ಆದಷ್ಟು ಬೇಗ ಬೆಂಗಳೂರು ಸ್ವಚ್ಛವಾಗಬೇಕು
Team Udayavani, Oct 27, 2018, 11:15 AM IST
ಬೆಂಗಳೂರು: ಪಾಲಿಕೆ ಅಧಿಕಾರಿಗಳು ಹೇಗೆ ಕೆಲಸ ಮಾಡುತ್ತಾರೋ ಗೊತ್ತಿಲ್ಲ. ಆದಷ್ಟು ಶೀಘ್ರ ಬೆಂಗಳೂರು ಸ್ವಚ್ಛವಾಗಬೇಕು ಎಂದು ಬಿಬಿಎಂಪಿಗೆ ಹೈಕೋರ್ಟ್ ಶುಕ್ರವಾರ ಮೌಖೀಕ ಸೂಚನೆ ನೀಡಿತು.
ನಗರದಲ್ಲಿ ಅನಧಿಕೃತ ಫ್ಲೆಕ್ಸ್, ಜಾಹೀರಾತು ಫಲಕಗಳ ತೆರವುಗೊಳಿಸುವಂತೆ ಕೋ ರಿ ಮಾಯಿಗೆಗೌಡ ಸೇರಿ ಮತ್ತಿರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಹಾಗೂ ನ್ಯಾಯಮೂರ್ತಿ ಆರ್.ದೇವದಾಸ್ ಅವರಿದ್ದ ವಿಭಾಗೀಯ ಪೀಠ, ವಿಚಾರಣೆ ವೇಳೆ ಈ ಸೂಚನೆ ನೀಡಿದೆ. ಬೆಂಗಳೂರು ಸ್ವಚ್ಛ ನಗರವಾಗಿಸುವಲ್ಲಿ ಪಾಲಿಕೆ ಮತ್ತಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು. ಜಾಹೀರಾತು ಫಲಕಗಳ ತೆರವಿಗೆ ಪಾಲಿಕೆ ಅಧಿಕಾರಿಗಳು ಡಬಲ್ ಡ್ನೂಟಿ ಮಾಡಲಿ ಎಂದು ಸಲಹೆ ನೀಡಿತು.
ಬಿಬಿಎಂಪಿ ರೂಪಿಸಿರುವ ಹೊಸ ಜಾಹೀರಾತು ನೀತಿಗೆ ಸಂಬಂಧಿಸಿದಂತೆ ಈವರೆವಿಗೆ ಸಾರ್ವಜನಿಕರಿಂದ 704 ಆಕ್ಷೇಪಣೆ ಸಲ್ಲಿಕೆಯಾಗಿದ್ದು ಪರಿಶೀಲಿಸಲಾಗುತ್ತಿದೆ ಎಂದು ವರದಿ ಆಲಿಸಿದ ನ್ಯಾಯಪೀಠ, ಆದಷ್ಟು ಬೇಗ ಜಾಹೀರಾತು ನೀತಿ ಜಾರಿಗೆ ಬರಲು ಕ್ರಮ ವಹಿಸಿ.ಜತೆಗೆ, ಜಾಹೀರಾತು ಫಲಕಗಳ ತೆರವಿಗೆ ಸಂಬಂಧಿಸಿದಂತೆ ಬೆಂಗಳೂರು ನಗರದ ಆಸುಪಾಸಿನಲ್ಲಿ ಇರುವ ಗ್ರಾಮ ಪಂಚಾಯ್ತಿಗಳಿಗೂ ಈ ವಿಷಯದಲ್ಲಿ ಸ್ಪಷ್ಟ ನಿರ್ದೇಶನ ನೀಡಬೇಕು’ ಎಂದು ರಾಜ್ಯಸರ್ಕಾರದ ಪರ ವಕೀಲರಿಗೆ ನಿರ್ದೇಶಿಸಿದೆ.
ನಗರದಲ್ಲಿ ಬಿಎಂಟಿಸಿ ಬಸ್, ಆಟೊ ರಿûಾ ಮತ್ತು ಸ್ಕೆç ವಾಕ್ಗಳ ಮೇಲೆ ಜಾಹೀರಾತುಗಳ ಫಲಕಗಳನ್ನು ಅಂಟಿಸಲಾಗಿದೆ ಎಂದು ಅರ್ಜಿದಾರರ ಪರ ವಕೀಲ ಜಿ.ಆರ್ ಮೋಹನ್ ನ್ಯಾಯಪೀಠಕ್ಕೆ ತಿಳಿಸಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ, ವಾಹನಗಳ ಮೇಲೆ ಜಾಹೀರಾತು ಫಲಕಗಳನ್ನು ಅಂಟಿಸುವುದಕ್ಕೆ ಲೈಸೆನ್ಸ್ ಇದೆಯೋ ಇಲ್ಲವೇ ಎಂಬುದನ್ನು ಪರಿಶೀಲಿಸಿ ಮಾಹಿತಿ ನೀಡಿ ಎಂದು ಸರ್ಕಾರದ ಪರ ವಕೀಲರಿಗೆ ಸೂಚಿಸಿದೆ. ವಿಚಾರಣೆಯನ್ನು ನವೆಂಬರ್ 3ಕ್ಕೆ ಮುಂದೂಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್ಯಾಪಿಡ್ ರೈಲು: ರೈಲ್ವೆ ಸಚಿವ
Bengaluru: ಅಪಾರ್ಟ್ಮೆಂಟ್ನಿಂದ ಜಾರಿ ಬಿದ್ದು ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು!
Road Mishap: ಲಾರಿ ಚಕ್ರ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ದುರ್ಮರಣ
Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ
Arrested: ದೇವರಾಜ ಅರಸು ಟ್ರಕ್ ಟರ್ಮಿನಲ್ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್.ಡಿ.ಕುಮಾರಸ್ವಾಮಿ
Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್ಆರ್!!
Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ
Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್ಯಾಪಿಡ್ ರೈಲು: ರೈಲ್ವೆ ಸಚಿವ
Padubidri: ರಸ್ತೆ ಅಪಘಾತ; ಗಾಯಾಳು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.