ಪ್ರಖರ ದೀಪ ತೆರವಿಗೆ ಸಾರಿಗೆ ಇಲಾಖೆ ಕ್ರಮ


Team Udayavani, Oct 29, 2018, 10:00 AM IST

acar.jpg

ಕುಂದಾಪುರ: ಹೆದ್ದಾರಿಗಳಲ್ಲಿ ರಾತ್ರಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ಎಲ್ಲ ವಾಹನಗಳಲ್ಲಿ ಪ್ರಖರ ಬೆಳಕು ಸೂಸುವ ಹೆಲೋಜಿನ್‌ ದೀಪಗಳ ತೆರವಿಗೆ ಉಡುಪಿಯ ಪ್ರಾದೇಶಿಕ ಸಾರಿಗೆ ಇಲಾಖೆ ಮುಂದಾಗಿದೆ. ಎದುರು ವಾಹನಗಳಿಗೆ ತೊಡಕಾಗುವ ಪ್ರಖರ ಹೆಲೋಜಿನ್‌ ದೀಪಗಳನ್ನು ಅಳವಡಿಸಬಾರದು ಎನ್ನುವ ಕಾನೂನು ಇದ್ದರೂ ಯಾರೂ ಪಾಲಿಸುತ್ತಿಲ್ಲ. ತಡವಾಗಿಯಾದರೂ ಇಲಾಖೆ ಎಚ್ಚೆತ್ತುಕೊಂಡಿದೆ. 

ಸ್ವಇಚ್ಛೆಯಿಂದ ತೆರವು
ಬೇರೆ ವಾಹನಗಳಿಗೆ ತೊಂದರೆ ಮಾಡುವಂತಹ ದೀಪಗಳನ್ನು ವಾಹನ ಮಾಲಕರು ಸ್ವಇಚ್ಛೆಯಿಂದ ತೆರವು ಮಾಡಿ ಎನ್ನುವುದಾಗಿ ಸಾರಿಗೆ ಇಲಾಖೆ ಮನವಿ ಮಾಡಿದೆ. 

ವಾರದ ಗಡುವು
ಅಪಾಯಕಾರಿ ಲೈಟ್‌ ತೆರವಿಗೆ ವಾಹನ ಸವಾರರಿಗೆ ಒಂದು ವಾರದ ಗಡುವು ನೀಡಲಾಗಿದೆ. ಆ ಬಳಿಕವೂ ತೆರವು ಮಾಡದಿದ್ದಲ್ಲಿ, ನಿರಂತರ ಕಾರ್ಯಾಚರಣೆ ನಡೆಸಿ, ಕಾನೂನಿನಂತೆ ತಲಾ 1 ಸಾವಿರ ರೂ. ದಂಡ ವಿಧಿಸಲಾಗುವುದು. ಇದನ್ನು ಜಿಲ್ಲೆಯಾದ್ಯಂತ ಕಟ್ಟುನಿಟ್ಟಾಗಿ ಪೊಲೀಸ್‌ ಇಲಾಖೆಯ ಸಹಕಾರದೊಂದಿಗೆ ಜಾರಿಗೆ ತರಲು ಚಿಂತಿಸಲಾಗಿದೆ ಎಂದು ಉಡುಪಿಯ ಪ್ರಾದೇಶಿಕ ಸಾರಿಗೆ ಇಲಾಖೆಯ ಆಯುಕ್ತ ರಮೇಶ್‌ ವರ್ಣೇಕರ್‌ “ಉದಯವಾಣಿ’ಗೆ ತಿಳಿಸಿದ್ದಾರೆ. 

2 ವರ್ಷದಿಂದ ಇಲ್ಲ ಸಭೆ
ರಸ್ತೆ ಅಪಘಾತ ನಿಯಂತ್ರಿಸುವಲ್ಲಿ ರಸ್ತೆ ಸುರಕ್ಷತಾ ಸಮಿತಿಯ ಪಾತ್ರ ಮಹತ್ವದ್ದಾಗಿದೆ. ಆದರೆ ದ.ಕ. ಜಿಲ್ಲೆಯಲ್ಲಿ ಕಳೆದ 2 ವರ್ಷಗಳಿಂದ ಡಿಸಿ, ಎಸ್ಪಿ, ಆರ್‌ಟಿಒ ಅಧಿಕಾರಿಗಳನ್ನು ಒಳಗೊಂಡ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯೇ ನಡೆದಿಲ್ಲ. ಉಡುಪಿ ಜಿಲ್ಲೆಯಲ್ಲಿ ಕಳೆದ ತಿಂಗಳು ಸಮಿತಿ ಸಭೆ ನಡೆದಿತ್ತು.

