ಪಾಶ್ಚಾತ್ಯ ಸಂಸ್ಕೃತಿ ಗುಂಗು ಇನ್ನೂ ಇದೆ


Team Udayavani, Oct 29, 2018, 12:06 PM IST

pashchtya.jpg

ಬೆಂಗಳೂರು: ದೇಶದ ಬಹಳಷ್ಟು ಲೇಖಕರು ಇನ್ನೂ ಪಾಶ್ಚಿಮಾತ್ಯ ಸಂಸ್ಕೃತಿಯ ಗುಂಗಿನಿಂದ ಹೊರ ಬಂದಿಲ್ಲ. ಆದರೆ ಇಂತಹವರ ಮಧ್ಯೆ ಭಾರತೀಯ ನೆಲ ಸಂವೇದನೆ ಪ್ರಜ್ಞೆಯನ್ನು ಕಾಪಾಡಿಕೊಂಡು ಪಾಶ್ಚಿಮಾತ್ಯಕ್ಕೆ ಪರ್ಯಾಯವಾಗಿ ಸಾಹಿತ್ಯ ಕೃಷಿ ಮಾಡುತ್ತಿರುವವರು ಡಾ.ಚಂದ್ರಶೇಖರ ಕಂಬಾರ ಎಂದು ಸಾಹಿತಿ ಡಾ.ನರಹಳ್ಳಿ ಬಾಲಸುಬ್ರಹ್ಮಣ್ಯ ಬಣ್ಣಿಸಿದರು.

ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ನಗರದ ಬಿ.ಪಿ.ವಾಡಿಯಾ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಚಂದ್ರಶೇಖರ ಕಂಬಾರರ “ಮಹಮೂದ್‌ ಗಾವಾನ್‌’ ನಾಟಕ ಕೃತಿ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಕಂಬಾರರ ಬರಹಗಳು ಜಾಗತಿಕ ಸಾಹಿತ್ಯಕ್ಕೆ ಪರಿಚಯವಾಗಬೇಕಿದ್ದು, ಈ ನಿಟ್ಟಿನಲ್ಲಿ ಪ್ರಯತ್ನ ನಡೆದರೆ ಜಾಗತಿಕ ಸಾಹಿತ್ಯ ಲೋಕದಲ್ಲಿ ಹೊಸ ಅಪ್ಪಟ ದನಿ ಮೊಳಗಿದಂತಾಗುತ್ತದೆ. ಅಷ್ಟರ ಮಟ್ಟಿಗೆ ಕಂಬಾರರ ಸಾಹಿತ್ಯಕ್ಕೆ ಮಹತ್ವ ಇದೆ ಎಂದು ಹೇಳಿದರು.

ಭೋಗ ಮತ್ತು ಅಧಿಕಾರ‌ ಹಲವು ಕಾಲಘಟ್ಟವನ್ನು ಕಾಡಿದ್ದು, ಸಾಹಿತ್ಯದಲ್ಲಿ ಇವೆರಡರ ಹುಡುಕಾಟದಲ್ಲಿ ಕಂಬಾರರು ಇದ್ದಾರೆ. ಲೈಂಗಿಕತೆ ಅವರ ಕಥೆಯ ಸಂಯೋಜನೆಯ ಒಂದು ಭಾಗ ಅಷ್ಟೇ. ಕಂಬಾರರ ಕಾದಂಬರಿ, ನಾಟಕ ಸೇರಿದಂತೆ ಹಲವು ಕೃತಿಗಳಲ್ಲಿ ಇವೆರಡೂ ಪ್ರಧಾನ ವಸ್ತುವಾಗಿವೆ. ಕನ್ನಡದ ವಿಮಶಾì ಲೋಕ ಕಂಬಾರರ ಭೋಗದ ಶಕ್ತಿ ಮತ್ತು ಪರಿಣಾಮಗಳನ್ನು ಹೇಗೆ ಗುರುತಿಸಿದೆ ಎಂಬುದರ ಬಗ್ಗೆ ಸಾಕಷ್ಟು ಚರ್ಚೆ ನಡೆಸಿದೆ. ಈ ನಾಟಕದ ಮುನ್ನುಡಿಯಲ್ಲಿ ರಾಜೀವ್‌ ತಾರನಾಥ್‌ ಕೂಡ ಆ ಬಗ್ಗೆ ವಿವರವಾಗಿ ಪ್ರಸ್ತಾಪ ಮಾಡುತ್ತಾರೆ ಎಂದು ವಿವರಿಸಿದರು.

