ದುನಿಯಾ ವಿಜಯ್ ಕುಟುಂಬದ ವಿರುದ್ಧ ಸ್ವಯಂಪ್ರೇರಿತ ಪ್ರಕರಣ
Team Udayavani, Oct 28, 2018, 11:35 AM IST
ಬೆಂಗಳೂರು: ಪದೇ ಪದೇ ಕೌಟುಂಬಿಕ ಕಲಹ ವಿಚಾರವಾಗಿ ಠಾಣೆ ಮೇಟ್ಟಿಲೇರುತ್ತಿರುವ ನಟ ದುನಿಯಾ ವಿಜಯ್ ಕುಟುಂಬದ ವಿರುದ್ಧ ಗಿರಿನಗರ ಠಾಣೆ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ನಟ ದುನಿಯಾ ವಿಜಯ್, ಅವರ ಮೊದಲ ಪತ್ನಿ ನಾಗರತ್ನ, ಎರಡನೇ ಪತ್ನಿ ಕೀರ್ತಿಗೌಡ, ನಾಗರತ್ನ ಸಹೋದರ, ವಿಜಯ್ ಪೋಷಕರು ಹಾಗೂ ಚಾಲಕ ಸೇರಿ 7 ಮಂದಿ ವಿರುದ್ಧ ಸಿಆರ್ಪಿಸಿ 107ರಡಿ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.
ಮೊದಲ ಪತ್ನಿ ನಾಗರತ್ನ ಹಾಗೂ ಕೀರ್ತಿಗೌಡ ಪರಸ್ಪರ ಜಗಳ ಮಾಡಿಕೊಂಡು ಗಿರಿನಗರ ಠಾಣೆಯಲ್ಲಿ ದೂರು, ಪ್ರತಿ ದೂರು ದಾಖಲಿಸಿದ್ದರು. ಜತೆಗೆ, ಹೊಸಕೆರೆಹಳ್ಳಿಯ ಮನೆಗೆ ಹೋಗಿದ್ದಾಗ ತಂದೆ ವಿಜಯ್ ತಮ್ಮ ಮೇಲೆ ಹಲ್ಲೆ ನಡೆಸಿದರು ಎಂದು ಆರೋಪಿಸಿ ಪುತ್ರಿ ಮೋನಿಕಾ ಕೂಡ ತಂದೆ ವಿಜಯ್ ವಿರುದ್ಧ ಸೆ.24 ರಂದು ಗಿರಿನಗರ ಠಾಣೆಯಲ್ಲಿ ಮತ್ತೂಂದು ದೂರು ದಾಖಲಿಸಿದ್ದರು.
ಅಲ್ಲದೆ ಈ ಹಿಂದೆ ಬಾಮೈದುನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಸಿ ಇದೇ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪದೇ ಪದೇ ಕೌಟುಂಬಿಕ ಕಲಹದ ಮೂಲಕ ಠಾಣೆ ಮೇಟ್ಟಿಲೇರುತ್ತಿರುವುದು ಪೊಲೀಸರಿಗೆ ದೊಡ್ಡ ತಲೆನೋವಾಗಿತ್ತು. ನಿತ್ಯ ವಿಜಯ್ ಕುಟುಂಬ ಸಮಸ್ಯೆ ಬಗೆಹರಿಸುವುದೇ ಕೆಲಸವಾಗಿತ್ತು. ಈ ಮೂಲಕ ಸಮಾಜದಲ್ಲಿ ಶಾಂತಿಗೆ ಭಂಗ ತರುತ್ತಿದ್ದರು. ಈ ಹಿನ್ನೆಲೆಯಲ್ಲಿ ಎಚ್ಚರಿಕೆ ನೀಡುವ ಉದ್ದೇಶದಿಂದ ಇಡೀ ಕುಟುಂಬದ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲಾಗಿದೆ.
ಅದರಂತೆ ದೂರು ದಾಖಲಾಗಿರುವ ಕುಟುಂಬದ 7ಮಂದಿಯನ್ನು ಹೆಚ್ಚುವರಿ ಪೊಲೀಸ್ ಆಯುಕ್ತರ ಮುಂದೆ ಹಾಜರು ಪಡಿಸಿ, ಮುಚ್ಚಳಿಕೆ ಪತ್ರ ಕೂಡ ಬರೆಸಿಕೊಳ್ಳಲಾಗುವುದು. ಒಂದು ವೇಳೆ ಇದನ್ನು ಮೀರಿ ಮತ್ತೂಮ್ಮೆ ಗಲಾಟೆ ಮಾಡುವುದು, ಶಾಂತಿ ಸೌಹಾರ್ದತೆಗೆ ಧಕ್ಕೆ ತರುವುದು ಮಾಡಿದರೆ ಭಾರತೀಯ ದಂಡ ಸಂಹಿತೆ(ಐಪಿಸಿ) ಅಡಿಯಲ್ಲಿ ಮತ್ತೂಂದು ಎಫ್ಐಆರ್ ದಾಖಲಿಸಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suspension: ಸುಳ್ಳು ಮಾಹಿತಿ ಮೇರೆಗೆ ಇಬ್ಬರು ಯುವಕರ ಬಂಧನ; ನಾಲ್ವರು ಪೊಲೀಸರು ಅಮಾನತು
Bengaluru: ನಗರದಲ್ಲಿ ಏಕಕಾಲಕ್ಕೆ 200 ಗಣೇಶ ಮೂರ್ತಿಗಳ ಮೆರವಣಿಗೆ
Parappana Agrahara Prison: ಪರಪ್ಪನ ಅಗ್ರಹಾರ ಜೈಲಲ್ಲಿ ಮತ್ತೆ ಮೊಬೈಲ್ಗಳು ಪತ್ತೆ
Bengaluru: ಚಿನ್ನಾಭರಣ ಮಳಿಗೆಯಲ್ಲಿ ತಡರಾತ್ರಿ ದುಷ್ಕರ್ಮಿಗಳಿಂದ ಕಳವಿಗೆ ಯತ್ನ
BBMP: ರಜೆ ದಿನದಲ್ಲೂ ಗುಂಡಿ ಮುಚ್ಚಿದ ಪಾಲಿಕೆ ನೌಕರರು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.