ಬಚ್ಚಿಟ್ಟುಕೊಂಡು ಬಲೆ ಬೀಸಿದರೆ ಜೋಕೆ!


Team Udayavani, Oct 27, 2018, 11:15 AM IST

bachchitukondu.jpg

ಬೆಂಗಳೂರು: “ರಸ್ತೆ ತಿರುವು, ಮರೆಯಲ್ಲಿ ನಿಂತು ಒಮ್ಮೆಲೆ ಮುಗಿಬಿದ್ದು ವಾಹನ ಸವಾರರನ್ನು ಹಿಡಿದು, ಗಾಡಿ ಕೀ ಕಸಿದುಕೊಂಡು ಅನಗತ್ಯ ತೊಂದರೆ ಕೊಡಬೇಡಿ’!

ಅಪರಾಧ ಕೃತ್ಯಗಳಲ್ಲಿ ತೊಡಗಿಸಿಕೊಂಡಿರುವ ಕಳ್ಳರನ್ನು ಹಿಡಿಯುವ ರೀತಿಯಲ್ಲಿ, ಯಾರಿಗೂ ಕಾಣದಂತೆ ರಸ್ತೆಯ ಮರೆಯಲ್ಲಿ ನಿಂತು ವಾಹನ ಸವಾರರನ್ನು ಹಿಡಿದು ತೊಂದರೆ ಕೊಡುವುದು ಬೇಡ ಎಂದು ನಗರ ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್‌ ಆಯಕ್ತ ಪಿ.ಹರಿಶೇಖರನ್‌ ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದ್ದಾರೆ.

ರಸ್ತೆ ತಿರುವು, ಸಾರ್ವಜನಿಕರಿಗೆ ಕಾಣದಂತೆ ಮರೆಯಲ್ಲಿ ನಿಂತು ಸಂಚಾರ ನಿಯಮ ಉಲ್ಲಂ ಸುವುದಕ್ಕೆ ಸಂಬಂಧಿಸಿದಂತೆ ಸಂಚಾರ ಪೊಲೀಸರು ಮಾಡುತ್ತಿದ್ದ ಈ ತೆರೆಮರೆಯ ಕಾರ್ಯಶೈಲಿ ಕಸರತ್ತಿಗೆ ಸಾರ್ವಜನಿಕ ವಲಯದಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಹಲವರು ಈ ಬಗ್ಗೆ ಟ್ರೋಲ್‌ ಮಾಡುತ್ತಿದ್ದರು. ಈ ಬೆನ್ನಲ್ಲೇ ಹೆಚ್ಚುವರಿ ಪೊಲೀಸ್‌ ಆಯಕ್ತ ಹರಿಶೇಖರನ್‌ ಇಂತಹದ್ದೊಂದು ಸೂಚನೆ ರವಾನಿಸಿದ್ದಾರೆ. 

ಕೆಲದಿನಗಳ ಹಿಂದಷ್ಟೇ ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್‌ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಪಿ.ಹರಿಶೇಖರನ್‌, ಸಂಚಾರ ವಿಭಾಗದ ಡಿಸಿಪಿ, ಎಸಿಪಿ, ಇನ್ಸ್‌ಪೆಕ್ಟರ್‌ಗಳ ಸಭೆ ನಡೆಸಿದ್ದಾರೆ. ಸಭೆಯಲ್ಲಿ  “ಜನಸ್ನೇಹಿ ಪೊಲೀಸ್‌’ ತತ್ವದ ಅಡಿಯಲ್ಲಿ ಜನರಿಗೆ ಮತ್ತಷ್ಟು ಪರಿಣಾಮಕಾರಿ ಕಾರ್ಯನಿರ್ವಹಣೆ ಸಾಧ್ಯತೆಗಳ ಬಗ್ಗೆ ಗಂಭೀರ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಈ ನಿಟ್ಟಿನಲ್ಲಿ ರಸ್ತೆ ತಿರುವಿನ ಮರೆಯಲ್ಲಿ ಇದ್ದುಕೊಂಡು ವಾಹನ ಸವಾರನ್ನು ನಿಲ್ಲಿಸಿ ಅನಗತ್ಯ ತೊಂದರೆ ಕೊಡಬಾರದು. ಜತೆಗೆ, ವಿಶೇಷ ಕಾರ್ಯಾಚರಣೆ ನಡೆಸುವಾಗ ಸಾರ್ವಜನಿಕರ ಜತೆ ವೃತ್ತಿಬದ್ಧತೆಗೆ ಅನುಗುಣವಾಗಿ ಗೌರವಯುತವಾಗಿ ನಡೆದುಕೊಳ್ಳಬೇಕು.

