ಸಂಸ್ಕೃತಿ ಹೆಸರಲ್ಲಿ ಮೌಡ್ಯ ಪೋಷಣೆ


Team Udayavani, Oct 27, 2018, 11:34 AM IST

m1-samskruti.jpg

ಮೈಸೂರು: ಪ್ರಸ್ತುತ ಸಂದರ್ಭದಲ್ಲಿ ಸಂಸ್ಕೃತಿಯ ಹೆಸರಿನಲ್ಲಿ ಮೌಡ್ಯ ಹಾಗೂ ಜಾತಿ ವ್ಯವಸ್ಥೆಯನ್ನು ಪೋಷಿಸಲಾಗುತ್ತಿದ್ದು, ಈ ನಿಟ್ಟಿನಲ್ಲಿ ಸಂಸ್ಕೃತಿಯನ್ನು ಉದಾರವಾಗಿ ನೋಡುವುದನ್ನು ಬಿಡಬೇಕಿದೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಡಾ.ಮೊಗಳ್ಳಿ ಗಣೇಶ್‌ ಹೇಳಿದರು. 

ನಗರದ ಮೈಸೂರು ವಿವಿ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಜಾನಪದ ವಿಭಾಗದಿಂದ ಮಾನಸಗಂಗೋತ್ರಿಯ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಜಾನಪದ ಮತ್ತು ಜಾಗತೀಕರಣ: ಸಾಂಸ್ಕೃತಿಕ ಪಲ್ಲಟಗಳು’ ವಿಷಯ  ಕುರಿತು ಅವರು ಉಪನ್ಯಾಸ ನೀಡಿದರು.

ಸಂಸ್ಕೃತಿಗಳೇ ಮೂಗುದಾರ: ನಾಗರಿಕತೆ ಎಂಬುದು ಚಲನಶೀಲವಾಗಿದೆ. ಹೊಸದನ್ನು ಕಂಡುಕೊಂಡು ಜೀವನ ನಡೆಸುವಂತದ್ದಾಗಿದೆ. ಅಖಂಡತೆ ಕಂಡುಕೊಳ್ಳುವ ನಿಟ್ಟಿನಲ್ಲಿ ಬೆಳೆದು ಬಂದಿರುವ ನಾಗರಿಕತೆಯನ್ನು ನಾವು ಆಧುನಿಕತೆ ಎಂದೂ ಕರೆಯುತ್ತೇವೆ. ಈ ಹಿನ್ನೆಲೆಯಲ್ಲಿ ಆಧುನಿಕತೆ, ನಾಗರಿಕತೆ, ಚಲನಶೀಲತೆಗಳು ಒಂದೇ ಪರಿಣಾಮ ಬೀರಲಾರದು.

ಆದರೆ ಇತ್ತೀಚಿನ ದಿನಗಳಲ್ಲಿ ನಮ್ಮ ಸಂಸ್ಕೃತಿಗಳೇ ನಮ್ಮ ಮೂಗುದಾರವಾಗಿದೆ. ಸಂಸ್ಕೃತಿಯ ಹೆಸರಿನಲ್ಲಿ ಅನೇಕ ಮೂಗುದಾರಗಳನ್ನು ಆಯಾ ಜಾತಿಗಳಿಗೆ ಹಾಕಿ, ಧಾರ್ಮಿಕತೆ ಹೆಸರಲ್ಲಿ ಬಂಧಿಸಲಾಗುತ್ತಿದೆ. ಇನ್ನಾದರೂ ಸಂಸ್ಕೃತಿಯನ್ನು ಉದಾರವಾಗಿ ನೋಡುವುದನ್ನು ಬಿಡಬೇಕಿದೆ ಎಂದರು.

ವಿಮಶಾತ್ಮಕವಾಗಿ ನೋಡಿ: ಅಲ್ಲದೇ ವಿವಿಧ ಕಾರಣಗಳಿಂದಾಗಿ ನಾವು ನಮ್ಮದಲ್ಲದ ಸಂಸ್ಕೃತಿಯನ್ನು ಧರ್ಮದ ಹೆಸರಲ್ಲಿ ಒಪ್ಪಿಕೊಳ್ಳುವಂತಾಗಿದೆ. ಜಾತಿ ವ್ಯವಸ್ಥೆಯೊಂದಿಗೆ ಬಂದಿರುವ ಈ ಸಂಸ್ಕೃತಿಗಳನ್ನು ನಾವೆಷ್ಟು ಇಟ್ಟುಕೊಳ್ಳಬೇಕಿತ್ತು? ಬೆತ್ತಲೆ ಸೇವೆ, ಎಲ್ಲವ್ವನ ಪದಗಳು ಇದರಲ್ಲಿ ಯಾವುದನ್ನು ಸಮರ್ಥಿಸುತ್ತಿವೆ?

