ಬಾಣ ಬಿರುಸು ಢಂ ಎಂದಿತು!


Team Udayavani, Oct 30, 2018, 6:00 AM IST

8.jpg

ಆಕಾಶಕ್ಕೆ ಹಾರಬೇಕಿದ್ದ ಬಾಣ ಬಿರುಸು, ಅಂಗೈ ಮೇಲೆಯೇ ಸಿಡಿಯಿತು. ಬಲಗೈ ಹಸ್ತ ಭಗಭಗ ಉರಿದು ಕಣ್ಣು ಕತ್ತಲಿಟ್ಟಿತು. ಆಗಲೇ ಗೆಳೆಯನೊಬ್ಬ ಒಂದು ಬಾಟಲಿ ಇಂಕ್‌ ತಂದು ಅಂಗೈ ಮೇಲೆ ಸುರಿದುಬಿಟ್ಟ…

1973ರ ಮಾತಿದು. ನನಗೆ ಆಗ 18 ವರ್ಷ. ಬಿಸಿರಕ್ತ, ಇಟ್ಟಿಗೆಯನ್ನು ಮುಷ್ಟಿಯಲ್ಲಿ ಕುಟ್ಟಿ ಒಡೆಯುವ ಅದಮ್ಯ ಉತ್ಸಾಹ. ಓದಿಗೆ ತಿಲಾಂಜಲಿ ಹಾಡಿ, ಅನಿವಾರ್ಯಕ್ಕೆ ಕಟ್ಟುಬಿದ್ದು ಅಪ್ಪನೊಂದಿಗೆ ಹೋಟೆಲ್‌ ವ್ಯವಹಾರದಲ್ಲಿ ಕೈ ಜೋಡಿಸಿದ್ದೆ.  ಆಗೆಲ್ಲ ಪ್ರತಿ ವರ್ಷ ದೀಪಾವಳಿ ಸಮಯದಲ್ಲಿ ಹೋಟೆಲ್‌ ಪಕ್ಕದಲ್ಲಿ ಸುಮಾರು 30 ಅಡಿ ಎತ್ತರದ ದೊಡ್ಡ ಕಂಬಗಳನ್ನು ಹುಗಿದು, ಅವುಗಳಿಗೆ ನಾವೇ ತಯಾರಿಸಿದ ಆಕಾಶ ಬುಟ್ಟಿ ಕಟ್ಟುತ್ತಿದ್ದೆವು. ಅವುಗಳನ್ನು ನೋಡಲೆಂದೇ ಇಡೀ ಊರಿನ ಜನರು ಬರುತ್ತಿದ್ದರು. ಪಾಡ್ಯದಂದು ಪೂಜೆ, ಪ್ರಸಾದ, ಪಟಾಕಿ ಎಲ್ಲವೂ ವೈಶಿಷ್ಟಪೂರ್ಣವಾಗಿರುತ್ತಿದ್ದವು. 

