ಉತ್ತಮ ಜೀವನಕ್ರಮದಿಂದ ಯಶಸ್ಸು: ಗೌರ್‌ ಗೋಪಾಲ್‌ ದಾಸ್‌ 


Team Udayavani, Oct 29, 2018, 3:49 PM IST

29-october-16.gif

ಮೂಡಬಿದಿರೆ : ಯಶಸ್ಸು ಎನ್ನುವುದು ನಾವು ಏನನ್ನು ಹೊಂದಿರುತ್ತೇವೆ ಎನ್ನುವುದನ್ನು ಅವಲಂಬಿಸಿರುವುದಿಲ್ಲ ಬದಲಾಗಿ ನಾವು ಹೇಗೆ ಬದುಕುತ್ತೇವೆ ಎನ್ನುವುದನ್ನು ಅವಲಂಬಿಸಿರುತ್ತದೆ. ನಾವು ಜೀವನದಲ್ಲಿ ಏನನ್ನಾದರೂ ಪಡೆಯುವ ಪ್ರಯತ್ನದಲ್ಲಿ ಜೀವಿಸುವುದನ್ನು ಮರೆಯಬಾರದು ಎಂದು ಅಂತಾರಾಷ್ಟ್ರೀಯ ಖ್ಯಾತಿಯ ಜೀವನಕೌಶಲ ಗುರು ಗೌರ್‌ ಗೋಪಾಲ್‌ ದಾಸ್‌ ಹೇಳಿದರು.

ಆಳ್ವಾಸ್‌ ಕಾಲೇಜಿನ ರೋಸ್ಟ್ರಮ್‌ ಸ್ಪೀಕರ್ ಕ್ಲಬ್‌- ವಿದ್ಯಾರ್ಥಿ ವೇದಿಕೆ ಆಯೋಜಿಸಿದ್ದ ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ ‘ಯಶಸ್ಸಿನ ರಹಸ್ಯ’ದ ಕುರಿತು ಆರಂಭ ದಲ್ಲಿ ತುಳುವಿನಲ್ಲಿ ಮಾತು ಪ್ರಾರಂಭಿಸಿದ ಅವರು, ಸೇರಿನ ಮಾತೆರೆಗ್ಲಾ ಸೊಲ್ಮೆಲು, ಎಂಕ್‌ ನಿಕ್ಲೆನ್‌ ತೂದ್‌ ಮಸ್ತ್ ಖುಷಿ ಆಂಡ್‌, ಎಂಕ್‌ ತುಳು ಬರ್ಪುಜಿ ಎಂದರು.

ಯಶಸ್ಸಿನ ವ್ಯಾಖ್ಯಾನವು ಬದಲಾಗುತ್ತಲೇ ಇರುತ್ತದೆ. ಒಂದು ಕ್ಷೇತ್ರದಿಂದ ಇನ್ನೊಂದು ಕ್ಷೇತ್ರಕ್ಕೆ ಯಶಸ್ಸಿನ ವ್ಯಾಖ್ಯಾನವು ವಿಭಿನ್ನವಾಗಿರುತ್ತದೆ. ನಮ್ಮ ಪ್ರತಿಭೆ, ಸಾಮರ್ಥ್ಯ, ಕೌಶಲ, ವ್ಯಕ್ತಿತ್ವವು ನಮ್ಮನ್ನು ಯಶಸ್ಸಿನೆಡೆಗೆ ಕೊಂಡೊಯ್ಯುವುದಿಲ್ಲ ಬದಲಾಗಿ ನಮ್ಮ ಮನೋಭಾವ, ಯೋಚನಾ ಲಹರಿಗಳು ನಮ್ಮನ್ನು ಯಶಸ್ಸಿನೆಡೆಗೆ ಮುನ್ನಡೆಸುತ್ತದೆ. ಒಬ್ಬ ವ್ಯಕ್ತಿ ತನ್ನ ಜೀವನದ ಸವಾಲುಗಳನ್ನು, ಸಮಸ್ಯೆಗಳನ್ನು ಹೇಗೆ ಪರಿಹರಿಸಿಕೊಳ್ಳುತ್ತಾನೆ ಎಂಬುದರ ಮೇಲೆ ಅವನ ಯಶಸ್ಸನ್ನು ನಿರ್ಧರಿಸಲಾಗುತ್ತದೆ.

ಇಂತಹ ವ್ಯಕ್ತಿಗಳು ಇತರರ ಜೀವನದ ಬಗ್ಗೆ ಕುತೂಹಲಿಗಳಾಗಿರುವುದಿಲ್ಲ, ಬದಲಾಗಿ ತಮ್ಮ ಜೀವನದಲ್ಲಿ ಯಾವ ಮಟ್ಟವನ್ನು ತಲುಪಬಹುದು ಎಂಬುದರ ಬಗ್ಗೆ ಯೋಚಿಸುತ್ತಿರುತ್ತಾರೆ. ಹೀಗಾಗಿ ಅವರು ಅದ್ಭುತ ಯಶಸ್ಸು ಸಾಧಿಸುತ್ತಾರೆ ಎಂದು ಹೇಳಿದರು.

