ಕಾರ್ನಾಡು ಜಂಕ್ಷನ್‌: ದಾರಿದೀಪ ಸಮಸ್ಯೆ


Team Udayavani, Oct 31, 2018, 10:27 AM IST

31-october-3.gif

ಮೂಲ್ಕಿ : ದಾರಿ ದೀಪದ ವ್ಯವಸ್ಥೆ ಸರಿಯಾಗಿಲ್ಲದೇ ರಾಷ್ಟ್ರೀಯ ಹೆದ್ದಾರಿ ಜಂಕ್ಷನ್‌ ಅಪಘಾತ ವಲಯವಾಗಿ ಪರಿಣಮಿಸಿದೆ. ಮೂಲ್ಕಿ ಸಮೀಪದ ಕಾರ್ನಾಡು ಕೈಗಾರಿಕಾ ಪ್ರದೇಶದ ಸಮೀಪದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಜಂಕ್ಷನ್‌ನಲ್ಲಿ ನಿತ್ಯವೂ ಅಪಘಾತಗಳು ಸಂಭವಿಸುತ್ತಿದ್ದು, ಇದಕ್ಕೆ ಇಲ್ಲಿ ದಾರಿ ದೀಪದ ವ್ಯವಸ್ಥೆ ಸರಿಯಾಗಿಲ್ಲದಿರುವುದೇ ಮುಖ್ಯ ಕಾರಣವಾಗಿದೆ.

ಈ ಜಂಕ್ಷನ್‌ನಲ್ಲಿ ಕಾರ್ನಾಡು ಸದಾಶಿವ ರಾವ್‌ ನಗರ ಮತ್ತು ಕಿನ್ನಿಗೋಳಿ ಮತ್ತು ಮೂಲ್ಕಿ ರೈಲು ನಿಲ್ದಾಣಕ್ಕೆ ತೆರಳುವ ನೂರಾರು ವಾಹನಗಳು  ಸಂಚರಿಸುತ್ತಿದೆ. ಕತ್ತಲೆಯಲ್ಲಿ ಇಲ್ಲಿ ಸಂಚಾರ ಸಂಚಕಾರವಾಗುತ್ತಿದೆ. ನಿತ್ಯವೂ ರಾತ್ರಿ ವೇಳೆ ಬಸ್‌ ಇಳಿದು ಕತ್ತಲೆಯಲ್ಲಿ ರಸ್ತೆ ದಾಟಲು ಸಾರ್ವಜನಿಕರು ಪರದಾಡುವಂತಾಗಿದೆ.

ಮೂಲ್ಕಿ ನಗರ ಪಂಚಾಯತ್‌ನ ಕಾರ್ನಾಡು ಗ್ರಾಮದ ಗಡಿ ಪ್ರದೇಶವಾಗಿರುವ ಈ ಪ್ರದೇಶದಿಂದ ನಿತ್ಯ ಬಸ್‌ ಗಳು ಮಂಗಳೂರು, ಉಡುಪಿ ಮತ್ತು ಕಾರ್ಕಳದತ್ತ ಸಂಚರಿಸುತ್ತದೆ. ನಿತ್ಯವೂ ಸಾವಿರಾರು ಮಂದಿ ವಾಹನಗಳು ಸಂಚರಿಸುವ ಈ ಭಾಗದಲ್ಲಿ ತುರ್ತಾಗಿ ಹೆದ್ದಾರಿ ಇಲಾಖೆಯಿಂದ ದಾರಿ ದೀಪದ ವ್ಯವಸ್ಥೆ ಮಾಡಬೇಕಾಗಿದೆ. ಕಾರ್ನಾಡು ಬೈಪಾಸ್‌ನ ಲಾರಿ ಬೇವರೆಗೆ ಇರುವ ದಾರಿ ದೀಪವನ್ನು ಈ ಕಡೆಗೂ ವಿಸ್ತರಿಸಬೇಕು ಎಂದು ಸ್ಥಳೀಯರು ಆಗ್ರಹಿಸುತ್ತಿದ್ದಾರೆ. 