ರಾಜಕಾರಣ ಮತ್ತು ಧರ್ಮಗಳು ಇಂದು ಭ್ರಷ್ಟಗೊಂಡಿದ್ದು, ದೇಶದ ರಾಜಕೀಯ ವ್ಯವಸ್ಥೆಯು ಸರ್ವಾಧಿಕಾರಿ ವ್ಯವಸ್ಥೆ ಕಡೆಗೆ ವಾಲುತ್ತಿದೆ. ನಾಟಕದ ಕಥಾ ನಾಯಕ ಮಹಮೂದ್‌ ಗಾವಾನ್‌ ಆಡಳಿತ ಚತುರನಾಗಿರುವುದರ ಜತೆಗೆ ಸಾಮಾಜಿಕ ಕಾಳಜಿಯುಳ್ಳ, ಸಂಸ್ಕೃತಿ ಮೇಲೆ ಅಪಾರ ಗೌರವವಿದ್ದ ಹಾಗೂ ಧಾರ್ಮಿಕ ಶ್ರದ್ಧೆಯುಳ್ಳವನಾಗಿದ್ದ. ಹೀಗಾಗಿ, ಇಂದಿನ ರಾಜಕಾರಣಿಗಳಿಗೆ ಮಹಮೂದ್‌ ಗಾವಾನ್‌ ಅಂತಹವರು ಮಾದರಿಯಾಗಬೇಕು ಎಂದರು.

ವಿಮರ್ಶಕ ಬಸವರಾಜ ಕಲ್ಗುಡಿ ಮಾತನಾಡಿ, ಪಾಶ್ಚಿಮಾತ್ಯ ಸಂಸ್ಕೃತಿಯ ಸಾಹಿತ್ಯದ ನಡುವೆಯೂ ಕಂಬಾರರು ಹೊಸ ಭಾಷೆಯನ್ನು ಸೃಷ್ಟಿಸಿ ಕಟ್ಟಿಕೊಟ್ಟಿದ್ದಾರೆ. ಆದರೆ, ನವ್ಯ ಕಾಲಘಟ್ಟದ ವಿಮರ್ಶಕರು ಕಂಬಾರರ ಸಾಹಿತ್ಯವನ್ನು ತಪ್ಪು ದಾರಿಗೆ ಎಳೆದಿದ್ದಾರೆ. ಅವರ ಸಾಹಿತ್ಯದಲ್ಲಿ ಲೈಂಗಿಕತೆಯೇ ಹೆಚ್ಚಿರುತ್ತದೆ ಎಂದು ಟೀಕಿಸಿದ್ದಾರೆ. ಹಾಡು ಮತ್ತು ಲಯ ದೇಹದ ಭಾಷೆಯಾಗಿದ್ದು, ಅಕ್ಷರ ಭಾಷೆಗಿಂತ ಭಿನ್ನವಾಗಿದೆ. ಅದೇ ರೀತಿ ಲಯಕ್ಕೆ ಲೈಂಗಿಕತೆ ಎಂಬ ಪ್ರಕೃತಿ ನಿಯಮವನ್ನು ಅಳವಡಿಸಿದ್ದಾರೆ ಎಂದು ಹೇಳಿದರು. ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಮನು ಬಳಿಗಾರ್‌, ನಗರ ಜಿಲ್ಲಾ ಸಾಹಿತ್ಯ ಪರಿಷತ್‌ ಅಧ್ಯಕ್ಷ ಮಾಯಣ್ಣ ಉಪಸ್ಥಿತರಿದ್ದರು.