ಪಾರ್ಕಿಂಗ್‌ ಪಾಲಿಸಿಯಲ್ಲಿ ದಂಡ ವಸೂಲಾತಿಯೇ ಮುಖ್ಯವಲ್ಲ ಎಂಬುದನ್ನು ನೆನಪಿನಲ್ಲಿಟ್ಟುಕೊಂಡು ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿರುವ ಹರಿಶೇಖರನ್‌, ಈ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ತಮ್ಮ ಅಧೀನ ಸಿಬ್ಬಂದಿಗೆ ತಾಕೀತು ಮಾಡುವಂತೆ ಸೂಚಿಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಅನಗತ್ಯ ಬ್ಯಾರಿಕೇಡ್‌ ಹಾಕಬೇಡಿ: ಮದ್ಯ ಸೇವಿಸಿ ವಾಹನ ಚಾಲನೆ ಮಾಡುವವರ ವಿರುದ್ಧ ಹಾಗೂ ಸಂಚಾರ ನಿಯಮಗಳ ಉಲ್ಲಂ ಸುವವರ ವಿರುದ್ಧ ನಡೆಸಲಾಗುವ ವಿಶೇಷ ಕಾರ್ಯಾಚರಣೆ ವೇಳೆ ಅನಗತ್ಯ ಬ್ಯಾರಿಕೇಡ್‌ಗಳನ್ನು ಹಾಕಬೇಡಿ. ಇದರಿಂದ ಟ್ರಾಫಿಕ್‌ ಸಮಸ್ಯೆಯೂ ಉಂಟಾಗುವ ಸಾಧ್ಯತೆಯಿದೆ. ಜತೆಗೆ, ಈಗಾಗಲೇ ರಸ್ತೆ ಮಧ್ಯೆ ಅನಾವಶ್ಯಕ ಬ್ಯಾರಿಕೇಡ್‌ಗಳಿದ್ದರೆ ತೆರವುಗೊಳಿಸಿ ಎಂದು ಸಲಹೆ ನೀಡಿದ್ದಾರೆ.

ಆರೋಪ ಬಂದರೆ ಇನ್ಸ್‌ಪೆಕ್ಟರ್‌ ಮೇಲೆ ಕ್ರಮ: ಆಯಾ ಪೊಲೀಸ್‌ ಠಾಣೆಗಳ ಇನ್ಸ್‌ಪೆಕ್ಟ್ರ್‌ಗಳು ತಮ್ಮ ವ್ಯಾಪ್ತಿಯಲ್ಲಿ ಸಂಚಾರ ವ್ಯವಸ್ಥೆಗೆ ಸಂಬಂಧಿಸಿದಂತೆ, ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು. ಅವರ ಸಮಸ್ಯೆಗಳನ್ನು ಆಲಿಸಿ ಠಾಣಾ ಹಂತದಲ್ಲಿಯೇ ಪರಿಹರಿಸಬೇಕು. ತಮ್ಮ ಠಾಣೆಗೆ ಬೇಕಾದ ಮೂಲ ಸೌಕರ್ಯಗಳ ಬೇಡಿಕೆಗಳ ಬಗ್ಗೆ ಪ್ರಸ್ತಾವನೆ ಸಲ್ಲಿಸಬೇಕು. ಇದಲ್ಲದೆ, ತಮ್ಮ ಠಾಣೆಗೆ ಸಂಬಂಧಪಟ್ಟ ಎಲ್ಲ ಮಾಹಿತಿಯನ್ನು ಮೊಬೈಲ್‌ನಲ್ಲಿ ದಾಖಲಿಸಿಕೊಂಡು ಕೇಳಿದ ತಕ್ಷಣ ಒದಗಿಸಬೇಕು.

ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸುವುದಕ್ಕೆ ಸಂಬಂಧಿಸಿದಂತೆ ಪೊಲೀಸ್‌ ಠಾಣೆಗೆ ಅಗತ್ಯವಿರುವ ಪರಿಕರಗಳ ಸಂಬಂಧ ಪ್ರಸ್ತಾವನೆ ಸಲ್ಲಿಸಬೇಕು. ಠಾಣೆಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಅಧಿಕಾರಿಗಳ ವಿರುದ್ಧ ಅನಗತ್ಯ ಕಿರುಕುಳ ನೀಡುತ್ತಿರುವ ವಿಚಾರ ಗಮನಕ್ಕೆ ಬಂದರೆ ಠಾಣಾ ಇನ್ಸ್‌ಪೆಕ್ಟರ್‌ಗಳೇ ನೇರ ಹೊಣೆಯೆಂದು ಪರಿಗಣಿಸಿ ಅವರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಹೆಚ್ಚುವರಿ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

