ಮಾಲೀಕನ ಮನೆಯ ಲಾಕರ್‌ ಹೊತ್ತೂಯ್ದ ಆರೋಪಿ ಸೆರೆ


Team Udayavani, Oct 30, 2018, 11:51 AM IST

malikana.jpg

ಬೆಂಗಳೂರು: ಕೈಗಾರಿಕೋದ್ಯಮಿ ಮನೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ವಜ್ರ ಹಾಗೂ ಚಿನ್ನಾಭರಣಗಳನ್ನು ಕಳವು ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಮಡಿವಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಿಹಾರದ ಮದುಬನಿ ಜಿಲ್ಲೆಯ ಅಖೀಲೇಶ್‌ ಕುಮಾರ್‌ (21) ಬಂಧಿತ. ಈತನಿಂದ 90 ಲಕ್ಷ ರೂ. ಮೌಲ್ಯದ 2 ಕೆ.ಜಿ. ವಜ್ರ ಮತ್ತು ಚಿನ್ನಾಭರಣಗಳು ಮತ್ತು ಅರ್ಧ ಕೆ.ಜಿ. ಬೆಳ್ಳಿ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಯು ಉದ್ಯಮಿ ಮನೆಯಲ್ಲಿ ಕೆಲಸ ಮಾಡುತ್ತಿದ್ದ.

ಆರೋಪಿ ಅ.17ರಂದು ಕೈಗಾರಿಕೋದ್ಯಮಿ ಸತ್ಯಪ್ರಕಾಶ್‌ ಮನೆಯಲ್ಲಿ ವಜ್ರ ಮತ್ತು ಚಿನ್ನಾಭರಣ, ಬೆಳ್ಳಿಯ ವಸ್ತುಗಳಿದ್ದ ಲಾಕರ್‌ ಕಳವು ಮಾಡಿದ್ದ. ಈ ಸಂಬಂಧ ತನಿಖೆ ನಡೆಸಿ ಆರೋಪಿಯನ್ನು ಬಿಹಾರದಲ್ಲಿ ಬಂಧಿಸಲಾಗಿದೆ ಎಂದು ನಗರ ಪೊಲೀಸ್‌ ಆಯುಕ್ತ ಟಿ.ಸುನಿಲ್‌ ಕುಮಾರ್‌ ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಆರೋಪಿ ಅಖೀಲೇಶ್‌ ಕುಮಾರ್‌ ಒಂದೂವರೆ ವರ್ಷಗಳ ಹಿಂದೆ ಉದ್ಯಮಿ ಸತ್ಯಪ್ರಕಾಶ್‌ ಮನೆಯಲ್ಲಿ ಅಡುಗೆ ಹಾಗೂ ಮನೆಗೆಲಸ ಮಾಡುತ್ತಿದ್ದ. ಬಳಿಕ ಹೆಚ್ಚಿನ ಸಂಬಳಕ್ಕಾಗಿ ಮುಂಬೈನಲ್ಲಿ ಕೆಲಸ ಮಾಡುತ್ತಿದ್ದ. ಈ ನಡುವೆ ಐದು ತಿಂಗಳ ಹಿಂದೆ ಪರಿಚಯಸ್ಥರ ಮೂಲಕ ಆರೋಪಿಯನ್ನು ಸಂಪರ್ಕಿಸಿದ ಸತ್ಯಪ್ರಕಾಶ್‌, ಮತ್ತೂಮ್ಮೆ ಕೆಲಸಕ್ಕೆ ಕರೆಸಿಕೊಂಡಿದ್ದರು.

ಮನೆಯ ಸದಸ್ಯರ ವಿಶ್ವಾಸ ಗಳಿಸಿದ್ದ ಆರೋಪಿಗೆ ಮನೆಯ ಎಲ್ಲ ಕೊಠಡಿಗಳ ಕೀಗಳನ್ನು ಕೊಟ್ಟಿದ್ದರು. ಇದನ್ನೇ ದುರುಪಯೋಗ ಪಡಿಸಿಕೊಂಡ ಆರೋಪಿ ಅ.17ರಂದು ದಸರಾ ಪ್ರಯುಕ್ತ ಸತ್ಯಪ್ರಕಾಶ್‌ ಕುಟುಂಬ ಸಮೇತ ಊರಿಗೆ ಹೋಗಿದ್ದಾಗ, ಮನೆಯ ಮೊದಲನೇ ಮಹಡಿಯ ಕೊಠಡಿಯ ಕಬೋರ್ಡ್‌ನಲ್ಲಿ ಅಳವಡಿಸಿದ್ದ ಲಾಕರ್‌ ಅನ್ನು ಕದ್ದೊಯ್ದಿದ್ದ.

ಇದರಲ್ಲಿ 2 ಕೆ.ಜಿ. ವಜ್ರ ಮತ್ತು ಚಿನ್ನದ ಒಡವೆಗಳು ಹಾಗೂ ಅರ್ಧ ಕೆ.ಜಿ. ಬೆಳ್ಳಿ ವಸ್ತುಗಳು ಇದ್ದವು. ಈ ಬಗ್ಗೆ ಸತ್ಯಪ್ರಕಾಶ್‌ ಮಡಿವಾಳ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಆಗ್ನೇಯ ವಿಭಾಗದ ಡಿಸಿಪಿ ಡಾ.ಬೋರಲಿಂಗಯ್ಯ ವಿಶೇಷ ತಂಡ ರಚಿಸಿದ್ದರು. ಈ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ ಎಂದು ಅವರು ಹೇಳಿದರು.

