ಕಾಂಕ್ರೀಟ್‌ ಕಾಮಗಾರಿಗೆ ಅಂದಾಜುಪಟ್ಟಿ ತಯಾರಿ


Team Udayavani, Oct 30, 2018, 4:05 PM IST

30-october-13.gif

ಕಡಬ: ಕಡಬ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಕುಂತೂರುಪದವು ಮುರಚಡವು ಎನ್ನುವಲ್ಲಿಂದ ಬೀರಂತಡ್ಕ ಬಲಮುರಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಶ್ರೀ ರಾಜನ್‌ ದೈವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ನಾಲ್ಕೂವರೆ ಕಿ.ಮೀ. ಉದ್ದದ ಮಣ್ಣಿನ ರಸ್ತೆಗೆ ಕಾಂಕ್ರೀಟ್‌ ಕಾಮಗಾರಿ ನಡೆಸಲು ಅಂದಾಜು ಪಟ್ಟಿ ತಯಾರಿಸಲಾಯಿತು.

ಕುಂತೂರು ಗ್ರಾಮದ ಬೀರಂತಡ್ಕ ಬಲಮುರಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಶ್ರೀ ರಾಜನ್‌ ದೈವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ಗ್ರಾಮ ಪಂಚಾಯತ್‌ ರಸ್ತೆ ಇದಾಗಿದ್ದು, ಮಣ್ಣಿನ ರಸ್ತೆಯಾಗಿರುವುದರಿಂದ ಮಳೆಗಾಲದಲ್ಲಿ ಸಂಪೂರ್ಣ ಕೆಸರುಮಯಗೊಂಡಿದೆ. ವಾಹನ ಓಡಾಟಕ್ಕೆ, ಶಾಲಾ ಮಕ್ಕಳಿಗೆ, ಸಾರ್ವಜನಿಕರಿಗೆ ನಡೆದುಕೊಂಡು ಹೋಗಲು ತೊಂದರೆಯಾಗಿತ್ತು. ಈ ಹಿನ್ನೆಲೆಯಲ್ಲಿ ರಸ್ತೆ ಕಾಂಕ್ರೀಟ್‌ ಕಾಮಗಾರಿಗೆ ಅನುದಾನ ಮಂಜೂರುಗೊಳಿಸುವಂತೆ ಜಿಲ್ಲಾ ಪರಿಷತ್‌ ಮಾಜಿ ಸದಸ್ಯ ಸಯ್ಯದ್‌ ಮೀರಾ ಸಾಹೇಬ್‌ ಅವರ ಮೂಲಕ ಮನವಿ ಮಾಡಲಾಗಿತ್ತು.

ಮನವಿಗೆ ಸ್ಪಂದನೆ
ಮನವಿಗೆ ಸ್ಪಂದಿಸಿದ ಸಚಿವರು ಕ್ರಿಯಾ ಯೋಜನೆ ತಯಾರಿಸಿ ಕಳುಹಿಸಿಕೊಡುವಂತೆ ಲೋಕೋಪಯೋಗಿ ಇಲಾಖೆ ಹಾಗೂ ಜಿ.ಪಂ. ಎಂಜಿನಿಯರ್‌ ಇಲಾಖೆಗೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಜಿ.ಪಂ. ಸಹಾಯಕ ಎಂಜಿನಿಯರ್‌ ಸಂದೀಪ್‌ ಅವರು ಸ್ಥಳಕ್ಕೆ ಭೇಟಿ ನೀಡಿ ರಸ್ತೆ ಪರಿಶೀಲನೆ ನಡೆಸಿದ್ದಾರೆ. ರಸ್ತೆಯ ಉದ್ದ, ಅಳವಡಿಸಬೇಕಾದ ಮೋರಿಗಳ ಲೆಕ್ಕಾಚಾರ ಹಾಕಿ ಒಟ್ಟು 2.70 ಕೋಟಿ ರೂ. ಮೊತ್ತದ ಕ್ರಿಯಾಯೋಜನೆ ತಯಾರಿಸಿದ್ದಾರೆ.

ಜಿಲ್ಲಾ ಪರಿಷತ್‌ ಮಾಜಿ ಸದಸ್ಯ ಸಯ್ಯದ್‌ ಮೀರಾ ಸಾಹೇಬ್‌ ಅವರು ಎಂಜಿನಿಯರ್‌ ಅವರಿಗೆ ಪೂರಕ ಮಾಹಿತಿ ನೀಡಿದರು. ದೇವಸ್ಥಾನದ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಯಾದವ್‌ ಬೀರಂತಡ್ಕ, ಮೋನಪ್ಪ ಗೌಡ ಬೀರಂತಡ್ಕ, ಜಿ.ಪಂ. ಎಂಜಿನಿಯರ್‌ ಭರತ್‌ ಉಪಸ್ಥಿತರಿದ್ದರು.

ರಸ್ತೆ ಕಾಂಕ್ರೀಟ್‌ ಕಾಮಗಾರಿಗೆ ಬಲಮುರಿ ದೇವಸ್ಥಾನದ ಆಡಳಿತ ಮಂಡಳಿಯವರ ಮನವಿಯಂತೆ ಕಡಬ ಜಿಲ್ಲಾ ಪರಿಷತ್‌ ಮಾಜಿ ಸದಸ್ಯ ಸಯ್ಯದ್‌ ಮೀರಾ ಸಾಹೇಬ್‌ ರವರ ಮೂಲಕ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ, ಪಿಡಬ್ಲ್ಯುಡಿ ಸಚಿವ ಎಚ್‌. ಡಿ. ರೇವಣ್ಣ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡರಿಗೆ ಮನವಿ ಸಲ್ಲಿಸಲಾಗಿತು.

ಟಾಪ್ ನ್ಯೂಸ್

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Bantwala: ಶರಣ್ ಪಂಪುವೆಲ್ ಗೆ ಸವಾಲು ಹಾಕಿದ ಶರೀಫ್: ಬಂಟ್ವಾಳದಲ್ಲಿ ಬಿಗುವಿನ ವಾತಾವರಣ

Bantwala: ಶರಣ್ ಪಂಪ್ ವೆಲ್ ಗೆ ಸವಾಲು ಹಾಕಿದ ಶರೀಫ್… ಬಂಟ್ವಾಳದಲ್ಲಿ ಬಿಗುವಿನ ವಾತಾವರಣ

police

Eid Milad: ರ್‍ಯಾಲಿ ವಿಚಾರ ಪ್ರಚೋದನಕಾರಿ ಹೇಳಿಕೆ: ಇಬ್ಬರ ವಿರುದ್ಧ ಪ್ರಕರಣ ದಾಖಲು

Cocoa; ವ್ಯಾಪಕವಾಗಿ ಕರಟಿದ ಕೊಕ್ಕೋ; ವಿಪರೀತ ಮಳೆ ತಂದೊಡ್ಡಿದೆ ಬೆಳೆಗಾರರಿಗೆ ಭಾರೀ ನಷ್ಟ

Cocoa; ವ್ಯಾಪಕವಾಗಿ ಕರಟಿದ ಕೊಕ್ಕೋ; ವಿಪರೀತ ಮಳೆ ತಂದೊಡ್ಡಿದೆ ಬೆಳೆಗಾರರಿಗೆ ಭಾರೀ ನಷ್ಟ

ಸುಳ್ಯ: ಬೈಕ್‌ ಗಳ ನಡುವೆ ಅಪಘಾತ

Sullia: ಬೈಕ್‌ ಗಳ ನಡುವೆ ಅಪಘಾತ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.