ಆಫ್ರಿಕನ್ನರ ಮೇಲೆ ಕಣ್ಣಿಡಿ: ಕಾನೂನು ಸುವ್ಯವಸ್ಥೆ ಪೊಲೀಸ್‌ ಠಾಣೆ ಸಿಬ್ಬಂದಿಯಂತೆ, ಸಂಚಾರ ಠಾಣೆಗಳ ವ್ಯಾಪ್ತಿಯಲ್ಲಿ ನೆಲೆಸಿರುವ ವಿದೇಶಿ ವಿದ್ಯಾರ್ಥಿಗಳು, ಪ್ರಮುಖವಾಗಿ ಆಫ್ರಿಕನ್‌ ವಿದ್ಯಾರ್ಥಿಗಳ ಮಾಹಿತಿ ಸಂಗ್ರಹಿಸಿಟ್ಟುಕೊಂಡಿರಬೇಕು. ವಿದೇಶಿ ವಿದ್ಯಾರ್ಥಿಗಳು ಸಂಚಾರ ನಿಯಮ ಉಲ್ಲಂ ಸಿದರೆ ಅಥವಾ ಅವರಿಗೆ ಅಪರಾಧ ಕೃತ್ಯಗಳ ಹಿನ್ನೆಲೆಯಿದ್ದರೆ ಅವರ ಬಗ್ಗೆ ಹೆಚ್ಚು ನಿಗಾ ವಹಿಸರಬೇಕು ಎಂದು ಸಭೆಯಲ್ಲಿ ಸೂಚನೆ ನೀಡಿದ್ದಾರೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.

ಸಂಚಾರ ಪೊಲೀಸರು ಮತ್ತಷ್ಟು “ಜನಸ್ನೇಹಿ’ಯಾಗಿ ಕಾರ್ಯನಿರ್ವಹಿಸಲು ಸೂಚನೆಗಳನ್ನು ನೀಡಲಾಗಿದೆ. ಜತೆಗೆ, ರಸ್ತೆ ತಿರುವು, ಮರೆಯಲ್ಲಿ ನಿಂತು ವಾಹನ ಸವಾರರನ್ನು ಹಿಡಿಯಬೇಡಿ ಎಂದೂ ಸೂಚನೆ ನೀಡಲಾಗಿದೆ.
-ಪಿ.ಹರಿಶೇಖರನ್‌, ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್‌ ಆಯುಕ್ತ

* ಮಂಜುನಾಥ್‌ ಲಘುಮೇನಹಳ್ಳಿ 

ಟಾಪ್ ನ್ಯೂಸ್

zameer ahmed khan

Vijayapura: ಸಿದ್ದರಾಮಯ್ಯ ಜತೆ ಕಾಂಗ್ರೆಸ್ ಹೈಕಮಾಂಡ್ ಇದೆ, ವಿಜಯೇಂದ್ರ ಯಾರು?: ಸಚಿವ ಜಮೀರ್

Coal Mine: ಕಲ್ಲಿದ್ದಲು ಗಣಿಯಲ್ಲಿ ಭೀಕರ ಸ್ಫೋಟ.. 7 ಮಂದಿ ಮೃತ್ಯು, ಹಲವು ಕಾರ್ಮಿಕರಿಗೆ ಗಾಯ

Coal Mine: ಕಲ್ಲಿದ್ದಲು ಗಣಿಯಲ್ಲಿ ಭೀಕರ ಸ್ಫೋಟ.. 7 ಮಂದಿ ಮೃತ್ಯು, ಹಲವು ಕಾರ್ಮಿಕರಿಗೆ ಗಾಯ

BY Vijayendra’s contribution is to talk lightly about those who worked for the party says KS Eshwarappa

