ಯಾರದೋ ವಸ್ತು ತೋರಿಸಿ ಯಾಮಾರಿಸ್ತಾರೆ!


Team Udayavani, Oct 29, 2018, 12:06 PM IST

yarado.jpg

ಬೆಂಗಳೂರು: ಬ್ಯಾಂಕ್‌ ಖಾತೆಗಳಿಂದ ಹಲವು ಮಾರ್ಗಗಳಲ್ಲಿ ಹಣ ವರ್ಗಾವಣೆ ಮಾಡಿಕೊಳ್ಳುವ ಸೈಬರ್‌ ವಂಚಕರು, ಆನ್‌ಲೈನ್‌ ಮಾರಾಟ ತಾಣಗಳನ್ನು ತಮ್ಮ ವಂಚನೆಗೆ ರಹದಾರಿ ಮಾಡಿಕೊಂಡಿದ್ದಾರೆ!

ಒಎಲ್‌ಎಕ್ಸ್‌, ಕ್ವಿಕ್ಕರ್‌ ಸೇರಿದಂತೆ ಇತರೆ ಆನ್‌ಲೈನ್‌ ಮಾರಾಟ ತಾಣಗಳಲ್ಲಿ ಸಕ್ರಿಯವಾಗಿರುವ ವಂಚಕರು, ಬೇರೊಬ್ಬರ ಒಡೆತನದ ಬೈಕ್‌, ಕಾರು, ಮೊಬೈಲ್‌ ಸೇರಿ ಇನ್ನಿತರೆ ವಸ್ತುಗಳ ಫೋಟೋಗಳನ್ನು ಪ್ರಕಟಿಸಿ ವಾಹನಗಳನ್ನು ಖರೀದಿಸಲು ಆಸಕ್ತಿ ತೋರುವ ಗ್ರಾಹಕರನ್ನು ವಂಚಿಸಿ ಹಣ ದೋಚುತ್ತಿದ್ದಾರೆ.

ಆನ್‌ಲೈನ್‌ ಮಾರಾಟ ತಾಣಗಳಲ್ಲಿ ವಾಹನಗಳು ಅಥವಾ ವಸ್ತುಗಳ ಫೋಟೋ ನೋಡಿ ಖರೀದಿಸಲು ಮುಂದಾಗಿ ಬಳಿಕ ಹಣ ಕಳೆದುಕೊಂಡ ಪೊಲೀಸ್‌ ಸೈಬರ್‌ ಕ್ರೈಂ ಠಾಣೆ ಮೆಟ್ಟಿಲೇರುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ.

ಆನ್‌ಲೈನ್‌ ಮಾರಾಟ ತಾಣದಲ್ಲಿ ಕಾರು, ಬೈಕ್‌ ಫೋಟೋಗಳನ್ನು ಮಾರಾಟಕ್ಕಿಟ್ಟು, ಖರೀದಿಸಲು ಆಸಕ್ತಿ ತೋರಿದವರ ಬಳಿ ಮುಂಗಡ ರೂಪದಲ್ಲಿ ಬ್ಯಾಂಕ್‌ ಖಾತೆಗೆ ಹಣ ಹಾಕಿಸಿಕೊಂಡು ಬಳಿಕ, ಆರೋಪಿ ಫೋನ್‌ ಸ್ವಿಚ್‌ ಆಫ್ ಮಾಡಿಕೊಂಡಿದ್ದಾರೆ ಎಂದು ದೂರುದಾರರು ಅಳಲು ತೋಡಿಕೊಳ್ಳುತ್ತಿದ್ದಾರೆ.

ಈ ರೀತಿಯ ವಂಚನೆಗೊಳಗಾದ ಸಂಬಂಧ ಪ್ರತಿ ನಿತ್ಯ ಕನಿಷ್ಠ ಎರಡು ಪ್ರಕರಣಗಳು ದಾಖಲಾಗುತ್ತಿವೆ. ಆರೋಪಿಗಳು, ವಂಚನೆಗೆ ಬಳಸಿದ ಸಿಮ್‌ ಕಾರ್ಡ್‌ ಹಾಗೂ ಮಾರಾಟ ಜಾಲತಾಣದ ಅಕೌಂಟ್‌ ಬಳಸುವುದಿಲ್ಲ. ಬಹುತೇಕ ನಕಲಿ ಅಕೌಂಟ್‌ಗಳಲ್ಲಿಯೇ ವಂಚನೆ ನಡೆಸಿರುತ್ತಾರೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ಮಾಹಿತಿ ನೀಡುತ್ತಾರೆ.