ಮಾರಮ್ಮನ ಹಬ್ಬದ ಕೋಣದ ಬಲಿ ಯಾವ ಮೌಲ್ಯವನ್ನು ಪ್ರತಿಪಾದಿಸುತ್ತದೆ? ಇವು ನಮ್ಮ ಸಂಸ್ಕೃತಿಯಲ್ಲ. ಹೀಗಾಗಿ ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದ ಅವರು, ಭಾರತೀಯ ಸಂಸ್ಕೃತಿ ಯಾವುದೆಂದು ಬಿಡಿಸಿ ನೋಡಿದಾಗ ಇವೆಲ್ಲವೂ ಸರಿಯಾಗಿ ಕಾಣಲಿದ್ದು, ಸಂಸ್ಕೃತಿಗಳನ್ನು ನಾವು ಬಹಳ ವಿಮಶಾìತ್ಮಕವಾಗಿ ನೋಡಬೇಕಿದೆ ಎಂದು ಹೇಳಿದರು. 

ಮಾನವೀಯತೆ: ದೇಶಕ್ಕೆ ಸಂವಿಧಾನವನ್ನು ನೀಡಿದ ಡಾ.ಬಿ.ಆರ್‌.ಅಂಬೇಡ್ಕರ್‌ ಅವರಂತಹ ಮೇರು ವ್ಯಕ್ತಿಗೆ ದಲಿತ ಸಂಸ್ಕೃತಿ ಎಂದರೆ ಗೊತ್ತಿರಲಿಲ್ಲವೆಂದಲ್ಲ. ಆದರೆ ಅವರು ಯಾಕೆ ಆ ಕುರಿತು ಹೆಚ್ಚು ಮಾತನಾಡದೆ, ಈ ಸಂಸ್ಕೃತಿ ನಮ್ಮವಲ್ಲ ಎಲ್ಲರೂ ಇದರಿಂದ ಹೊರಗೆ ಬನ್ನಿ ಎನ್ನುತ್ತಾರೆ. ಆದ್ದರಿಂದ ನಾವು ನಮ್ಮ ಸಾಂಸ್ಕೃತಿಕ ಕನ್ನಡಿಗಳನ್ನು ಛಿದ್ರಗೊಳಿಸಬೇಕಾದ ಅಗತ್ಯವಿದ್ದು, ಬದಲಿಗೆ ಅಖಂಡ ಮಾನವನನ್ನು ತೋರುವ ಕನ್ನಡಿ ಬೇಕಿದೆ.

ಈ ಎಲ್ಲಾ ಕಾರಣದಿಂದ ಬಾಬಾ ಸಾಹೇಬರು ಅಖಂಡ ಮಾನವೀಯತೆ ಪ್ರತಿಬಿಂಬಿಸುವ ಸಂವಿಧಾನ ಕೊಟ್ಟಿದ್ದರೂ, ಅದನ್ನೇ ಒಡೆಯುವ ನಿಟ್ಟಿನಲ್ಲಿ ಹುನ್ನಾರ ನಡೆಸಲಾಗುತ್ತಿದೆ ಎಂದರು. ಕಾರ್ಯಕ್ರಮದಲ್ಲಿ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕ ಪ್ರೊ.ಎನ್‌.ಎಂ.ತಳವಾರ, ಜಾನಪದ ಅಧ್ಯಯನ ಮಂಡಳಿ ಅಧ್ಯಕ್ಷ ಡಾ.ಎಂ.ನಂಜಯ್ಯ ಹೊಂಗನೂರು, ಕೈಲಾಶ್‌ ಮೂರ್ತಿ ಹಾಜರಿದ್ದರು. 

ಟಾಪ್ ನ್ಯೂಸ್

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ ಮಹೇಶ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

22-hunsur-1

Hunsur: ಕಾರು ಪಲ್ಟಿಯಾಗಿ ಎಳನೀರು ವ್ಯಾಪಾರಿ ಸಾವು

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.