ಹೆದ್ದಾರಿ ಇಲಾಖೆಗೆ ಪತ್ರ
ನಗರ ಪಂಚಾಯತ್‌ ವ್ಯಾಪ್ತಿಯ ಬಿಜಾಪುರ ಕಾಲನಿಯ ಸಹಸ್ರಾರು ಕೂಲಿ ಕಾರ್ಮಿಕರು ಮಾತ್ರವಲ್ಲದೆ, ಸಮೀಪದ ಕಿಲ್ಪಾಡಿ, ಕಿನ್ನಿಗೋಳಿ, ಪುನರೂರು ಮತ್ತು ಇತರ ಪ್ರದೇಶಗಳ ಜನರು ಈ ಜಂಕ್ಷನ್‌ ಅನ್ನು ಹೆಚ್ಚಾಗಿ ಬಳಸುತ್ತಾರೆ. ಇಲ್ಲಿನ ರಸ್ತೆಯುದ್ದಕ್ಕೂ ದಾರಿದೀಪ ಅಳವಡಿಸಿ ರಸ್ತೆ ಸುರಕ್ಷೆಗೆ ಸಹಕರಿಸುವಂತೆ ನಗರ ಪಂಚಾಯತ್‌ನಿಂದ ಹೆದ್ದಾರಿ ಇಲಾಖೆಗೆ ಈ ಹಿಂದೆಯೇ ಪತ್ರ ಬರೆಯಲಾಗಿದೆ.
 - ಸುನಿಲ್‌ ಆಳ್ವ, ಅಧ್ಯಕ್ಷ, ನಗರ ಪಂಚಾಯತ್‌ ಮೂಲ್ಕಿ

ದಾರಿ ದೀಪ ಅಳವಡಿಸಿದರೆ ಸಮಸ್ಯೆ ಪರಿಹಾರ
ಮೂಲ್ಕಿ ಠಾಣಾ ವ್ಯಾಪ್ತಿಯ ಈ ಪ್ರದೇಶದಲ್ಲಿ ರಾತ್ರಿ ಮತ್ತು ಬೆಳಗ್ಗೆ ಬಹಳಷ್ಟು ಜನರು ಪ್ರಯಾಣಿಸುತ್ತಾರೆ. ದೂರದ ಪ್ರದೇಶಗಳಿಗೆ ತಮ್ಮ ವಾಹನಗಳನ್ನು ಇಲ್ಲಿ ನಿಲ್ಲಿಸಿ ಬಸ್‌ಗಳ ಮೂಲಕ ಹೋಗವವರು, ಪಾದಚಾರಿ ಹಾಗೂ ಸಾವಿರಾರು ಕೂಲಿ ಕಾರ್ಮಿಕರು ಈ ಜಂಕ್ಷನ್‌ ಮೂಲಕ ತೆರಳುತ್ತಾರೆ. ರಾತ್ರಿ ವೇಳೆ ಇಲ್ಲಿ ಕತ್ತಲೆ ಹೆಚ್ಚಾಗಿರುವುದರಿಂದ ಈಗಾಗಲೇ ಈ ಪ್ರದೇಶದಲ್ಲಿ ಸಾಕಷ್ಟು ಅವಘಡಗಳು ಸಂಭವಿಸಿವೆ. ದಾರಿ ದೀಪ ಅಳವಡಿಸಿದಲ್ಲಿ ಇದು ನಿಯಂತ್ರಣಕ್ಕೆ ಬರಲು ಸಾಧ್ಯ.
– ಅನಂತಪದ್ಮನಾಭ
ಠಾಣಾಧಿಕಾರಿ, ಮೂಲ್ಕಿ, ಪೊಲೀಸ್‌ ಠಾಣೆ 

ಸರ್ವೋತ್ತಮ ಅಂಚನ್‌ ಮೂಲ್ಕಿ

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.