ಸಂಪ್ರದಾಯಕ್ಕೆ ಜೋತುಬಿದ್ದು ಸಂವಿಧಾನಕ್ಕೆ ಅಪಚಾರ


Team Udayavani, Oct 29, 2018, 12:28 PM IST

m3-sampraday7a.jpg

ನಂಜನಗೂಡು: ಶಬರಿ ಮಲೆಗೆ ಮಹಿಳೆಯರ ಪ್ರವೇಶಕ್ಕೆ ಸುಪ್ರೀಂ ಕೋರ್ಟ್‌ ಆದೇಶ ನೀಡಿದ್ದರೂ ಭಕ್ತರು ಸಂಪ್ರದಾಯಕ್ಕೆ ಜೋತು ಬಿದ್ದಿರುವುದು ಸಂವಿಧಾನಕ್ಕೆ ಅಪಚಾರ ಮಾಡಿದಂತೆ ಎಂದು ಮೈಸೂರಿನ ಉರಿಲಿಂಗ ಪೆದ್ದೀಶ್ವರ ಸಂಸ್ಥಾನ ಶಾಖಾ ಮಠದ ಜಾನಪ್ರಕಾಶ ಸ್ವಾಮಿಜಿ ವಿಷಾದ ವ್ಯಕ್ತಪಡಿಸಿದರು.

ಪಟ್ಟಣದ ಡಾ.ಬಿ.ಆರ್‌.ಅಂಬೇಡ್ಕರ್‌ ಸಮುದಾಯ ಭವನದಲ್ಲಿ ಅನುಭವ ಮಂಟಪ ಟ್ರಸ್ಟ್‌ ವತಿಯಿಂದ ಭಾನುವಾರ ಏರ್ಪಡಿಸಿದ್ದ ‘ಜಗಜ್ಯೋತಿ ಬಸವಣ್ಣನವರ ಜೀವನ ಚರಿತ್ರೆ’ ಕುರಿತ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮಹಿಳೆಯರು ಹಾಗೂ ಪುರುಷರಿಗೆ ಸಮಾಜದಲ್ಲಿ ಸಮಾನ ಅವಕಾಶ ಹಾಗೂ ಸ್ಥಾನಮಾನ ನೀಡಲಾಗಿದೆ ಹಾಗಿದ್ದೂ, ದೇವಾಲಯದಲ್ಲಿ ಮಹಿಳೆಯರಿಗೆ ಪ್ರವೇಶಲ್ಲ ಎಂದರೆ ಏನರ್ಥ ಎಂದ ಅವರು ಸಂವಿಧಾನದ ಆಶಯವನ್ನು ಎತ್ತಿ ಹಿಡಿದಿರುವ ಸುಪ್ರೀಂ ಕೋರ್ಟ್‌ ಆದೇಶ ಪರಿಪಾಲನೆಯಾಗಲೇಬೇಕು ಹಾಗಿದ್ದು,

ಅಲ್ಲಿ ಆಕೆಗೆ ಪ್ರವೇಶ ನಿರಾಕರಿಸುತ್ತಿರುವುದು ಸಂವಿಧಾನದ ಆಶಯಕ್ಕಿಂತ ಸಂಪ್ರದಾಯದ ಪ್ರತಿಪಾದನೆಗೆ ಹೆಚ್ಚು ಒತ್ತು ನೀಡಲಾಗಿದೆ. ಶ್ರೀಗಳು ಭಕ್ತವೃಂದ ಈಗಲಾದರೂ ತಮ್ಮ ತಪ್ಪನ್ನು ತಿದ್ದಿಕೊಂಡು ಮಹಿಳೆೆಯರಿಗೆ ಮುಕ್ತ ಪ್ರವೇಶ ನೀಡಲಿ ಎಂದು ಮನವಿ ಮಾಡಿದರು.

ಮಹಿಳೆಯರಿಗೆ ಸಮಾನ ಅವಕಾಶ ನೀಡಬೇಕೆಂದು 12ನೇ ಶತಮಾನದಲ್ಲೇ ಜಗಜ್ಯೋತಿ ಬಸವಣ್ಣ ಪ್ರತಿಪಾದಿಸಿದ್ದರು ಹಾಗಾಗಿಯೇ ವಿ ಶ್ವದ ಮೊದಲ ಸಂಸತ್‌ ಎನಿಸಿಕೊಂಡಿರುವ ಅನುಭವ ಮಂಟಪದ ಬಾಗಿಲನ್ನು ಅಂದೇ ಅಣ್ಣ ಬಸವಣ್ಣ ತಾಯಂದಿರಿಗೆ ತೆರದಿಡುವ ಮೂಲಕ ಮಹಿಳೆಯರ ಸ್ಥಾನಮಾನವನ್ನು ಎತ್ತಿಹಿಡಿದಿದ್ದರು ಎಂದು ಹೇಳಿದರು.

