ಕರಾವಳಿ ಮೀನುಗಾರರಲ್ಲಿಯೂ ಹೆಚ್ಚಿದ ಆತಂಕ


Team Udayavani, Oct 31, 2018, 10:31 AM IST

karavali-meenugararu.png

ಮಂಗಳೂರು: ವಾಣಿಜ್ಯ ಹಡಗುಗಳ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಲು ಸಮುದ್ರದಲ್ಲಿ 15ರಿಂದ 20 ನಾಟಿಕಲ್‌ ಮೈಲುಗಳ ನಡುವಣ ವಲಯವನ್ನು “ಶಿಪ್ಪಿಂಗ್‌ ಕಾರಿಡಾರ್‌’ ಆಗಿ ಘೋಷಿಸಿ ಮೀನುಗಾರಿಕೆ ನಿಷೇಧಿಸಲು ಕೇಂದ್ರ ನೌಕಾಯಾನ ಸಚಿವಾಲಯ ತೀರ್ಮಾನಿಸಿದೆ. ಇದು ಮೀನುಗಾರಿಕೆಯನ್ನು ನಂಬಿರುವ ಲಕ್ಷಾಂತರ ಮಂದಿಗೆ ಸಂಕಷ್ಟ ತರುವ ಆತಂಕವಿದೆ. 

ಸಮುದ್ರದಲ್ಲಿ 15ರಿಂದ 20 ನಾಟಿಕಲ್‌ ಮೈಲು ನಡುವಣ 5 ನಾಟಿಕಲ್‌ ಮೈಲು ವಲಯವನ್ನು ಶಿಪ್ಪಿಂಗ್‌ ಕಾರಿಡಾರ್‌ ಆಗಿ ಗುರುತಿಸಲು ಶಿಪ್ಪಿಂಗ್‌ ಮಹಾನಿರ್ದೇಶಕರು (ಡಿಜಿಎಸ್‌) ಉದ್ದೇಶಿಸಿದ್ದಾರೆ. ಮೀನುಗಾರಿಕೆ ದೋಣಿಗಳು ಹಾಗೂ ವಾಣಿಜ್ಯ ಹಡಗುಗಳ ಢಿಕ್ಕಿ ತಪ್ಪಿಸುವುದು ಇದರ ಮುಖ್ಯ ಉದ್ದೇಶ. ಈ ಪ್ರಸ್ತಾವನೆ ವಿರೋಧಿಸಿ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಮೀನುಗಾರರು ಮುಂದಾಗಿದ್ದಾರೆ.

ಶಿಪ್ಪಿಂಗ್‌ ಕಾರಿಡಾರ್‌ ಗುಜರಾತ್‌ನ ಕಚ್‌fನಿಂದ ಕರ್ನಾಟಕ-ಕೇರಳ ವರೆಗಿನ ಪ. ಕರಾವಳಿ ಹಾಗೂ ಪೂರ್ವ ಕರಾವಳಿಯ ಸುಮಾರು 3 ಕೋಟಿ ಮೀನು ಗಾರರ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. 2,300 ಕಿ.ಮೀ. ಉದ್ದ ಹಾಗೂ 37.04 ಕಿ.ಮೀ. (20 ನಾಟಿಕಲ್‌ ಮೈಲ್‌) ಅಗಲ ಪ್ರದೇಶದಲ್ಲಿ ಮೀನುಗಾರಿಕೆ ನಿಷೇಧವಾಗಿ ಒಟ್ಟು 85,000 ಚ. ಕಿ.ಮೀ. ಪ್ರದೇಶ ಮೀನುಗಾರಿಕೆ ಚಟುವಟಿಕೆಯಿಂದ ವಂಚಿತವಾಗಲಿದೆ. ಈ ಅಧಿಸೂಚನೆ ಪ್ರಕಟವಾದರೆ ಯಾಂತ್ರೀಕೃತ ದೋಣಿಗಳು ತೀರದಿಂದ 20 ನಾ. ಮೈಲು ದೂರದವರೆಗೆ ಮೀನುಗಾರಿಕೆ ಮಾಡುವಂತಿಲ್ಲ. ಸಣ್ಣ ಮೀನುಗಾರಿಕೆ ದೋಣಿಗಳು 27.78 ಕಿ.ಮೀ. (15 ನಾಟಿಕಲ್‌ ಮೈಲು) ಕಿ.ಮೀ.ಯಿಂದಾಚೆಗೆ ಮೀನುಗಾರಿಕೆಗೆ ಹೋಗುವಂತಿಲ್ಲ.

ಸರಕಾರ ಈ ನಿರ್ಧಾರ ಕೈಗೊಳ್ಳುವುದಕ್ಕೆ ಮುನ್ನ ಮೀನುಗಾರ ಸಮುದಾಯ, ಸಂಘಟನೆಗಳ ಜತೆ ಚರ್ಚಿಸಿಲ್ಲ. ಮೀನುಗಳ ನಿಕ್ಷೇಪ ಇಂಥಲ್ಲೇ ಇರುತ್ತದೆ ಎಂದು ಹೇಳಲಾಗದು. ಅದರ ಜಾಡು ಹಿಡಿದು ಮೀನುಗಾರಿಕೆ ಬೋಟುಗಳು ಚಲಿಸಬೇಕಾಗುತ್ತದೆ. ಭಾರತಕ್ಕೆ ಸೇರಿದ ಸಮುದ್ರ ಭಾಗದಲ್ಲಿ 200 ನಾಟಿಕಲ್‌ ಮೈಲುವರೆಗೆ ನಮಗೆ ಮೀನುಗಾರಿಕೆ ನಡೆಸಲು ಅವಕಾಶವಿದೆ. ಉದ್ದೇಶಿತ ಶಿಪ್ಪಿಂಗ್‌ ಕಾರಿಡಾರ್‌ ಪ್ರದೇಶವೇ ಮೀನುಗಾರಿಕೆಯ ಪ್ರಮುಖ
ತಾಣ. ಆದುದರಿಂದ ಇಲ್ಲಿ ನಿಷೇಧ ಸರಿಯಲ್ಲ ಎಂದು ಮೀನುಗಾರಿಕೆ ಸಂಘಟನೆಗಳು ಹೇಳುತ್ತಿವೆ. 

