ಹಿಂದೂಗಳಿಗೂ ಬೇಕು ಸಮಾನ ಹಕ್ಕು


Team Udayavani, Oct 29, 2018, 12:06 PM IST

hindugaluige.jpg

ಬೆಂಗಳೂರು: ದೇಶದಲ್ಲಿ ಇತರೆ ಧರ್ಮದವರಂತೆ ಬಹುಸಂಖ್ಯಾತರಾದ ಹಿಂದೂಗಳಿಗೂ ಸಮಾನ ಹಕ್ಕುಗಳು, ಸೌಲಭ್ಯಗಳು ದೊರೆಯಬೇಕೆಂಬ ಒತ್ತಾಯಗಳು ಕೇಳಿಬರುತ್ತಿದ್ದು, ದೇಶದ ಸುಮಾರು 17 ರಾಜ್ಯಗಳಲ್ಲಿನ ನೂರಾರು ಹಿಂದೂ ಸಂಘಟನೆಗಳು ಕೇಂದ್ರ ಸರ್ಕಾರಕ್ಕೆ ಈ ಕುರಿತು ಮನವಿ ಸಲ್ಲಿಸಲು “ಹಿಂದೂ ಚಾರ್ಟರ್‌’ ರಚಿಸಿಕೊಂಡಿವೆ.

ಭಾನುವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ಹಿಂದೂಗಳಿಗೆ ಸಮಾನ ಹಕ್ಕುಗಳನ್ನು ನೀಡಬೇಕೆಂದು ಕೋರುವ ಬೇಡಿಕೆಗಳ ಪಟ್ಟಿಯನ್ನು ಬಿಡುಗಡೆಗೊಳಿಸಲಾಯಿತು. ನಂತರ ಮಾತನಾಡಿದ ಲೇಖಕ ಸಂಕ್ರಾಂತ್‌ ಸಾನು, ಅಕ್ಟೋಬರ್‌ 22ರಂದು ದೆಹಲಿಯಲ್ಲಿ 17 ರಾಜ್ಯಗಳ 100ಕ್ಕೂ ಹೆಚ್ಚು ಹಿಂದೂ ಸಂಘಟನೆಗಳು ಸಭೆ ನಡೆಸಿದ್ದು,

ಇತರೆ ಧರ್ಮಗಳಿಗೆ ಇರುವಂತೆ ಹಿಂದೂಗಳಿಗೂ ಸಮಾನ ಹಕ್ಕುಗಳು ದೊರೆಯಲು ಕೇಂದ್ರಕ್ಕೆ ಮನವಿ ನೀಡುವ ಬಗ್ಗೆ ತೀರ್ಮಾನ ಕೈಗೊಂಡಿವೆ. ಅದರಂತೆ 8 ಪ್ರಮುಖ ಬೇಡಿಕೆಗಳ ಪಟ್ಟಿ ಮಾಡಿದ್ದು, ಶೀಘ್ರದಲ್ಲಿಯೇ ಕೇಂದ್ರ ಸರ್ಕಾರಕ್ಕೆ ಸಲ್ಲಿಕೆ ಮಾಡಲಾಗುವುದು ಎಂದು ಹೇಳಿದರು.