ಆ ವರ್ಷ ನಾನು ಹೋಟೆಲ್‌ನ ಗಲ್ಲಾ ಏರಿ, ಸಣ್ಣ ಸಾಹುಕಾರು ಎನಿಸಿಕೊಂಡ ಮೊದಲ ವರ್ಷ ಬೇರೆ. ಹಾಗಾಗಿ, ಈ ಬಾರಿಯ ದೀಪಾವಳಿ ಪೂಜೆ ಅವಿಸ್ಮರಣೀಯವಾಗಿ ಇರಬೇಕೆಂದು ಒಂದು ತಿಂಗಳ ಮೊದಲೇ ಆಕಾಶಬುಟ್ಟಿ, ಹಾರ, ಡಿಜೈನ್‌ ಪೇಪರ್‌ ತಯಾರಿ ಕೆಲಸ ಆರಂಭಿಸಿದ್ದೆವು. ಬಿಡುವಿನ ವೇಳೆಯಲ್ಲಿ ಕೆಲಸಗಾರರು ಅದನ್ನೆಲ್ಲ ಆಸಕ್ತಿಯಿಂದ ತಯಾರಿಸುತ್ತಿದ್ದರು. ದೀಪಾವಳಿ ಪೂಜೆ, ಪಾಡ್ಯ ಬಂದಿತ್ತು. ಬೆಳಗ್ಗೆಯೇ ಆಕಾಶಬುಟ್ಟಿ ಏರಿಸಿ ಆಗಿತ್ತು. ಕೆಲಸಗಾರರಿಗೆಲ್ಲ ಹೊಸ ಬಟ್ಟೆ, ಬೋನಸ್‌ ಕೊಟ್ಟಾಗಿತ್ತು. ಕ್ಯಾಶ್‌ ಪಕ್ಕದ ಚೀಲದಲ್ಲಿ ಲಕ್ಷ್ಮಿ ಪಟಾಕಿ, ಆಟಂಬಾಂಬ್‌, ಬಾಣಬಿರುಸುಗಳ ಚೀಲವನ್ನಿಡಲಾಗಿತ್ತು. ಮಧ್ಯಾಹ್ನ ಎಲ್ಲಾ ಕೆಲಸಗಾರರಿಗೆ ಹಾಗೂ ಅಕ್ಕ-ಪಕ್ಕದ ಅಂಗಡಿಗಳವರಿಗೆ ಸಿಹಿ ಭೋಜನ ಏರ್ಪಾಡು ಮಾಡಿದ್ದೆವು.

ಸಂಜೆ 7-30ಕ್ಕೆ ಭಟ್ಟರು ಬಂದು ಪೂಜೆ ಆರಂಭವಾಯಿತು. ಮನೆಯವರೆಲ್ಲರೂ ಕೈ ಮುಗಿದು, ಭಕ್ತಿಭಾವದಿಂದ ನಿಂತಿದ್ದರು. ಆಗ ನಾನು, ಹೊರಗೆ ಕೆಲಸಗಾರರಿಗೆಲ್ಲರಿಗೂ ಸಮನಾಗಿ ಪಟಾಕಿ ಹಂಚಿ ಅವರ ಮದ್ದಿನಾಟಕ್ಕೆ ಉಸ್ತುವಾರಿ ನಡೆಸಿದ್ದೆ. ಒಳಗೆ ಪೂಜೆ, ಹೊರಗೆ ಬಾಣ, ಬಿರುಸು, ಬಾಂಬುಗಳ ಭೋರ್ಗರೆತ. ಪಡ್ಡೆಗಳು ಸುತ್ತ ಶಿಳ್ಳೆ ಹಾಕಿ ಪ್ರೋತ್ಸಾಹಿಸುತ್ತಿದ್ದರು.

ಕೆಲವರು ಹೂವಿನಕುಡಿಕೆ ಹಚ್ಚಿ ಕೈಯಲ್ಲಿ ಹಿಡಿದೆತ್ತಿ ಪ್ರದರ್ಶಿಸುತ್ತಿದ್ದರು. ಅದನ್ನು ನೋಡಿ ನನ್ನಲ್ಲಿನ ಹೀರೋ ಜಾಗೃತನಾದ. ರಾಮಾಚಾರಿ ಸಿನಿಮಾದ ವಿಷ್ಣು  ದಾದಾ ಶೈಲಿಯಲ್ಲಿ ಒಂದು ಹೂಕುಂಡವನ್ನು ಬಲಗೈಲಿಟ್ಟುಕೊಂಡು ಕಡ್ಡಿಗೀರಿ ಎತ್ತಿ ಹಿಡಿದು ಶಿಳ್ಳೆ ಹೊಡೆಯುತ್ತಿದ್ದವರೆಡೆಗೆ ನೋಡಿದೆ. ಅಷ್ಟೇ ನೆನಪು. 