ಈವರೆಗೆ ಶಿಪ್ಪಿಂಗ್‌ ಕಾರಿಡಾರ್‌ ಇರಲಿಲ್ಲ. ಈಗ ಕೇಂದ್ರ ಸರಕಾರ ಸಾಗರಮಾಲಾ ಯೋಜನೆಯಡಿ ವಾಣಿಜ್ಯ ಹಡಗುಗಳ ಸಂಚಾರಕ್ಕೆ ನಿರ್ದಿಷ್ಟ ಪಥ ಗುರುತಿಸಲು ಉದ್ದೇಶಿಸಿದೆ. ಇದೊಂದು ಉತ್ತಮ ಕ್ರಮ ಎಂಬುದು ವಾಣಿಜ್ಯ ಹಡಗಿನ ಮಾಜಿ ಕ್ಯಾಪ್ಟನ್‌ ಒಬ್ಬರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

ಪ್ರತಿಭಟನೆ
ಕೇಂದ್ರ ಸರಕಾರದ ನೌಕಾ ಯಾನ ಸಚಿವಾಲಯದ ಪ್ರಸ್ತಾವನೆಯನ್ನು ಪ್ರತಿಭಟಿಸಿ ದೇಶಾದ್ಯಂತ ಅ. 30ರಂದು ಪ್ರತಿಭಟನೆ ನಡೆದಿದೆ. ಮಂಗಳೂರು ಹಾಗೂ ಮಲ್ಪೆಯಲ್ಲೂ ಟ್ರಾಲ್‌ಬೋಟು, ಪರ್ಸಿನ್‌ ಹಾಗೂ ಗಿಲ್‌ನೆಟ್‌ ಬೋಟುಗಳ ಮೀನುಗಾರರು ಸಭೆ ನಡೆಸಿ ಸಾಂಕೇತಿಕ ಪ್ರತಿಭಟನೆ ನಡೆಸಿದ್ದಾರೆ.

ಶಿಪ್ಪಿಂಗ್‌ ಕಾರಿಡಾರ್‌ ರೂಪಿಸಿ, ಮೀನುಗಾರಿಕೆ ನಿಷೇಧಿಸುವ ಕೇಂದ್ರದ ಪ್ರಸ್ತಾವನೆ ಮೀನುಗಾರಿಕೆಗೆ ತೀವ್ರ ಹೊಡೆತ ನೀಡಲಿದೆ. ಇದರ ವಿರುದ್ಧ ರಾಷ್ಟ್ರೀಯ ಮೀನುಗಾರರ ವೇದಿಕೆ ತೀವ್ರ ವಿರೋಧ ವ್ಯಕ್ತಪಡಿಸಿದೆ. ಅ.30ರಂದು ದೇಶಾದ್ಯಂತ ಒಂದು ದಿನದ ಪ್ರತಿಭಟನೆ ನಡೆದಿದ್ದು, ಇಲ್ಲೂ ಮೀನುಗಾರರು ಸಾಂಕೇತಿಕ ಪ್ರತಿಭಟನೆ ನಡೆಸಿದ್ದಾರೆ.

-ವಾಸುದೇವ ಬೋಳೂರು, ರಾ. ಮೀನುಗಾರರ ವೇದಿಕೆ ಉಪಾಧ್ಯಕ್ಷ 

– ಕೇಶವ ಕುಂದರ್‌

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Kulai: ಬೃಹತ್‌ ಟ್ರಕ್‌ ಓಡಾಟದಿಂದ ರಸ್ತೆಗೆ ಹಾನಿ

10

Lalbagh: ಪಾಲಿಕೆ ಚುನಾವಣೆ ಸನ್ನಿಹಿತ; ಮೀಸಲಾತಿಯದೇ ಆತಂಕ!

7–ullala

Ullala: ಇನ್ಸ್‌ಪೆಕ್ಟರ್ ಕೊಠಡಿಯೊಳಗೆಯೇ ಹಿಂದೂ ಸಂಘಟನೆ ಮುಖಂಡನಿಗೆ ಮುಸ್ಲಿಂ ಯುವಕ ಹಲ್ಲೆ

7

Mangaluru: ನಿತ್ಯ ಟ್ರಾಫಿಕ್‌ ಜಾಮ್‌ ಗೋಳು; ವಾಹನ ಸವಾರರ ಪರದಾಟ

Crime

Mangaluru: ಬಸ್‌ ನಿರ್ವಾಹಕನ ಕೊಲೆ; ಆರೋಪಿಗಳ ಸುಳಿವು ಲಭ್ಯ?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.