ಚಿತ್ರಕಲಾ ಪರಿಷತ್ ಆವರಣದಲ್ಲಿ ದೀಪಗಳ ಉತ್ಸವ
Team Udayavani, Oct 27, 2018, 11:15 AM IST
ಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ಹಬ್ಬಕ್ಕೆ ಬೇಕಾದ ಎಲ್ಲಾ ಸಾಮಗ್ರಿಗಳನ್ನು ಒಂದೇ ಸೂರಿನಡಿ ಕೊಂಡುಕೊಳ್ಳಲು ಅವಕಾಶ ಕಲ್ಪಿಸಿರುವ “ಬೆಂಗಳೂರು ಉತ್ಸವ-ದೀಪಗಳ ಪ್ರದರ್ಶನ ಮತ್ತು ಮಾರಾಟ ಮೇಳ’ ನಗರದ ಚಿತ್ರಕಲಾ ಪರಿಷತ್ನಲ್ಲಿ ಶುಕ್ರವಾರದಿಂದ ಆರಂಭಗೊಂಡಿದೆ.
ಲೋಹ, ಗಾಜು, ಕಲ್ಲು, ಮರ, ಮಣ್ಣಿನ ದೀಪಗಳು ಸೇರಿದಂತೆ ವೈವಿದ್ಯಮಯ ದೀಪಗಳು, ಕಾಶ್ಮೀರದಿಂದ ಕಾಂಚಿಪುರಂವರೆಗಿನ ರೇಷ್ಮೆ ಸೀರೆ ಉತ್ಪಾದಕರು, ರೇಷ್ಮೆ ಸೀರೆ ವಿನ್ಯಾಸಗಾರರು ಮತ್ತು ರೇಷ್ಮೆ ಸಹಕಾರ ಸಂಘಗಳು 100 ಕ್ಕೂ ಹೆಚ್ಚಿನ ಮಳಿಗೆಗಳಲ್ಲಿ ತಮ್ಮ ರಾಜ್ಯದ ಸಾಂಪ್ರದಾಯಿಕ ರೇಷ್ಮೆ ಸೀರೆ ಮತ್ತು ಕರಕುಶಲ ಉತ್ಪನ್ನಗಳನ್ನು ಮಾರಾಟಕ್ಕಿಟ್ಟಿದ್ದಾರೆ. ಬೆಳ್ಳಿ-ಹಿತ್ತಾಳೆಯ ಸೂಕ್ಷ್ಮ ಕೆತ್ತನೆಯ ಆಭರಣಗಳು, ಸೆಣಬಿನ ಚಪ್ಪಲಿ, ಮಧುಬನಿ ಕಲಾ ಪ್ರಕಾರಗಳು, ಅಲಂಕಾರಿಕ ವಸ್ತುಗಳು, ಪುರಾತನ ಕಲಾತ್ಮಕ ವಸ್ತುಗಳು, ಉಡುಪುಗಳು, ಗೃಹೋಪಯೋಗಿ ವಸ್ತುಗಳು ಉತ್ಸವದ ಆಕರ್ಷಣೆಯಾಗಿವೆ.
ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಕರ್ನಾಟಕ ಚಿತ್ರಕಲಾ ಪರಿಷತ್ ಅಧ್ಯಕ್ಷ ಡಾ.ಬಿ.ಎಲ್ ಶಂಕರ್, ಒಂದೇ ಸೂರಿನಡಿ ಹಬ್ಬದ ಎಲ್ಲಾ ಸಾಮಗ್ರಿ ದೊರೆಯುತ್ತಿರವುದು ವಿಶೇಷ. ವಿವಿಧ ರಾಜ್ಯಗಳ ಕಲಾವಿದರ ಕೈಯಲ್ಲಿ ಅರಳಿರುವ ದೀಪಗಳು ವಿಶೇಷವಾಗಿವೆ. ಮೇಳದಲ್ಲಿ ಕಲಾಕೃತಿಗಳು, ಕರಕುಶಲ ವಸ್ತುಗಳು ಕೈಗೆಟಕುವ ದರದಲ್ಲಿ ದೊರಕಲಿವೆ ಎಂದರು.
ಉತ್ಸವದ ಆಯೋಜಕರಾದ ಅಫ್ತಾಬ್ ಮಾತನಾಡಿ, ನೇಕಾರರು ಮತ್ತು ಕುಶಲ ಕರ್ಮಿಗಳು ಉತ್ಪಾದಿಸುವ ಉತ್ಪನ್ನಗಳನ್ನು ನೇರವಾಗಿ ಗ್ರಾಹಕರಿಗೆ ತಲುಪಿಸಿ ಉತ್ಪಾದಕರಿಗೆ ಲಾಭ ದೊರಕಿಸಿಕೊಡುವುದು ನಮ್ಮ ಉದ್ದೇಶವಾಗಿದೆ. ದೀಪಾವಳಿ ಹಬ್ಬಕ್ಕೆ ಅಗತ್ಯವಿರುವ ದೀಪಗಳ ಬೃಹತ ಕಲೆಕ್ಷನ ಇಲ್ಲಿ ಇರಲಿದೆ. ದೇಶದ ವಿವಿಧ ಭಾಗಗಳ ಕಲಾಕಾರರು ತಮ್ಮ ಪ್ರದೇಶದಲ್ಲಿ ತಯಾರಿಸುವ ದೀಪಗಳನ್ನು ಇಲ್ಲಿ ಪ್ರದರ್ಶಿಸಲಿ¨ªಾರೆ. ಅ.26 ರಿಂದ ನ.4ವರೆಗೆ ಬೆಳಗ್ಗೆ 11 ರಿಂದ ಸಂಜೆ 7.30 ರವರೆಗೆ ಉತ್ಸವ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್ಯಾಪಿಡ್ ರೈಲು: ರೈಲ್ವೆ ಸಚಿವ
Bengaluru: ಅಪಾರ್ಟ್ಮೆಂಟ್ನಿಂದ ಜಾರಿ ಬಿದ್ದು ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು!
Road Mishap: ಲಾರಿ ಚಕ್ರ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ದುರ್ಮರಣ
Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ
Arrested: ದೇವರಾಜ ಅರಸು ಟ್ರಕ್ ಟರ್ಮಿನಲ್ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Sulya: ಅವಾಚ್ಯ ಮಾತು: ಮಹಿಳೆಯಿಂದ ಪೊಲೀಸರಿಗೆ ದೂರು
Udupi; ಗೀತಾರ್ಥ ಚಿಂತನೆ 57: ದುರ್ಯೋಧನನಲ್ಲಿ ಮಾನಸಿಕ ಸ್ಥೈರ್ಯ ಕುಸಿತ
Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ
BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!
By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.