ತತ್‌ಕ್ಷಣ ದುರಸ್ತಿ ಮಾಡಿ: ಶಾಸಕರ ಸೂಚನೆ


Team Udayavani, Oct 31, 2018, 12:16 PM IST

31-october-8.gif

ಬಂಟ್ವಾಳ : ಬಿ.ಸಿ. ರೋಡ್‌ ನಗರದ ಹೃದಯ ಭಾಗದಲ್ಲಿ ನಗರ ನೀರು ಸರಬರಾಜು ಒಳ ಚರಂಡಿ ಮಂಡಳಿಯು ಇತ್ತೀಚೆಗೆ ಪೈಪ್‌ಲೈನ್‌ ದುರಸ್ತಿಗಾಗಿ ಕಾಂಕ್ರಿಟ್‌ ರಸ್ತೆಯನ್ನು ಒಡೆದು ಹಾಕಿದ್ದು ಸರ್ವಿಸ್‌ ರಸ್ತೆಯಲ್ಲಿ ಸಂಚಾರ ಅಡಚಣೆ ಬಗ್ಗೆ ಸಾರ್ವಜನಿಕರಿಂದ ದೂರು ವ್ಯಕ್ತವಾಗಿದ್ದು ಬಂಟ್ವಾಳ ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಸಂಬಂಧಪಟ್ಟ ಅಧಿಕಾರಿಗಳನ್ನು ಅ. 30ರಂದು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಕಾಂಕ್ರಿಟೀಕೃತ ರಸ್ತೆಯನ್ನು ಒಡೆದು ಯಾವುದೇ ಸುರಕ್ಷಾ ಕ್ರಮಗಳನ್ನು ಅಳವಡಿಸದೆ ಗುಂಡಿಯನ್ನು ಹಾಗೇ ಬಿಟ್ಟಿರುವುದು, ವಾಹನ ಸಂಚಾರಕ್ಕೆ ಅಡಚಣೆ ಮಾಡಿರುವುದರಿಂದ ಜನರಿಗೆ ತೊಂದರೆ ಆಗಿದೆ. ತಕ್ಷಣಕ್ಕೆ ದುರಸ್ತಿ ಕಾರ್ಯ ನಡೆಸಿ ಗುಂಡಿ ಮುಚ್ಚಿಸುವಂತೆ ಶಾಸಕರು ಸೂಚಿಸಿದರು.

ಬುಧವಾರದೊಳಗೆ ಬಗೆಹರಿಸಿ
ಪೈಪ್‌ ಒಡೆದು ಕುಡಿಯುವ ನೀರು ಪೋಲಾಗುವುದನ್ನು ತಡೆಯಲು ರಸ್ತೆಯನ್ನು ಅಗೆದು ಹಾಗೇ ಬಿಟ್ಟು ಹೋಗುವುದಲ್ಲ. ಸಮಸ್ಯೆಯನ್ನು ಸ್ಥಳದಲ್ಲಿ ಪರಿಹರಿಸದೆ ನಾಳೆಗೆ ಮುಂದೂಡಿದ ಕ್ರಮದ ಸರಿಯಲ್ಲ ಎಂದು ತಿಳಿಸಿದ ಅವರು ಬುಧವಾರದೊಳಗೆ ಸಮಸ್ಯೆ ಬಗೆ ಹರಿಸಿ ಎಂದು ಆದೇಶಿಸಿದರು.

ಅಗೆದ ಸ್ಥಳ ಆಳವಾಗಿರುವುದರಿಂದ ರಾತ್ರಿ ಹೊತ್ತಲ್ಲಿ ದ್ವಿಚಕ್ರವಾಹನದವರು ತಪ್ಪಿ ಬಿದ್ದು ಪ್ರಾಣಾಪಾಯವಾಗುವ ಸಂಭವವಿದೆ. ಹಾಗಾಗಿ ಕೂಡಲೇ ಅಧಿಕಾರಿಗಳು ಎಚ್ಚೆತ್ತುಕೊಂಡು ಸಮಸ್ಯೆಯನ್ನು ಪರಿಹರಿಸಬೇಕು. ಈ ಹಿಂದೆ ಪಿಂಟೋ ಕಾಂಪ್ಲೆಕ್ಸ್‌ ಎದುರುಗಡೆ ನೀರಿನ ಪೈಪ್‌ ಸರಿ ಮಾಡಲು ಹೆದ್ದಾರಿ ಇಲಾಖೆ ಡಾಮರು ಅಗೆದು ಹಾಕಿದ್ದು ಈ ವರೆಗೆ ಮರು ಡಾಮರೀಕರಣ ಮಾಡದೆ ವಾಹನ ಸಂಚಾರಕ್ಕೆ ಅಡ್ಡಿ ಆಗುತ್ತಿರುವ ಬಗ್ಗೆಯೂ ಸಾರ್ವಜನಿಕರಿಂದ ಆರೋಪ ಕೇಳಿ ಬಂದಿತ್ತು.