ಬೈಕ್‌ ಮಾರಾಟಕ್ಕಿರುವುದಾಗಿ ಹೇಳಿ ವಂಚನೆ: ಖಾಸಗಿ ಕಂಪನಿ ಉದ್ಯೋಗಿ ಶಂಕರ್‌ ವರೀಶ್‌ ಕಾಮತ್‌ ಎಂಬುವವರು ಬೈಕ್‌ ಖರೀದಿಸುವ ಸಲುವಾಗಿ ಓಎಲ್‌ಎಕ್ಸ್‌ ತಾಣದಲ್ಲಿ ಪರಿಶೀಲನೆ ನಡೆಸುತ್ತಿದ್ದರು. ಈ ವೇಳೆ ಯಮಹಾ ಎಫ್ಝಡ್‌ ಬೈಕ್‌ ಮಾರಾಟದ ಜಾಹೀರಾತು ನೋಡಿ, ಸಂಬಂಧಿಸಿದ ಮೊಬೈಲ್‌ ನಂಬರ್‌ಗೆ ಕರೆ ಮಾಡಿದ್ದರು.

ಈ ವೇಳೆ ಬೈಕ್‌ ನೀಡಲು ಒಪ್ಪಿದ್ದ ಅಪರಿಚಿತ ಸೈಬರ್‌ ವಂಚಕ, ಮುಂಗಡ ಹಣವಾಗಿ 64,450 ರೂ. ತನ್ನ ಖಾತೆಗೆ ಹಾಕಿಸಿಕೊಂಡಿದ್ದಾನೆ. ಬಳಿಕ ತಾನು ನೀಡಿದ್ದ ಬೈಕ್‌ ಜಾಹೀರಾತು ಪೋಸ್ಟ್‌ ತೆಗೆದಿದ್ದಾನೆ. ಜತೆಗೆ, ಆತ ನೀಡಿದ್ದ ಮೊಬೈಲ್‌ ನಂಬರ್‌ ಕೂಡ ಸ್ವಿಚ್‌ ಆಫ್ ಮಾಡಿಕೊಂಡಿದ್ದ. ಹಲವು ಬಾರಿ ಕರೆ ಮಾಡಿದರೂ ಸಂಪರ್ಕ ಸಾಧ್ಯವಾಗಿಲ್ಲ. ಪರಿಣಾಮ ವಂಚನೆಗೊಳಗಾದ ಬಗ್ಗೆ ಅರಿವಾದ ಬಳಿಕ  ಶಂಕರ್‌ ಅವರು ಸೈಬರ್‌ ಠಾಣೆಯಲ್ಲಿ ದೂರು ನೀಡಿದ್ದಾರೆ.

ಒನ್‌ಫ್ಲಸ್‌ 6 ಮೊಬೈಲ್‌ ಫೋಟೋ  ಹಾಕಿ ವಂಚನೆ!: ಮತ್ತೂಂದು ಪ್ರಕರಣದಲ್ಲಿ ಪ್ರಮೋದ್‌ ಎಂಬುವವರು ಕಡಿಮೆ ಬೆಲೆಗೆ ಮೊಬೈಲ್‌ ಖರೀದಿಸುವ ಸಲುವಾಗಿ ಒಎಲ್‌ಎಕ್ಸ್‌ ಜಾಲತಾಣದಲ್ಲಿ, ಮಾರಟಗಾರನೊಬ್ಬ ಹಾಕಿದ್ದ ಒನ್‌ ಫ್ಲಸ್‌6 ಮೊಬೈಲ್‌ ಖರೀದಿಸಲು ಮುಂದಾಗಿದ್ದರು. ಈ ವೇಳೆ ವಂಚಕ, ಮುಂಗಡವಾಗಿ 20 ಸಾವಿರ ರೂ. ಪಡೆದುಕೊಂಡು ಬಳಿಕ ತನ್ನ ಮೊಬೈಲ್‌ ನಂಬರ್‌ ಸ್ವಿಚ್‌ ಆಫ್ ಮಾಡಿಕೊಂಡಿದ್ದಾನೆ.