ಹಿಂದೂಗಳಿಗೆ ಸಮಾನ ಹಕ್ಕು ಹಾಗೂ ಸೌಲಭ್ಯಗಳು ದೊರೆಯಬೇಕೆಂದು ಕೇಂದ್ರ ಸಚಿವ ಸತ್ಯಪಾಲ್‌ ಸಿಂಗ್‌ ಅವರು 2016ರಲ್ಲಿಯೇ ಖಾಸಗಿ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿದ್ದಾರೆ. ದೇವಸ್ಥಾನ ಮತ್ತು ಮಠ ಮಂದಿರಗಳನ್ನು ಸರ್ಕಾರದ ಹಸ್ತಕ್ಷೇಪವಿಲ್ಲದೆ ನಡೆಸುವ ಸ್ವಾತಂತ್ರ್ಯ, ವಿದ್ಯಾರ್ಥಿ ವೇತನ, ಸರ್ಕಾರಿ ಯೋಜನೆಗಳು ಹಾಗೂ ಇತರೆ ಹಣಕಾಸು ಸಂಬಂಧಿತ ಯೋಜನೆಗಳು ಹಿಂದೂಗಳಿಗೂ ನೀಡುವುದು ಸೇರಿ ಹಲವಾರು ಅಂಶಗಳನ್ನು ಉಲ್ಲೇಖೀಸಿದ್ದು, ಮಸೂದೆ ಅಂಗೀಕಾರಕ್ಕೆ ಸರ್ಕಾರದ ಮೇಲೆ ಒತ್ತಡ ತರಲಾಗುವುದು ಎಂದು ಹೇಳಿದರು.

ಚಿತ್ರ ನಿರ್ದೇಶಕ ವಿವೇಕ್‌ ಅಗ್ನಿಹೋತ್ರಿ ಮಾತನಾಡಿ, ಬಹುಸಂಖ್ಯಾತ ಹಿಂದೂಗಳಿಗೆ ಸಮಾನ ಹಕ್ಕುಗಳು ಹಾಗೂ ಸೌಲಭ್ಯಗಳು ದೊರೆಯಬೇಕೆಂಬ ಅಭಿಯಾನ 1995ರಲ್ಲಿ ಆರಂಭವಾಗಿದ್ದು, ಇದೀಗ ಅದನ್ನು ಚುರುಕುಗೊಳಿಸಲಾಗಿದೆ.

ರಾಜಕೀಯ ಪಕ್ಷಗಳಿಂದಾಗಿ ಬಹುಸಂಖ್ಯಾತರು ಹಾಗೂ ಅಲ್ಪಸಂಖ್ಯಾತರ ನಡುವಿನ ಕಂದರ ಹೆಚ್ಚಾಗುತ್ತಿದ್ದು, ಅಸಮತೋಲನದ ವಾತಾವರಣ ಸೃಷ್ಟಿಯಾಗುತ್ತಿದೆ. ಸಮಾಜದ ಬೆಳವಣಿಗೆ ಹಾಗೂ ಭವಿಷ್ಯದ ದೃಷ್ಟಿಯಿಂದ ಇದು ಅಪಾಯಕಾರಿಯಾಗಿದ್ದು, ಎಲ್ಲರನ್ನೂ ಸಮನಾಗಿ ಕಾಣುವ ಹಾಗೂ ಸಮಾನ ಅವಕಾಶಗಳು ದೊರೆಯಬೇಕಿದೆ ಎಂದು ಹೇಳಿದರು.

ಸಂವಿಧಾನ ಹಿಂದೂ ವಿರೋಧಿ: ಹಿಂದೂಸ್ತಾನದಲ್ಲಿ ಹಿಂದೂಗಳು ಬಹುಸಂಖ್ಯಾತರಾಗಿದ್ದರೂ ಅವರ ವಿರುದ್ಧದ ನಿರ್ಣಯಗಳೇ ಹೆಚ್ಚಾಗಿ ಹೊರಬಿದ್ದಿವೆ. ಶಬರಿಮಲೆ ಪ್ರಕರಣದಲ್ಲಿನ ತೀರ್ಪು ಇದಕ್ಕೆ ಉದಾಹರಣೆಯಾಗಿದ್ದು, ಬಹುಸಂಖ್ಯಾತರ ವಿರುದ್ಧವಾಗಿಯೇ ನ್ಯಾಯಾಲಯದ ತೀರ್ಪುಗಳು ಬರುತ್ತಿರುವುದರಿಂದ ಸಂವಿಧಾನವೇ ಹಿಂದೂಗಳ ವಿರುದ್ಧವಾಗಿದೆ ಎಂಬ ಭಾವನೆ ಜನರಲ್ಲಿ ಹರಡುತ್ತಿದೆ ಎಂದು ದೆಹಲಿಯ “ಆಪ್‌’ ಶಾಸಕ ಕಪಿಲ್‌ ಮಿಶ್ರಾ ದೂರಿದರು. 

