ಮಂಗಳೂರು ಕೆನರಾ ಕಾಲೇಜು ಮಾಜಿ ಪ್ರಾಂಶುಪಾಲ ಶಿವಾನಂದ್ ಭಟ್ ವಿಧಿವಶ
Team Udayavani, Oct 27, 2018, 6:08 PM IST
ಮಂಗಳೂರು: ಕೆನರಾ ಪ್ರಥಮ ದರ್ಜೆ ಕಾಲೇಜು ಮತ್ತು ಕೆನರಾ ಸಂಜೆ ಕಾಲೇಜಿನ ಮಾಜಿ ಪ್ರಾಂಶುಪಾಲರಾಗಿದ್ದ ಪ್ರೊ. ಶಿವಾನಂದ ಭಟ್(67ವರ್ಷ) ಅವರು ಶುಕ್ರವಾರ ತಡರಾತ್ರಿ ಕದ್ರಿ ಮಲ್ಲಿಕಟ್ಟದ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿರುವುದಾಗಿ ಕುಟುಂಬದ ಮೂಲಗಳು ತಿಳಿಸಿವೆ.
ಮೃತರು ಪತ್ನಿ ಶ್ಯಾಮಲಾ, ಇಬ್ಬರು ಪುತ್ರರು, ಪುತ್ರಿ ಶಿಲ್ಪಾ ಸೇರಿದಂತೆ ಅಪಾರ ಶಿಷ್ಯ ವರ್ಗವನ್ನು ಅಗಲಿದ್ದಾರೆ. 1951ರ ಫೆಬ್ರುವರಿ 26ರಂದು ಶಿವಾನಂದ್ ಭಟ್ ಅವರು ಜನಿಸಿದ್ದರು. ಜೆಪ್ಪುವಿನಲ್ಲಿ ಪ್ರಾಥಮಿಕ ಶಿಕ್ಷಣ ಪಡೆದಿದ್ದರು. ಬಳಿಕದ ವಿದ್ಯಾಭ್ಯಾಸ ಕೆನರಾ ಕಾಲೇಜಿನಲ್ಲಿ ಪೂರೈಸಿದ್ದು, 1973ರಲ್ಲಿ ಕೆನರಾ ಕಾಲೇಜಿನಲ್ಲಿಯೇ ಕಾಮರ್ಸ್ ಉಪನ್ಯಾಸಕರಾಗಿ ವೃತ್ತಿ ಜೀವನ ಆರಂಭಿಸಿದ್ದರು. 2007ರಿಂದ 2011ರ ಫೆಬ್ರುವರಿ 28ರವರೆಗೆ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದರು. ನಿವೃತ್ತಿಯ ಬಳಿಕ ಕೆನರಾ ಸಂಜೆ ಕಾಲೇಜಿನ ಸ್ಥಾಪಕ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿದ್ದರು. ಆದರೆ ಅನಾರೋಗ್ಯದ ಕಾರಣದಿಂದ ಕೇವಲ ಒಂದು ವರ್ಷ ಮಾತ್ರ ಪ್ರಾಂಶುಪಾಲರಾಗಿದ್ದು, ಬಳಿಕ ಆ ಸ್ಥಾನದಿಂದ ಕೆಳಗಿಳಿದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.