 ಸಮಿತಿ ಕ್ರಿಯಾಶೀಲವಾಗಬೇಕು
ಇತ್ತೀಚೆಗಿನ ಮಾಡೆಲ್‌ಗ‌ಳ ಕಾರುಗಳಲ್ಲಿ ಪ್ರಖರ ಬೆಳಕು ಸೂಸುವ ದೀಪ ಇರುವುದು ಸಾಬೀತಾಗಿದೆ. ರಾತ್ರಿ ವೇಳೆ ಸಂಭವಿಸುವ ಹೆಚ್ಚಿನ ರಸ್ತೆ ಅಪಘಾತ ಪ್ರಕರಣಗಳಿಗೆ ಹೆಲೋಜಿನ್‌ ಲೈಟ್‌ಗಳೇ ಕಾರಣ. ಇವುಗಳ ತೆರವು ಸಾರಿಗೆ ಇಲಾಖೆ ಯಿಂದ ಮಾತ್ರ ಅಸಾಧ್ಯ. ಮೋಟಾರು ಕಾಯ್ದೆ ಉಲ್ಲಂಘನೆ ಸಂಬಂಧ ಡಿಸಿ, ಎಸ್ಪಿ , ಆರ್‌ಟಿಒ ಆಯುಕ್ತರನ್ನೊಳಗೊಂಡ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿಗೆ ಹೆಚ್ಚಿನ ಅಧಿಕಾರವಿದೆ. ಇದು ಕ್ರಿಯಾಶೀಲವಾದರೆ ಅಪಘಾತ ಕಡಿಮೆಯಾಗಬಹುದು.

ಗಂಭೀರವಾಗಿ ಪರಿಗಣಿಸಿದ್ದೇವೆ
ಹೆದ್ದಾರಿಯಲ್ಲಿ ಇತ್ತೀಚೆಗೆ ಸಂಭವಿಸಿರುವ ಕೆಲವು ಅಪಘಾತ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಉಡುಪಿ ಜಿಲ್ಲೆಯಾದ್ಯಂತ ವಾಹನಗಳ ಹೆಲೋಜಿನ್‌ ದೀಪ ತೆರವು ಮಾಡಲು ಮುಂದಾಗಿದ್ದೇವೆ. ವಾಹನ ಸವಾರರಿಗೆ ಒಂದು ವಾರ ಸಮಯ ನೀಡಲಾಗಿದೆ, ತಪ್ಪಿದಲ್ಲಿ ದಂಡ ವಿಧಿಸಲಾಗುವುದು. ಮುಂದಿನ ದಿನಗಳಲ್ಲಿ ಎಲ್ಲ ಕಡೆಗಳಲ್ಲಿ ರಾತ್ರಿ ವೇಳೆ ಕಾರ್ಯಾಚರಣೆ ನಡೆಸಲಾಗುವುದು. 
 ರಮೇಶ್‌ ವರ್ಣೇಕರ್‌, ಪ್ರಾದೇಶಿಕ ಸಾರಿಗೆ ಆಯುಕ್ತರು, ಉಡುಪಿ

ಸಿಬಂದಿ ಕೊರತೆ
ಅಪಘಾತ ತಡೆಯಲು ಹೆಲೋಜಿನ್‌ ಲೈಟ್‌ಗಳಿಗೆ ಕಡಿವಾಣ ಹಾಕಬೇಕಾದುದು ತೀರಾ ಅಗತ್ಯ. ಆದರೆ ಇದರ ಕಾರ್ಯಾಚರಣೆಗೆ ಬಂಟ್ವಾಳ ಹಾಗೂ ಪುತ್ತೂರು ವ್ಯಾಪ್ತಿಯಲ್ಲಿ  ಸಾರಿಗೆ ಇಲಾಖೆಯಲ್ಲಿ ಸಿಬಂದಿ ಕೊರತೆ ಅಡ್ಡಿ ಯಾಗಿದೆ. ಪೊಲೀಸ್‌ ಇಲಾಖೆಯೊಂದಿಗೆ ಜಂಟಿಯಾಗಿ ಮುಂದಿನ ದಿನಗಳಲ್ಲಿ ಈ ಸಂಬಂಧ ಕಾರ್ಯಾಚರಣೆ ನಡೆಸಲು ಚಿಂತನೆ ನಡೆಸಲಾಗುವುದು. 
 ಜಿ.ಎಸ್‌. ಹೆಗ್ಡೆ , ಸಾರಿಗೆ ಆಯುಕ್ತರು (ಪ್ರಭಾರ) ಪುತ್ತೂರು ಹಾಗೂ ಸಹಾಯಕ ಆಯುಕ್ತರು, ಬಂಟ್ವಾಳ

ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ganesha Chaturthi: ಆರೂರು: 35ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ… ವಿವಿಧ ಕಾರ್ಯಕ್ರಮ

ಆರೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ: ಸೆ.9ರಂದು ಪ್ರಥಮ ವರ್ಷದ ಲೋಬಾನ ಸೇವೆ ಹುಲಿವೇಷ ಕುಣಿತ

16-kumbashi

Ganesh Chaturthi; ಆನೆಗುಡ್ಡೆ: ಸಂಭ್ರಮದ ಶ್ರೀ ವಿನಾಯಕ ಚತುರ್ಥಿ; ಹರಿದು ಬಂದ ಭಕ್ತ ಸಮೂಹ

ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Kaup ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Udupi ಗೀತಾರ್ಥ ಚಿಂತನೆ-29 ಭಗವದವತಾರದ ಉದ್ದೇಶವೇನು?

Udupi ಗೀತಾರ್ಥ ಚಿಂತನೆ-29; ಭಗವದವತಾರದ ಉದ್ದೇಶವೇನು?

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.