ಇದೇ ರೀತಿ ಪೋಲೀಸ್‌ ಠಾಣೆಗೆ ತಿರುಗುವಲ್ಲಿಯೂ ಸರ್ವಿಸ್  ರಸ್ತೆಯಲ್ಲಿ ಪೈಪ್‌ ಒಡೆದು ನೀರು ಪೋಲಾಗುತ್ತಿತ್ತು. ಪೈಪ್‌ ಸರಿ ಪಡಿಸಲು ಕಾಂಕ್ರೀಟ್‌ ರಸ್ತೆಯನ್ನು ಅಗೆದು ಹಾಕಿದ ಇಲಾಖೆ ಈವರೆಗೆ ಮರು ಕಾಂಕ್ರೀಟ್‌ ಹಾಕುವ ಕಾಯಕಕ್ಕೆ ಮುಂದಾಗಿಲ್ಲ ಎನ್ನುವುದು ಸಾರ್ವಜನಿಕರಿಂದ ವ್ಯಕ್ತವಾಗಿರುವ ಅಭಿಪ್ರಾಯ. ಸರ್ವಿಸ್  ರಸ್ತೆ ನಿರ್ಮಾಣ ಮಾಡುವ ಸಮಯದಲ್ಲಿ ಕುಡಿಯುವ ನೀರಿನ ಪೈಪ್‌ ಲೈನ್‌ನ ಬಗ್ಗೆ ನಿಗಾ ವಹಿಸಿದ್ದರೆ ಇಂತಹ ಸಮಸ್ಯೆ ಗಳು ಉದ್ಭವ ಆಗುತ್ತಿರಲಿಲ್ಲ ಎಂದು ಸಾರ್ವಜನಿಕರ ಅಭಿಪ್ರಾಯವನ್ನು ಶಾಸಕರು ಇದೇ ಸಂದರ್ಭದಲ್ಲಿ ಸ್ಮರಿಸಿದರು.

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surathkal: ಕಾಟಿಪಳ್ಳ ಮಸೀದಿ ಕಲ್ಲು ತೂರಾಟ ವಿಚಾರ; ನಾಲ್ವರನ್ನು ಬಂಧಿಸಿದ ಪೊಲೀಸರು

Surathkal: ಕಾಟಿಪಳ್ಳ ಮಸೀದಿಗೆ ಕಲ್ಲು: 6 ಮಂದಿ ಸೆರೆ

Suratkal: ಕಿಡಿಗೇಡಿಗಳಿಂದ ಮಸೀದಿಗೆ ಕಲ್ಲು ತೂರಾಟ, ಪ್ರಕರಣದಾಖಲು

Surathkal: ಬೈಕ್ ನಲ್ಲಿ ಬಂದು ಮಸೀದಿಗೆ ಕಲ್ಲು ಬಿಸಾಡಿದ ಕಿಡಿಗೇಡಿಗಳು… ಪ್ರಕರಣ ದಾಖಲು

DK-Human-Chian

Democracy Day: ದಕ್ಷಿಣ ಕನ್ನಡ: 130 ಕಿ.ಮೀ. ವ್ಯಾಪ್ತಿಯಲ್ಲಿ 84,200 ಮಂದಿ

-ROHAN

Rohan City Bejai: ವಾಣಿಜ್ಯ ಮಳಿಗೆಗಳಲ್ಲಿ ಹೂಡಿಕೆಗೆ ಖಚಿತ ಪ್ರತಿಫಲ ಕೊಡುಗೆ

Mulki: ರಿಕ್ಷಾದಲ್ಲಿ ಗೋಮಾಂಸ ಸಾಗಾಟ: ಇಬ್ಬರ ಬಂಧನ

Mulki: ರಿಕ್ಷಾದಲ್ಲಿ ಗೋಮಾಂಸ ಸಾಗಾಟ: ಇಬ್ಬರ ಬಂಧನ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.