ಅರೆಕ್ಷಣ, ಬಾಣ ಬಿರುಸು ಢಮಾರ್‌ ಎಂದು ಕೈಯಲ್ಲೇ ಸಿಡಿದಿತ್ತು! ಕಣ್ಣಿಗೆ ಕತ್ತಲೆ ಕವಿಯಿತು. ಬಲಹಸ್ತ ಭಗಭಗ ಉರಿದು, ಎಲ್ಲರೂ ಸುತ್ತ ನೆರೆದರು. ಅರ್ಧಂಬರ್ಧ ತಿಳಿದವನೊಬ್ಬ ಪಕ್ಕದ ಪುಸ್ತಕದ ಅಂಗಡಿಯಿಂದ ಇಂಕ್‌ ಬಾಟಲಿ ತಂದು ಹಸ್ತದ ತುಂಬಾ ಸುರಿದ. ಪಟಾಕಿ ಸಿಡಿದು ಗಾಯವಾದಾಗ ಯಾವುದೇ ಕಾರಣಕ್ಕೂ ಇಂಕ್‌ ಹಾಕಬಾರದಂತೆ. ಅದು ಅವನಿಗೆ ಗೊತ್ತಿರಲಿಲ್ಲ. ಗಾಯ ಆಯ್ತು ಎಂದು ತಿಳಿದಾಕ್ಷಣ ಅವನ ಅರಿವಿಗೆ ಬಂದಂತೆ ಇಂಕ್‌ ಸುರಿದಿದ್ದ. ತಕ್ಷಣವೇ ಹಸ್ತದ ತುಂಬಾ ನೀರುಗುಳ್ಳೆಗಳೆದ್ದವು. ನೋವು ತಡೆಯಲಾರದೇ ಮನೆಯ ಕಡೆಗೆ ಓಡಿದೆ. ಟೇಬಲ್‌ಫ್ಯಾನ್‌ ಹಾಕಿ ಅದರೆದುರು ಕೈ ಹಿಡಿದು ಕುಳಿತೆ. ಬಳಲಿಕೆ, ತಲೆ ತಿರುಗುವಿಕೆ, ಕಣ್ಣಲ್ಲಿ ನೀರು. ನನ್ನಲ್ಲಿನ ಹೀರೋ ಜೀರೋ ಆಗಿದ್ದ. 

ವಿಷಯ ತಿಳಿದು ಮನೆಯವರೆಲ್ಲ ಓಡಿ ಬಂದರು. ಬರ್ನಾಲ್‌ ಸೇವೆ, ಮರುದಿನ ಡಾಕ್ಟರ್‌ರ ಭೇಟಿ. ಒಂದೆರಡು ದಿನಗಳಲ್ಲಿ ಬಲಗೈಗೆ ಪ್ಲಾಸ್ಟಿಕ್‌ ಕವರ್‌ನ ಹೊದಿಕೆ ಹಾಕಿಕೊಂಡು ಹೋಟೆಲಿಗೆ ಬಂದೆ. ಎಡಗೈಯಲ್ಲಿಯೇ ಹಣ ತೆಗೆದುಕೊಳ್ಳುವುದು, ಊಟ, ತಿಂಡಿ ಎಲ್ಲವೂ! ಐದಾರು ದಿನಗಳಲ್ಲಿ ಗುಳ್ಳೆಗಳು ಒಡೆದು. 15 ದಿನಗಳಲ್ಲಿ ಮೊದಲಿನಂತಾದೆ. 

ಪ್ರತಿ ವರ್ಷದ ದೀಪಾವಳಿಯಂದು, ಪಟಾಕಿ “ಬಾ ನನ್ನ ಪ್ರೀತಿಸು’ ಎನ್ನುತ್ತದೆ. ಆದರೆ ನನ್ನ ಬಲಹಸ್ತ- “ದೂರ ದೂರ ಅಲ್ಲೇ ನಿಲ್ಲು, ನನ್ನಾ ದೇವರೇ..’ಎಂದು ಹಾಡುತ್ತದೆ. 

ಕೆ. ಶ್ರೀನಿವಾಸರಾವ್‌, ಹರಪನಹಳ್ಳಿ

ಟಾಪ್ ನ್ಯೂಸ್

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.