“ಅಂದು ಬೈಯ್ದಿದ್ದವರು ಇಂದು ದೈನೇಸಿಯಂತೆ ಬೇಡುತ್ತಿದ್ದಾರೆ’
Team Udayavani, Oct 30, 2018, 6:00 AM IST
ನಾಗಮಂಗಲ: “ಕೆಲವೇ ದಿನಗಳ ಹಿಂದೆ ಮಾಜಿ ಸಚಿವ ಚೆಲುವರಾಯಸ್ವಾಮಿಯನ್ನು ಡೆಡ್ ಹಾರ್ಸ್, ಕ್ಲೋಸ್ಡ್ ಹಾರ್ಸ್ ಎಂದ ನಾಯಕರೆಲ್ಲ ಇಂದು ಓಟಿಗಾಗಿ ಅವರ ಮನೆ ಬಳಿ ಹೋಗುತ್ತಿದ್ದಾರೆ, ಇದು ಅವರ ಗೋಸುಂಬೆತನವನ್ನು ತೋರಿಸುತ್ತದೆ’ ಎಂದು
ಮಾಜಿ ಉಪ ಮುಖ್ಯ ಮಂತ್ರಿ ಆರ್. ಅಶೋಕ್ ಲೇವಡಿ ಮಾಡಿದ್ದಾರೆ. ಪಟ್ಟಣದಲ್ಲಿ ಬಿಜೆಪಿ ಪರ ರೋಡ್ ಶೋ ನಡೆಸಿ
ಮತಯಾಚನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವೇ ದಿನಗಳ ಹಿಂದೆ ಇದೇ
ಚೆಲುವರಾಯಸ್ವಾಮಿಯನ್ನು ಜಿಲ್ಲಾ ಉಸ್ತುವಾರಿ ಮಂತ್ರಿ ಪುಟ್ಟರಾಜು, ಕ್ಷೇತ್ರದ ಶಾಸಕ ಸುರೇಶ್ಗೌಡ ಬಾಯಿಗೆ ಬಂದಂತೆ ಬೈಯ್ದಿದ್ದರು. ಆದರೆ, ಇಂದು ತಮ್ಮ ಸ್ವಾರ್ಥ ರಾಜಕಾರಣಕ್ಕಾಗಿ ಸಿಆರ್ಎಸ್ ಮನೆಯ ಬಾಗಿಲನ್ನು ದೈನೇಸಿಯಂತೆ ತಟ್ಟುತ್ತಿದ್ದಾರೆ.
ಅದು ಅವರಿಗೆ ಬೇಕಾಗಿತ್ತಾ ಎಂದು ಪ್ರಶ್ನಿಸಿದರು.
ಕಾಂಗ್ರೆಸ್ನವರು ಯಾವ ಮುಖ ಹೊತ್ತುಕೊಂಡು ಜೆಡಿಎಸ್ಗೆ ಮತ ಕೇಳುತ್ತಾರೋ ಗೊತ್ತಿಲ್ಲ. ಏಕೆಂದರೆ, ಮಾಜಿ ಸಿಎಂ ಸಿದ್ದರಾಮಯ್ಯನವರು ಜೆಡಿಎಸ್ನ ರಾಹು, ಕೇತು, ಶನಿಗಳು ಸೇರಿ ನನ್ನನ್ನು ಸೋಲಿಸಿದ್ದಾರೆಂದು ಹೇಳಿದ್ದಾರೆ. ದಿನ ಬೆಳಗಾದರೆ
ಎರಡೂ ಪಕ್ಷಗಳು ಜಗಳವಾಡುತ್ತಿದ್ದು, ಸರ್ಕಾರ ಸಂಪೂರ್ಣ ಸ್ತಬಟಛಿವಾಗಿದೆ ಎಂದರು.
ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಭಲ ವಿರೋಧ ಪಕ್ಷವಾಗಿರುವ ಜೆಡಿಎಸ್ ಪಕ್ಷದ ಅಭ್ಯರ್ಥಿಗೆ ಮತ ಕೊಡಿಸಲು ನಮಗೆ ಮುಜುಗರ ಆಗುವುದು ಸಹಜ. ಆದರೆ ಅದನ್ನೆಲ್ಲ ಬದಿಗೊತ್ತಿ ಮೈತ್ರಿಧರ್ಮವನ್ನು ಕಾಪಾಡಲು ನಾವು ಜೆಡಿಎಸ್ ಅಭ್ಯರ್ಥಿಗೆ ಮತ ಹಾಕಿಸಬೇಕು.
● ಚೆಲುವರಾಯಸ್ವಾಮಿ, ಮಾಜಿ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ
Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು
Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…
Actor Darshan: ನಟ ದರ್ಶನ್ ಜಾಮೀನು ಅರ್ಜಿ ಹೈಕೋರ್ಟ್ನಲ್ಲಿ ಇಂದು ವಿಚಾರಣೆ
Assembly By Election: ಗೆದ್ದು ಬನ್ನಿ; ಕಾಂಗ್ರೆಸ್ ಸಚಿವರಿಗೆ ರಣದೀಪ್ ಸುರ್ಜೇವಾಲ ಹುಕುಂ
MUST WATCH
ಹೊಸ ಸೇರ್ಪಡೆ
Kaup LaxmiJanardhana Temple: ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮನೋಹರ್ ಶೆಟ್ಟಿ ಆಯ್ಕೆ
Hosapete: ಜ್ವರದಿಂದ ಮಗು ಸಾವು; ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಪಾಲಕರ ಆಕ್ರೋಶ
BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ
Kerala: ವಿಡಿಯೋ ಅಪ್ಲೋಡ್ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ
Explainer: ವಯನಾಡ್ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್ ಅಖಾಡಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.