ಸಾರ್ವಜನಿಕರು ಎಚ್ಚರ ವಹಿಸಬೇಕು!: ಸೈಬರ್‌ ವಂಚನೆಗೆ ಕಡಿವಾಣ ಹಾಕುವಲ್ಲಿ ಸಾರ್ವಜನಿಕರ ಪಾತ್ರವೂ ಮಹತ್ವದ್ದಾಗಿದೆ. ಆನ್‌ಲೈನ್‌ ಮಾರಾಟ ತಾಣಗಳಲ್ಲಿ ಸಕ್ರಿಯವಾಗಿರುವ ವಂಚಕರು ತಾವು ಪ್ರಕಟಿಸುವ ವಸ್ತುಗಳ ಮಾಲೀಕರು ಆಗಿರುವುದಿಲ್ಲ. ವಸ್ತುಗಳನ್ನು ತಂದುಕೊಟ್ಟ ಬಳಿಕವೇ ಪೂರ್ತಿ ಹಣ ಪಾವತಿಸುವುದಾಗಿ ಸ್ಪಷ್ಟವಾಗಿ ಹೇಳಬೇಕು.

ಸಾಮಾನ್ಯವಾಗಿ ನೀವು ಕಡಿಮೆ ಮುಂಗಡ ಹಣ ನೀಡುವುದಾಗಿ ಹೇಳಿದರೂ ವಂಚಕರು ಒಪ್ಪಿಕೊಳ್ಳುತ್ತಾರೆ. ಜತೆಗೆ, ಪದೇ ಪದೆ ಅವರೇ ಕರೆ ಮಾಡಿ ಮಾರಾಟಕ್ಕಿಟ್ಟ ವಸ್ತುಗಳನ್ನು ತೆಗೆದುಕೊಳ್ಳುವಂತೆ ಒತ್ತಡ ಹೇರುತ್ತಾರೆ. ಈ ರೀತಿಯ ಕೆಲವು ಸೂಕ್ಷ್ಮತೆಗಳನ್ನು ಗಮನಿಸಿ ಎಚ್ಚರದಿಂದಿದ್ದರೆ ವಂಚನೆಯಿಂದ ತಪ್ಪಿಸಿಕೊಳ್ಳಬಹುದು ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ಅಭಿಪ್ರಾಯ ವ್ಯಕ್ತಪಡಿಸಿದರು.

* ಮಂಜುನಾಥ ಲಘುಮೇನಹಳ್ಳಿ

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Kidnapping Case: ವ್ಯಕ್ತಿಯ ಅಪಹರಿಸಿ ಸುಲಿಗೆಗೈದ 8 ಮಂದಿ ಬಂಧನ

Kidnapping Case: ವ್ಯಕ್ತಿಯ ಅಪಹರಿಸಿ ಸುಲಿಗೆಗೈದ 8 ಮಂದಿ ಬಂಧನ

Younis Zaroora: ಎಂಜಿ ರಸ್ತೇಲಿ ಇನ್‌ಸ್ಟಾಗ್ರಾಮ್‌ ಸ್ಟಾರ್‌ ಯೂನಿಸ್‌ ನೋಡಲು ಕಿಕ್ಕಿರಿದ ಜನ

Younis Zaroora: ಎಂಜಿ ರಸ್ತೇಲಿ ಇನ್‌ಸ್ಟಾಗ್ರಾಮ್‌ ಸ್ಟಾರ್‌ ಯೂನಿಸ್‌ ನೋಡಲು ಕಿಕ್ಕಿರಿದ ಜನ

Private bus: ಖಾಸಗಿ ಬಸ್‌ಗಳಿಂದ ಬೇಕಾಬಿಟ್ಟಿ ದರ ವಸೂಲಿ

Private bus: ಖಾಸಗಿ ಬಸ್‌ಗಳಿಂದ ಬೇಕಾಬಿಟ್ಟಿ ದರ ವಸೂಲಿ

2-bng

Bengaluru: ನಗರದೆಲ್ಲೆಡೆ ಟ್ರಾಫಿಕ್ ಜಾಮ್‌, ಮೆಜೆಸ್ಟಿಕ್‌ ರಷ್‌! ‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.