ಲಂಕೆ ಹಿಂಸಾಚಾರ ಹಿನ್ನೆಲೆ: ಸಚಿವ ರಣತುಂಗ ಬಂಧನ
Team Udayavani, Oct 30, 2018, 8:44 AM IST
ಕೊಲೊಂಬೋ: ಶ್ರೀಲಂಕಾದಲ್ಲಿ ಆರಂಭವಾಗಿರುವ ರಾಜಕೀಯ ಬಿಕ್ಕಟ್ಟು ಸದ್ಯಕ್ಕೆ ಬಗೆಹರಿಯುವ ಲಕ್ಷಣ ಗೋಚರಿಸುತ್ತಿಲ್ಲ. ರವಿವಾರ ನಡೆದ ಹಿಂಸಾಚಾರಕ್ಕೆ ಒಬ್ಬ ಬಲಿಯಾದ ಘಟನೆ ಹಿನ್ನೆಲೆಯಲ್ಲಿ ಸೋಮವಾರ ಶ್ರೀಲಂಕಾದ ಪೆಟ್ರೋಲಿಯಂ ಸಚಿವ, ಮಾಜಿ ಕ್ರಿಕೆಟಿಗ ಅರ್ಜುನ ರಣತುಂಗ ಅವರನ್ನು ಬಂಧಿಸಲಾಗಿದೆ. ರವಿವಾರ ರಣತುಂಗ ಅವರನ್ನು ಅಪಹರಿಸಲು ಪ್ರತಿಭಟನಾಕಾರರು ಯತ್ನಿಸಿದಾಗ ಸಚಿವರ ಅಂಗರಕ್ಷಕರು ಗುಂಡು ಹಾರಿಸಿದ ಪರಿಣಾಮ, ಒಬ್ಬ ಪ್ರತಿಭಟನಾಕಾರ ಸಾವಿಗೀಡಾಗಿದ್ದ. ಇದೇ ವೇಳೆ, ಪ್ರಧಾನಿ ಯಾರು ಎಂಬ ಗೊಂದಲದ ನಡುವೆಯೇ ಮಹಿಂದಾ ರಾಜಪಕ್ಸೆ ಸೋಮವಾರ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಸ್ಪೀಕರ್ ಅವರು ವಿಕ್ರಮಸಿಂಘೆ ಅವರೇ ಪ್ರಧಾನಿ ಎಂದು ರವಿವಾರ ಘೋಷಿಸಿದ್ದರೂ, ರಾಜಪಕ್ಸೆ ಅಧಿಕಾರ ವಹಿಸಿ ಕೊಂಡಿರುವುದು ಅಚ್ಚರಿ ಮೂಡಿಸಿದೆ. ಈ ನಡುವೆ, ಅಮಾನತಿನಲ್ಲಿಟ್ಟಿರುವ ಸಂಸತ್ತನ್ನು ಪುನಾರಂಭಿಸುವಂತೆ ಶ್ರೀಲಂಕಾಕ್ಕೆ ಅಮೆರಿಕ ಎಚ್ಚರಿಕೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Terrorist Organization: ಹಮಾಸ್ ಉಗ್ರ ನಾಯಕ ಯಾಹ್ಯಾ ಸಿನ್ವರ್ ಹತ್ಯೆ
National Day Celebration: ಬಾಂಗ್ಲಾದೇಶ ಸ್ಥಾಪಕ ಮುಜಿಬುರ್ ಸ್ಮರಣೆಗೆ ಸರಕಾರ ಕೊಕ್
Bangladesh ; ಶೇಖ್ ಹಸೀನಾ ಬಂಧನಕ್ಕೆ ಗಡುವು ವಿಧಿಸಿದ ನ್ಯಾಯಮಂಡಳಿ
Argentina: ಹೋಟೆಲ್ ಬಾಲ್ಕನಿಯ 3ನೇ ಮಹಡಿಯಿಂದ ಬಿದ್ದು ಖ್ಯಾತ ಗಾಯಕ ಮೃತ್ಯು
Oxford University: ಆಕ್ಸ್ಫರ್ಡ್ ವಿವಿ ಕುಲಪತಿ ಹುದ್ದೆ… ಭಾರತ ಮೂಲದವರು ರೇಸ್ನಲ್ಲಿ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.