ಸಂವಿಧಾನದ ಪರಿಚ್ಛೇಧ 26ರಿಂದ 31ರವರೆಗೆ ಅಲ್ಪಸಂಖ್ಯಾತರಿಗೆ ವಿಶೇಷ ಅಧಿಕಾರ ನೀಡಲಾಗಿದೆ. ಅದೇ ರೀತಿಯ ಸಮಾನ ಹಕ್ಕುಗಳನ್ನು ಹಿಂದೂಗಳಿಗೂ ನೀಡಬೇಕಿದೆ. ಸರ್ಕಾರ ಹಿಂದೂಗಳ ದೇವಾಲಯಗಳನ್ನು ತನ್ನ ಆಧೀನಕ್ಕೆ ಪಡೆಯುತ್ತದೆ. ಆದರೆ, ಇತರೆ ಧರ್ಮಿಯ ಮಂದಿರಗಳಲ್ಲಿ ಭಯೋತ್ಪಾಕರು ಸಿಕ್ಕರೂ ಅವುಗಳನ್ನು ವಶಕ್ಕೆ ಪಡೆಯಲು ಮುಂದಾಗುತ್ತಿಲ್ಲ ಎಂದು ಟೀಕಿಸಿದರು. 

ಸುದ್ದಿಗೋಷ್ಠಿಗೆ ಗೈರಾಗಿದ್ದ ಚಕ್ರವರ್ತಿ ಸೂಲಿಬೆಲೆ ಅವರು ವಿಡಿಯೋ ಮೂಲಕ ತನ್ನ ಬೆಂಬಲ ತಿಳಿಸಿದರು. ಈ ವೇಳೆ ವಿಶ್ವ ಹಿಂದೂ ಪರಿಷತ್‌ನ ಗಿರೀಶ್‌ ಭಾರಧ್ವಾಜ್‌, ಚೆನ್ನೈನ ಸುರೇಂದ್ರನಾಥ ಇದ್ದರು. 

ಹಿಂದೂ ಚಾರ್ಟರ್‌ನ ಪ್ರಮುಖ ಬೇಡಿಕೆಗಳು
* ಸತ್ಯಪಾಲ್‌ ಸಿಂಗ್‌ ಅವರ ಖಾಸಗಿ ಮಸೂದೆ ಮಂಡನೆ.

* ಎಫ್ಆರ್‌ಸಿಎ ಕಾನೂನುಗಳನ್ನು ನಿಷೇಧಿಸುವುದು, ಒಸಿಐ ಪ್ರಜೆಗಳನ್ನು ಬಿಟ್ಟು ಬೇರೆಯವರಿಂದ ಹಣ ತರಲು ಅವಕಾಶ ನೀಡಬಾರದು.

* ಧರ್ಮ ಸ್ವಾತಂತ್ರ್ಯ ಕಾನೂನನ್ನು ಜಾರಿಗೆ ತರಬೇಕು.

* ಸಂವಿಧಾನದ 370ನೇ ವಿಧಿ ರದ್ದುಗೊಳಿಸಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿರುವ ವಿಶೇಷ ಸ್ಥಾನಮಾನ ಹಿಂದಕ್ಕೆ ಪಡೆಯಬೇಕು. ಜತೆಗೆ 35ಎ ವಿಧಿ ಸಹ ಹಿಂಪಡೆದು ಜಮ್ಮು, ಕಾಶ್ಮೀರ ಮತ್ತು ಲಡಾಖ್‌ ಎಂದು ತ್ರಿವಳಿ ರಾಜ್ಯ ರಚಿಸಬೇಕು.