ಮೂರು ‘ಸಿ’
ನಮ್ಮ ಯಶಸ್ಸಿನ ಗುಟ್ಟು ಚೂಸ್‌, ಚೇಂಜ್‌, ಕನೆಕ್ಟ್ ಎಂಬ ಮೂರು ‘ಸಿ’ಗಳಲ್ಲಿ ಅಡಗಿದೆ. ನಾವು ಇತರರನ್ನು ಅನುಕರಿಸದೇ ನಮ್ಮ ಜೀವನದ ಉತ್ತಮ ಆವೃತ್ತಿಯಾಗಿ ಹೊರಹೊಮ್ಮಬೇಕು. ನಾವು ಎಂತಹ ಸಂದರ್ಭದಲ್ಲೂ ಅವಕಾಶಗಳನ್ನು ಬಿಟ್ಟುಕೊಡಬಾರದು. ಇಂತಹ ಗುಣಗಳಿಂದ ಮಾತ್ರ ನಾವು ಉನ್ನತ ಸ್ಥಾನಕ್ಕೇರಬಹುದು. ಜತೆಗೆ ಕಾಲಕ್ಕೆ ತಕ್ಕಂತೆ ಬದಲಾಗುವುದು. ನಿರಂತರವಾಗಿ ಅಪ್‌ಡೇಟ್‌ ಆಗುವುದು ಕೂಡ ನಮ್ಮನ್ನು ಯಶಸ್ಸಿನೆಡೆಗೆ ಕೊಂಡೊಯ್ಯುತ್ತದೆ. ಇದರೊಂದಿಗೆ ನಮಗೆ ಭಾವನಾತ್ಮಕವಾದ ಅಥವಾ ಆಧ್ಯಾತ್ಮಿಕವಾದ ಬೆಂಬಲ ಇರಬೇಕಾದುದು ಕೂಡ ಮುಖ್ಯವಾಗಿದೆ ಎಂದರು.

ಪುಸ್ತಕ ಬಿಡುಗಡೆ
ಇದೇ ಸಂದರ್ಭದಲ್ಲಿ ‘ಲೈಫ್‌’ಸ್‌ ಅಮೇಜಿಂಗ್‌ ಸೀಕ್ರೆಟ್‌’ ಎಂಬ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಮೂಡಬಿದಿರೆಯ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ, ಆಳ್ವಾಸ್‌ ಶಿಕ್ಷಣ ಪ್ರತಿಷ್ಟಾನದ ಅಧ್ಯಕ್ಷ ಡಾ| ಎಂ ಮೋಹನ್‌ ಆಳ್ವ, ಮ್ಯಾನೇಜಿಂಗ್‌ ಟ್ರಸ್ಟಿ ವಿವೇಕ್‌ ಆಳ್ವ ಉಪಸ್ಥಿತರಿದ್ದರು.

ಆಳ್ವಾಸ್‌ ಕಾಲೇಜಿನ ವಿದ್ಯಾಗಿರಿ ಆವರಣದ ನುಡಿಸಿರಿ ವೇದಿಕೆಯಲ್ಲಿ ನಡೆದ ಗೋಪಾಲ್‌ದಾಸ್‌ ಕಾರ್ಯಕ್ರಮದಲ್ಲಿ ಮೂಡಬಿದಿರೆ ಪರಿಸರದ ರಾಜಕೀಯ, ಉದ್ಯಮ, ಸಿನಿಮಾ, ರಂಗಭೂಮಿ ಸಹಿತ ವಿವಿಧ ಕ್ಷೇತ್ರಗಳ ಸುಮಾರು 3,500 ಮಂದಿ ಗಣ್ಯರು ಪಾಲ್ಗೊಂಡಿದ್ದರು. ಆಯನಾ ಡಿ’ಸೋಜಾ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

ಹಣಕ್ಕಿಂತ ಆಲೋಚನೆ ಮುಖ್ಯ
ನಮ್ಮ ಜೀವನದಲ್ಲಿ ಆಸ್ತಿ, ಹಣ, ಅಂತಸ್ತು ಎಂದಿಗೂ ಮುಖ್ಯವಾಗುವುದಿಲ್ಲ. ಅಂತಸ್ತು ಹೆಚ್ಚಾಗಬಹುದಷ್ಟೇ ಆದರೆ ಜೀವನಕ್ಕೆ ಬೇಕಾದ ಮೂಲಭೂತ ಅವಶ್ಯಕತೆಗಳು ಎಂದಿಗೂ ಹಾಗೆಯೇ ಉಳಿದುಕೊಳ್ಳುತ್ತದೆ. ನಮ್ಮ ಆಲೋಚನೆಗಳು ಶ್ರೀಮಂತವಾಗಬೇಕು, ನಮ್ಮ ಮನೋಭಾವ ಉನ್ನತ ಮಟ್ಟದ್ದಾಗಿರಬೇಕು. ಆಗ ಜೀವನ ಶ್ರೀಮಂತವಾಗಿರುತ್ತದೆ.
ಗೌರ್‌ ಗೋಪಾಲ್‌ ದಾಸ್‌,
  ಆಧ್ಯಾತ್ಮಿಕ ಗುರು

ಟಾಪ್ ನ್ಯೂಸ್

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.