 ಬಸವಣ್ಣನ ಆಶಯಗಳನ್ನೇ ಡಾ ಬಿ ಆರ್‌ ಅಂಬೇಡ್ಕರ್‌ ಸಂವಿಧಾನದಲ್ಲಿ ಅಳವಡಿಕೆ ಮಾಡಿ ದೇಶಕ್ಕೆ ಅರ್ಪಿಸಿದ್ದಾರೆ. ಅದರಂತೆಯೇ ದೇಶ ಈಗ ಮುನ್ನಡೆಯಬೇಕು. ಹೀಗಾಗಿ ಸುಪ್ರೀಂ ಕೋರ್ಟ್‌ ಸಂವಿಧಾನವನ್ನು ಎತ್ತಿಡಿದಿದೆಯೇ ಹೊರತು ಹೆಚ್ಚುವರಿ ಹೇರಿಕೆ ಮಾಡಿಲ್ಲ. ಇದನ್ನು ಗಂಭೀರವಾಗಿ ಅರ್ಥ ಮಾಡಿಕೊಳ್ಳಬೇಕಾದ ಭಕ್ತರು ಗಲಭೆ ಸೃಷ್ಟಿತ್ತಿರುವುದು ತರವಲ್ಲ ಎಂದು ಜಾನಪ್ರಕಾಶ ಸ್ವಾಮಿಗಳು ತಿಳಿಸಿದರು.

ಮಹಿಳೆಯರ ಹಕ್ಕುಗಳಿಗಾಗಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ ಮಹನೀಯರ ಸಾಲಿನಲ್ಲಿ ಬಸವಣ್ಣ, ಅಂಬೇಡ್ಕರ್‌ ಅಗ್ರ ಸ್ಥಾನದಲ್ಲಿ ನಿಲ್ಲುತ್ತಾರೆ. ಮಮತೆ, ಸಮಾನತೆೆ ತುಂಬಿದ ಪ್ರಜಾಪ್ರಭುತ್ವವನ್ನು ನಿರ್ಮಿಸಿರುವುದು ಸಮಾಜಕ್ಕೆ ಇವರಿಬ್ಬರ ಕೊಡುಗೆಯಾಗಿದೆ ಎಂದ ಅವರು ಜಾತಿ ವಿಷ ಬೀಜದ ಮಧ್ಯದಲ್ಲಿ ಸಿಲುಕಿ ತೊಳಲಾಡುತ್ತಿರುವ ನಮಗಿದು ಅರ್ಥವಾಗಬೇಕಿದೆ ಎಂದು ಅಭಿಪ್ರಾಯಪಟ್ಟರು.

ಜನರೊಂದಿಗೆ ಜಾnನಪ್ರಕಾಶ ಸ್ವಾಮಿಜಿ ಸಂವಾದ ನಡೆಸಿದರು. ಡಾ.ಸುರೇಶ್‌ ತಂಡದವರು ವಚನ ಗಾಯನ ನಡೆಸಿಕೊಟ್ಟರು. ಸಮಾರಂಭದಲ್ಲಿ ಟ್ರಸ್ಟ್‌ನ ಅಧ್ಯಕ್ಷೆ ಗಂಗಮ್ಮ, ಉಪಾಧ್ಯಕ್ಷ ಲಿಂಗಯ್ಯ, ಪ್ರಧಾನ ಕಾರ್ಯದರ್ಶಿ ಮಹದೇವಯ್ಯ, ಖಜಾಂಚಿ ಕೆ.ಎಂ.ಕೃಷ್ಣಕುಮಾರ್‌, ಸಂಘಟನಾ ಕಾರ್ಯದರ್ಶಿ ಶ್ರೀ ನಿವಾಸಮೂರ್ತಿ, ಟಿ.ಗುರುಮೂರ್ತಿ, ರಾಕೇಶ್‌, ಅಳಗಂಚಿ ಮಹದೇವಸ್ವಾಮಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ

Mysuru: ಬಾಲ್ಯ ವಿವಾಹ: 12 ಮಂದಿ ವಿರುದ್ಧ ಪ್ರಕರಣ ದಾಖಲು

Mysuru: ಬಾಲ್ಯ ವಿವಾಹ: 12 ಮಂದಿ ವಿರುದ್ಧ ಪ್ರಕರಣ ದಾಖಲು

T. S. Srivatsa;ಮುನಿರತ್ನ ಬಂಧನ ವಿಚಾರದಲ್ಲಿ ಸರ್ಕಾರ ದ್ವಿಮುಖ ನೀತಿ: ಆರೋಪ

T. S. Srivatsa;ಮುನಿರತ್ನ ಬಂಧನ ವಿಚಾರದಲ್ಲಿ ಸರ್ಕಾರ ದ್ವಿಮುಖ ನೀತಿ: ಆರೋಪ

CTCM ಸಿದ್ದರಾಮಯ್ಯರಿಂದ ದ್ವೇಷ ರಾಜಕಾರಣ: ಸಿ.ಟಿ.ರವಿ

CM ಸಿದ್ದರಾಮಯ್ಯರಿಂದ ದ್ವೇಷ ರಾಜಕಾರಣ: ಸಿ.ಟಿ.ರವಿ

Hunsur: ನೀರು ತರಲು ಹೋಗಿದ್ದ ಪತ್ನಿಯ ಕತ್ತು ಕಡಿದ ಪತಿ

Hunsur: ನೀರು ತರಲು ಹೋಗಿದ್ದ ಪತ್ನಿಯ ಕತ್ತು ಕಡಿದ ಪತಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.