕಕ್ಕಾಗಿ ಆ ಕಟ್ಟಡದ ಮಾಲಿಕತ್ವ ದಾಖಲೆ ಅಥವಾ ಪಾಲುದಾರಿಕೆ ಪತ್ರ ಹೊಂದಿದ್ದರೆ ಸಾಕು ಎಂದು ಕೇಂದ್ರದ ಕೈಗಾರಿಕಾ ನೀತಿ ಮತ್ತು ಉತ್ತೇಜನ ಇಲಾಖೆ ಸ್ಪಷ್ಟವಾಗಿ ಹೇಳುತ್ತದೆ.

ಆದರೆ, ಕರ್ನಾಟಕ ವಿದ್ಯುತ್ಛಕ್ತಿ ನಿಯಂತ್ರಣ ಆಯೋಗವು (ಕೆಇಆರ್‌ಸಿ) ಸ್ವಾಧೀನಾನುಭವ ಪತ್ರ ಕಡ್ಡಾಯಗೊಳಿಸುವ ನಿಯಮ ಜಾರಿಗೆ ಮುಂದಾಗಿದೆ. ಈ ಸಂಬಂಧ ಆಕ್ಷೇಪಣೆ ಸಲ್ಲಿಸಲು ಅ.31 ಕೊನೆಯ ದಿನ. ಹಾಗೊಂದು ವೇಳೆ ಈ ಸಂಬಂಧ ಆದೇಶ ಹೊರಡಿಸಿದರೆ, ಕೈಗಾರಿಕೆಗಳಿಗೆ ಸಾಕಷ್ಟು ಸಮಸ್ಯೆ ಆಗಲಿದೆ ಎಂದು ಸಚಿವರ ಗಮನಸೆಳೆದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಕೆ.ಜೆ.ಜಾರ್ಜ್‌, ಈ ಕುರಿತು ಶೀಘ್ರ ಕೆಇಆರ್‌ಸಿ ಅಧ್ಯಕ್ಷ ಶಂಕರಲಿಂಗೇಗೌಡ ಮತ್ತು ಇಂಧನ ಇಲಾಖೆ ಪ್ರಧಾನ ಕಾರ್ಯದರ್ಶಿ ರವಿಕುಮಾರ್‌ ಜತೆ ಚರ್ಚಿಸಲಾಗುವುದು. ಅಲ್ಲದೆ ಈ ಮಧ್ಯೆ ಎಫ್ಕೆಸಿಸಿಐಯಿಂದಲೂ ಆಯೋಗಕ್ಕೆ ಮನವಿ ಸಲ್ಲಿಸುವಂತೆ ಸೂಚಿಸಿದರು. 

ಮತ್ತೂಬ್ಬ ಸದಸ್ಯರು, ಕೈಗಾರಿಕೆಗಳಿಗೆ ಪೂರೈಕೆಯಾಗುವ ನೀರಿನ ಶುಲ್ಕವನ್ನು ನೂರಾರು ಪಟ್ಟು ಹೆಚ್ಚಿಸಲಾಗಿದೆ. ಇದು ಅವೈಜ್ಞಾನಿಕವಾಗಿದ್ದು, ಕೂಡಲೇ ಕಡಿಮೆ ಮಾಡಬೇಕು ಎಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಈಗಾಗಲೇ ಈ ವಿಷಯವನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಗಮನಕ್ಕೆ ತರಲಾಗಿದೆ. ಶೀಘ್ರ ಸಭೆ ನಡೆಸಲು ಉದ್ದೇಶಿಸಲಾಗಿದೆ ಎಂದರು. 

ಎಫ್ಕೆಸಿಸಿಐ ಅಧ್ಯಕ್ಷ ಸುಧಾಕರ್‌ ಶೆಟ್ಟಿ ಮಾತನಾಡಿ, ಪ್ಲಾಸ್ಟಿಕ್‌ ಇಲ್ಲದ ದೇಶಗಳೇ ಇಲ್ಲ. ಆದರೆ, ರಾಜ್ಯದಲ್ಲಿ ಪ್ಲಾಸ್ಟಿಕ್‌ ನಿಷೇಧದಿಂದ ಸಣ್ಣ-ಪುಟ್ಟ ಅಂಗಡಿಗಳು ಸತ್ತುಹೋಗುತ್ತಿವೆ. ಈ ಬಗ್ಗೆ ಸರ್ಕಾರ ಗಮನಹರಿಸಬೇಕು. ಕೆಐಎಡಿಬಿ ಮಂಜೂರು ಮಾಡಿದ ಭೂಮಿಯ ಸ್ವಾಧೀನಕ್ಕೆ ಸ್ಥಳೀಯರಿಂದ ಸಾಕಷ್ಟು ವಿರೋಧ ಎದುರಿಸಬೇಕಾಗಿದೆ. ಟ್ರಕ್‌ ಟರ್ಮಿನಲ್‌ಗ‌ಳಿಲ್ಲದೆ ಸಮಸ್ಯೆ ಎದುರಾಗಿದೆ ಎಂದು ಅಹವಾಲು ಸಲ್ಲಿಸಿದರು. ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ ಗುಪ್ತ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

Shettar (3)

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

15

Kamanur village: ದಾರಿ ತೋರುವ ಮಾದರಿ ಗ್ರಾಮ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Bengaluru: ಅಪಾರ್ಟ್‌ಮೆಂಟ್‌ನಿಂದ ಜಾರಿ ಬಿದ್ದು ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಸಾವು!

7

Road Mishap: ಲಾರಿ ಚಕ್ರ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ದುರ್ಮರಣ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

4

Bengaluru: ಮಲ್ಲೇಶ್ವರ ಮೈದಾನದಲ್ಲಿ ಮಗು ಸಾವಿಗೆ ಗೇಟ್‌ ವೆಲ್ಡಿಂಗ್‌ ದೋಷ ಕಾರಣ; ಸಮಿತಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

13

Malpe: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

Shettar (3)

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

POlice

Kundapura: ಅಕ್ರಮ ಮದ್ಯ ಸಾಗಾಟ; ವಶ

courts-s

POCSO ಪ್ರಕರಣದ ಆರೋಪಿ ನಟಿ ಸಲ್ಲಿಸಿದ ನಿರೀಕ್ಷಣ ಜಾಮೀನು ಅರ್ಜಿ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.