ರೈಲು ಏರಿ ಬಿಹಾರಕ್ಕೆ ಪರಾರಿ: ಆರೋಪಿ ಅಖೀಲೇಶ್‌ ಮನೆಯಿಂದ ಲಾಕರ್‌ನ್ನು ಕೊಂಡೊಯ್ದು ಇಂದಿರಾನಗರದಲ್ಲಿ ಲಾಕರ್‌ನ್ನು ಹೊಡೆದು, ಅದರಲ್ಲಿದ್ದ ವಜ್ರ, ಚಿನ್ನಾಭರಣಗಳನ್ನು ತೆಗೆದುಕೊಂಡು, ರೈಲು ಮಾರ್ಗದ ಮೂಲಕ ಬಿಹಾರಕ್ಕೆ ಹೋಗಿದ್ದ. ಮತ್ತೂಂದೆಡೆ ಆರೋಪಿಯ ಬೆನ್ನುಬಿದ್ದಿದ್ದ ವಿಶೇಷ ತಂಡ ಆರೋಪಿಯ ಬಗ್ಗೆ ಮಾಹಿತಿ ಸಂಗ್ರಹಿಸಿ ವಿಮಾನದ ಮೂಲಕ ಬಿಹಾರದ ಮದುಬನಿ ಜಿಲ್ಲೆ ತಲುಪಿತ್ತು. ಬಳಿಕ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದೆ ಎಂದರು.

ಗದ್ದೆಯಲ್ಲಿ ಚಿನ್ನಾಭರಣ ಹೂತಿಟ್ಟ ಖದೀಮ: ಆರೋಪಿ ಕಳವು ಮಾಡಿದ ಚಿನ್ನಾಭರಣ, ಬೆಳ್ಳಿ, ವಜ್ರದ ಆಭರಣಗಳನ್ನು ಮನೆ ಹತ್ತಿರದ ಗದ್ದೆಯಲ್ಲಿ ಗುಂಡಿಗಳನ್ನು ತೆಗೆದು ಚೀಲದಲ್ಲಿ ಹೂತು ಹಾಕಿದ್ದ. ಕೆಲ ದಿನಗಳ ಬಳಿಕ ಅವುಗಳನ್ನು ಬಿಹಾರ ಹಾಗೂ ಕೋಲ್ಕತ್ತಾದಲ್ಲಿ ಮಾರಾಟ ಮಾಡಲು ಸಿದ್ಧತೆ ನಡೆಸಿದ್ದ.

ಅಷ್ಟರಲ್ಲಿ ಆರೋಪಿಯನ್ನು ಬಂಧಿಸಿ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್‌ ಆಯುಕ್ತ ಟಿ.ಸುನಿಲ್‌ ಕುಮಾರ್‌ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಹೆಚ್ಚುವರಿ ಪೊಲೀಸ್‌ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್‌, ಡಿಸಿಪಿ ಡಾ.ಬೋರಲಿಂಗಯ್ಯ, ಮಡಿವಾಳ ಎಸಿಪಿ ಸೋಮೇಗೌಡ, ಮಡಿವಾಳ ಇನ್ಸ್‌ಪೆಕ್ಟರ್‌ ಭರತ್‌, ಪಿಎಸ್‌ಐ ಸಂಜೀವ್‌ ಕುಮಾರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Kidnapping Case: ವ್ಯಕ್ತಿಯ ಅಪಹರಿಸಿ ಸುಲಿಗೆಗೈದ 8 ಮಂದಿ ಬಂಧನ

Kidnapping Case: ವ್ಯಕ್ತಿಯ ಅಪಹರಿಸಿ ಸುಲಿಗೆಗೈದ 8 ಮಂದಿ ಬಂಧನ

Younis Zaroora: ಎಂಜಿ ರಸ್ತೇಲಿ ಇನ್‌ಸ್ಟಾಗ್ರಾಮ್‌ ಸ್ಟಾರ್‌ ಯೂನಿಸ್‌ ನೋಡಲು ಕಿಕ್ಕಿರಿದ ಜನ

Younis Zaroora: ಎಂಜಿ ರಸ್ತೇಲಿ ಇನ್‌ಸ್ಟಾಗ್ರಾಮ್‌ ಸ್ಟಾರ್‌ ಯೂನಿಸ್‌ ನೋಡಲು ಕಿಕ್ಕಿರಿದ ಜನ

Private bus: ಖಾಸಗಿ ಬಸ್‌ಗಳಿಂದ ಬೇಕಾಬಿಟ್ಟಿ ದರ ವಸೂಲಿ

Private bus: ಖಾಸಗಿ ಬಸ್‌ಗಳಿಂದ ಬೇಕಾಬಿಟ್ಟಿ ದರ ವಸೂಲಿ

2-bng

Bengaluru: ನಗರದೆಲ್ಲೆಡೆ ಟ್ರಾಫಿಕ್ ಜಾಮ್‌, ಮೆಜೆಸ್ಟಿಕ್‌ ರಷ್‌! ‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.