Hubli: ವಿಜಯೇಂದ್ರ ಎಳಸು, ನನ್ನ ಬಗ್ಗೆ ಏನು ಮಾತನಾಡುತ್ತಾರೆ..: ಕೆ.ಎಸ್.ಈಶ್ವರಪ್ಪ ವಾಗ್ದಾಳಿ

v

Kinnigoli: ಕಾರಿಗೆ ಆಕಸ್ಮಿಕ ಬೆಂಕಿ; ಸ್ಥಳೀಯರ ಸಹಾಯದಿಂದ ಪಾರಾದ ತಾಯಿ ಮಕ್ಕಳು

BBT8: ವಿವಾದಾತ್ಮಕ ನಿರ್ಮಾಪಕ ಟು ಖ್ಯಾತ ನಟಿ.. ಇವರೇ ನೋಡಿ ಬಿಗ್‌ಬಾಸ್‌ ತಮಿಳು ಸ್ಪರ್ಧಿಗಳು

BBT8: ವಿವಾದಾತ್ಮಕ ನಿರ್ಮಾಪಕ ಟು ಖ್ಯಾತ ನಟಿ.. ಇವರೇ ನೋಡಿ ಬಿಗ್‌ಬಾಸ್‌ ತಮಿಳು ಸ್ಪರ್ಧಿಗಳು

Chitradurga: Muruga shree granted bail

Chitradurga: ಮುರುಘಾ ಶರಣರಿಗೆ ಜಾಮೀನು ಮಂಜೂರು

Vitla : ಭಾರೀ ಮಳೆಗೆ ಆಯತಪ್ಪಿ ಹೊಳೆಗೆ ಬಿದ್ದ ವ್ಯಕ್ತಿಯನ್ನು ರಕ್ಷಿಸಿದ ಯುವಕರು

Vitla : ಭಾರೀ ಮಳೆಗೆ ಆಯತಪ್ಪಿ ಹೊಳೆಗೆ ಬಿದ್ದ ವ್ಯಕ್ತಿಯನ್ನು ರಕ್ಷಿಸಿದ ಯುವಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

City Police Commissioner: ರಾತ್ರಿ ನಡೆಯುವ ಅಪರಾಧಗಳ ಮಾಹಿತಿ ನೀಡುವುದು ಕಡ್ಡಾಯ

City Police Commissioner: ರಾತ್ರಿ ನಡೆಯುವ ಅಪರಾಧಗಳ ಮಾಹಿತಿ ನೀಡುವುದು ಕಡ್ಡಾಯ

Bengaluru: ಅಂಚೆ ಕಚೇರಿಯಲ್ಲಿ ಮಾದಕ ವಸ್ತು ತುಂಬಿದ್ದ 626 ವಿದೇಶಿ ಪಾರ್ಸೆಲ್‌!

Bengaluru: ಅಂಚೆ ಕಚೇರಿಯಲ್ಲಿ ಮಾದಕ ವಸ್ತು ತುಂಬಿದ್ದ 626 ವಿದೇಶಿ ಪಾರ್ಸೆಲ್‌!

BBMP: ಇನ್ಮುಂದೆ ಸಿಗರೇಟ್‌ ತುಂಡುಗಳ ಪ್ರತ್ಯೇಕ ಸಂಗ್ರಹ

BBMP: ಇನ್ಮುಂದೆ ಸಿಗರೇಟ್‌ ತುಂಡುಗಳ ಪ್ರತ್ಯೇಕ ಸಂಗ್ರಹ

Fraud: ಪಾರ್ಟ್‌ಟೈಮ್‌ ಜಾಬ್‌ ಹೆಸರಿನಲ್ಲಿ ಯುವಕನಿಗೆ 2.58 ಲಕ್ಷ ರೂ. ವಂಚನೆ

Fraud: ಪಾರ್ಟ್‌ಟೈಮ್‌ ಜಾಬ್‌ ಹೆಸರಿನಲ್ಲಿ ಯುವಕನಿಗೆ 2.58 ಲಕ್ಷ ರೂ. ವಂಚನೆ

Railway-min-Ashiwini

Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್‍ಯಾಪಿಡ್‌ ರೈಲು: ರೈಲ್ವೆ ಸಚಿವ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

zameer ahmed khan

Vijayapura: ಸಿದ್ದರಾಮಯ್ಯ ಜತೆ ಕಾಂಗ್ರೆಸ್ ಹೈಕಮಾಂಡ್ ಇದೆ, ವಿಜಯೇಂದ್ರ ಯಾರು?: ಸಚಿವ ಜಮೀರ್

5(1)

Kuppepadav: ಅಶಕ್ತರ ನೆರವಿಗೆ ವೇಷ ಹಾಕಿದ ಯುವಕರು

Coal Mine: ಕಲ್ಲಿದ್ದಲು ಗಣಿಯಲ್ಲಿ ಭೀಕರ ಸ್ಫೋಟ.. 7 ಮಂದಿ ಮೃತ್ಯು, ಹಲವು ಕಾರ್ಮಿಕರಿಗೆ ಗಾಯ

Coal Mine: ಕಲ್ಲಿದ್ದಲು ಗಣಿಯಲ್ಲಿ ಭೀಕರ ಸ್ಫೋಟ.. 7 ಮಂದಿ ಮೃತ್ಯು, ಹಲವು ಕಾರ್ಮಿಕರಿಗೆ ಗಾಯ

4

Mangaluru: ಪೌರಾಣಿಕ ಕಥಾನಕ, ವೈಜ್ಞಾನಿಕ ಕೌತುಕ!

BY Vijayendra’s contribution is to talk lightly about those who worked for the party says KS Eshwarappa

Hubli: ವಿಜಯೇಂದ್ರ ಎಳಸು, ನನ್ನ ಬಗ್ಗೆ ಏನು ಮಾತನಾಡುತ್ತಾರೆ..: ಕೆ.ಎಸ್.ಈಶ್ವರಪ್ಪ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.