ನೋ ಎನ್ನುವ ಧೈರ್ಯ ಮಾಡಲಿಲ್ಲ: ಬ್ರಿಟಿಷರು ಭಾರತಕ್ಕೆ ಬರುವ ಮೊದಲೇ ನಮ್ಮಲ್ಲಿ ಇತಿಹಾಸವಿತ್ತು. ರಾಮಾಯಣ ಮತ್ತು ಮಹಾಭಾರತಗಳು ಇತಿಹಾಸಗಳಾಗಿವೆ. ಆದರೂ ಇತಿಹಾಸ ಯಾವುದು ಎಂಬುದರ ಬಗ್ಗೆ ನಮ್ಮಲ್ಲಿಯೇ ಗೊಂದಲವಿದೆ. “ನೋ’ ಎನ್ನುವ ಧೈರ್ಯ ತೋರದೆ ಬ್ರಿಟೀಷರು ಹೇಳಿದ ಎಲ್ಲವನ್ನೂ ನಾವು ಒಪ್ಪಿಕೊಂಡುಬಿಟ್ಟಿದ್ದೇವೆ. ಅದನ್ನೇ ಬಂಡವಾಳ ಮಾಡಿಕೊಂಡಿದ್ದ ವಿದೇಶಿಯರು ನಮ್ಮ ಸಂಸ್ಕೃತಿಯನ್ನು ಮೂಢನಂಬಿಕೆ ಎಂಬಂತೆ ನಂಬಿಸಿದರು. ನಮ್ಮ ಸಂಸ್ಕೃತಿ, ಆಚಾರ-ವಿಚಾರಗಳಿಗೆ ದೊಡ್ಡ ಇತಿಹಾಸವಿದೆ. ಇದನ್ನೇ ನಾವು ನಂಬಬೇಕಿದೆ ಎಂದು ಡಾ.ಚಂದ್ರಶೇಖರ ಕಂಬಾರ ಹೇಳಿದರು.

ಟಾಪ್ ನ್ಯೂಸ್

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suspension: ಸುಳ್ಳು ಮಾಹಿತಿ ಮೇರೆಗೆ ಇಬ್ಬರು ಯುವಕರ ಬಂಧನ; ನಾಲ್ವರು ಪೊಲೀಸರು ಅಮಾನತು

Suspension: ಸುಳ್ಳು ಮಾಹಿತಿ ಮೇರೆಗೆ ಇಬ್ಬರು ಯುವಕರ ಬಂಧನ; ನಾಲ್ವರು ಪೊಲೀಸರು ಅಮಾನತು

7

Bengaluru: ನಗರದಲ್ಲಿ ಏಕಕಾಲಕ್ಕೆ  200 ಗಣೇಶ ಮೂರ್ತಿಗಳ ಮೆರವಣಿಗೆ

Parappana Agrahara Prison: ಪರಪ್ಪನ ಅಗ್ರಹಾರ ಜೈಲಲ್ಲಿ ಮತ್ತೆ ಮೊಬೈಲ್‌ಗ‌ಳು ಪತ್ತೆ

Parappana Agrahara Prison: ಪರಪ್ಪನ ಅಗ್ರಹಾರ ಜೈಲಲ್ಲಿ ಮತ್ತೆ ಮೊಬೈಲ್‌ಗ‌ಳು ಪತ್ತೆ

5

Bengaluru: ಚಿನ್ನಾಭರಣ ಮಳಿಗೆಯಲ್ಲಿ ತಡರಾತ್ರಿ ದುಷ್ಕರ್ಮಿಗಳಿಂದ ಕಳವಿಗೆ ಯತ್ನ

BBMP: ರಜೆ ದಿನದಲ್ಲೂ ಗುಂಡಿ ಮುಚ್ಚಿದ ಪಾಲಿಕೆ ನೌಕರರು

BBMP: ರಜೆ ದಿನದಲ್ಲೂ ಗುಂಡಿ ಮುಚ್ಚಿದ ಪಾಲಿಕೆ ನೌಕರರು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.