ಸಿಎಂ ಕುಮಾರಸ್ವಾಮಿಗೂ ಮೀ ಟೂ ಎಚ್ಚರಿಕೆ! ಕುಮಾರ್ ಬಂಗಾರಪ್ಪ ಆಕ್ರೋಶ
Team Udayavani, Oct 30, 2018, 1:26 PM IST
ಶಿವಮೊಗ್ಗ: ಬಾಲಿವುಡ್, ಸ್ಯಾಂಡಲ್ ವುಡ್ ನಲ್ಲಿ ಬಿರುಗಾಳಿ ಬೀಸಿದ್ದ ಮೀ ಟೂ ಅಭಿಯಾನ ಇದೀಗ ರಾಜಕೀಯ ರಂಗಕ್ಕೂ ಪ್ರವೇಶಿಸಲು ಬಿಜೆಪಿ ಮುಖಂಡ, ಶಾಸಕ ಕುಮಾರ್ ಬಂಗಾರಪ್ಪ ವೇದಿಕೆ ಹಾಕಿಕೊಟ್ಟಿದ್ದಾರೆ. ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರೇ ನೀವೂ ಕೂಡಾ ಮೀ ಟೂ ಅಭಿಯಾನದಲ್ಲಿ ಸಿಕ್ಕಿಹಾಕಿಕೊಳ್ಳುತ್ತೀರಿ ಎಚ್ಚರ ಎಂದು ಹೇಳುವ ಮೂಲಕ ಬಾಂಬ್ ಸಿಡಿಸಿದ್ದಾರೆ.
ಮಂಗಳವಾರ ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಹಾಸನ ಜಿಲ್ಲೆಯಲ್ಲಿ ಯಾಕೆ ಅವರನ್ನು ಚುನಾವಣಾ ಅಖಾಡಕ್ಕೆ ನಿಲ್ಲಿಸುತ್ತಿಲ್ಲ. ಯಾರನ್ನ ಸರ್ ಎಂದಾಗ..ಯಾರನ್ನು ಇಟ್ಟುಕೊಂಡಿದ್ದಾರೋ ಅವರನ್ನು..ಸಾಮಾಜಿಕ ಜಾಲತಾಣದಲ್ಲಿ ರಾಧಿಕಾ ಕುಮಾರಸ್ವಾಮಿ ಅಂತ ಹಾಕಿಕೊಂಡಿದ್ದಾರಲ್ಲ ಅವರನ್ನು ಎಂದು ವಾಗ್ದಾಳಿ ನಡೆಸಿದರು.
ಸಿಎಂ ಕುಮಾರಸ್ವಾಮಿ ಅವರ ವೈಯಕ್ತಿಕ ವಿಚಾರ ಕೆದಕಿದ ಕುಮಾರ್ ಬಂಗಾರಪ್ಪ ಅವರು, ಕೇವಲ ಚುನಾವಣೆಗಾಗಿ ನಮ್ಮ ಕುಟುಂಬವನ್ನು ಬೀದಿಗೆ ತರುತ್ತಿದ್ದೀರಾ? ನನ್ನ ವೈಯಕ್ತಿವಾಗಿ ತೇಜೋವಧೆ ಮಾಡಿದ್ದಕ್ಕೆ, ನಾನೂ ಕೂಡಾ ನಿಮ್ಮ ವೈಯಕ್ತಿಕ ವಿಚಾರ ಬಹಿರಂಗವಾಗಿ ಹೇಳುತ್ತಿದ್ದೇನೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹೆಸರು ರಾಧಿಕಾ ಕುಮಾರಸ್ವಾಮಿ ಅಂತ ಬಳಸಿಕೊಳ್ಳುತ್ತಿದ್ದಾರೆ, ಸಾಮಾಜಿಕ ಜಾಲತಾಣದಲ್ಲಿ ಫೋಟೋವನ್ನು ಕೂಡಾ ಹಾಕಿಕೊಂಡಿದ್ದಾರೆ. ಹೀಗಾಗಿ ಯಾರಿಗೆ ಶೋಷಣೆಯಾಗಿದೆಯೋ ಅವರು ದೂರು ನೀಡಿದರೆ, ನೀವೂ ಕೂಡಾ ಮೀ ಟೂ ಆರೋಪದಡಿ ಸಿಲುಕಿಕೊಳ್ಳುತ್ತೀರಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
Result: ಇಂದು ಯುಜಿನೀಟ್ ಪರಿಷ್ಕೃತ ತಾತ್ಕಾಲಿಕ ಫಲಿತಾಂಶ ಪ್ರಕಟ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.