* ದೇಶದಿಂದ ಮಾಂಸ ಮತ್ತು ಗೋಮಾಂಸ ರಫ‌¤ನ್ನು ಸಂಪೂರ್ಣವಾಗಿ ನಿಷೇಧಿಸಬೇಕು.

* ಹೈಂದವ ಸಂಸ್ಕೃತಿ ಜೀರ್ಣೋದ್ಧಾರ ನಿಗಮ ಸ್ಥಾಪಿಸಿ, ಪ್ರಾರಂಭದಲ್ಲಿಯೇ ನಿಗಮಕ್ಕೆ 10 ಸಾವಿರ ಕೋಟಿ ರೂ. ಬಂಡವಾಳ ಒದಗಿಸಬೇಕು. 

* ಪ್ರಸ್ತುತ ನಾಗರಿಕ ಕಾಯ್ದೆಗೆ ತಿದ್ದುಪಡಿ ತಂದು, ಇತರೆ ದೇಶಗಳಲ್ಲಿ ಹಿಂಸೆಗೆ ಒಳಗಾಗುತ್ತಿರುವ ಹಿಂದೂ, ಸಿಖ್‌, ಜೈನ್‌ ಮತ್ತು ಬೌದ್ಧರಿಗೆ ಭಾರತದಲ್ಲಿ ಆಶ್ರಯ ಸಿಗುವುದಕ್ಕೆ ಪೂರಕವಾಗಿ ಹೊಸ ಕಾನೂನು ತರಬೇಕು.

* ಎಲ್ಲ ಭಾರತೀಯ ಭಾಷೆಗಳಿಗೆ ಪ್ರೋತ್ಸಾಹ ನೀಡಿ, ದೇಶೀಯ ಭಾಷೆಗಳ ಮೂಲಕ ಭಾರತ ಮತ್ತು ಹಿಂದೂ ಧರ್ಮದ ಸಾಮಾಜಿಕ ಹಾಗೂ ಸಾಂಸ್ಕೃತಿಕ ಪುನಃಚೇತನದ ಕಾರ್ಯಕ್ಕೆ ಚಾಲನೆ ನೀಡಬೇಕು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Kidnapping Case: ವ್ಯಕ್ತಿಯ ಅಪಹರಿಸಿ ಸುಲಿಗೆಗೈದ 8 ಮಂದಿ ಬಂಧನ

Kidnapping Case: ವ್ಯಕ್ತಿಯ ಅಪಹರಿಸಿ ಸುಲಿಗೆಗೈದ 8 ಮಂದಿ ಬಂಧನ

Younis Zaroora: ಎಂಜಿ ರಸ್ತೇಲಿ ಇನ್‌ಸ್ಟಾಗ್ರಾಮ್‌ ಸ್ಟಾರ್‌ ಯೂನಿಸ್‌ ನೋಡಲು ಕಿಕ್ಕಿರಿದ ಜನ

Younis Zaroora: ಎಂಜಿ ರಸ್ತೇಲಿ ಇನ್‌ಸ್ಟಾಗ್ರಾಮ್‌ ಸ್ಟಾರ್‌ ಯೂನಿಸ್‌ ನೋಡಲು ಕಿಕ್ಕಿರಿದ ಜನ

Private bus: ಖಾಸಗಿ ಬಸ್‌ಗಳಿಂದ ಬೇಕಾಬಿಟ್ಟಿ ದರ ವಸೂಲಿ

Private bus: ಖಾಸಗಿ ಬಸ್‌ಗಳಿಂದ ಬೇಕಾಬಿಟ್ಟಿ ದರ ವಸೂಲಿ

2-bng

Bengaluru: ನಗರದೆಲ್ಲೆಡೆ ಟ್ರಾಫಿಕ್ ಜಾಮ್‌, ಮೆಜೆಸ್ಟಿಕ್‌ ರಷ್‌! ‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.